Homeಫ್ಯಾಕ್ಟ್‌ಚೆಕ್FACT CHECK : ನಟ ದರ್ಶನ್ ಪತ್ನಿ ದೇವರ ಮೊರೆ ಎಂದು ಒಂದು ವರ್ಷದ ಹಿಂದಿನ...

FACT CHECK : ನಟ ದರ್ಶನ್ ಪತ್ನಿ ದೇವರ ಮೊರೆ ಎಂದು ಒಂದು ವರ್ಷದ ಹಿಂದಿನ ಹಳೆಯ ಫೋಟೊ ಹಂಚಿಕೊಳ್ಳಲಾಗ್ತಿದೆ

- Advertisement -
- Advertisement -

ಚಿತ್ರದುರ್ಗದ ರೇಣುಕಾಸ್ವಾಮಿಯ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಆರೋಪ ಮುಕ್ತರಾಗಿ ಹೊರ ಬರಲಿ ಎಂದು ಪತ್ನಿ ವಿಜಯಲಕ್ಷಿ ಬಂಡೆ ಮಹಾಕಾಳಿ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದಾರೆ ಎಂದು ಕನ್ನಡದ ಕೆಲ ಮಾಧ್ಯಮಗಳು ವರದಿ ಮಾಡಿವೆ ಮತ್ತು ದರ್ಶನ್ ಅವರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದಾರೆ.

ಕನ್ನಡ ಮುಖ್ಯವಾಹಿನಿ ಮಾಧ್ಯಮ ಝೀ ಕನ್ನಡ ಚಾನೆಲ್ ತನ್ನ ಡಿಜಿಟಲ್ ವೇದಿಕೆಗಳಲ್ಲಿ ಜುಲೈ 7ರಂದು ಈ ಕುರಿತು ಸುದ್ದಿ ಪ್ರಕಟಿಸಿತ್ತು.

“ವಿಜಯಲಕ್ಷ್ಮಿಯವರು ತಮ್ಮ ಪತಿಯನ್ನು ಜೈಲಿನಿಂದ ಹೊರ ಕರೆತರಲು ಶಕ್ತಿ ದೇವತೆಯ ಮೊರೆ ಹೋಗಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಬೆಂಗಳೂರಿನ ಚಾಮರಾಜಪೇಟೆಯ ಗವಿಪುರಂನಲ್ಲಿರುವ ಶ್ರೀ ಬಂಡೆ ಮಹಾಕಾಳಿ ದೇವಸ್ಥಾನಕ್ಕೆ ಬೇಟಿ ನೀಡಿದ ವಿಜಯಲಕ್ಷ್ಮಿ, ದರ್ಶನ್‌ ಹೆಸರಿನಲ್ಲಿ ವಿಶೇಷ ಪೂಜೆ ಮಾಡಿಸಿದ್ದಾರೆ. ಆಷಾಢ ಶನಿವಾರದಂದು ಪೂಜೆ ಮಾಡಿ ಅವರು, ತಮ್ಮ ಗಂಡನಿಗಾಗಿ ಪ್ರಾರ್ಥಿಸಿದ್ದಾರೆ” ಎಂದು ಸುದ್ದಿಯಲ್ಲಿ ಹೇಳಲಾಗಿತ್ತು.

ಡಿ ಬಾಸ್ ಕಲ್ಟ್ಸ್ ಅಫೀಷಿಯಲ್ (Dboss Cults Official) ಎಂಬ ಇನ್​ಸ್ಟಾಗ್ರಾಂ ಖಾತೆಯಲ್ಲಿ ಕೂಡ ಈ ಕುರಿತು ಫೋಟೋ ಹಂಚಿಕೊಳ್ಳಲಾಗಿದೆ. ಅದರಲ್ಲಿ, “ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ವಿಜಯಲಕ್ಷ್ಮಿ ಮೇಡಂ. ಬಾಸ್ ಬೇಗ ಈಚೆ ಬರ್ಲಿ” ಎಂದು ಬರೆಯಲಾಗಿದೆ.

ಫ್ಯಾಕ್ಟ್‌ಚೆಕ್ : ಝೀ ಕನ್ನಡ ವಾಹಿನಿಯ ಡಿಜಿಟಲ್ ವೇದಿಕೆ ಮತ್ತು ಸಾಮಾಜಿಕ ಜಾಲತಾಣ ಪೇಜ್‌ಗಳಲ್ಲಿ ಹಂಚಿಕೊಂಡಿರುವ ಸುದ್ದಿ ಇತ್ತೀಚಿನದ್ದಲ್ಲ. ಹಳೆಯ ಫೋಟೋ ಬಳಸಿ ಈಗ ಸುದ್ದಿ ಮಾಡಲಾಗಿದೆ ಎಂಬ ಮಾಹಿತಿ ದೊರೆತ ಹಿನ್ನೆಲೆ ನಾವು ಸುದ್ದಿಯ ಸತ್ಯಾಸತ್ಯತೆ ಪರಿಶೀಲಿಸಿದ್ದೇವೆ.

