Homeಫ್ಯಾಕ್ಟ್‌ಚೆಕ್FACT CHECK : ಬುರ್ಖಾಧಾರಿ ಮಹಿಳೆಯರಿಗೆ ಸರಪಳಿ ಬಿಗಿದು ಕರೆದೊಯ್ಯುತ್ತಿರುವ ಫೋಟೋ ಎಡಿಟೆಡ್

FACT CHECK : ಬುರ್ಖಾಧಾರಿ ಮಹಿಳೆಯರಿಗೆ ಸರಪಳಿ ಬಿಗಿದು ಕರೆದೊಯ್ಯುತ್ತಿರುವ ಫೋಟೋ ಎಡಿಟೆಡ್

- Advertisement -
- Advertisement -

ಮೂವರು ಬುರ್ಖಾಧಾರಿ ಮಹಿಳೆಯರ ಕಾಲಿಗೆ ಸರಪಳಿ ಬಿಗಿದು, ಆ ಸರಪಳಿಯ ಒಂದು ತುದಿಯನ್ನು ಹಿಡಿದುಕೊಂಡು ವ್ಯಕ್ತಿಯೊಬ್ಬರು ನಡೆಯುತ್ತಿರುವ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

“ವ್ಯಕ್ತಿಯೊಬ್ಬ ತನ್ನ ಮೂವರು ಪತ್ನಿಯರನ್ನು ವಾಯು ವಿಹಾರಕ್ಕೆ ಕರೆದೊಯ್ಯುತ್ತಿರುವ ಫೋಟೋ ಇದು” ಎಂದು ಎಕ್ಸ್‌ ಬಳಕೆದಾರ Naughty BuBu(@INaughtyBuBu) ಬರೆದುಕೊಂಡಿದ್ದಾರೆ.

ಈ ಹಿಂದೆಯೂ ಇದೇ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಆಗಸ್ಟ್ 20, 2021ರಂದು ಈ ಫೋಟೋವನ್ನು ಎಕ್ಸ್‌ನಲ್ಲಿ ಹಂಚಿಕೊಂಡಿದ್ದ Rakesh Krishnan Simha(@ByRakeshSimha)ಎಂಬ ಎಕ್ಸ್ ಬಳಕೆದಾರ “ಅರ್ಫಾ, ಸಬಾ ಮತ್ತು ಸ್ವರಾ ಎಂಬವರು ಉತ್ತರ ಕಾಬೂಲ್‌ನಲ್ಲಿ ವಾಯು ವಿಹಾರಕ್ಕೆ ತೆರಳುತ್ತಿರುವ ಫೋಟೋ ಎಂದು ಒಬ್ಬರು ಇದನ್ನು ನನಗೆ ಕಳುಹಿಸಿದ್ದಾರೆ. ಯಾರಾದರು ಇದು ನಿಜವೋ? ಸುಳ್ಳೋ? ಎಂಬುವುದನ್ನು ಖಚಿತಪಡಿಸಿ. ಸುಳ್ಳು ಸುದ್ದಿ ಹಬ್ಬಿದ ಆರೋಪ ಹೊತ್ತುಕೊಳ್ಳಲು ನನಗೆ ಇಷ್ಟವಿಲ್ಲ” ಎಂದು ಬರೆದುಕೊಂಡಿದ್ದರು.

ಆಗಸ್ಟ್ 16, 2021ರಂದು Dr Meena Kandasamy (@meenakandasamy) ಎಂಬ ಎಕ್ಸ್ ಬಳಕೆದಾರರು “ತಾಲಿಬಾನ್ ಅನ್ನು ತ್ವರಿತವಾಗಿ ಅರ್ಥಮಾಡಿಕೊಳ್ಳಲು ಬಯಸುವ ಪ್ರತಿಯೊಬ್ಬರಿಗೂ, ಅವರು ಅಫ್ಘಾನಿಸ್ತಾನದಲ್ಲಿ ಹೆಚ್ಚು ಕಡಿಮೆ ಆರ್‌ಎಸ್‌ಎಸ್ ಸಮಾನರು” ಎಂದು ಎಕ್ಸ್‌ನಲ್ಲಿ ಪೋಸ್ಟ್ ಹಾಕಿದ್ದರು.

