Homeಫ್ಯಾಕ್ಟ್‌ಚೆಕ್FACT CHECK : ಬುರ್ಖಾಧಾರಿ ಮಹಿಳೆಯರಿಗೆ ಸರಪಳಿ ಬಿಗಿದು ಕರೆದೊಯ್ಯುತ್ತಿರುವ ಫೋಟೋ ಎಡಿಟೆಡ್

FACT CHECK : ಬುರ್ಖಾಧಾರಿ ಮಹಿಳೆಯರಿಗೆ ಸರಪಳಿ ಬಿಗಿದು ಕರೆದೊಯ್ಯುತ್ತಿರುವ ಫೋಟೋ ಎಡಿಟೆಡ್

- Advertisement -
- Advertisement -

ಮೂವರು ಬುರ್ಖಾಧಾರಿ ಮಹಿಳೆಯರ ಕಾಲಿಗೆ ಸರಪಳಿ ಬಿಗಿದು, ಆ ಸರಪಳಿಯ ಒಂದು ತುದಿಯನ್ನು ಹಿಡಿದುಕೊಂಡು ವ್ಯಕ್ತಿಯೊಬ್ಬರು ನಡೆಯುತ್ತಿರುವ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

“ವ್ಯಕ್ತಿಯೊಬ್ಬ ತನ್ನ ಮೂವರು ಪತ್ನಿಯರನ್ನು ವಾಯು ವಿಹಾರಕ್ಕೆ ಕರೆದೊಯ್ಯುತ್ತಿರುವ ಫೋಟೋ ಇದು” ಎಂದು ಎಕ್ಸ್‌ ಬಳಕೆದಾರ Naughty BuBu(@INaughtyBuBu) ಬರೆದುಕೊಂಡಿದ್ದಾರೆ.

ಈ ಹಿಂದೆಯೂ ಇದೇ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಆಗಸ್ಟ್ 20, 2021ರಂದು ಈ ಫೋಟೋವನ್ನು ಎಕ್ಸ್‌ನಲ್ಲಿ ಹಂಚಿಕೊಂಡಿದ್ದ Rakesh Krishnan Simha(@ByRakeshSimha)ಎಂಬ ಎಕ್ಸ್ ಬಳಕೆದಾರ “ಅರ್ಫಾ, ಸಬಾ ಮತ್ತು ಸ್ವರಾ ಎಂಬವರು ಉತ್ತರ ಕಾಬೂಲ್‌ನಲ್ಲಿ ವಾಯು ವಿಹಾರಕ್ಕೆ ತೆರಳುತ್ತಿರುವ ಫೋಟೋ ಎಂದು ಒಬ್ಬರು ಇದನ್ನು ನನಗೆ ಕಳುಹಿಸಿದ್ದಾರೆ. ಯಾರಾದರು ಇದು ನಿಜವೋ? ಸುಳ್ಳೋ? ಎಂಬುವುದನ್ನು ಖಚಿತಪಡಿಸಿ. ಸುಳ್ಳು ಸುದ್ದಿ ಹಬ್ಬಿದ ಆರೋಪ ಹೊತ್ತುಕೊಳ್ಳಲು ನನಗೆ ಇಷ್ಟವಿಲ್ಲ” ಎಂದು ಬರೆದುಕೊಂಡಿದ್ದರು.

ಆಗಸ್ಟ್ 16, 2021ರಂದು Dr Meena Kandasamy (@meenakandasamy) ಎಂಬ ಎಕ್ಸ್ ಬಳಕೆದಾರರು “ತಾಲಿಬಾನ್ ಅನ್ನು ತ್ವರಿತವಾಗಿ ಅರ್ಥಮಾಡಿಕೊಳ್ಳಲು ಬಯಸುವ ಪ್ರತಿಯೊಬ್ಬರಿಗೂ, ಅವರು ಅಫ್ಘಾನಿಸ್ತಾನದಲ್ಲಿ ಹೆಚ್ಚು ಕಡಿಮೆ ಆರ್‌ಎಸ್‌ಎಸ್ ಸಮಾನರು” ಎಂದು ಎಕ್ಸ್‌ನಲ್ಲಿ ಪೋಸ್ಟ್ ಹಾಕಿದ್ದರು.

