Homeಫ್ಯಾಕ್ಟ್‌ಚೆಕ್FACT CHECK: ದೇವೇಗೌಡರ ಕುರಿತು ಸಚಿವ ರಾಜಣ್ಣ ಕೀಳು ಮಟ್ಟದ ಹೇಳಿಕೆ ನೀಡಿದ್ದಾರೆಂದು ಹಳೆಯ ವಿಡಿಯೋ...

FACT CHECK: ದೇವೇಗೌಡರ ಕುರಿತು ಸಚಿವ ರಾಜಣ್ಣ ಕೀಳು ಮಟ್ಟದ ಹೇಳಿಕೆ ನೀಡಿದ್ದಾರೆಂದು ಹಳೆಯ ವಿಡಿಯೋ ಹಂಚಿಕೆ

- Advertisement -
- Advertisement -

ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡರ ಬಗ್ಗೆ ಸಚಿವ ರಾಜಣ್ಣ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ ಎಂದು ವಿಡಿಯೋವೊಂದನ್ನು ಹಂಚಿಕೊಳ್ಳಲಾಗಿದೆ.

ಬಲ ಪಂಥೀಯ ಎಕ್ಸ್ ಬಳಕೆಗಾರ್ತಿ ಶಕುಂತಲ ನಟರಾಜ್ (@ShakunthalaHS) ವಿಡಿಯೋ ಹಂಚಿಕೊಂಡಿದ್ದು, “ದೇಶವೇ ಹೆಮ್ಮೆ ಪಡುವ ಹಿರಿಯ ರಾಜಕೀಯ ಮುತ್ಸದ್ದಿಗೆ ಇಂತ ಕೀಳು ಮಟ್ಟದ ಹೇಳಿಕೆ ನೀಡಿರುವ ಸಚಿವ ರಾಜಣ್ಣ” ಎಂದು ಬರೆದುಕೊಂಡಿದ್ದಾರೆ.

ಪೋಸ್ಟ್ ಲಿಂಕ್ ಇಲ್ಲಿದೆ

ವಿಡಿಯೋದಲ್ಲಿ “ದೇವೇಗೌಡರು ಇಬ್ಬರ ಮೇಲೆ ಕೈ ಹಾಕಿಕೊಂಡು ಹೋಗುತ್ತಾರೆ, ನಾಲ್ವರ ಮೇಲೆ ಹೋಗುವುದು ಹತ್ತಿರದಲ್ಲೇ ಇದೆ” ಎಂದು ರಾಜಣ್ಣ ಅವರು ಹೇಳುವುದು ಕಾಣಿಸುತ್ತದೆ.

ಫ್ಯಾಕ್ಟ್‌ಚೆಕ್ : ಶಂಕುತಲ ಅವರು ಹಂಚಿಕೊಂಡಿರುವ ರಾಜಣ್ಣ ಅವರ ಹೇಳಿಕೆಯ ವಿಡಿಯೋದ ಸತ್ಯಾತ್ಯತೆಯನ್ನು ಪರಿಶೀಲಿಸಿದಾಗ, ಅದು 2022ರ ಹಳೆ ವಿಡಿಯೋ ಎಂದು ತಿಳಿದು ಬಂದಿದೆ.

