Homeಫ್ಯಾಕ್ಟ್‌ಚೆಕ್Fact Check: ಮುಂಬೈ ರೈಲ್ವೆ ನಿಲ್ದಾಣಕ್ಕೆ ಬೆಂಕಿ ಹಚ್ಚಲಾಗಿದೆ ಎಂದು ಹಳೆಯ ವಿಡಿಯೋ ಹಂಚಿಕೆ

Fact Check: ಮುಂಬೈ ರೈಲ್ವೆ ನಿಲ್ದಾಣಕ್ಕೆ ಬೆಂಕಿ ಹಚ್ಚಲಾಗಿದೆ ಎಂದು ಹಳೆಯ ವಿಡಿಯೋ ಹಂಚಿಕೆ

- Advertisement -
- Advertisement -

ಮುಂಬೈನ ಮೀರಾ ರಸ್ತೆಯಲ್ಲಿ ಹಿಂಸಾಚಾರದ ವೇಳೆ ರೈಲ್ವೆ ನಿಲ್ದಾಣಕ್ಕೆ ಬೆಂಕಿ ಹಚ್ಚಲಾಗಿದ್ದು, ಹೊತ್ತಿ ಉರಿದಿದೆ ಎನ್ನಲಾದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ರಾಮ ಮಂದಿರ ಉದ್ಘಾಟನೆಯ ವೇಳೆ ಮುಂಬೈನ ನಯಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಮೀರಾ ರಸ್ತೆಯಲ್ಲಿ ಹಿಂಸಾಚಾರ ನಡೆದಿತ್ತು. ಪ್ರಸ್ತುತ ಅಲ್ಲಿ ಪರಿಸ್ಥಿತಿ ಹತೋಟಿಗೆ ಬಂದಿದೆ. ಆದರೆ, ಮೀರಾ ರಸ್ತೆಯಲ್ಲಿ ಹಿಂಸಾಚಾರ ಮುಂದುವರೆದಿದೆ ಎಂಬ ಅರ್ಥದಲ್ಲಿ ವಿಡಿಯೋ ಹಂಚಿಕೊಳ್ಳಲಾಗ್ತಿದೆ.

ಮೀರಾ ರಸ್ತೆಯಲ್ಲಿ ಮುಸ್ಲಿಮರು ರಾಮ ಭಕ್ತರ ರ್‍ಯಾಲಿ ಮೇಲೆ ದಾಳಿ ನಡೆಸಿದ್ದು, ಇದರಿಂದ ಹಿಂಸಾಚಾರ ಭುಗಿಲೆದ್ದಿದೆ ಎಂಬ ಸುದ್ದಿ ಮಾಧ್ಯಮಗಳಲ್ಲಿ ಹಬ್ಬಿತ್ತು. ಸಾಮಾಜಿಕ ಜಾಲತಾಣಗಳಲ್ಲೂ ಹಲವು ವಿಡಿಯೋ, ಪೋಟೋಗಳಿಗೆ ಮೀರಾ ರಸ್ತೆಯ ಹಿಂಸಾಚಾರದ್ದು ಎಂದು ಶೀರ್ಷಿಕೆ ಕೊಟ್ಟು ಹಂಚಲಾಗ್ತಿದೆ. ಈ ಪೈಕಿ ರೈಲ್ವೆ ನಿಲ್ದಾಣಕ್ಕೆ ಬೆಂಕಿ ಹಚ್ಚಲಾಗಿದೆ ಎಂಬುವುದು ಕೂಡ ಒಂದು.

ಬಲಪಂಥೀಯ ಸಾಮಾಜಿಕ ಜಾಲತಾಣ ಖಾತೆಗಳು ಮೀರಾ ರಸ್ತೆಯಲ್ಲಿ ಮುಸ್ಲಿಮರು ರೈಲ್ವೆ ನಿಲ್ಧಾಣಕ್ಕೆ ಬೆಂಕಿ ಹಚ್ಚಿದ್ದಾರೆ ಎಂಬ ದಾಟಿಯಲ್ಲಿ ವಿಡಿಯೋವನ್ನು ಹಂಚಿಕೊಳ್ತಿದೆ.

ಫ್ಯಾಕ್ಟ್‌ಚೆಕ್ : ನಾನುಗೌರಿ.ಕಾಂ ಮೇಲಿನ ವೈರಲ್ ವಿಡಿಯೋದ ಸತ್ಯಾಸತ್ಯತೆ ಪರಿಶೀಲನೆ ನಡೆಸಿದೆ. ಇದಕ್ಕಾಗಿ ನಾವು ಮೊದಲು ವೆಸ್ಟರ್ನ್‌ ರೈಲ್ವೆಯ ಟ್ವಿಟ್ಟರ್ ಖಾತೆಯನ್ನು ಪರಿಶೀಲನೆ ನಡೆಸಿದ್ದೇವೆ. ಈ ವೇಳೆ ಮೀರಾ ರಸ್ತೆ ರೈಲ್ವೆ ನಿಲ್ದಾಣದ ಹೆಸರಿನಲ್ಲಿ ಹರಿದಾಡುತ್ತಿರುವ ವಿಡಿಯೋ ಸುಳ್ಳು. ಪ್ರಸ್ತುತ ಮೀರಾ ರಸ್ತೆ ರೈಲ್ವೆ ನಿಲ್ದಾಣದ ಪರಿಸ್ಥಿತಿ ಯಥಾಸ್ಥಿತಿಯಲ್ಲಿದೆ ಎಂದು ಸ್ವತಃ ವೆಸ್ಟರ್ನ್‌ ರೈಲ್ವೆ ಹೇಳಿಕೊಂಡಿರುವ ವಿಡಿಯೋ ಲಭ್ಯವಾಗಿದೆ.