ಇದಕ್ಕೆ ತಿರುಗೇಟು ಕೊಡುವ ವೇಳೆ ನಾವು ಮೇಲ್ಗಡೆ ಉಲ್ಲೇಖಿಸಿದ ವೈರಲ್ ಪೋಟೋವನ್ನು ಹಂಚಿಕೊಂಡಿದ್ದ
TheCorporateLady🇮🇳 (@PallaviJaiswal0)ಎಂಬ ಬಳಕೆದಾರರು ” ತಾಲಿಬಾನ್ ಅನ್ನು ಅರ್ಥಮಾಡಿಕೊಳ್ಳಲು ತ್ವರಿತ ಮಾರ್ಗ! ಅದು ಇಂದಿನ ಆಫ್ಘಾನಿಸ್ತಾನದಲ್ಲಿ. ನೀವೂ ಒಮ್ಮೆ ಅಲ್ಲಿಯೇ ಇರಲು ಪ್ರಯತ್ನಿಸಿ. ಆರ್‌ಎಸ್‌ಎಸ್‌ ಅನ್ನು ಅರ್ಥಮಾಡಿಕೊಳ್ಳಲು ನಿಮಗೆ ಬುದ್ಧಿ ಶಕ್ತಿಯ ಅಗತ್ಯವಿದೆ. ಭಾರತದಲ್ಲಿ ಮಹಿಳೆಯರು ಸುರಕ್ಷಿತವಾಗಿದ್ದಾರೆ ಮತ್ತು ಮುಕ್ತವಾಗಿ ತಿರುಗಾಡುತ್ತಿದ್ದಾರೆ.” ಎಂದು ಬರೆದುಕೊಂಡಿದ್ದರು.

 

ಫ್ಯಾಕ್ಟ್‌ಚೆಕ್ : ನಾವು ಮೇಲ್ಗಡೆ ಉಲ್ಲೇಖಿಸಿದ ವೈರಲ್ ಫೋಟೋದ ಕುರಿತು ಸತ್ಯಾಸತ್ಯತೆ ಪರಿಶೀಲಿಸಿದ್ದೇವೆ. ಮೊದಲು fakeimagedetector.com ಎಂಬ ವೆಬ್‌ಸೈಟ್‌ನಲ್ಲಿ ಫೋಟೋ ನಿಜವಾದ್ದದ್ದೇ ಅಥವಾ ಎಡಿಟೆಡಾ? ಎಂದು ಪರಿಶೀಲಿಸಿದ್ದೇವೆ. ಈ ವೇಳೆ ಈ ಫೋಟೋ ರಚಿತ ಅಥವಾ ಎಡಿಟೆಡ್ ಎಂದು ತೋರುತ್ತಿದೆ ಎಂಬುವುದಾಗಿ ವೆಬ್‌ಸೈಟ್‌ ತಿಳಿಸಿದೆ.

ಬಳಿಕ ನಾವು ಗೂಗಲ್‌ ರಿವರ್ಸ್ ಇಮೇಜ್‌ನಲ್ಲಿ ಫೋಟೋ ಹಾಕಿ ಸರ್ಚ್ ಮಾಡಿದ್ದೇವೆ. ಈ ವೇಳೆ ನಮಗೆ ಫೋಟೋ ಕುರಿತು ಯಾವುದೇ ಸ್ಪಷ್ಟ ಮಾಹಿತಿ ದೊರೆತಿಲ್ಲ.

ಆದರೆ 29 ಮಾರ್ಚ್‌ 2017 ರಂದು ಈ ವೈರಲ್‌ ಫೋಟೋಗೆ ಹೋಲಿಕೆಯಾಗುವಂತಹ ಒಂದು ಫೋಟೋ ಮಾರ್ಡನ್‌ ಡಿಪ್ಲೋಮೆಸಿ ಎಂಬ ವೆಬ್‌ ಸೈಟ್‌ ಅಂಕಣದಲ್ಲಿ ಬಳಸಿಕೊಂಡಿರುವುದು ಕಂಡು ಬಂದಿದೆ. ಆದರೆ, ವೆಬ್‌ಸೈಟ್‌ನಲ್ಲಿ ಫೋಟೋದಲ್ಲಿ ವೈರಲ್‌ ಫೋಟೋದಲ್ಲಿ ಇದ್ದಂತ ಸರಪಳಿ ಕಂಡು ಬಂದಿಲ್ಲ.

