Homeಫ್ಯಾಕ್ಟ್‌ಚೆಕ್Fact Check: ಹಿಂದೂಗಳ ವ್ಯಾಪಾರ ಬಹಿಷ್ಕರಿಸಿ ಎಂದು ಅಮೆರಿಕದಲ್ಲಿ ಮುಸ್ಲಿಮರು ಪ್ರತಿಭಟನೆ ನಡೆಸಿಲ್ಲ

Fact Check: ಹಿಂದೂಗಳ ವ್ಯಾಪಾರ ಬಹಿಷ್ಕರಿಸಿ ಎಂದು ಅಮೆರಿಕದಲ್ಲಿ ಮುಸ್ಲಿಮರು ಪ್ರತಿಭಟನೆ ನಡೆಸಿಲ್ಲ

- Advertisement -
- Advertisement -

ಅಮೆರಿಕದಲ್ಲಿ ಮುಸ್ಲಿಮರ ಗುಂಪೊಂದು ಹಿಂದೂಗಳ ವಿರುದ್ದ ಪ್ರತಿಭಟನೆ ನಡೆಸಿದೆ. ‘ಪ್ರವಾದಿಯನ್ನು ಉಳಿಸಿ, ಹಿಂದೂ ವ್ಯವಹಾರವನ್ನು ಬಹಿಷ್ಕರಿಸಿ, ಹಿಂದುತ್ವವನ್ನು ಯುಎಸ್‌ಎಯಿಂದ ಬಹಿಷ್ಕರಿಸಿ’ ಇತ್ಯಾದಿ ಭಿತ್ತಿ ಪತ್ರಗಳನ್ನು ಅವರು ಪ್ರದರ್ಶಿಸಿದ್ದಾರೆ ಎಂದು ಆರೋಪಿಸಿದ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಬಲಪಂಥೀಯ ಮಾಧ್ಯಮವಾದ ಮೇಘ್ ಅಪ್ಡೇಟ್ ಸೇರಿದಂತೆ ಹಲವಾರು ಜನ ಈ ವಿಡಿಯೋ ಹಂಚಿಕೊಂಡಿದ್ದಾರೆ.

‘ಮಹರ್ಷಿ ಜಿ ಸ್ವಾಮೀಜಿ ಮಹಾಮಂಡಲೇಶ್ವರ್’ ಎಂಬ ಎಕ್ಸ್ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದ್ದು, “ಹಿಂದೂಗಳ ಒಡೆತನದ ವ್ಯವಹಾರಗಳನ್ನು ಬಹಿಷ್ಕರಿಸುವಂತೆ ಚಿಕಾಗೋದಲ್ಲಿ ಮುಸ್ಲಿಮರು ಹೇಗೆ ಒತ್ತಾಯಿಸುತ್ತಿದ್ದಾರೆ ಎಂಬುದನ್ನು ನೋಡಿ!” ಎಂದು ಬರೆದುಕೊಳ್ಳಲಾಗಿದೆ.

‘ಜೋಕರ್ಮಾನಿ’ ಎಂಬ ಮತ್ತೊಂದು ಎಕ್ಸ್‌ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದ್ದು, “ಹಿಂದೂಗಳ ಒಡೆತನದ ವ್ಯವಹಾರಗಳನ್ನು ಬಹಿಷ್ಕರಿಸುವಂತೆ ಚಿಕಾಗೋದಲ್ಲಿ ಮುಸ್ಲಿಮರು ಹೇಗೆ ಒತ್ತಾಯಿಸುತ್ತಿದ್ದಾರೆ ಎಂಬುದನ್ನು ನೋಡಿ! ನಾವೂ ಅದನ್ನೇ ಮಾಡಬೇಕು… “ಶಾಂತಿ ಪ್ರಿಯರನ್ನು” ಬಹಿಷ್ಕರಿಸಬೇಕು” ಎಂದು ಬರೆದುಕೊಳ್ಳಲಾಗಿದೆ.

ಫ್ಯಾಕ್ಟ್‌ಚೆಕ್‌ : ವೈರಲ್ ವಿಡಿಯೋದ ಸತ್ಯಾಸತ್ಯತೆ ಪರಿಶೀಲನೆ ನಡೆಸಲು ನಾವು ಕೀ ವರ್ಡ್‌ಗಳನ್ನು ಬಳಸಿ ಗೂಗಲ್‌ನಲ್ಲಿ ಹುಡುಕಾಡಿದ್ದೇವೆ. ಈ ವೇಳೆ ಹಿಂದೂಗಳೊಂದಿಗೆ ವ್ಯಾಪಾರ ಬಹಿಷ್ಕರಿಸಿ ಎಂದು ಮುಸ್ಲಿಮರು ಪ್ರತಿಭಟಿಸಿದ ಯಾವುದೇ ವರದಿಗಳು ಕಂಡು ಬಂದಿಲ್ಲ.