‘Sangbad Pratidin’ ಎಂಬ ಯೂಟ್ಯೂಬ್ ಚಾನೆಲ್‌ನಲ್ಲಿ 9 ತಿಂಗಳ ಹಿಂದೆ ಇದೇ ವಿಡಿಯೋ ಅಪ್ಲೋಡ್ ಆಗಿದ್ದು, “Massive fire break out in Santoshpur station” “ಸಂತೋಷಪುರ ರೈಲ್ಬೆ ನಿಲ್ದಾಣದಲ್ಲಿ ಭಾರೀ ಬೆಂಕಿ ಅವಘಡ” ಎಂದು ಶೀರ್ಷಿಕೆ ಕೊಡಲಾಗಿದೆ. ಈ ಸಂತೋಷಪುರ ರೈಲ್ವೆ ನಿಲ್ದಾಣ ಪಶ್ಚಿಮ ಬಂಗಾಳದ ರಾಜಧಾನಿ ಕೊಲ್ಕತ್ತಾದ ಉಪನಗರವಾಗಿದೆ.

‘ABP ANANDA’ ಯೂಟ್ಯೂಬ್ ಚಾನೆಲ್‌ನಲ್ಲಿಯೂ 9 ತಿಂಗಳ ಹಿಂದೆ ಈ ವಿಡಿಯೋ ಅಪ್ಲೋಡ್ ಮಾಡಲಾಗಿದ್ದು, ಸಂತೋಷ್‌ಪುರ ರೈಲು ನಿಲ್ದಾಣದಲ್ಲಿ ಭಾರೀ ಬೆಂಕಿ ಅವಘಡ. ಸೀಲ್ಡಾ-ಬಜ್ಬಾಜ್ ನಡುವಿನ ರೈಲು ಸಂಚಾರ ಸ್ಥಗಿತಗೊಳಿಸಲಾಗಿದೆ ಎಂದು ಬರೆಯಲಾಗಿದೆ.

ಏಪ್ರಿಲ್ 7, 2023ರಂದು ಟೈಮ್ಸ್ ಆಫ್ ಇಂಡಿಯಾ ಸಂತೋಷ್‌ಪುರ ರೈಲು ನಿಲ್ದಾಣದಲ್ಲಿ ಬೆಂಕಿ ಅವಘಡ ಸಂಭವಿಸಿದ ಬಗ್ಗೆ ವರದಿ ಪ್ರಕಟಿಸಿತ್ತು. ಸೀಲ್ದಾಹ್-ಬಡ್ಜ್ ಬಡ್ಜ್ ವಿಭಾಗದ ಸಂತೋಷಪುರ ರೈಲು ನಿಲ್ದಾಣದ ಪ್ಲಾಟ್‌ಫಾರ್ಮ್ ಸಂಖ್ಯೆ 2 ರಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಘಟನೆಯ ನಂತರ ಈ ವಿಭಾಗದ ಎರಡೂ ಕಡೆಯ ರೈಲು ಸೇವೆಗಳನ್ನು ಸಂಜೆ 6 ರಿಂದ ರಾತ್ರಿ 8 ರ ನಡುವೆ ಸ್ಥಗಿತಗೊಳಿಸಲಾಗಿದೆ. ಸಂಜೆ 5.30ರ ಸುಮಾರಿಗೆ ರೈಲು ನಿಲ್ದಾಣದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಘಟನೆಯಲ್ಲಿ 25 ಅಂಗಡಿಗಳು ಮತ್ತು ರೈಲ್ವೆ ಪ್ಲಾಟ್‌ಫಾರ್ಮ್‌ಗೆ ಹೊಂದಿಕೊಂಡಿರುವ ಕೆಲವು ಗುಡಿಸಲುಗಳು ಬೆಂಕಿಗಾಹುತಿಯಾಗಿವೆ. ಬೆಂಕಿ ನಂದಿಸಲು ಏಳು ಅಗ್ನಿಶಾಮಕ ತಂಡಗಳು ಆಗಮಿಸಿವೆ ಎಂದು ವರದಿಯಲ್ಲಿ ತಿಳಿಸಿತ್ತು.

ಸುದ್ದಿ ಲಿಂಕ್‌ಗೆ ಇಲ್ಲಿ ಕ್ಲಿಕ್ ಮಾಡಿ 

ಹಲವು ಮೂಲಗಳನ್ನು ಆಧರಿಸಿ ನಾವು ನಡೆಸಿದ ಪರಿಶೀಲನೆಯಲ್ಲಿ ರೈಲ್ವೆ ನಿಲ್ದಾಣಕ್ಕೆ ಬೆಂಕಿ ತಗುಲಿ ಹೊತ್ತಿ ಉರಿದಿರುವ ವಿಡಿಯೋ ಕೊಲ್ಕತ್ತಾ ಬಳಿಯ ಸಂತೋಷಪುರದಲ್ಲಿ ಏಪ್ರಿಲ್ 7, 2023ರಂದು ನಡೆದ ಬೆಂಕಿ ಅವಘಡದ್ದು, ಮುಂಬೈನ ಮೀರಾ ರಸ್ತೆಯ ರೈಲು ನಿಲ್ದಾಣದ್ದು ಅಲ್ಲ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: Fact Check: ರಾಮಭಕ್ತ ಉಲ್ಟ ನಡಿಗೆಯ ಮೂಲಕ ಅಯೋಧ್ಯೆಗೆ ತೆರಳಿದ್ದು ನಿಜಾನಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...