ಇದೇ ರೀತಿಯಾಗಿ 27 ಆಗಸ್ಟ್‌ 2017 ರಂದು ‘ಪತಿಗಿಂತ ಪತ್ನಿ ಒಂದು ಹೆಜ್ಜೆ ಮುಂದೆ ಇಡುತ್ತಿದ್ದ ಕಾರಣ ಪತಿ ಪತ್ನಿಗೆ ವಿಚ್ಚೇದನ ನೀಡಿದ್ದಾರೆ’ ಎಂಬ ವರದಿಯೊಂದಿಗೆ ಎಬಿಪಿ ಬೆಂಗಾಲ್ ಈ ಫೋಟೋ ಹಂಚಿಕೊಳ್ಳಲಾಗಿದೆ. ಆದರೆ, ಈ ವರದಿಯಲ್ಲಿ ಪೋಟೋವನ್ನು ಸಾಂಕೇತಿಕ ಚಿತ್ರ ಎಂದು ಉಲ್ಲೇಖಿಸಲಾಗಿದೆ. ಹಾಗಾಗಿ, ಈ ವರದಿಯಲ್ಲಿ ಕೂಡ ಇದು ಸಾಂಕೇತಿಕ ಚಿತ್ರವಾಗಿ ಬಳಕೆಯಾಗಿದೆ.

ನಾವು ಫೋಟೋ ಕುರಿತು ಇನ್ನಷ್ಟು ಮಾಹಿತಿ ಹುಡುಕಿದಾಗ 2011ರಲ್ಲಿ RabbitMatch.org ಮತ್ತು Wicked Thoughts ಎಂಬ ಎರಡೂ ಬ್ಲಾಗ್‌ಗಳು ಅಫ್ಘಾನಿಸ್ತಾನದಲ್ಲಿನ ಲಿಂಗ ತಾರತಮ್ಯಗಳ ಕುರಿತು ಅಂಕಣ ಬರೆಯಲು ಈ ಚಿತ್ರಗಳನ್ನು ಬಳಸಿಕೊಂಡಿರುವುದು ಕಂಡು ಬಂದಿದೆ. ಆದರೆ, ಅಲ್ಲೂ ಕೂಡ ಈ ಫೋಟೋವನ್ನು ಸಾಂಕೇತಿಕವಾಗಿ ಬಳಸಿಕೊಳ್ಳಲಾಗಿದೆ. ಆದರೆ, ಇಲ್ಲೂ ಕೂಡ ಸರಪಳಿಗಳು ಕಂಡು ಬಂದಿಲ್ಲ. ಹಾಗಾಗಿ, ಇದೊಂದು ಎಡಿಟೆಡ್‌ ಫೋಟೋ ಎಂಬುವುದು ಸ್ಪಷ್ಟವಾಗಿದೆ.

ಲಭ್ಯ ಮೂಲಗಳನ್ನು ಬಳಸಿ ನಾವು ನಡೆಸಿದ ಪರಿಶೀಲನೆಯಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬ ತನ್ನ ಮೂವರು ಪತ್ನಿಯರ ಕಾಲಿಗೆ ಸರಪಳಿ ಬಿಗಿದು ವಾಯು ವಿಹಾರಕ್ಕೆ ಕರೆದೊಯ್ಯುತ್ತಿದ್ದಾನೆ ಎಂದು ಹಂಚಿಕೊಳ್ಳಲಾದ ಫೋಟೋ ಎಡಿಟೆಡ್ ಎಂದು ಗೊತ್ತಾಗಿದೆ.

ಇದನ್ನೂ ಓದಿ : FACT CHECK : ಕಾಸರಗೋಡಿನಲ್ಲಿ ಮುಸ್ಲಿಂ ಯುವಕರು ಪಾಕಿಸ್ತಾನ ಕ್ರಿಕೆಟ್ ತಂಡದ ಜೆರ್ಸಿ ಧರಿಸಿ ಸಂಭ್ರಮಿಸಿದ್ದಾರೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...