Homeಫ್ಯಾಕ್ಟ್‌ಚೆಕ್FACT CHECK : ನಟ ದರ್ಶನ್ ಪತ್ನಿ ದೇವರ ಮೊರೆ ಎಂದು ಒಂದು ವರ್ಷದ ಹಿಂದಿನ...

FACT CHECK : ನಟ ದರ್ಶನ್ ಪತ್ನಿ ದೇವರ ಮೊರೆ ಎಂದು ಒಂದು ವರ್ಷದ ಹಿಂದಿನ ಹಳೆಯ ಫೋಟೊ ಹಂಚಿಕೊಳ್ಳಲಾಗ್ತಿದೆ

- Advertisement -
- Advertisement -

ಚಿತ್ರದುರ್ಗದ ರೇಣುಕಾಸ್ವಾಮಿಯ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಆರೋಪ ಮುಕ್ತರಾಗಿ ಹೊರ ಬರಲಿ ಎಂದು ಪತ್ನಿ ವಿಜಯಲಕ್ಷಿ ಬಂಡೆ ಮಹಾಕಾಳಿ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದಾರೆ ಎಂದು ಕನ್ನಡದ ಕೆಲ ಮಾಧ್ಯಮಗಳು ವರದಿ ಮಾಡಿವೆ ಮತ್ತು ದರ್ಶನ್ ಅವರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದಾರೆ.

ಕನ್ನಡ ಮುಖ್ಯವಾಹಿನಿ ಮಾಧ್ಯಮ ಝೀ ಕನ್ನಡ ಚಾನೆಲ್ ತನ್ನ ಡಿಜಿಟಲ್ ವೇದಿಕೆಗಳಲ್ಲಿ ಜುಲೈ 7ರಂದು ಈ ಕುರಿತು ಸುದ್ದಿ ಪ್ರಕಟಿಸಿತ್ತು.

“ವಿಜಯಲಕ್ಷ್ಮಿಯವರು ತಮ್ಮ ಪತಿಯನ್ನು ಜೈಲಿನಿಂದ ಹೊರ ಕರೆತರಲು ಶಕ್ತಿ ದೇವತೆಯ ಮೊರೆ ಹೋಗಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಬೆಂಗಳೂರಿನ ಚಾಮರಾಜಪೇಟೆಯ ಗವಿಪುರಂನಲ್ಲಿರುವ ಶ್ರೀ ಬಂಡೆ ಮಹಾಕಾಳಿ ದೇವಸ್ಥಾನಕ್ಕೆ ಬೇಟಿ ನೀಡಿದ ವಿಜಯಲಕ್ಷ್ಮಿ, ದರ್ಶನ್‌ ಹೆಸರಿನಲ್ಲಿ ವಿಶೇಷ ಪೂಜೆ ಮಾಡಿಸಿದ್ದಾರೆ. ಆಷಾಢ ಶನಿವಾರದಂದು ಪೂಜೆ ಮಾಡಿ ಅವರು, ತಮ್ಮ ಗಂಡನಿಗಾಗಿ ಪ್ರಾರ್ಥಿಸಿದ್ದಾರೆ” ಎಂದು ಸುದ್ದಿಯಲ್ಲಿ ಹೇಳಲಾಗಿತ್ತು.

ಡಿ ಬಾಸ್ ಕಲ್ಟ್ಸ್ ಅಫೀಷಿಯಲ್ (Dboss Cults Official) ಎಂಬ ಇನ್​ಸ್ಟಾಗ್ರಾಂ ಖಾತೆಯಲ್ಲಿ ಕೂಡ ಈ ಕುರಿತು ಫೋಟೋ ಹಂಚಿಕೊಳ್ಳಲಾಗಿದೆ. ಅದರಲ್ಲಿ, “ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ವಿಜಯಲಕ್ಷ್ಮಿ ಮೇಡಂ. ಬಾಸ್ ಬೇಗ ಈಚೆ ಬರ್ಲಿ” ಎಂದು ಬರೆಯಲಾಗಿದೆ.

ಫ್ಯಾಕ್ಟ್‌ಚೆಕ್ : ಝೀ ಕನ್ನಡ ವಾಹಿನಿಯ ಡಿಜಿಟಲ್ ವೇದಿಕೆ ಮತ್ತು ಸಾಮಾಜಿಕ ಜಾಲತಾಣ ಪೇಜ್‌ಗಳಲ್ಲಿ ಹಂಚಿಕೊಂಡಿರುವ ಸುದ್ದಿ ಇತ್ತೀಚಿನದ್ದಲ್ಲ. ಹಳೆಯ ಫೋಟೋ ಬಳಸಿ ಈಗ ಸುದ್ದಿ ಮಾಡಲಾಗಿದೆ ಎಂಬ ಮಾಹಿತಿ ದೊರೆತ ಹಿನ್ನೆಲೆ ನಾವು ಸುದ್ದಿಯ ಸತ್ಯಾಸತ್ಯತೆ ಪರಿಶೀಲಿಸಿದ್ದೇವೆ.

