HomeUncategorizedFACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

- Advertisement -
- Advertisement -

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ತಮ್ಮ ಚೊಚ್ಚಲ ಭಾಷಣದಲ್ಲಿ, ‘ನಿಜವಾದ ಜಾತ್ಯತೀತತೆ ಮತ್ತು ಸಾಮಾಜಿಕ ನ್ಯಾಯ’ಕ್ಕೆ ಬದ್ಧವಾಗಿರುವ ಹೊಸ ಯುಗ ಪ್ರಾರಂಭವಾಗಿದೆ ಎಂದು ವಿಜಯ್ ಹೇಳಿದ ಬೆನ್ನಲ್ಲೆ, ತಮಿಳುನಾಡಿನಲ್ಲಿ ಹಿಂದಿ ಹೇರಿಕೆಯ ವಿರುದ್ದ ಪ್ರತಿಭಟನೆಗಳು ದಾಖಲಾಗಿವೆ ಎಂಬ ಪೋಸ್ಟ್‌ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿವೆ.

ಈ ಹಿನ್ನೆಲೆಯಲ್ಲಿ, ಹಿಂದಿ ವಿರುದ್ಧದ ಪ್ರತಿಭಟನೆಗಳನ್ನು ತೋರಿಸುವ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ವಿಜಯ್ ಮುಖ್ಯಮಂತ್ರಿಯಾದ ತಕ್ಷಣ ಹಿಂದಿ ವಿರೋಧಿ ಚಳುವಳಿಯ ಆರಂಭವಾಗಿದೆ ಎಂದು ಪ್ರತಿಪಾದಿಸಲಾಗುತ್ತಿದೆ.

ವೈರಲ್ ಆಗಿರುವ ಈ ಕ್ಲಿಪ್‌ನಲ್ಲಿ, ಪ್ರತಿಭಟನಾಕಾರರು ಬೀದಿಗಳಲ್ಲಿ ಹಿಂದಿ ಹೇರಿಕೆಯ ವಿರುದ್ಧ ಘೋಷಣೆಗಳನ್ನು ಕೂಗುತ್ತಿರುವುದು ಕಂಡುಬರುತ್ತದೆ. ಅಲ್ಲದೆ ಚೆನ್ನೈನ ರೈಲು ನಿಲ್ದಾಣದ ಸೈನ್‌ಬೋರ್ಡ್‌ಗಳಿಗೆ ಕಪ್ಪು ಬಣ್ಣವನ್ನು ಬಳಿದು ಹಿಂದಿ ಅಕ್ಷರಗಳನ್ನು ಅಳಿಸುತ್ತಿರುವುದನ್ನು ಕಾಣಬಹುದು.

ಫೇಸ್​ಬುಕ್ ಬಳಕೆದಾರರೊಬ್ಬರು ಈ ವೀಡಿಯೊವನ್ನು ಹಂಚಿಕೊಂಡು, ‘‘ತಮಿಳುನಾಡಲ್ಲಿ ಮತ್ತೆ ಶುರುವಾಯಿತು ಹಿಂದಿ ಹೇರಿಕೆ ವಿರೋಧಿ ಹೋರಾಟ’’ ಎಂದು ಬರೆದುಕೊಂಡಿದ್ದಾರೆ. ಹಾಗಿದ್ದರೆ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್:

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿರುವ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು, ವಿಡಿಯೋದ ಕೀಫ್ರೇಮ್‌ಗಳನ್ನು ತೆಗೆದು ಗೂಗಲ್ ರಿವರ್ಸ್ ಇಮೇಜಸ್‌ನಲ್ಲಿ ಸರ್ಚ್ ಮಾಡಿದಾಗ ಮಾರ್ಚ್ 12 ರಂದು ಸನ್ ನ್ಯೂಸ್ ಪೋಸ್ಟ್ ಮಾಡಿದ ಇನ್‌ಸ್ಟಾಗ್ರಾಮ್ ರೀಲ್ ಲಭ್ಯವಾಗಿದೆ. ಮೇ 17 ರಂದು ಪ್ರತಿಭಟನಾಕಾರರು ಚೆನ್ನೈನ ರೈಲು ನಿಲ್ದಾಣಗಳಲ್ಲಿ ಹಿಂದಿ ಅಕ್ಷರಗಳಿ ಕಪ್ಪು ಮಸಿ ಬಳಿಯುವ ಮೂಲಕ ಪ್ರತಿಭಟನೆ ನಡೆಸಿದರು ಎಂದು ಶೀರ್ಷಿಕೆಯಲ್ಲಿ ಹೇಳಲಾಗಿದೆ.

