Homeಫ್ಯಾಕ್ಟ್‌ಚೆಕ್FACT CHECK: ದೇವೇಗೌಡರ ಕುರಿತು ಸಚಿವ ರಾಜಣ್ಣ ಕೀಳು ಮಟ್ಟದ ಹೇಳಿಕೆ ನೀಡಿದ್ದಾರೆಂದು ಹಳೆಯ ವಿಡಿಯೋ...

FACT CHECK: ದೇವೇಗೌಡರ ಕುರಿತು ಸಚಿವ ರಾಜಣ್ಣ ಕೀಳು ಮಟ್ಟದ ಹೇಳಿಕೆ ನೀಡಿದ್ದಾರೆಂದು ಹಳೆಯ ವಿಡಿಯೋ ಹಂಚಿಕೆ

- Advertisement -
- Advertisement -

ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡರ ಬಗ್ಗೆ ಸಚಿವ ರಾಜಣ್ಣ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ ಎಂದು ವಿಡಿಯೋವೊಂದನ್ನು ಹಂಚಿಕೊಳ್ಳಲಾಗಿದೆ.

ಬಲ ಪಂಥೀಯ ಎಕ್ಸ್ ಬಳಕೆಗಾರ್ತಿ ಶಕುಂತಲ ನಟರಾಜ್ (@ShakunthalaHS) ವಿಡಿಯೋ ಹಂಚಿಕೊಂಡಿದ್ದು, “ದೇಶವೇ ಹೆಮ್ಮೆ ಪಡುವ ಹಿರಿಯ ರಾಜಕೀಯ ಮುತ್ಸದ್ದಿಗೆ ಇಂತ ಕೀಳು ಮಟ್ಟದ ಹೇಳಿಕೆ ನೀಡಿರುವ ಸಚಿವ ರಾಜಣ್ಣ” ಎಂದು ಬರೆದುಕೊಂಡಿದ್ದಾರೆ.

ಪೋಸ್ಟ್ ಲಿಂಕ್ ಇಲ್ಲಿದೆ

ವಿಡಿಯೋದಲ್ಲಿ “ದೇವೇಗೌಡರು ಇಬ್ಬರ ಮೇಲೆ ಕೈ ಹಾಕಿಕೊಂಡು ಹೋಗುತ್ತಾರೆ, ನಾಲ್ವರ ಮೇಲೆ ಹೋಗುವುದು ಹತ್ತಿರದಲ್ಲೇ ಇದೆ” ಎಂದು ರಾಜಣ್ಣ ಅವರು ಹೇಳುವುದು ಕಾಣಿಸುತ್ತದೆ.

ಫ್ಯಾಕ್ಟ್‌ಚೆಕ್ : ಶಂಕುತಲ ಅವರು ಹಂಚಿಕೊಂಡಿರುವ ರಾಜಣ್ಣ ಅವರ ಹೇಳಿಕೆಯ ವಿಡಿಯೋದ ಸತ್ಯಾತ್ಯತೆಯನ್ನು ಪರಿಶೀಲಿಸಿದಾಗ, ಅದು 2022ರ ಹಳೆ ವಿಡಿಯೋ ಎಂದು ತಿಳಿದು ಬಂದಿದೆ.

