Homeನಿಜವೋ ಸುಳ್ಳೋಫ್ಯಾಕ್ಟ್‌ಚೆಕ್‌: ಲಾಕ್‌ಡೌನ್ ನಡುವೆ ಮುಂಬೈ ರೈಲು ನಿಲ್ದಾಣದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದು ನಿಜವೇ?

ಫ್ಯಾಕ್ಟ್‌ಚೆಕ್‌: ಲಾಕ್‌ಡೌನ್ ನಡುವೆ ಮುಂಬೈ ರೈಲು ನಿಲ್ದಾಣದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದು ನಿಜವೇ?

- Advertisement -
- Advertisement -

ನಮ್ಮ ದೇಶ ಮಾತ್ರವಲ್ಲದೇ ಇಡೀ ವಿಶ್ವವೇ ಕೊರೊನಾ ಸಾಂಕ್ರಾಮಿಕದಿಂದ ತತ್ತರಿಸಿ ಅದರ ವಿರುದ್ಧ ಹೋರಾಡಲು ಹೆಣಗಾಡುತ್ತಿದ್ದರೆ ಕೆಲ ಮತಾಂಧರಿಗೆ ಈಗಲೂ ಪಾಕಿಸ್ತಾನದ್ದೆ ಚಿಂತೆಯಾಗಿದೆ. ದಿನಕ್ಕೊಮ್ಮೆಯಾದರೂ ಪಾಕಿಸ್ತಾನ, ದೇಶಪ್ರೇಮ ಪದಗಳನ್ನು ಬಳಸದಿದ್ದರೆ ಅವರಿಗೆ ತಿಂದದ್ದು ಜೀರ್ಣವಾಗುವುದಿಲ್ಲ ಎನಿಸುತ್ತದೆ. ಆದ್ದರಿಂದ ಯಾರಿಗಾದರೂ ಜಿಂದಾಬಾದ್ ಎನ್ನುವ ಘೋಷಣೆ ಕೂಗಿದಾಕ್ಷಣ ಈ ಮತಾಂಧರಿಗೆ ಪಾಕಿಸ್ತಾನಕ್ಕೆ ಜಿಂದಾಬಾದ್ ಅಂದ ಹಾಗೆ ಕೇಳಿಸುತ್ತದೆ. ಅಷ್ಟರಮಟ್ಟಿಗೆ ಅವರ ಕಿವಿಗಳು ಹಾಳಾಗಿಹೋಗಿವೆ.

ಮುಂಬೈನಲ್ಲಿ ಆಗಿದ್ದು ಇದೇ ಆಗಿದೆ. ಲಾಕ್‌ಡೌನ್ ಕಾರಣಕ್ಕೆ ಸಿಕ್ಕಿಕೊಂಡು ಅನ್ನ ಆಹಾರವಿಲ್ಲದೇ ನರಳುತ್ತಿದ್ದ ವಲಸೆ ಕಾರ್ಮಿಕರನ್ನು ಅವರ ಸ್ವಂತ ಊರುಗಳಿಗೆ ಹೋಗಬಹುದೆಂದು ಕೊನೆಗೂ 50 ದಿನದ ನಂತರ ತೀರ್ಮಾನಿಸಲಾಗಿತು. ಅಂತೆಯೇ ಮುಂಬೈನ ಛತ್ರಪತ್ರಿ ಶಿವಾಜಿ ರೈಲು ನಿಲ್ದಾಣಗಳಿಂದ ಶ್ರಮಿಕ್ ರೈಲುಗಳು ಹೊರಟಿದ್ದವು. ಮೇ 14 ರಂದು ಉತ್ತರಪ್ರದೇಶಕ್ಕೆ ಹೊರಟಿದ್ದ ಶ್ರಮಿಕ್ ರೈಲಿಗೆ ಹಸಿರು ನಿಶಾನೆ ತೋರಿಸಿ ಉದ್ಘಾಟಿಸಲು ಮಹಾರಾಷ್ಟ್ರ ಮೈತ್ರಿ ಸರ್ಕಾರದಲ್ಲಿ ಸಚಿವರಾಗಿರುವ ಅಬು ಅಜ್ಮಿ ಆಗಮಿಸಿದ್ದರು. ಅವರ ಜೊತೆಗೆ ಸಮಾಜವಾದಿ ಪಕ್ಷದ ಜಿಲ್ಲಾಧ್ಯಕ್ಷ ಸಾಜಿದ್ ಸಿದ್ದಿಕಿ ಮತ್ತು ಮುಂಬೈ ಪೊಲೀಸರು ಸ್ಥಳದಲ್ಲಿದ್ದರು. ಆಗ ಸಮಾಜವಾದಿ ಪಕ್ಷದ ಕಾರ್ಯಕರ್ತರು ಸಾಜಿದ್ ಬಾಯ್ ಜಿಂದಾಬಾದ್, ಮುಂಬೈ ಪೊಲೀಸ್ ಜಿಂದಾಬಾದ್ ಎಂಬ ಘೋಷಣೆಗಳನ್ನು ಕೂಗಿದ್ದಾರೆ.