ಸುದ್ದಿಯಲ್ಲಿರುವ ಫೋಟೊವನ್ನು ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಸರ್ಚ್ ಮಾಡಿದಾಗ, 7 ಜುಲೈ , 2023 ರಂದು ಲತಾ ಜೈಪ್ರಕಾಶ್ ಎಂಬವರು ತಮ್ಮ ಫೇಸ್​ಬುಕ್ ಖಾತೆಯಲ್ಲಿ ಹಂಚಿಕೊಂಡ ಫೋಟೋ ಲಭ್ಯವಾಗಿದೆ.

ಲತಾ ಅವರು ”ವಿಜಿ ಅತ್ತಿಗೆ”ಎಂದು ಬರೆದುಕೊಂಡು ಸುದ್ದಿಯಾಗಿರುವ ಪೋಟೋ ಹಂಚಿಕೊಂಡಿದ್ದರು. ಅದನ್ನು ಜುಲೈ 7, 2024ರಂದು ಫೇಸ್‌ಬುಕ್ ಮೆಮೋರಿಯಾಗಿ ತೋರಿಸಿತ್ತು. ವರ್ಷದ ಬಳಿಕ ಹಳೆಯ ಪೋಸ್ಟ್‌ಗೆ ಪ್ರತಿಕ್ರಿಯೆ ನೀಡಿದ್ದ ಲತಾ ಜೈಪ್ರಕಾಶ್ ಅವರು “ಒಂದು ವರ್ಷವಾಯಿತು. ಆದರೆ, ಆದರೆ ಈ ಬಾರಿ ಉತ್ತಮ ಸ್ಥಿತಿಯಲ್ಲಿಲ್ಲ. ಈ ಪರಿಸ್ಥಿತಿಯಿಂದ ಹೊರ ಬರಲು ಅಮ್ಮ ಆಶಿರ್ವದಿಸಲಿ ಎಂದು ನಾನು ಪ್ರಾರ್ಥಿಸುತ್ತೇನೆ. ಅಮ್ಮ ನಿಮಗೆ ಹೆಚ್ಚು ಶಕ್ತಿ, ಧೈರ್ಯ ಮತ್ತು ಆಶಿರ್ವಾದ ನೀಡಲಿ ಎಂದು ಬರೆದುಕೊಂಡಿದ್ದರು.

ಒಟ್ಟಿನಲ್ಲಿ, ದರ್ಶನ್ ಮತ್ತು ವಿಜಯಲಕ್ಷ್ಮೀ ಬಂಡೆ ಮಕಾಳಾಮ್ಮ ದೇವರನ್ನ ಬಲವಾಗಿ ನಂಬುತ್ತಾರೆ. ಈ ಹಿಂದೆ ಅನೇಕ ಬಾರಿ ಇಲ್ಲಿಗೆ ತೆರಳಿದ್ದರು. ದೇವಸ್ಥಾನದ ಪೂಜಾರಿಯೊಬ್ಬರನ್ನ ಮನೆಗೆ ಕರೆಸಿ ತಡೆ ಒಡೆಸಿಕೊಳ್ಳುತ್ತಿದ್ದರು. ಆದರೆ, ಇದೀಗ ದರ್ಶನ್ ಬೇಗನೆ ಜೈಲಿನಿಂದ ಹೊರಬರಲೆಂದು ಬಂಡೆ ಮಹಾಕಾಳಿ ದೇಸ್ಥಾನಕ್ಕೆ ವಿಜಯಲಕ್ಷ್ಮೀ ತೆರಳಿದ್ದಾರೆ ಎನ್ನುವ ಸುದ್ದಿ ಸುಳ್ಳಾಗಿದೆ. ವಾಸ್ತವವಾಗಿ ಈಗ ವೈರಲ್ ಆಗುತ್ತಿರುವ ಚಿತ್ರ ಒಂದು ವರ್ಷದಷ್ಟು ಹಿಂದಿನದ್ದು.

ಇದನ್ನೂ ಓದಿ : FACT CHECK : ‘ಸ್ಟಾರ್’ ಚಿಹ್ನೆಯಿರುವ 500 ರೂ. ನೋಟು ನಕಲಿಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...