ಜುಲೈ 1, 2022ರಂದು ರಾಜಣ್ಣ ಅವರ ಹೇಳಿಕೆಗೆ ಸಂಬಂಧಪಟ್ಟಂತೆ ಪ್ರಜಾವಾಣಿ ಪತ್ರಿಕೆಯಲ್ಲಿ “ನಾಲ್ವರ ಮೇಲೆ ದೇವೇಗೌಡ ಹೋಗುತ್ತಾರೆ: ಕೆ.ಎನ್‌. ರಾಜಣ್ಣ ವಿವಾದಾತ್ಮಕ ಹೇಳಿಕೆ” ಎಂಬ ಶೀರ್ಷಿಕೆಯಲ್ಲಿ ವರದಿ ಪ್ರಕಟಿಸಿತ್ತು. ಈ ವರದಿಯಲ್ಲಿ ‘ಜೆಡಿಎಸ್ ವರಿಷ್ಠ ಹೆ.ಚ್‌ ದೇವೇಗೌಡ ಅವರು ಈಗ ಇಬ್ಬರ ಮೇಲೆ ಕೈ ಹಾಕಿಕೊಂಡು ಹೋಗುತ್ತಿದ್ದಾರೆ. ನಾಲ್ವರ ಮೇಲೆ ಹೋಗುವುದು ಹತ್ತಿರದಲ್ಲೇ ಇದೆ’ ಎಂದು ಕಾಂಗ್ರೆಸ್ ಮುಖಂಡ ಹಾಗೂ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೆ.ಎನ್‌.ರಾಜಣ್ಣ ಹೇಳಿಕೆ ವಿವಾದಕ್ಕೆ ಸಿಲುಕಿದೆ” ಹೇಳಿತ್ತು.

“ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಕಾವಣದಾಲ ಕಾರ್ಯಕ್ರಮದಲ್ಲಿ ಗುರುವಾರ ಸಾರ್ವಜನಿಕರೊಂದಿಗೆ ಮಾತನಾಡುವಾಗ ಮೇಲಿನಂತೆ ಹೇಳಿದ್ದಾರೆ” ಎಂದು ವರದಿಯಲ್ಲಿ ತಿಳಿಸಲಾಗಿತ್ತು.

ವರದಿ ಲಿಂಕ್ ಇಲ್ಲಿದೆ 

ಒನ್ ಇಂಡಿಯಾ ಕನ್ನಡ ವೆಬ್‌ಸೈಟ್‌ನಲ್ಲಿ ಜುಲೈ 1, 2022ರಂದು ಪ್ರಕಟಗೊಂಡ ” ದೇವೇಗೌಡರು 4 ಜನರ ಹೆಗಲ ಮೇಲೆ ಹೋಗುವ ಕಾಲ ಹತ್ತಿರವಿದೆ: ರಾಜಣ್ಣ ವಿವಾದಾತ್ಮಕ ಹೇಳಿಕೆ” ಎಂಬ ಶೀರ್ಷಿಕೆಯ ಸುದ್ದಿಯಲ್ಲಿ ” ಮಾಜಿ ಪ್ರಧಾನಿ ದೇವೇಗೌಡರು ಈಗ ಇಬ್ಬರ ಮೇಲೆ ಕೈ ಹಾಕಿಕೊಂಡು ಹೋಗುತ್ತಿದ್ದಾರೆ. ನಾಲ್ವರ ಮೇಲೆ ಹೋಗುವ ಕಾಲ ಹತ್ತಿರದಲ್ಲೇ ಇದೆ ಎಂದು ಮಾಜಿ ಶಾಸಕ , ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೆ.ಎನ್ ರಾಜಣ್ಣ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ” ಎಂದು ಹೇಳಲಾಗಿತ್ತು.

