Homeಫ್ಯಾಕ್ಟ್‌ಚೆಕ್Fact Check: ಹಿಂದೂಗಳ ವ್ಯಾಪಾರ ಬಹಿಷ್ಕರಿಸಿ ಎಂದು ಅಮೆರಿಕದಲ್ಲಿ ಮುಸ್ಲಿಮರು ಪ್ರತಿಭಟನೆ ನಡೆಸಿಲ್ಲ

Fact Check: ಹಿಂದೂಗಳ ವ್ಯಾಪಾರ ಬಹಿಷ್ಕರಿಸಿ ಎಂದು ಅಮೆರಿಕದಲ್ಲಿ ಮುಸ್ಲಿಮರು ಪ್ರತಿಭಟನೆ ನಡೆಸಿಲ್ಲ

- Advertisement -
- Advertisement -

ಅಮೆರಿಕದಲ್ಲಿ ಮುಸ್ಲಿಮರ ಗುಂಪೊಂದು ಹಿಂದೂಗಳ ವಿರುದ್ದ ಪ್ರತಿಭಟನೆ ನಡೆಸಿದೆ. ‘ಪ್ರವಾದಿಯನ್ನು ಉಳಿಸಿ, ಹಿಂದೂ ವ್ಯವಹಾರವನ್ನು ಬಹಿಷ್ಕರಿಸಿ, ಹಿಂದುತ್ವವನ್ನು ಯುಎಸ್‌ಎಯಿಂದ ಬಹಿಷ್ಕರಿಸಿ’ ಇತ್ಯಾದಿ ಭಿತ್ತಿ ಪತ್ರಗಳನ್ನು ಅವರು ಪ್ರದರ್ಶಿಸಿದ್ದಾರೆ ಎಂದು ಆರೋಪಿಸಿದ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಬಲಪಂಥೀಯ ಮಾಧ್ಯಮವಾದ ಮೇಘ್ ಅಪ್ಡೇಟ್ ಸೇರಿದಂತೆ ಹಲವಾರು ಜನ ಈ ವಿಡಿಯೋ ಹಂಚಿಕೊಂಡಿದ್ದಾರೆ.

‘ಮಹರ್ಷಿ ಜಿ ಸ್ವಾಮೀಜಿ ಮಹಾಮಂಡಲೇಶ್ವರ್’ ಎಂಬ ಎಕ್ಸ್ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದ್ದು, “ಹಿಂದೂಗಳ ಒಡೆತನದ ವ್ಯವಹಾರಗಳನ್ನು ಬಹಿಷ್ಕರಿಸುವಂತೆ ಚಿಕಾಗೋದಲ್ಲಿ ಮುಸ್ಲಿಮರು ಹೇಗೆ ಒತ್ತಾಯಿಸುತ್ತಿದ್ದಾರೆ ಎಂಬುದನ್ನು ನೋಡಿ!” ಎಂದು ಬರೆದುಕೊಳ್ಳಲಾಗಿದೆ.

‘ಜೋಕರ್ಮಾನಿ’ ಎಂಬ ಮತ್ತೊಂದು ಎಕ್ಸ್‌ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದ್ದು, “ಹಿಂದೂಗಳ ಒಡೆತನದ ವ್ಯವಹಾರಗಳನ್ನು ಬಹಿಷ್ಕರಿಸುವಂತೆ ಚಿಕಾಗೋದಲ್ಲಿ ಮುಸ್ಲಿಮರು ಹೇಗೆ ಒತ್ತಾಯಿಸುತ್ತಿದ್ದಾರೆ ಎಂಬುದನ್ನು ನೋಡಿ! ನಾವೂ ಅದನ್ನೇ ಮಾಡಬೇಕು… “ಶಾಂತಿ ಪ್ರಿಯರನ್ನು” ಬಹಿಷ್ಕರಿಸಬೇಕು” ಎಂದು ಬರೆದುಕೊಳ್ಳಲಾಗಿದೆ.

ಫ್ಯಾಕ್ಟ್‌ಚೆಕ್‌ : ವೈರಲ್ ವಿಡಿಯೋದ ಸತ್ಯಾಸತ್ಯತೆ ಪರಿಶೀಲನೆ ನಡೆಸಲು ನಾವು ಕೀ ವರ್ಡ್‌ಗಳನ್ನು ಬಳಸಿ ಗೂಗಲ್‌ನಲ್ಲಿ ಹುಡುಕಾಡಿದ್ದೇವೆ. ಈ ವೇಳೆ ಹಿಂದೂಗಳೊಂದಿಗೆ ವ್ಯಾಪಾರ ಬಹಿಷ್ಕರಿಸಿ ಎಂದು ಮುಸ್ಲಿಮರು ಪ್ರತಿಭಟಿಸಿದ ಯಾವುದೇ ವರದಿಗಳು ಕಂಡು ಬಂದಿಲ್ಲ.

