Homeಫ್ಯಾಕ್ಟ್‌ಚೆಕ್Fact Check: ಮುಂಬೈ ರೈಲ್ವೆ ನಿಲ್ದಾಣಕ್ಕೆ ಬೆಂಕಿ ಹಚ್ಚಲಾಗಿದೆ ಎಂದು ಹಳೆಯ ವಿಡಿಯೋ ಹಂಚಿಕೆ

Fact Check: ಮುಂಬೈ ರೈಲ್ವೆ ನಿಲ್ದಾಣಕ್ಕೆ ಬೆಂಕಿ ಹಚ್ಚಲಾಗಿದೆ ಎಂದು ಹಳೆಯ ವಿಡಿಯೋ ಹಂಚಿಕೆ

- Advertisement -
- Advertisement -

ಮುಂಬೈನ ಮೀರಾ ರಸ್ತೆಯಲ್ಲಿ ಹಿಂಸಾಚಾರದ ವೇಳೆ ರೈಲ್ವೆ ನಿಲ್ದಾಣಕ್ಕೆ ಬೆಂಕಿ ಹಚ್ಚಲಾಗಿದ್ದು, ಹೊತ್ತಿ ಉರಿದಿದೆ ಎನ್ನಲಾದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ರಾಮ ಮಂದಿರ ಉದ್ಘಾಟನೆಯ ವೇಳೆ ಮುಂಬೈನ ನಯಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಮೀರಾ ರಸ್ತೆಯಲ್ಲಿ ಹಿಂಸಾಚಾರ ನಡೆದಿತ್ತು. ಪ್ರಸ್ತುತ ಅಲ್ಲಿ ಪರಿಸ್ಥಿತಿ ಹತೋಟಿಗೆ ಬಂದಿದೆ. ಆದರೆ, ಮೀರಾ ರಸ್ತೆಯಲ್ಲಿ ಹಿಂಸಾಚಾರ ಮುಂದುವರೆದಿದೆ ಎಂಬ ಅರ್ಥದಲ್ಲಿ ವಿಡಿಯೋ ಹಂಚಿಕೊಳ್ಳಲಾಗ್ತಿದೆ.

ಮೀರಾ ರಸ್ತೆಯಲ್ಲಿ ಮುಸ್ಲಿಮರು ರಾಮ ಭಕ್ತರ ರ್‍ಯಾಲಿ ಮೇಲೆ ದಾಳಿ ನಡೆಸಿದ್ದು, ಇದರಿಂದ ಹಿಂಸಾಚಾರ ಭುಗಿಲೆದ್ದಿದೆ ಎಂಬ ಸುದ್ದಿ ಮಾಧ್ಯಮಗಳಲ್ಲಿ ಹಬ್ಬಿತ್ತು. ಸಾಮಾಜಿಕ ಜಾಲತಾಣಗಳಲ್ಲೂ ಹಲವು ವಿಡಿಯೋ, ಪೋಟೋಗಳಿಗೆ ಮೀರಾ ರಸ್ತೆಯ ಹಿಂಸಾಚಾರದ್ದು ಎಂದು ಶೀರ್ಷಿಕೆ ಕೊಟ್ಟು ಹಂಚಲಾಗ್ತಿದೆ. ಈ ಪೈಕಿ ರೈಲ್ವೆ ನಿಲ್ದಾಣಕ್ಕೆ ಬೆಂಕಿ ಹಚ್ಚಲಾಗಿದೆ ಎಂಬುವುದು ಕೂಡ ಒಂದು.

ಬಲಪಂಥೀಯ ಸಾಮಾಜಿಕ ಜಾಲತಾಣ ಖಾತೆಗಳು ಮೀರಾ ರಸ್ತೆಯಲ್ಲಿ ಮುಸ್ಲಿಮರು ರೈಲ್ವೆ ನಿಲ್ಧಾಣಕ್ಕೆ ಬೆಂಕಿ ಹಚ್ಚಿದ್ದಾರೆ ಎಂಬ ದಾಟಿಯಲ್ಲಿ ವಿಡಿಯೋವನ್ನು ಹಂಚಿಕೊಳ್ತಿದೆ.

ಫ್ಯಾಕ್ಟ್‌ಚೆಕ್ : ನಾನುಗೌರಿ.ಕಾಂ ಮೇಲಿನ ವೈರಲ್ ವಿಡಿಯೋದ ಸತ್ಯಾಸತ್ಯತೆ ಪರಿಶೀಲನೆ ನಡೆಸಿದೆ. ಇದಕ್ಕಾಗಿ ನಾವು ಮೊದಲು ವೆಸ್ಟರ್ನ್‌ ರೈಲ್ವೆಯ ಟ್ವಿಟ್ಟರ್ ಖಾತೆಯನ್ನು ಪರಿಶೀಲನೆ ನಡೆಸಿದ್ದೇವೆ. ಈ ವೇಳೆ ಮೀರಾ ರಸ್ತೆ ರೈಲ್ವೆ ನಿಲ್ದಾಣದ ಹೆಸರಿನಲ್ಲಿ ಹರಿದಾಡುತ್ತಿರುವ ವಿಡಿಯೋ ಸುಳ್ಳು. ಪ್ರಸ್ತುತ ಮೀರಾ ರಸ್ತೆ ರೈಲ್ವೆ ನಿಲ್ದಾಣದ ಪರಿಸ್ಥಿತಿ ಯಥಾಸ್ಥಿತಿಯಲ್ಲಿದೆ ಎಂದು ಸ್ವತಃ ವೆಸ್ಟರ್ನ್‌ ರೈಲ್ವೆ ಹೇಳಿಕೊಂಡಿರುವ ವಿಡಿಯೋ ಲಭ್ಯವಾಗಿದೆ.