ಸುದ್ದಿಯಲ್ಲಿರುವ ಫೋಟೊವನ್ನು ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಸರ್ಚ್ ಮಾಡಿದಾಗ, 7 ಜುಲೈ , 2023 ರಂದು ಲತಾ ಜೈಪ್ರಕಾಶ್ ಎಂಬವರು ತಮ್ಮ ಫೇಸ್​ಬುಕ್ ಖಾತೆಯಲ್ಲಿ ಹಂಚಿಕೊಂಡ ಫೋಟೋ ಲಭ್ಯವಾಗಿದೆ.

ಲತಾ ಅವರು ”ವಿಜಿ ಅತ್ತಿಗೆ”ಎಂದು ಬರೆದುಕೊಂಡು ಸುದ್ದಿಯಾಗಿರುವ ಪೋಟೋ ಹಂಚಿಕೊಂಡಿದ್ದರು. ಅದನ್ನು ಜುಲೈ 7, 2024ರಂದು ಫೇಸ್‌ಬುಕ್ ಮೆಮೋರಿಯಾಗಿ ತೋರಿಸಿತ್ತು. ವರ್ಷದ ಬಳಿಕ ಹಳೆಯ ಪೋಸ್ಟ್‌ಗೆ ಪ್ರತಿಕ್ರಿಯೆ ನೀಡಿದ್ದ ಲತಾ ಜೈಪ್ರಕಾಶ್ ಅವರು “ಒಂದು ವರ್ಷವಾಯಿತು. ಆದರೆ, ಆದರೆ ಈ ಬಾರಿ ಉತ್ತಮ ಸ್ಥಿತಿಯಲ್ಲಿಲ್ಲ. ಈ ಪರಿಸ್ಥಿತಿಯಿಂದ ಹೊರ ಬರಲು ಅಮ್ಮ ಆಶಿರ್ವದಿಸಲಿ ಎಂದು ನಾನು ಪ್ರಾರ್ಥಿಸುತ್ತೇನೆ. ಅಮ್ಮ ನಿಮಗೆ ಹೆಚ್ಚು ಶಕ್ತಿ, ಧೈರ್ಯ ಮತ್ತು ಆಶಿರ್ವಾದ ನೀಡಲಿ ಎಂದು ಬರೆದುಕೊಂಡಿದ್ದರು.

ಒಟ್ಟಿನಲ್ಲಿ, ದರ್ಶನ್ ಮತ್ತು ವಿಜಯಲಕ್ಷ್ಮೀ ಬಂಡೆ ಮಕಾಳಾಮ್ಮ ದೇವರನ್ನ ಬಲವಾಗಿ ನಂಬುತ್ತಾರೆ. ಈ ಹಿಂದೆ ಅನೇಕ ಬಾರಿ ಇಲ್ಲಿಗೆ ತೆರಳಿದ್ದರು. ದೇವಸ್ಥಾನದ ಪೂಜಾರಿಯೊಬ್ಬರನ್ನ ಮನೆಗೆ ಕರೆಸಿ ತಡೆ ಒಡೆಸಿಕೊಳ್ಳುತ್ತಿದ್ದರು. ಆದರೆ, ಇದೀಗ ದರ್ಶನ್ ಬೇಗನೆ ಜೈಲಿನಿಂದ ಹೊರಬರಲೆಂದು ಬಂಡೆ ಮಹಾಕಾಳಿ ದೇಸ್ಥಾನಕ್ಕೆ ವಿಜಯಲಕ್ಷ್ಮೀ ತೆರಳಿದ್ದಾರೆ ಎನ್ನುವ ಸುದ್ದಿ ಸುಳ್ಳಾಗಿದೆ. ವಾಸ್ತವವಾಗಿ ಈಗ ವೈರಲ್ ಆಗುತ್ತಿರುವ ಚಿತ್ರ ಒಂದು ವರ್ಷದಷ್ಟು ಹಿಂದಿನದ್ದು.

ಇದನ್ನೂ ಓದಿ : FACT CHECK : ‘ಸ್ಟಾರ್’ ಚಿಹ್ನೆಯಿರುವ 500 ರೂ. ನೋಟು ನಕಲಿಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...