ನಾವು ಇನ್ನಷ್ಟು ಹುಡುಕಾಡಿದಾಗ ಕೆಲವೊಂದು ಪತ್ರಿಕಾ ವರದಿಗಳು ನಮಗೆ ದೊರೆತಿವೆ. ‘ಮುಸ್ಲಿಂ ಮಿರರ್ ಡಾಟ್ ಕಾಂ’ (muslimmirror.com)ಎಂಬ ವೆಬ್‌ಸೈಟ್ 19 ಜೂನ್ 2022ರಂದು ‘Protest held outside Indian consulate in Chicago over remarks on Prophet Muhammad’ಎಂಬ ಶೀರ್ಷಿಕೆಯಲ್ಲಿ ಸುದ್ದಿಯೊಂದನ್ನು ಪ್ರಕಟಿಸಿದ್ದು, ವರದಿಯಲ್ಲಿ “ಭಾರತದ ಆಡಳಿತಾರೂಢ ಭಾರತೀಯ ಜನತಾ ಪಕ್ಷದ (ಬಿಜೆಪಿ) ಸದಸ್ಯರು ಪ್ರವಾದಿ ಮುಹಮ್ಮದ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡಿರುವುದನ್ನು ವಿರೋಧಿಸಿ ಅಮೆರಿಕದ ಚಿಕಾಗೋದಲ್ಲಿರುವ ಭಾರತೀಯ ರಾಯಭಾರ ಕಚೇರಿ ಹೊರಗೆ ಮುಸ್ಲಿಂ ಗುಂಪುಗಳು ಪ್ರತಿಭಟನೆ ನಡೆಸಿದವು. ಭಾರತದಲ್ಲಿ ಇಸ್ಲಾಂ ಮತ್ತು ಮುಸ್ಲಿಮರ ಮೇಲಿನ ದಾಳಿಯಲ್ಲಿ ಭಾಗಿಯಾಗಿರುವ ವ್ಯಕ್ತಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಅವರು ಒತ್ತಾಯಿಸಿದರು” ಎಂದು ಹೇಳಲಾಗಿದೆ.

ವರದಿಯಲ್ಲಿ ಹೇಳಲಾದ ವಿಷಯ ಗಮನಿಸಿದಾಗ, ಇದು ಪ್ರವಾದಿ ಮೊಹಮ್ಮದರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಬಿಜೆಪಿಯ ಮಾಜಿ ವಕ್ತಾರೆಯಾದ ನೂಪುರ್ ಶರ್ಮಾ ವಿರುದ್ಧ ಜೂನ್ 2022 ರಲ್ಲಿ ಚಿಕಾಗೋದಲ್ಲಿ ಭಾರತೀಯ ರಾಯಭಾರ ಕಚೇರಿ ಹೊರಗೆ ನಡೆಸಿದ ಪ್ರತಿಭಟನೆಯಾಗಿದೆ ಎಂದು ತಿಳಿದು ಬಂದಿದೆ. ಅಲ್ಲದೆ, ಇದು ಹಿಂದೂಗಳ ವ್ಯವಹಾರ ಬಹಿಷ್ಕರಿಸಿ ಎಂದು ಮಾಡಿದ ಪ್ರತಿಭಟನೆ ಅಲ್ಲ.

ಸುದ್ದಿಯ ಲಿಂಕ್ ಇಲ್ಲಿದೆ 

ಮತ್ತೊಂದು ಪ್ರಮುಖ ಅಂಶವೆಂದರೆ, ಮುಸ್ಲಿಂ ಮಿರರ್ ವೆಬ್‌ಸೈಟ್ ಪ್ರಕಟಿಸಿದ ಸುದ್ದಿಯಲ್ಲಿರುವ ಫೋಟೊದಲ್ಲಿ ಭಿತ್ತಿ ಪತ್ರ ಹಿಡಿದ ವ್ಯಕ್ತಿಯೊಬ್ಬರನ್ನು ಕಾಣಬಹುದು. ಇದೇ ವ್ಯಕ್ತಿ ವೈರಲ್ ವಿಡಿಯೋದಲ್ಲೂ ಇದ್ದಾರೆ. ಹಾಗಾಗಿ, ವೈರಲ್ ವಿಡಿಯೋ ಮುಸ್ಲಿಂ ಮಿರರ್ ವೆಬ್‌ಸೈಟ್‌ ಪ್ರಕಟಿಸಿದ ಸುದ್ದಿಗೆ ಸಂಬಂಧಿಸಿದ್ದು ಎಂಬುವುದು ಖಚಿತವಾಗಿದೆ.

