Homeಫ್ಯಾಕ್ಟ್‌ಚೆಕ್Fact Check: ಮುಂಬೈ ರೈಲ್ವೆ ನಿಲ್ದಾಣಕ್ಕೆ ಬೆಂಕಿ ಹಚ್ಚಲಾಗಿದೆ ಎಂದು ಹಳೆಯ ವಿಡಿಯೋ ಹಂಚಿಕೆ

Fact Check: ಮುಂಬೈ ರೈಲ್ವೆ ನಿಲ್ದಾಣಕ್ಕೆ ಬೆಂಕಿ ಹಚ್ಚಲಾಗಿದೆ ಎಂದು ಹಳೆಯ ವಿಡಿಯೋ ಹಂಚಿಕೆ

- Advertisement -
- Advertisement -

ಮುಂಬೈನ ಮೀರಾ ರಸ್ತೆಯಲ್ಲಿ ಹಿಂಸಾಚಾರದ ವೇಳೆ ರೈಲ್ವೆ ನಿಲ್ದಾಣಕ್ಕೆ ಬೆಂಕಿ ಹಚ್ಚಲಾಗಿದ್ದು, ಹೊತ್ತಿ ಉರಿದಿದೆ ಎನ್ನಲಾದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ರಾಮ ಮಂದಿರ ಉದ್ಘಾಟನೆಯ ವೇಳೆ ಮುಂಬೈನ ನಯಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಮೀರಾ ರಸ್ತೆಯಲ್ಲಿ ಹಿಂಸಾಚಾರ ನಡೆದಿತ್ತು. ಪ್ರಸ್ತುತ ಅಲ್ಲಿ ಪರಿಸ್ಥಿತಿ ಹತೋಟಿಗೆ ಬಂದಿದೆ. ಆದರೆ, ಮೀರಾ ರಸ್ತೆಯಲ್ಲಿ ಹಿಂಸಾಚಾರ ಮುಂದುವರೆದಿದೆ ಎಂಬ ಅರ್ಥದಲ್ಲಿ ವಿಡಿಯೋ ಹಂಚಿಕೊಳ್ಳಲಾಗ್ತಿದೆ.

ಮೀರಾ ರಸ್ತೆಯಲ್ಲಿ ಮುಸ್ಲಿಮರು ರಾಮ ಭಕ್ತರ ರ್‍ಯಾಲಿ ಮೇಲೆ ದಾಳಿ ನಡೆಸಿದ್ದು, ಇದರಿಂದ ಹಿಂಸಾಚಾರ ಭುಗಿಲೆದ್ದಿದೆ ಎಂಬ ಸುದ್ದಿ ಮಾಧ್ಯಮಗಳಲ್ಲಿ ಹಬ್ಬಿತ್ತು. ಸಾಮಾಜಿಕ ಜಾಲತಾಣಗಳಲ್ಲೂ ಹಲವು ವಿಡಿಯೋ, ಪೋಟೋಗಳಿಗೆ ಮೀರಾ ರಸ್ತೆಯ ಹಿಂಸಾಚಾರದ್ದು ಎಂದು ಶೀರ್ಷಿಕೆ ಕೊಟ್ಟು ಹಂಚಲಾಗ್ತಿದೆ. ಈ ಪೈಕಿ ರೈಲ್ವೆ ನಿಲ್ದಾಣಕ್ಕೆ ಬೆಂಕಿ ಹಚ್ಚಲಾಗಿದೆ ಎಂಬುವುದು ಕೂಡ ಒಂದು.

ಬಲಪಂಥೀಯ ಸಾಮಾಜಿಕ ಜಾಲತಾಣ ಖಾತೆಗಳು ಮೀರಾ ರಸ್ತೆಯಲ್ಲಿ ಮುಸ್ಲಿಮರು ರೈಲ್ವೆ ನಿಲ್ಧಾಣಕ್ಕೆ ಬೆಂಕಿ ಹಚ್ಚಿದ್ದಾರೆ ಎಂಬ ದಾಟಿಯಲ್ಲಿ ವಿಡಿಯೋವನ್ನು ಹಂಚಿಕೊಳ್ತಿದೆ.

ಫ್ಯಾಕ್ಟ್‌ಚೆಕ್ : ನಾನುಗೌರಿ.ಕಾಂ ಮೇಲಿನ ವೈರಲ್ ವಿಡಿಯೋದ ಸತ್ಯಾಸತ್ಯತೆ ಪರಿಶೀಲನೆ ನಡೆಸಿದೆ. ಇದಕ್ಕಾಗಿ ನಾವು ಮೊದಲು ವೆಸ್ಟರ್ನ್‌ ರೈಲ್ವೆಯ ಟ್ವಿಟ್ಟರ್ ಖಾತೆಯನ್ನು ಪರಿಶೀಲನೆ ನಡೆಸಿದ್ದೇವೆ. ಈ ವೇಳೆ ಮೀರಾ ರಸ್ತೆ ರೈಲ್ವೆ ನಿಲ್ದಾಣದ ಹೆಸರಿನಲ್ಲಿ ಹರಿದಾಡುತ್ತಿರುವ ವಿಡಿಯೋ ಸುಳ್ಳು. ಪ್ರಸ್ತುತ ಮೀರಾ ರಸ್ತೆ ರೈಲ್ವೆ ನಿಲ್ದಾಣದ ಪರಿಸ್ಥಿತಿ ಯಥಾಸ್ಥಿತಿಯಲ್ಲಿದೆ ಎಂದು ಸ್ವತಃ ವೆಸ್ಟರ್ನ್‌ ರೈಲ್ವೆ ಹೇಳಿಕೊಂಡಿರುವ ವಿಡಿಯೋ ಲಭ್ಯವಾಗಿದೆ.