ಜುಲೈ 1, 2022ರಂದು ರಾಜಣ್ಣ ಅವರ ಹೇಳಿಕೆಗೆ ಸಂಬಂಧಪಟ್ಟಂತೆ ಪ್ರಜಾವಾಣಿ ಪತ್ರಿಕೆಯಲ್ಲಿ “ನಾಲ್ವರ ಮೇಲೆ ದೇವೇಗೌಡ ಹೋಗುತ್ತಾರೆ: ಕೆ.ಎನ್‌. ರಾಜಣ್ಣ ವಿವಾದಾತ್ಮಕ ಹೇಳಿಕೆ” ಎಂಬ ಶೀರ್ಷಿಕೆಯಲ್ಲಿ ವರದಿ ಪ್ರಕಟಿಸಿತ್ತು. ಈ ವರದಿಯಲ್ಲಿ ‘ಜೆಡಿಎಸ್ ವರಿಷ್ಠ ಹೆ.ಚ್‌ ದೇವೇಗೌಡ ಅವರು ಈಗ ಇಬ್ಬರ ಮೇಲೆ ಕೈ ಹಾಕಿಕೊಂಡು ಹೋಗುತ್ತಿದ್ದಾರೆ. ನಾಲ್ವರ ಮೇಲೆ ಹೋಗುವುದು ಹತ್ತಿರದಲ್ಲೇ ಇದೆ’ ಎಂದು ಕಾಂಗ್ರೆಸ್ ಮುಖಂಡ ಹಾಗೂ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೆ.ಎನ್‌.ರಾಜಣ್ಣ ಹೇಳಿಕೆ ವಿವಾದಕ್ಕೆ ಸಿಲುಕಿದೆ” ಹೇಳಿತ್ತು.

“ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಕಾವಣದಾಲ ಕಾರ್ಯಕ್ರಮದಲ್ಲಿ ಗುರುವಾರ ಸಾರ್ವಜನಿಕರೊಂದಿಗೆ ಮಾತನಾಡುವಾಗ ಮೇಲಿನಂತೆ ಹೇಳಿದ್ದಾರೆ” ಎಂದು ವರದಿಯಲ್ಲಿ ತಿಳಿಸಲಾಗಿತ್ತು.

ವರದಿ ಲಿಂಕ್ ಇಲ್ಲಿದೆ 

ಒನ್ ಇಂಡಿಯಾ ಕನ್ನಡ ವೆಬ್‌ಸೈಟ್‌ನಲ್ಲಿ ಜುಲೈ 1, 2022ರಂದು ಪ್ರಕಟಗೊಂಡ ” ದೇವೇಗೌಡರು 4 ಜನರ ಹೆಗಲ ಮೇಲೆ ಹೋಗುವ ಕಾಲ ಹತ್ತಿರವಿದೆ: ರಾಜಣ್ಣ ವಿವಾದಾತ್ಮಕ ಹೇಳಿಕೆ” ಎಂಬ ಶೀರ್ಷಿಕೆಯ ಸುದ್ದಿಯಲ್ಲಿ ” ಮಾಜಿ ಪ್ರಧಾನಿ ದೇವೇಗೌಡರು ಈಗ ಇಬ್ಬರ ಮೇಲೆ ಕೈ ಹಾಕಿಕೊಂಡು ಹೋಗುತ್ತಿದ್ದಾರೆ. ನಾಲ್ವರ ಮೇಲೆ ಹೋಗುವ ಕಾಲ ಹತ್ತಿರದಲ್ಲೇ ಇದೆ ಎಂದು ಮಾಜಿ ಶಾಸಕ , ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೆ.ಎನ್ ರಾಜಣ್ಣ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ” ಎಂದು ಹೇಳಲಾಗಿತ್ತು.

