Homeಫ್ಯಾಕ್ಟ್‌ಚೆಕ್FACT CHECK: ದೇವೇಗೌಡರ ಕುರಿತು ಸಚಿವ ರಾಜಣ್ಣ ಕೀಳು ಮಟ್ಟದ ಹೇಳಿಕೆ ನೀಡಿದ್ದಾರೆಂದು ಹಳೆಯ ವಿಡಿಯೋ...

FACT CHECK: ದೇವೇಗೌಡರ ಕುರಿತು ಸಚಿವ ರಾಜಣ್ಣ ಕೀಳು ಮಟ್ಟದ ಹೇಳಿಕೆ ನೀಡಿದ್ದಾರೆಂದು ಹಳೆಯ ವಿಡಿಯೋ ಹಂಚಿಕೆ

- Advertisement -
- Advertisement -

ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡರ ಬಗ್ಗೆ ಸಚಿವ ರಾಜಣ್ಣ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ ಎಂದು ವಿಡಿಯೋವೊಂದನ್ನು ಹಂಚಿಕೊಳ್ಳಲಾಗಿದೆ.

ಬಲ ಪಂಥೀಯ ಎಕ್ಸ್ ಬಳಕೆಗಾರ್ತಿ ಶಕುಂತಲ ನಟರಾಜ್ (@ShakunthalaHS) ವಿಡಿಯೋ ಹಂಚಿಕೊಂಡಿದ್ದು, “ದೇಶವೇ ಹೆಮ್ಮೆ ಪಡುವ ಹಿರಿಯ ರಾಜಕೀಯ ಮುತ್ಸದ್ದಿಗೆ ಇಂತ ಕೀಳು ಮಟ್ಟದ ಹೇಳಿಕೆ ನೀಡಿರುವ ಸಚಿವ ರಾಜಣ್ಣ” ಎಂದು ಬರೆದುಕೊಂಡಿದ್ದಾರೆ.

ಪೋಸ್ಟ್ ಲಿಂಕ್ ಇಲ್ಲಿದೆ

ವಿಡಿಯೋದಲ್ಲಿ “ದೇವೇಗೌಡರು ಇಬ್ಬರ ಮೇಲೆ ಕೈ ಹಾಕಿಕೊಂಡು ಹೋಗುತ್ತಾರೆ, ನಾಲ್ವರ ಮೇಲೆ ಹೋಗುವುದು ಹತ್ತಿರದಲ್ಲೇ ಇದೆ” ಎಂದು ರಾಜಣ್ಣ ಅವರು ಹೇಳುವುದು ಕಾಣಿಸುತ್ತದೆ.

ಫ್ಯಾಕ್ಟ್‌ಚೆಕ್ : ಶಂಕುತಲ ಅವರು ಹಂಚಿಕೊಂಡಿರುವ ರಾಜಣ್ಣ ಅವರ ಹೇಳಿಕೆಯ ವಿಡಿಯೋದ ಸತ್ಯಾತ್ಯತೆಯನ್ನು ಪರಿಶೀಲಿಸಿದಾಗ, ಅದು 2022ರ ಹಳೆ ವಿಡಿಯೋ ಎಂದು ತಿಳಿದು ಬಂದಿದೆ.