ಇದಕ್ಕೆ ತಿರುಗೇಟು ಕೊಡುವ ವೇಳೆ ನಾವು ಮೇಲ್ಗಡೆ ಉಲ್ಲೇಖಿಸಿದ ವೈರಲ್ ಪೋಟೋವನ್ನು ಹಂಚಿಕೊಂಡಿದ್ದ
TheCorporateLady🇮🇳 (@PallaviJaiswal0)ಎಂಬ ಬಳಕೆದಾರರು ” ತಾಲಿಬಾನ್ ಅನ್ನು ಅರ್ಥಮಾಡಿಕೊಳ್ಳಲು ತ್ವರಿತ ಮಾರ್ಗ! ಅದು ಇಂದಿನ ಆಫ್ಘಾನಿಸ್ತಾನದಲ್ಲಿ. ನೀವೂ ಒಮ್ಮೆ ಅಲ್ಲಿಯೇ ಇರಲು ಪ್ರಯತ್ನಿಸಿ. ಆರ್‌ಎಸ್‌ಎಸ್‌ ಅನ್ನು ಅರ್ಥಮಾಡಿಕೊಳ್ಳಲು ನಿಮಗೆ ಬುದ್ಧಿ ಶಕ್ತಿಯ ಅಗತ್ಯವಿದೆ. ಭಾರತದಲ್ಲಿ ಮಹಿಳೆಯರು ಸುರಕ್ಷಿತವಾಗಿದ್ದಾರೆ ಮತ್ತು ಮುಕ್ತವಾಗಿ ತಿರುಗಾಡುತ್ತಿದ್ದಾರೆ.” ಎಂದು ಬರೆದುಕೊಂಡಿದ್ದರು.

 

ಫ್ಯಾಕ್ಟ್‌ಚೆಕ್ : ನಾವು ಮೇಲ್ಗಡೆ ಉಲ್ಲೇಖಿಸಿದ ವೈರಲ್ ಫೋಟೋದ ಕುರಿತು ಸತ್ಯಾಸತ್ಯತೆ ಪರಿಶೀಲಿಸಿದ್ದೇವೆ. ಮೊದಲು fakeimagedetector.com ಎಂಬ ವೆಬ್‌ಸೈಟ್‌ನಲ್ಲಿ ಫೋಟೋ ನಿಜವಾದ್ದದ್ದೇ ಅಥವಾ ಎಡಿಟೆಡಾ? ಎಂದು ಪರಿಶೀಲಿಸಿದ್ದೇವೆ. ಈ ವೇಳೆ ಈ ಫೋಟೋ ರಚಿತ ಅಥವಾ ಎಡಿಟೆಡ್ ಎಂದು ತೋರುತ್ತಿದೆ ಎಂಬುವುದಾಗಿ ವೆಬ್‌ಸೈಟ್‌ ತಿಳಿಸಿದೆ.

ಬಳಿಕ ನಾವು ಗೂಗಲ್‌ ರಿವರ್ಸ್ ಇಮೇಜ್‌ನಲ್ಲಿ ಫೋಟೋ ಹಾಕಿ ಸರ್ಚ್ ಮಾಡಿದ್ದೇವೆ. ಈ ವೇಳೆ ನಮಗೆ ಫೋಟೋ ಕುರಿತು ಯಾವುದೇ ಸ್ಪಷ್ಟ ಮಾಹಿತಿ ದೊರೆತಿಲ್ಲ.

ಆದರೆ 29 ಮಾರ್ಚ್‌ 2017 ರಂದು ಈ ವೈರಲ್‌ ಫೋಟೋಗೆ ಹೋಲಿಕೆಯಾಗುವಂತಹ ಒಂದು ಫೋಟೋ ಮಾರ್ಡನ್‌ ಡಿಪ್ಲೋಮೆಸಿ ಎಂಬ ವೆಬ್‌ ಸೈಟ್‌ ಅಂಕಣದಲ್ಲಿ ಬಳಸಿಕೊಂಡಿರುವುದು ಕಂಡು ಬಂದಿದೆ. ಆದರೆ, ವೆಬ್‌ಸೈಟ್‌ನಲ್ಲಿ ಫೋಟೋದಲ್ಲಿ ವೈರಲ್‌ ಫೋಟೋದಲ್ಲಿ ಇದ್ದಂತ ಸರಪಳಿ ಕಂಡು ಬಂದಿಲ್ಲ.