ವರದಿ ಲಿಂಕ್ ಇಲ್ಲಿದೆ

ಜುಲೈ 1, 2022ರಂದು “K N Rajanna: ಹೆಚ್‌.ಡಿ.ದೇವೇಗೌಡರ ಬಗ್ಗೆ ಹೇಳಿಕೆಗೆ ಕೆ.ಎನ್.ರಾಜಣ್ಣ ವಿಷಾದ” ಎಂಬ ಶೀರ್ಷಿಕೆಯಲ್ಲಿ ಟಿವಿ9 ಕನ್ನಡ ಯೂಟ್ಯೂಬ್‌ನಲ್ಲಿ ವಿಡಿಯೋವೊಂದನ್ನು ಅಪ್ಲೋಡ್ ಮಾಡಿದ್ದು, ಅದರಲ್ಲಿ ರಾಜಣ್ಣ ಅವರು “ಯಾವುದೋ ವಿಡಿಯೋದಲ್ಲಿ ನಾನೂ ಕೇಳಿದೆ. ಹಿಂದಿನದ್ದೂ ಇಲ್ಲ, ಮುಂದಿನದ್ದೂ ಇಲ್ಲ. ನಮಗೆ ಕಳಂಕ ತರಲು, ನಮನ್ನು ರಾಜಕೀಯವಾಗಿ ಮುಗಿಸಲು ಇದನ್ನು ಅಪಪ್ರಚಾರ ಮಾಡಿ, ಪಿತೂರಿ ಮಾಡಲು ಹೊರಟಿದ್ದಾರೆ. ದೇವೇಗೌಡರು ಮಾಜಿ ಪ್ರಧಾನಿಗಳು, ಅವರ ಮೇಲೆ ನಮಗೆ ಗೌರವ ಇದೆ. ಅವರ ಸೋಲು ನಾವು ನಿರೀಕ್ಷೆ ಮಾಡಿರಲಿಲ್ಲ. ಅವರ ಬಗ್ಗೆ ಗೌರವಯುತವಾಗಿ ಹಲವಾರು ಸಂದರ್ಭಗಳಲ್ಲಿ ನಾವು ಮಾತನಾಡಿದ್ದು ಇದೆ. ನಾವು ನೀಡಿರುವ ಹೇಳಿಕೆಯಿಂದ ದೇವೇಗೌಡರಿಗೆ, ಅವರ ಕುಟುಂಬಕ್ಕೆ, ಅಭಿಮಾನಿಗಳಿಗೆ ನೋವಾಗಿದ್ದರೆ” ಎಂದು ಹೇಳಿದ್ದು ಇದೆ. ವಿಡಿಯೋದಲ್ಲಿ ರಾಜಣ್ಣ ಅವರು ತನ್ನ ಹೇಳಿಕೆಗೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಹೇಳಿರುವುದು ಇಲ್ಲ. ಆದರೂ, ವಿಡಿಯೋದ ಶೀರ್ಷಿಕೆಯಲ್ಲಿ ಹೇಳಿದಂತೆ ಅವರು ದೇವೇಗೌಡರ ಕುರಿತ ತನ್ನ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ.

ಯೂಟ್ಯೂಬ್ ಲಿಂಕ್ ಇಲ್ಲಿದೆ 

ನಾವು ನಡೆಸಿದ ಪರಿಶೀಲನೆಯಲ್ಲಿ ಶಂಕುತಲ ನಟರಾಜ್ ಹಂಚಿಕೊಂಡಿರುವ ವಿಡಿಯೋ 2022ರಲ್ಲಿ ರಾಜಣ್ಣ ಅವರು ದೇವೇಗೌಡರ ಕುರಿತು ಹೇಳಿರುವಂತದ್ದು, ಇತ್ತೀಚಿನದ್ದಲ್ಲ ಎಂದು ತಿಳಿದು ಬಂದಿದೆ. ಮಾಧ್ಯಮ ವರದಿಗಳ ಪ್ರಕಾರ ರಾಜಣ್ಣ ಅವರು ತನ್ನ ಹೇಳಿಕೆ ಕುರಿತು ವಿಷಾದ ವ್ಯಕ್ತಪಡಿಸಿದ್ದಾರೆ. ಗಮನಾರ್ಹವಾಗಿ, ದೇವೇಗೌಡರ ಕುರಿತು ಹೇಳಿಕೆ ನೀಡುವಾಗ ರಾಜಣ್ಣ ಅವರು ಸಚಿವರಾಗಿರಲಿಲ್ಲ. ಪ್ರಸ್ತುತ ಅವರ ರಾಜ್ಯ ಸರ್ಕಾರದಲ್ಲಿ ಸಚಿವರಾಗಿದ್ದಾರೆ.

ಇದನ್ನೂ ಓದಿ : FACT CHECK : ಕರ್ನಾಟಕ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಕೇಂದ್ರದ ಅನುದಾನ ಕೇಳುತ್ತಿದೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...