ಜುಲೈ 1, 2022ರಂದು ರಾಜಣ್ಣ ಅವರ ಹೇಳಿಕೆಗೆ ಸಂಬಂಧಪಟ್ಟಂತೆ ಪ್ರಜಾವಾಣಿ ಪತ್ರಿಕೆಯಲ್ಲಿ “ನಾಲ್ವರ ಮೇಲೆ ದೇವೇಗೌಡ ಹೋಗುತ್ತಾರೆ: ಕೆ.ಎನ್‌. ರಾಜಣ್ಣ ವಿವಾದಾತ್ಮಕ ಹೇಳಿಕೆ” ಎಂಬ ಶೀರ್ಷಿಕೆಯಲ್ಲಿ ವರದಿ ಪ್ರಕಟಿಸಿತ್ತು. ಈ ವರದಿಯಲ್ಲಿ ‘ಜೆಡಿಎಸ್ ವರಿಷ್ಠ ಹೆ.ಚ್‌ ದೇವೇಗೌಡ ಅವರು ಈಗ ಇಬ್ಬರ ಮೇಲೆ ಕೈ ಹಾಕಿಕೊಂಡು ಹೋಗುತ್ತಿದ್ದಾರೆ. ನಾಲ್ವರ ಮೇಲೆ ಹೋಗುವುದು ಹತ್ತಿರದಲ್ಲೇ ಇದೆ’ ಎಂದು ಕಾಂಗ್ರೆಸ್ ಮುಖಂಡ ಹಾಗೂ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೆ.ಎನ್‌.ರಾಜಣ್ಣ ಹೇಳಿಕೆ ವಿವಾದಕ್ಕೆ ಸಿಲುಕಿದೆ” ಹೇಳಿತ್ತು.

“ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಕಾವಣದಾಲ ಕಾರ್ಯಕ್ರಮದಲ್ಲಿ ಗುರುವಾರ ಸಾರ್ವಜನಿಕರೊಂದಿಗೆ ಮಾತನಾಡುವಾಗ ಮೇಲಿನಂತೆ ಹೇಳಿದ್ದಾರೆ” ಎಂದು ವರದಿಯಲ್ಲಿ ತಿಳಿಸಲಾಗಿತ್ತು.

ವರದಿ ಲಿಂಕ್ ಇಲ್ಲಿದೆ 

ಒನ್ ಇಂಡಿಯಾ ಕನ್ನಡ ವೆಬ್‌ಸೈಟ್‌ನಲ್ಲಿ ಜುಲೈ 1, 2022ರಂದು ಪ್ರಕಟಗೊಂಡ ” ದೇವೇಗೌಡರು 4 ಜನರ ಹೆಗಲ ಮೇಲೆ ಹೋಗುವ ಕಾಲ ಹತ್ತಿರವಿದೆ: ರಾಜಣ್ಣ ವಿವಾದಾತ್ಮಕ ಹೇಳಿಕೆ” ಎಂಬ ಶೀರ್ಷಿಕೆಯ ಸುದ್ದಿಯಲ್ಲಿ ” ಮಾಜಿ ಪ್ರಧಾನಿ ದೇವೇಗೌಡರು ಈಗ ಇಬ್ಬರ ಮೇಲೆ ಕೈ ಹಾಕಿಕೊಂಡು ಹೋಗುತ್ತಿದ್ದಾರೆ. ನಾಲ್ವರ ಮೇಲೆ ಹೋಗುವ ಕಾಲ ಹತ್ತಿರದಲ್ಲೇ ಇದೆ ಎಂದು ಮಾಜಿ ಶಾಸಕ , ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೆ.ಎನ್ ರಾಜಣ್ಣ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ” ಎಂದು ಹೇಳಲಾಗಿತ್ತು.