ವರದಿ ಲಿಂಕ್ ಇಲ್ಲಿದೆ

ಜುಲೈ 1, 2022ರಂದು “K N Rajanna: ಹೆಚ್‌.ಡಿ.ದೇವೇಗೌಡರ ಬಗ್ಗೆ ಹೇಳಿಕೆಗೆ ಕೆ.ಎನ್.ರಾಜಣ್ಣ ವಿಷಾದ” ಎಂಬ ಶೀರ್ಷಿಕೆಯಲ್ಲಿ ಟಿವಿ9 ಕನ್ನಡ ಯೂಟ್ಯೂಬ್‌ನಲ್ಲಿ ವಿಡಿಯೋವೊಂದನ್ನು ಅಪ್ಲೋಡ್ ಮಾಡಿದ್ದು, ಅದರಲ್ಲಿ ರಾಜಣ್ಣ ಅವರು “ಯಾವುದೋ ವಿಡಿಯೋದಲ್ಲಿ ನಾನೂ ಕೇಳಿದೆ. ಹಿಂದಿನದ್ದೂ ಇಲ್ಲ, ಮುಂದಿನದ್ದೂ ಇಲ್ಲ. ನಮಗೆ ಕಳಂಕ ತರಲು, ನಮನ್ನು ರಾಜಕೀಯವಾಗಿ ಮುಗಿಸಲು ಇದನ್ನು ಅಪಪ್ರಚಾರ ಮಾಡಿ, ಪಿತೂರಿ ಮಾಡಲು ಹೊರಟಿದ್ದಾರೆ. ದೇವೇಗೌಡರು ಮಾಜಿ ಪ್ರಧಾನಿಗಳು, ಅವರ ಮೇಲೆ ನಮಗೆ ಗೌರವ ಇದೆ. ಅವರ ಸೋಲು ನಾವು ನಿರೀಕ್ಷೆ ಮಾಡಿರಲಿಲ್ಲ. ಅವರ ಬಗ್ಗೆ ಗೌರವಯುತವಾಗಿ ಹಲವಾರು ಸಂದರ್ಭಗಳಲ್ಲಿ ನಾವು ಮಾತನಾಡಿದ್ದು ಇದೆ. ನಾವು ನೀಡಿರುವ ಹೇಳಿಕೆಯಿಂದ ದೇವೇಗೌಡರಿಗೆ, ಅವರ ಕುಟುಂಬಕ್ಕೆ, ಅಭಿಮಾನಿಗಳಿಗೆ ನೋವಾಗಿದ್ದರೆ” ಎಂದು ಹೇಳಿದ್ದು ಇದೆ. ವಿಡಿಯೋದಲ್ಲಿ ರಾಜಣ್ಣ ಅವರು ತನ್ನ ಹೇಳಿಕೆಗೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಹೇಳಿರುವುದು ಇಲ್ಲ. ಆದರೂ, ವಿಡಿಯೋದ ಶೀರ್ಷಿಕೆಯಲ್ಲಿ ಹೇಳಿದಂತೆ ಅವರು ದೇವೇಗೌಡರ ಕುರಿತ ತನ್ನ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ.

ಯೂಟ್ಯೂಬ್ ಲಿಂಕ್ ಇಲ್ಲಿದೆ 

ನಾವು ನಡೆಸಿದ ಪರಿಶೀಲನೆಯಲ್ಲಿ ಶಂಕುತಲ ನಟರಾಜ್ ಹಂಚಿಕೊಂಡಿರುವ ವಿಡಿಯೋ 2022ರಲ್ಲಿ ರಾಜಣ್ಣ ಅವರು ದೇವೇಗೌಡರ ಕುರಿತು ಹೇಳಿರುವಂತದ್ದು, ಇತ್ತೀಚಿನದ್ದಲ್ಲ ಎಂದು ತಿಳಿದು ಬಂದಿದೆ. ಮಾಧ್ಯಮ ವರದಿಗಳ ಪ್ರಕಾರ ರಾಜಣ್ಣ ಅವರು ತನ್ನ ಹೇಳಿಕೆ ಕುರಿತು ವಿಷಾದ ವ್ಯಕ್ತಪಡಿಸಿದ್ದಾರೆ. ಗಮನಾರ್ಹವಾಗಿ, ದೇವೇಗೌಡರ ಕುರಿತು ಹೇಳಿಕೆ ನೀಡುವಾಗ ರಾಜಣ್ಣ ಅವರು ಸಚಿವರಾಗಿರಲಿಲ್ಲ. ಪ್ರಸ್ತುತ ಅವರ ರಾಜ್ಯ ಸರ್ಕಾರದಲ್ಲಿ ಸಚಿವರಾಗಿದ್ದಾರೆ.

ಇದನ್ನೂ ಓದಿ : FACT CHECK : ಕರ್ನಾಟಕ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಕೇಂದ್ರದ ಅನುದಾನ ಕೇಳುತ್ತಿದೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....