‘Sangbad Pratidin’ ಎಂಬ ಯೂಟ್ಯೂಬ್ ಚಾನೆಲ್‌ನಲ್ಲಿ 9 ತಿಂಗಳ ಹಿಂದೆ ಇದೇ ವಿಡಿಯೋ ಅಪ್ಲೋಡ್ ಆಗಿದ್ದು, “Massive fire break out in Santoshpur station” “ಸಂತೋಷಪುರ ರೈಲ್ಬೆ ನಿಲ್ದಾಣದಲ್ಲಿ ಭಾರೀ ಬೆಂಕಿ ಅವಘಡ” ಎಂದು ಶೀರ್ಷಿಕೆ ಕೊಡಲಾಗಿದೆ. ಈ ಸಂತೋಷಪುರ ರೈಲ್ವೆ ನಿಲ್ದಾಣ ಪಶ್ಚಿಮ ಬಂಗಾಳದ ರಾಜಧಾನಿ ಕೊಲ್ಕತ್ತಾದ ಉಪನಗರವಾಗಿದೆ.

‘ABP ANANDA’ ಯೂಟ್ಯೂಬ್ ಚಾನೆಲ್‌ನಲ್ಲಿಯೂ 9 ತಿಂಗಳ ಹಿಂದೆ ಈ ವಿಡಿಯೋ ಅಪ್ಲೋಡ್ ಮಾಡಲಾಗಿದ್ದು, ಸಂತೋಷ್‌ಪುರ ರೈಲು ನಿಲ್ದಾಣದಲ್ಲಿ ಭಾರೀ ಬೆಂಕಿ ಅವಘಡ. ಸೀಲ್ಡಾ-ಬಜ್ಬಾಜ್ ನಡುವಿನ ರೈಲು ಸಂಚಾರ ಸ್ಥಗಿತಗೊಳಿಸಲಾಗಿದೆ ಎಂದು ಬರೆಯಲಾಗಿದೆ.

ಏಪ್ರಿಲ್ 7, 2023ರಂದು ಟೈಮ್ಸ್ ಆಫ್ ಇಂಡಿಯಾ ಸಂತೋಷ್‌ಪುರ ರೈಲು ನಿಲ್ದಾಣದಲ್ಲಿ ಬೆಂಕಿ ಅವಘಡ ಸಂಭವಿಸಿದ ಬಗ್ಗೆ ವರದಿ ಪ್ರಕಟಿಸಿತ್ತು. ಸೀಲ್ದಾಹ್-ಬಡ್ಜ್ ಬಡ್ಜ್ ವಿಭಾಗದ ಸಂತೋಷಪುರ ರೈಲು ನಿಲ್ದಾಣದ ಪ್ಲಾಟ್‌ಫಾರ್ಮ್ ಸಂಖ್ಯೆ 2 ರಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಘಟನೆಯ ನಂತರ ಈ ವಿಭಾಗದ ಎರಡೂ ಕಡೆಯ ರೈಲು ಸೇವೆಗಳನ್ನು ಸಂಜೆ 6 ರಿಂದ ರಾತ್ರಿ 8 ರ ನಡುವೆ ಸ್ಥಗಿತಗೊಳಿಸಲಾಗಿದೆ. ಸಂಜೆ 5.30ರ ಸುಮಾರಿಗೆ ರೈಲು ನಿಲ್ದಾಣದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಘಟನೆಯಲ್ಲಿ 25 ಅಂಗಡಿಗಳು ಮತ್ತು ರೈಲ್ವೆ ಪ್ಲಾಟ್‌ಫಾರ್ಮ್‌ಗೆ ಹೊಂದಿಕೊಂಡಿರುವ ಕೆಲವು ಗುಡಿಸಲುಗಳು ಬೆಂಕಿಗಾಹುತಿಯಾಗಿವೆ. ಬೆಂಕಿ ನಂದಿಸಲು ಏಳು ಅಗ್ನಿಶಾಮಕ ತಂಡಗಳು ಆಗಮಿಸಿವೆ ಎಂದು ವರದಿಯಲ್ಲಿ ತಿಳಿಸಿತ್ತು.