ಇದೇ ರೀತಿಯಾಗಿ 27 ಆಗಸ್ಟ್‌ 2017 ರಂದು ‘ಪತಿಗಿಂತ ಪತ್ನಿ ಒಂದು ಹೆಜ್ಜೆ ಮುಂದೆ ಇಡುತ್ತಿದ್ದ ಕಾರಣ ಪತಿ ಪತ್ನಿಗೆ ವಿಚ್ಚೇದನ ನೀಡಿದ್ದಾರೆ’ ಎಂಬ ವರದಿಯೊಂದಿಗೆ ಎಬಿಪಿ ಬೆಂಗಾಲ್ ಈ ಫೋಟೋ ಹಂಚಿಕೊಳ್ಳಲಾಗಿದೆ. ಆದರೆ, ಈ ವರದಿಯಲ್ಲಿ ಪೋಟೋವನ್ನು ಸಾಂಕೇತಿಕ ಚಿತ್ರ ಎಂದು ಉಲ್ಲೇಖಿಸಲಾಗಿದೆ. ಹಾಗಾಗಿ, ಈ ವರದಿಯಲ್ಲಿ ಕೂಡ ಇದು ಸಾಂಕೇತಿಕ ಚಿತ್ರವಾಗಿ ಬಳಕೆಯಾಗಿದೆ.

ನಾವು ಫೋಟೋ ಕುರಿತು ಇನ್ನಷ್ಟು ಮಾಹಿತಿ ಹುಡುಕಿದಾಗ 2011ರಲ್ಲಿ RabbitMatch.org ಮತ್ತು Wicked Thoughts ಎಂಬ ಎರಡೂ ಬ್ಲಾಗ್‌ಗಳು ಅಫ್ಘಾನಿಸ್ತಾನದಲ್ಲಿನ ಲಿಂಗ ತಾರತಮ್ಯಗಳ ಕುರಿತು ಅಂಕಣ ಬರೆಯಲು ಈ ಚಿತ್ರಗಳನ್ನು ಬಳಸಿಕೊಂಡಿರುವುದು ಕಂಡು ಬಂದಿದೆ. ಆದರೆ, ಅಲ್ಲೂ ಕೂಡ ಈ ಫೋಟೋವನ್ನು ಸಾಂಕೇತಿಕವಾಗಿ ಬಳಸಿಕೊಳ್ಳಲಾಗಿದೆ. ಆದರೆ, ಇಲ್ಲೂ ಕೂಡ ಸರಪಳಿಗಳು ಕಂಡು ಬಂದಿಲ್ಲ. ಹಾಗಾಗಿ, ಇದೊಂದು ಎಡಿಟೆಡ್‌ ಫೋಟೋ ಎಂಬುವುದು ಸ್ಪಷ್ಟವಾಗಿದೆ.

ಲಭ್ಯ ಮೂಲಗಳನ್ನು ಬಳಸಿ ನಾವು ನಡೆಸಿದ ಪರಿಶೀಲನೆಯಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬ ತನ್ನ ಮೂವರು ಪತ್ನಿಯರ ಕಾಲಿಗೆ ಸರಪಳಿ ಬಿಗಿದು ವಾಯು ವಿಹಾರಕ್ಕೆ ಕರೆದೊಯ್ಯುತ್ತಿದ್ದಾನೆ ಎಂದು ಹಂಚಿಕೊಳ್ಳಲಾದ ಫೋಟೋ ಎಡಿಟೆಡ್ ಎಂದು ಗೊತ್ತಾಗಿದೆ.

ಇದನ್ನೂ ಓದಿ : FACT CHECK : ಕಾಸರಗೋಡಿನಲ್ಲಿ ಮುಸ್ಲಿಂ ಯುವಕರು ಪಾಕಿಸ್ತಾನ ಕ್ರಿಕೆಟ್ ತಂಡದ ಜೆರ್ಸಿ ಧರಿಸಿ ಸಂಭ್ರಮಿಸಿದ್ದಾರೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...