ನಾವು ಇನ್ನಷ್ಟು ಹುಡುಕಾಡಿದಾಗ ಕೆಲವೊಂದು ಪತ್ರಿಕಾ ವರದಿಗಳು ನಮಗೆ ದೊರೆತಿವೆ. ‘ಮುಸ್ಲಿಂ ಮಿರರ್ ಡಾಟ್ ಕಾಂ’ (muslimmirror.com)ಎಂಬ ವೆಬ್‌ಸೈಟ್ 19 ಜೂನ್ 2022ರಂದು ‘Protest held outside Indian consulate in Chicago over remarks on Prophet Muhammad’ಎಂಬ ಶೀರ್ಷಿಕೆಯಲ್ಲಿ ಸುದ್ದಿಯೊಂದನ್ನು ಪ್ರಕಟಿಸಿದ್ದು, ವರದಿಯಲ್ಲಿ “ಭಾರತದ ಆಡಳಿತಾರೂಢ ಭಾರತೀಯ ಜನತಾ ಪಕ್ಷದ (ಬಿಜೆಪಿ) ಸದಸ್ಯರು ಪ್ರವಾದಿ ಮುಹಮ್ಮದ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡಿರುವುದನ್ನು ವಿರೋಧಿಸಿ ಅಮೆರಿಕದ ಚಿಕಾಗೋದಲ್ಲಿರುವ ಭಾರತೀಯ ರಾಯಭಾರ ಕಚೇರಿ ಹೊರಗೆ ಮುಸ್ಲಿಂ ಗುಂಪುಗಳು ಪ್ರತಿಭಟನೆ ನಡೆಸಿದವು. ಭಾರತದಲ್ಲಿ ಇಸ್ಲಾಂ ಮತ್ತು ಮುಸ್ಲಿಮರ ಮೇಲಿನ ದಾಳಿಯಲ್ಲಿ ಭಾಗಿಯಾಗಿರುವ ವ್ಯಕ್ತಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಅವರು ಒತ್ತಾಯಿಸಿದರು” ಎಂದು ಹೇಳಲಾಗಿದೆ.

ವರದಿಯಲ್ಲಿ ಹೇಳಲಾದ ವಿಷಯ ಗಮನಿಸಿದಾಗ, ಇದು ಪ್ರವಾದಿ ಮೊಹಮ್ಮದರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಬಿಜೆಪಿಯ ಮಾಜಿ ವಕ್ತಾರೆಯಾದ ನೂಪುರ್ ಶರ್ಮಾ ವಿರುದ್ಧ ಜೂನ್ 2022 ರಲ್ಲಿ ಚಿಕಾಗೋದಲ್ಲಿ ಭಾರತೀಯ ರಾಯಭಾರ ಕಚೇರಿ ಹೊರಗೆ ನಡೆಸಿದ ಪ್ರತಿಭಟನೆಯಾಗಿದೆ ಎಂದು ತಿಳಿದು ಬಂದಿದೆ. ಅಲ್ಲದೆ, ಇದು ಹಿಂದೂಗಳ ವ್ಯವಹಾರ ಬಹಿಷ್ಕರಿಸಿ ಎಂದು ಮಾಡಿದ ಪ್ರತಿಭಟನೆ ಅಲ್ಲ.

ಸುದ್ದಿಯ ಲಿಂಕ್ ಇಲ್ಲಿದೆ 

ಮತ್ತೊಂದು ಪ್ರಮುಖ ಅಂಶವೆಂದರೆ, ಮುಸ್ಲಿಂ ಮಿರರ್ ವೆಬ್‌ಸೈಟ್ ಪ್ರಕಟಿಸಿದ ಸುದ್ದಿಯಲ್ಲಿರುವ ಫೋಟೊದಲ್ಲಿ ಭಿತ್ತಿ ಪತ್ರ ಹಿಡಿದ ವ್ಯಕ್ತಿಯೊಬ್ಬರನ್ನು ಕಾಣಬಹುದು. ಇದೇ ವ್ಯಕ್ತಿ ವೈರಲ್ ವಿಡಿಯೋದಲ್ಲೂ ಇದ್ದಾರೆ. ಹಾಗಾಗಿ, ವೈರಲ್ ವಿಡಿಯೋ ಮುಸ್ಲಿಂ ಮಿರರ್ ವೆಬ್‌ಸೈಟ್‌ ಪ್ರಕಟಿಸಿದ ಸುದ್ದಿಗೆ ಸಂಬಂಧಿಸಿದ್ದು ಎಂಬುವುದು ಖಚಿತವಾಗಿದೆ.

ಇದನ್ನೂ ಓದಿ : Fact Check: ಕಾಂಗ್ರೆಸ್ ಜಾತಿ, ಧರ್ಮದ ಆಧಾರದಲ್ಲಿ ಜನರನ್ನು ವಿಭಜಿಸುತ್ತಿದೆ ಎಂದು ರಾಹುಲ್ ಗಾಂಧಿ ಹೇಳಿದ್ರಾ!?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...