ವರದಿ ಲಿಂಕ್ ಇಲ್ಲಿದೆ

ಜುಲೈ 1, 2022ರಂದು “K N Rajanna: ಹೆಚ್‌.ಡಿ.ದೇವೇಗೌಡರ ಬಗ್ಗೆ ಹೇಳಿಕೆಗೆ ಕೆ.ಎನ್.ರಾಜಣ್ಣ ವಿಷಾದ” ಎಂಬ ಶೀರ್ಷಿಕೆಯಲ್ಲಿ ಟಿವಿ9 ಕನ್ನಡ ಯೂಟ್ಯೂಬ್‌ನಲ್ಲಿ ವಿಡಿಯೋವೊಂದನ್ನು ಅಪ್ಲೋಡ್ ಮಾಡಿದ್ದು, ಅದರಲ್ಲಿ ರಾಜಣ್ಣ ಅವರು “ಯಾವುದೋ ವಿಡಿಯೋದಲ್ಲಿ ನಾನೂ ಕೇಳಿದೆ. ಹಿಂದಿನದ್ದೂ ಇಲ್ಲ, ಮುಂದಿನದ್ದೂ ಇಲ್ಲ. ನಮಗೆ ಕಳಂಕ ತರಲು, ನಮನ್ನು ರಾಜಕೀಯವಾಗಿ ಮುಗಿಸಲು ಇದನ್ನು ಅಪಪ್ರಚಾರ ಮಾಡಿ, ಪಿತೂರಿ ಮಾಡಲು ಹೊರಟಿದ್ದಾರೆ. ದೇವೇಗೌಡರು ಮಾಜಿ ಪ್ರಧಾನಿಗಳು, ಅವರ ಮೇಲೆ ನಮಗೆ ಗೌರವ ಇದೆ. ಅವರ ಸೋಲು ನಾವು ನಿರೀಕ್ಷೆ ಮಾಡಿರಲಿಲ್ಲ. ಅವರ ಬಗ್ಗೆ ಗೌರವಯುತವಾಗಿ ಹಲವಾರು ಸಂದರ್ಭಗಳಲ್ಲಿ ನಾವು ಮಾತನಾಡಿದ್ದು ಇದೆ. ನಾವು ನೀಡಿರುವ ಹೇಳಿಕೆಯಿಂದ ದೇವೇಗೌಡರಿಗೆ, ಅವರ ಕುಟುಂಬಕ್ಕೆ, ಅಭಿಮಾನಿಗಳಿಗೆ ನೋವಾಗಿದ್ದರೆ” ಎಂದು ಹೇಳಿದ್ದು ಇದೆ. ವಿಡಿಯೋದಲ್ಲಿ ರಾಜಣ್ಣ ಅವರು ತನ್ನ ಹೇಳಿಕೆಗೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಹೇಳಿರುವುದು ಇಲ್ಲ. ಆದರೂ, ವಿಡಿಯೋದ ಶೀರ್ಷಿಕೆಯಲ್ಲಿ ಹೇಳಿದಂತೆ ಅವರು ದೇವೇಗೌಡರ ಕುರಿತ ತನ್ನ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ.

ಯೂಟ್ಯೂಬ್ ಲಿಂಕ್ ಇಲ್ಲಿದೆ 

ನಾವು ನಡೆಸಿದ ಪರಿಶೀಲನೆಯಲ್ಲಿ ಶಂಕುತಲ ನಟರಾಜ್ ಹಂಚಿಕೊಂಡಿರುವ ವಿಡಿಯೋ 2022ರಲ್ಲಿ ರಾಜಣ್ಣ ಅವರು ದೇವೇಗೌಡರ ಕುರಿತು ಹೇಳಿರುವಂತದ್ದು, ಇತ್ತೀಚಿನದ್ದಲ್ಲ ಎಂದು ತಿಳಿದು ಬಂದಿದೆ. ಮಾಧ್ಯಮ ವರದಿಗಳ ಪ್ರಕಾರ ರಾಜಣ್ಣ ಅವರು ತನ್ನ ಹೇಳಿಕೆ ಕುರಿತು ವಿಷಾದ ವ್ಯಕ್ತಪಡಿಸಿದ್ದಾರೆ. ಗಮನಾರ್ಹವಾಗಿ, ದೇವೇಗೌಡರ ಕುರಿತು ಹೇಳಿಕೆ ನೀಡುವಾಗ ರಾಜಣ್ಣ ಅವರು ಸಚಿವರಾಗಿರಲಿಲ್ಲ. ಪ್ರಸ್ತುತ ಅವರ ರಾಜ್ಯ ಸರ್ಕಾರದಲ್ಲಿ ಸಚಿವರಾಗಿದ್ದಾರೆ.

ಇದನ್ನೂ ಓದಿ : FACT CHECK : ಕರ್ನಾಟಕ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಕೇಂದ್ರದ ಅನುದಾನ ಕೇಳುತ್ತಿದೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...