ಸುದ್ದಿ ಲಿಂಕ್‌ಗೆ ಇಲ್ಲಿ ಕ್ಲಿಕ್ ಮಾಡಿ 

ಹಲವು ಮೂಲಗಳನ್ನು ಆಧರಿಸಿ ನಾವು ನಡೆಸಿದ ಪರಿಶೀಲನೆಯಲ್ಲಿ ರೈಲ್ವೆ ನಿಲ್ದಾಣಕ್ಕೆ ಬೆಂಕಿ ತಗುಲಿ ಹೊತ್ತಿ ಉರಿದಿರುವ ವಿಡಿಯೋ ಕೊಲ್ಕತ್ತಾ ಬಳಿಯ ಸಂತೋಷಪುರದಲ್ಲಿ ಏಪ್ರಿಲ್ 7, 2023ರಂದು ನಡೆದ ಬೆಂಕಿ ಅವಘಡದ್ದು, ಮುಂಬೈನ ಮೀರಾ ರಸ್ತೆಯ ರೈಲು ನಿಲ್ದಾಣದ್ದು ಅಲ್ಲ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: Fact Check: ರಾಮಭಕ್ತ ಉಲ್ಟ ನಡಿಗೆಯ ಮೂಲಕ ಅಯೋಧ್ಯೆಗೆ ತೆರಳಿದ್ದು ನಿಜಾನಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...

ತೆಲಂಗಾಣ| ಕೆಸಿಆರ್‌ ಮನೆ ಮುಂದೆ ದಲಿತ ಮುಖಂಡರಿಂದ ಪ್ರತಿಭಟನೆ; ಬಿಆರ್‌ಎಸ್‌ ಕಾರ್ಯಕರ್ತರಿಂದ ನೀರು-ಅರಿಶಿನ ಬಳಸಿ ರಸ್ತೆ ಶುದ್ಧೀಕರಣ

ತೆಲಂಗಾಣದ ಸಿದ್ಧಾಪೇಟೆ ಜಿಲ್ಲೆಯ ಎರ್ರವಳ್ಳಿಯಲ್ಲಿರುವ ಬಿಆರ್‌ಎಸ್ ಅಧ್ಯಕ್ಷ ಕೆ. ಚಂದ್ರಶೇಖರ ರಾವ್ (ಕೆಸಿಆರ್) ಅವರ ಫಾರ್ಮ್ ಹೌಸ್ ಬಳಿ ದಲಿತ ಮುಖಂಡರು ಮತ್ತು ಕಾಂಗ್ರೆಸ್ ನಡೆಸಿದ ಪ್ರತಿಭಟನೆಯ ನಂತರ, ಬಿಆರ್‌ಎಸ್ ನಾಯಕರು ನಡೆಸಿದ...

ಉದ್ಯಮಿಗಳಾದ ನಂದನ್ ನಿಲೇಕಣಿ- ನಿಖಿಲ್ ಕಾಮತ್, ನಟ ಶಿವರಾಜ್‌ಕುಮಾರ್ ಅವರಿಗೂ ಎಸ್‌ಐಆರ್ ನೋಟಿಸ್‌

ಇನ್ಫೋಸಿಸ್ ಸಹ-ಸಂಸ್ಥಾಪಕ, ಕೇಂದ್ರ ಸರ್ಕಾರದ 'ಪರೀಕ್ಷಾ ಸುಧಾರಣಾ ಉನ್ನತ ಮಟ್ಟದ ಕಾರ್ಯಪಡೆ' ಮುಕ್ಯಸ್ಥ ನಂದನ್ ನಿಲೇಕಣಿ ಹಾಗೂ ಅವರ ಇಡೀ ಕುಟುಂಬವು, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಚುನಾವಣಾ...

ರಾಷ್ಟ್ರೀಯ ಮಹಿಳಾ ಆಯೋಗದ ಕಾರ್ಯಾಗಾರದಲ್ಲಿ ಬರೀ ಹಿಂದಿ ಮಾತು : ಆಕ್ಷೇಪ ವ್ಯಕ್ತಪಡಿಸಿ ಹೊರನಡೆದ ಕೇರಳದ ಶಾಸಕರು

ರಾಷ್ಟ್ರೀಯ ಮಹಿಳಾ ಆಯೋಗ (NCW) ಮಂಗಳವಾರ (ಸೆ.8) ಹಮ್ಮಿಕೊಂಡಿದ್ದ ಕಾರ್ಯಾಗಾರದಲ್ಲಿ, ಬಹುಪಾಲು ಸೆಷನ್‌ಗಳನ್ನು ಹಿಂದಿ ಭಾಷೆಯಲ್ಲೇ ನಡೆಸಲಾಗುತ್ತಿದೆ ಮತ್ತು ಹಿಂದಿ ಮಾತನಾಡದ ರಾಜ್ಯಗಳ ಭಾಗವಹಿಸುವಿಕೆಗೆ ಕರಾರುವಕ್ಕಾಗಿ ನಡವಳಿಕೆಗಳನ್ನು ಅರ್ಥಮಾಡಿಕೊಳ್ಳಲು ಕಷ್ಟವಾಗುತ್ತಿದೆ ಎಂದು ಆರೋಪಿಸಿ,...

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...