ಇದನ್ನೇ ಕಾಯುತ್ತಿದ್ದ ಕೆಲ ಮತಾಂಧರು ಸಚಿವರ ಎದುರೆ ಪಾಕಿಸ್ತಾನ್ ಜಿಂದಾಬಾದ್ ಕೂಗುತ್ತಿದ್ದರೂ, ಅವರು ತಡೆಯುತ್ತಿಲ್ಲ ಎಂಬ ಶೀರ್ಷಿಕೆಯಲ್ಲಿ ಆ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಡಲಾಗಿದೆ.

ಆದರೆ ಸಮಾಜವಾದಿ ಪಕ್ಷದ ಕಾರ್ಯಕರ್ತರು ಒರಿಜಿನಲ್ ವಿಡಿಯೋಗಳನ್ನು ಟಿಕ್‌ಟಾಕ್ ಸೇರಿದಂತೆ ಇತರ ಜಾಲತಾಣಗಳಲ್ಲಿ ಅಪ್‌ಲೋಡ್ ಮಾಡಿದ್ದರಿಂದ ಸಾಜಿದ್ ಬಾಯ್ ಜಿಂದಾಬಾದ್ ಎಂದು ಕೂಗಿರುವುದು ಅದರಲ್ಲಿ ಸ್ಪಷ್ಟವಾಗಿದೆ. ಅದನ್ನೇ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ್ದಾರೆ ಎಂದು ಸುದ್ದಿ ಹರಡಿದ್ದಾರೆ ಅಷ್ಟೇ. ಒರಿಜಿನಲ್‌ ವಿಡಿಯೋ ಕೆಳಗಿದೆ ನೊಡಿ.

ಅಲ್ಲದೇ ಸಾಜಿದ್ ಸಿದ್ದಿಕಿ ಮತ್ತು ಅಬು ಅಜ್ಮಿಯವರು ಈ ಕುರಿತು ಪ್ರತಿಕ್ರಿಯಿಸಿದ್ದು ಇದೆಲ್ಲಾ ದೊಡ್ಡ ಸುಳ್ಳು. ಇಂತಹ ಆಧಾರ ರಹಿತ ಸುಳ್ಳುಗಳನ್ನು ಹರಡಬೇಡಿ ಎಂದಿದ್ದಾರೆ. ಒಂದು ವೇಳೆ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದರೆ ಅಂತವರನ್ನು ಜೊತೆಗೇ ಇದ್ದ ಮುಂಬೈ ಪೊಲೀಸರು ಬಂಧಿಸುತ್ತಿರಲಿಲ್ಲವೇ ಎಂದು ಪ್ರಶ್ನಿಸಿದ್ದಾರೆ.

ಒಟ್ಟಿನಲ್ಲಿ ಯಾವುದೇ ಘೋಷಣೆ ಕಂಡೂ ಸದಾ ಪಾಕಿಸ್ತಾನವನ್ನು ನೆನಸುವವರಿಗೆ ಪಾಕಿಸ್ತಾನ ಜಿಂದಾಬಾದ್‌ ಎಂದೇ ಕೇಳಿಸುವುದು ವಿಪರ್ಯಾಸವಾಗಿದೆ.


ಇದನ್ನೂ ಓದಿ ; ಫ್ಯಾಕ್ಟ್‌ಚೆಕ್‌- ನಾವು ನಂಬಿಯೇಬಿಟ್ಟಿದ್ದ ಈ ವಾರದ 5 ಫೇಕ್‌ನ್ಯೂಸ್‌ಗಳು ಮತ್ತು ಅದರಿಂದಿರುವ ಸತ್ಯಗಳು 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...