‘Sangbad Pratidin’ ಎಂಬ ಯೂಟ್ಯೂಬ್ ಚಾನೆಲ್‌ನಲ್ಲಿ 9 ತಿಂಗಳ ಹಿಂದೆ ಇದೇ ವಿಡಿಯೋ ಅಪ್ಲೋಡ್ ಆಗಿದ್ದು, “Massive fire break out in Santoshpur station” “ಸಂತೋಷಪುರ ರೈಲ್ಬೆ ನಿಲ್ದಾಣದಲ್ಲಿ ಭಾರೀ ಬೆಂಕಿ ಅವಘಡ” ಎಂದು ಶೀರ್ಷಿಕೆ ಕೊಡಲಾಗಿದೆ. ಈ ಸಂತೋಷಪುರ ರೈಲ್ವೆ ನಿಲ್ದಾಣ ಪಶ್ಚಿಮ ಬಂಗಾಳದ ರಾಜಧಾನಿ ಕೊಲ್ಕತ್ತಾದ ಉಪನಗರವಾಗಿದೆ.

‘ABP ANANDA’ ಯೂಟ್ಯೂಬ್ ಚಾನೆಲ್‌ನಲ್ಲಿಯೂ 9 ತಿಂಗಳ ಹಿಂದೆ ಈ ವಿಡಿಯೋ ಅಪ್ಲೋಡ್ ಮಾಡಲಾಗಿದ್ದು, ಸಂತೋಷ್‌ಪುರ ರೈಲು ನಿಲ್ದಾಣದಲ್ಲಿ ಭಾರೀ ಬೆಂಕಿ ಅವಘಡ. ಸೀಲ್ಡಾ-ಬಜ್ಬಾಜ್ ನಡುವಿನ ರೈಲು ಸಂಚಾರ ಸ್ಥಗಿತಗೊಳಿಸಲಾಗಿದೆ ಎಂದು ಬರೆಯಲಾಗಿದೆ.

ಏಪ್ರಿಲ್ 7, 2023ರಂದು ಟೈಮ್ಸ್ ಆಫ್ ಇಂಡಿಯಾ ಸಂತೋಷ್‌ಪುರ ರೈಲು ನಿಲ್ದಾಣದಲ್ಲಿ ಬೆಂಕಿ ಅವಘಡ ಸಂಭವಿಸಿದ ಬಗ್ಗೆ ವರದಿ ಪ್ರಕಟಿಸಿತ್ತು. ಸೀಲ್ದಾಹ್-ಬಡ್ಜ್ ಬಡ್ಜ್ ವಿಭಾಗದ ಸಂತೋಷಪುರ ರೈಲು ನಿಲ್ದಾಣದ ಪ್ಲಾಟ್‌ಫಾರ್ಮ್ ಸಂಖ್ಯೆ 2 ರಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಘಟನೆಯ ನಂತರ ಈ ವಿಭಾಗದ ಎರಡೂ ಕಡೆಯ ರೈಲು ಸೇವೆಗಳನ್ನು ಸಂಜೆ 6 ರಿಂದ ರಾತ್ರಿ 8 ರ ನಡುವೆ ಸ್ಥಗಿತಗೊಳಿಸಲಾಗಿದೆ. ಸಂಜೆ 5.30ರ ಸುಮಾರಿಗೆ ರೈಲು ನಿಲ್ದಾಣದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಘಟನೆಯಲ್ಲಿ 25 ಅಂಗಡಿಗಳು ಮತ್ತು ರೈಲ್ವೆ ಪ್ಲಾಟ್‌ಫಾರ್ಮ್‌ಗೆ ಹೊಂದಿಕೊಂಡಿರುವ ಕೆಲವು ಗುಡಿಸಲುಗಳು ಬೆಂಕಿಗಾಹುತಿಯಾಗಿವೆ. ಬೆಂಕಿ ನಂದಿಸಲು ಏಳು ಅಗ್ನಿಶಾಮಕ ತಂಡಗಳು ಆಗಮಿಸಿವೆ ಎಂದು ವರದಿಯಲ್ಲಿ ತಿಳಿಸಿತ್ತು.

ಸುದ್ದಿ ಲಿಂಕ್‌ಗೆ ಇಲ್ಲಿ ಕ್ಲಿಕ್ ಮಾಡಿ 

ಹಲವು ಮೂಲಗಳನ್ನು ಆಧರಿಸಿ ನಾವು ನಡೆಸಿದ ಪರಿಶೀಲನೆಯಲ್ಲಿ ರೈಲ್ವೆ ನಿಲ್ದಾಣಕ್ಕೆ ಬೆಂಕಿ ತಗುಲಿ ಹೊತ್ತಿ ಉರಿದಿರುವ ವಿಡಿಯೋ ಕೊಲ್ಕತ್ತಾ ಬಳಿಯ ಸಂತೋಷಪುರದಲ್ಲಿ ಏಪ್ರಿಲ್ 7, 2023ರಂದು ನಡೆದ ಬೆಂಕಿ ಅವಘಡದ್ದು, ಮುಂಬೈನ ಮೀರಾ ರಸ್ತೆಯ ರೈಲು ನಿಲ್ದಾಣದ್ದು ಅಲ್ಲ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: Fact Check: ರಾಮಭಕ್ತ ಉಲ್ಟ ನಡಿಗೆಯ ಮೂಲಕ ಅಯೋಧ್ಯೆಗೆ ತೆರಳಿದ್ದು ನಿಜಾನಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...