ಇದನ್ನೂ ಓದಿ : Fact Check: ಕಾಂಗ್ರೆಸ್ ಜಾತಿ, ಧರ್ಮದ ಆಧಾರದಲ್ಲಿ ಜನರನ್ನು ವಿಭಜಿಸುತ್ತಿದೆ ಎಂದು ರಾಹುಲ್ ಗಾಂಧಿ ಹೇಳಿದ್ರಾ!?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

24 ವರ್ಷಗಳ ಮೋದಿ ವರ್ಚಸ್ಸನ್ನು 2 ವಾರಗಳಲ್ಲಿ ಧೂಳೀಪಟ ಮಾಡಿದ ಸಿಜೆಪಿ: CJP ಆಂದೋಲನಕ್ಕೆ ಅರುಂಧತಿ ರಾಯ್ ಮೆಚ್ಚುಗೆ

ಪ್ರಧಾನಿ ನರೇಂದ್ರ ಮೋದಿ ಅವರ ಎರಡು ದಶಕಗಳಿಗೂ ಹೆಚ್ಚಿನ ಸುದೀರ್ಘ ರಾಜಕೀಯ ವರ್ಚಸ್ಸನ್ನು ಕಾಕ್ರೋಚ್ ಜನತಾ ಪಾರ್ಟಿ (CJP) ನಡೆಸಿದ ಪ್ರತಿಭಟನಾ ಆಂದೋಲನವು ಕೇವಲ ಎರಡು ವಾರಗಳಲ್ಲಿ ಬುಡಸಮೇತ ಅಲ್ಲಾಡಿಸಿದೆ. ಇದು ಯಾವುದೇ...

ಕ್ಯಾಬಿನೆಟ್‌ನಲ್ಲಿ ಮಹಿಳೆಯರಿಗಿಲ್ಲ ಸ್ಥಾನ: ಸಿಎಂ ಡಿ.ಕೆ. ಶಿವಕುಮಾರ್ ಗೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆಯಿಂದ ಬಹಿರಂಗ ಪತ್ರ

ಕರ್ನಾಟಕದ ನೂತನ ಸಚಿವ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಶಾಸಕರಿಗೆ ಅವಕಾಶ ನೀಡದಿರುವುದನ್ನು ತೀವ್ರವಾಗಿ ಖಂಡಿಸಿರುವ ರಾಜ್ಯದ ಪ್ರಮುಖ ಮಹಿಳಾ ಹಾಗೂ ಜನಪರ ಸಂಘಟನೆಗಳ ಒಕ್ಕೂಟ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆ ಮುಖ್ಯಮಂತ್ರಿಗಳಿಗೆ ಬಹಿರಂಗ...

ಜಾರ್ಖಂಡ್ | ಜೆಪಿಎಸ್‌ಸಿ, ಜೆಎಸ್‌ಎಸ್‌ಸಿ ಪರೀಕ್ಷಾ ಅಕ್ರಮಗಳ ವಿರುದ್ಧ ತೀವ್ರಗೊಂಡ ಪ್ರತಿಭಟನೆ : ಆರು ಮಂದಿಯಿಂದ ಉಪವಾಸ ಸತ್ಯಾಗ್ರಹ

ಜಾರ್ಖಂಡ್ ಲೋಕ ಸೇವಾ ಆಯೋಗ (ಜೆಪಿಎಸ್‌ಸಿ) ಮತ್ತು ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ (ಜೆಎಸ್ಎಸ್‌ಸಿ) ನಡೆಸಿದ ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಆಪಾದಿತ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ವಿರುದ್ಧದ ಪ್ರತಿಭಟನೆಯು ತೀವ್ರ...

ಸಚಿವ ಸ್ಥಾನ ಸಿಗದಿದ್ದಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು: ಶಾಸಕ ಬಿ. ಆರ್‌ ಪಾಟೀಲ್‌ ಸ್ಪಷ್ಟನೆ

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿರುವುದು ನಿಜ. ಆದರೆ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು...

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...