 
 
 
 
 
View this post on Instagram
 
 
 
 
 
 
 
 
 
 
 

 

A post shared by Sun News Tamil (@sunnews)

ಸನ್ ನ್ಯೂಸ್ ರೀಲ್‌ನಲ್ಲಿರುವ ದೃಶ್ಯಗಳು ವೈರಲ್ ವೀಡಿಯೊಗೆ ಹೊಂದಿಕೆಯಾಗುತ್ತವೆ. ಮಾರ್ಚ್ 12 ರಂದು ದಿ ವೈರ್ ಪ್ರಕಟಿಸಿದ ‘ಚಿನ್ನಸಾಮಿಯಿಂದ ಚೆನ್ನೈ ಪಾರ್ಕ್‌ವರೆಗೆ, ತಮಿಳುನಾಡು ಹಿಂದಿ ಹೇರಿಕೆಯನ್ನು ವಿರೋಧಿಸುತ್ತದೆ’ ಎಂಬ ಶೀರ್ಷಿಕೆಯ ವರದಿಯಲ್ಲಿ ಇದನ್ನೆ ಉಲ್ಲೇಖಿಸಲಾಗಿದೆ.

ವರದಿಯ ಪ್ರಕಾರ, ಮಾರ್ಚ್ 11 ರಂದು ಪ್ರಧಾನಿ ನರೇಂದ್ರ ಮೋದಿ ಅವರು ತಮಿಳುನಾಡಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಹಿಂದಿ ವಿರೋಧಿ ಪ್ರತಿಭಟನೆಗಳು ನಡೆದಿತ್ತು. ಆಯೋಜಕ ತಿರುಮುರುಗನ್ ಗಾಂಧಿ ನೇತೃತ್ವದ ಮೇ 17 ಹೋರಾಟದಲ್ಲಿ, ಚೆನ್ನೈ ಪಾರ್ಕ್ ರೈಲ್ವೆ ನಿಲ್ದಾಣಕ್ಕೆ ಪ್ರವೇಶಿಸಿ ಇತ್ತೀಚೆಗೆ ನಿರ್ಮಾಣವಾದ ನಿಲ್ದಾಣದ ಸೈನ್‌ಬೋರ್ಡ್‌ಗಳಿಗೆ ಕಪ್ಪು ಬಣ್ಣ ಬಳಿದಿದ್ದಾರೆ, ಮಧ್ಯದಲ್ಲಿ ಹಿಂದಿ, ಮೇಲೆ ತಮಿಳು ಮತ್ತು ಕೆಳಗೆ ಇಂಗ್ಲಿಷ್ ಅನ್ನು ಇರಿಸಲಾಗಿತ್ತು ಎಂದು ವರದಿ ತಿಳಿಸಿದೆ.

ವರದಿಯಲ್ಲಿ ಶಿವ ದಿಲೀಪನ್ ಎಂಬ ಕಾರ್ಯಕರ್ತ ತಮಿಳು ಭಾಷೆಯನ್ನು ಬೆಂಬಲಿಸಿ ಮತ್ತು ಹಿಂದಿ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ನಿಲ್ದಾಣಕ್ಕೆ ಪ್ರವೇಶಿಸುತ್ತಿದ್ದ. ಇದೇ ಸಂದರ್ಭದಲ್ಲಿ ರೈಲಿನ ಮುಂದೆ ಹಾರಿ ಸಾವನ್ನಪ್ಪಿದ್ದಾನೆ ಎಂದು ಉಲ್ಲೇಖಿಸಲಾಗಿದೆ.

ಹಾಗಾಗಿ ಈ ಘಟನೆ ವಿಜಯ್ ತಮಿಳುನಾಡು ಮುಖ್ಯಮಂತ್ರಿಯಾಗುವ ಮೊದಲೇ ಈ ಪ್ರತಿಭಟನೆ ದಾಖಲಾಗಿದ್ದು ಇದರ ವಿಡಿಯೋ ಕೂಡ ಲಭ್ಯವಿದೆ. ಇದು ಮಾರ್ಚ್ ತಿಂಗಳಿನಲ್ಲಿ ನಡೆದ ಪ್ರತಿಭಟನೆಯ ದೃಶ್ಯಗಳು ಎಂಬುದು ಸ್ಪಷ್ಟವಾಗಿದೆ.

ಒಟ್ಟಾರೆಯಾಗಿ ಹೇಳುವುದಾದರೆ, ತಮಿಳುನಾಡಿನಲ್ಲಿ ಮಾರ್ಚ್‌ನಲ್ಲಿ ನಡೆದ ಹಿಂದಿ ವಿರೋಧಿ ಪ್ರತಿಭಟನೆಯ ಹಳೆಯ ವಿಡಿಯೋವನ್ನು ಟಿವಿಕೆ ಪಕ್ಷದ ನಾಯಕ ವಿಜಯ್ ತಮಿಳುನಾಡಿನಲ್ಲಿ ಅಧಿಕಾರ ವಹಿಸಿಕೊಂಡ ನಂತರ ನಡೆದ ಪ್ರತಿಭಟನೆಯ ವಿಡಿಯೋ ಎಂದು ಸುಳ್ಳು ಪ್ರತಿಪಾದನೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...