Homeಫ್ಯಾಕ್ಟ್‌ಚೆಕ್FACT CHECK: ಉತ್ತರ ಪ್ರದೇಶದಲ್ಲಿ ಬುರ್ಖಾಧಾರಿ ಮಹಿಳೆಯರಿಂದ ನಕಲಿ ಮತದಾನ ಎಂದು ಹಳೆಯ ವಿಡಿಯೋ ಹಂಚಿಕೆ

FACT CHECK: ಉತ್ತರ ಪ್ರದೇಶದಲ್ಲಿ ಬುರ್ಖಾಧಾರಿ ಮಹಿಳೆಯರಿಂದ ನಕಲಿ ಮತದಾನ ಎಂದು ಹಳೆಯ ವಿಡಿಯೋ ಹಂಚಿಕೆ

- Advertisement -
- Advertisement -

ನಿನ್ನೆ (ಏ.19, 2024) ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ನಡೆದಿದೆ. ದೇಶದ 17 ರಾಜ್ಯಗಳು ಮತ್ತು 4 ಕೇಂದ್ರಾಡಳಿತ ಪ್ರದೇಶಗಳ 102 ಕ್ಷೇತ್ರಗಳ ಜನರು ತಮ್ಮ ಹಕ್ಕು ಚಲಾಯಿಸಿದ್ದಾರೆ.

ಈ ವೇಳೆ ಉತ್ತರ ಪ್ರದೇಶದಲ್ಲಿ ಬುರ್ಖಾಧಾರಿ ಮಹಿಳೆಯರು ನಕಲಿ ಮತದಾನಕ್ಕೆ ಪ್ರಯತ್ನಿಸಿದ್ದು, ಅವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಪ್ರತಿಪಾದಿಸಿ ವಿಡಿಯೋವೊಂದನ್ನು ಹಂಚಿಕೊಳ್ಳಲಾಗ್ತಿದೆ.

ಬಲಪಂಥೀಯ ಯೂಟ್ಯೂಬ್ ಚಾನೆಲ್‌ ‘ಸಂವಾದದಲ್ಲಿ’ ಏ.19, 2024ರಂದು “ಬುರ್ಖಾಧಾರಿ ಮಹಿಳೆಯಿಂದ ನಕಲಿ ಮತ ಚಲಾವಣೆಗೆ ಪ್ರಯತ್ನ” ಎಂದು ವಿಡಿಯೋ ಅಪ್ಲೋಡ್ ಮಾಡಲಾಗಿದೆ.

ವಿಡಿಯೋ ಲಿಂಕ್ ಇಲ್ಲಿದೆ 

ಫ್ಯಾಕ್ಟ್‌ಚೆಕ್ : ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ವಿಡಿಯೋದ ಸತ್ಯಾಸತ್ಯತೆಯನ್ನು ನಾನುಗೌರಿ.ಕಾಂ ಪರಿಶೀಲನೆ ನಡೆಸಿದೆ. ಈ ವೇಳೆ, ವೈರಲ್ ವಿಡಿಯೋ 2022ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ಸಂದರ್ಭದ್ದು, ಮತದಾನದ ವೇಳೆ ವಂಚನೆ ಮಾಡಲು ಅಥವಾ ನಕಲಿ ಮತ ಚಲಾಯಿಸಲು ಯತ್ನಿಸಿದ ಬುರ್ಖಾಧಾರಿ ಮಹಿಳೆಯರನ್ನು ರಾಮ್‌ಪುರ ಪೊಲೀಸರು ವಶಕ್ಕೆ ಪಡೆದಿರುವುದು ಎಂದು ಗೊತ್ತಾಗಿದೆ.

ಫೆ.15, 2022ರಂದು ಇದೇ ವಿಡಿಯೋವನ್ನು DEEWAN (@Spoof_Junkey) ಎಂಬ ಎಕ್ಸ್ ಬಳಕೆದಾರ ಹಂಚಿಕೊಂಡಿದ್ದರು. “ರಾಮ್‌ಪುರದಲ್ಲಿ ಬುರ್ಖಾಧಾರಿ ಮಹಿಳೆಯರಿಂದ ನಕಲಿ ಮತದಾನಕ್ಕೆ ಯತ್ನ, ಉತ್ತರ ಪ್ರದೇಶದ ಪೊಲೀಸರು ಥಳಿಸಿ ಬಂಧಿಸಿದ್ದಾರೆ” ಎಂದು ಬರೆದುಕೊಂಡಿದ್ದರು.

ಪೋಸ್ಟ್ ಲಿಂಕ್ ಇಲ್ಲಿದೆ 

ಘಟನೆಯ ಕುರಿತು ಫೆ.15, 2022ರಂದು ನ್ಯೂಸ್‌ 18 ಹಿಂದಿ “ರಾಮ್‌ಪುರ: ಬುರ್ಖಾ ಧರಿಸಿ ನಕಲಿ ಮತದಾನ ಮಾಡುತ್ತಿದ್ದ ಇಬ್ಬರು ಮಹಿಳೆಯರು ಸಿಕ್ಕಿಬಿದ್ದಿದ್ದು, ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ” ಎಂಬ ಶೀರ್ಷಿಕೆಯಲ್ಲಿ ಸುದ್ದಿ ಪ್ರಕಟಿಸಿತ್ತು.

ಫೆ.14, 2022ರಂದು ಲೈವ್ ಹಿಂದೂಸ್ತಾನ್ ವೆಬ್‌ಸೈಟ್‌ ಕೂಡ ಈ ಕುರಿತು ಸುದ್ದಿ ಪ್ರಕಟಿಸಿತ್ತು “ರಾಮ್‌ಪುರ: ಬುರ್ಖಾ ಧರಿಸಿ ನಕಲಿ ಮತದಾನಕ್ಕೆ ಆಗಮಿಸಿದ್ದ ಇಬ್ಬರು ಮಹಿಳೆಯರನ್ನು ಡಿಎಂ ಸೆರೆ ಹಿಡಿದಿದ್ದಾರೆ” ಎಂಬ ಶೀರ್ಷಿಕೆಯಲ್ಲಿ ಸುದ್ದಿ ಪ್ರಕಟಿಸಿತ್ತು.

ವರದಿ ಲಿಂಕ್ ಇಲ್ಲಿದೆ 

ಹಾಗಾಗಿ, ಬುರ್ಖಾಧಾರಿ ಮಹಿಳೆಯರಿಂದ ನಕಲಿ ಮತದಾನಕ್ಕೆ ಯತ್ನ ಎಂಬ ವೈರಲ್ ವಿಡಿಯೋ ಏ.19, 2024ರದ್ದು ಅಲ್ಲ, ಫೆ.14, 2022ರದ್ದು ಎಂದು ತಿಳಿದು ಬಂದಿದೆ.

ಇದನ್ನೂ ಓದಿ : FACT CHEK : ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಎಂದು ರಾಹುಲ್ ಗಾಂಧಿ ಹೇಳಿಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...