Homeಫ್ಯಾಕ್ಟ್‌ಚೆಕ್FACT CHECK : ಬುರ್ಖಾಧಾರಿ ಮಹಿಳೆಯರಿಗೆ ಸರಪಳಿ ಬಿಗಿದು ಕರೆದೊಯ್ಯುತ್ತಿರುವ ಫೋಟೋ ಎಡಿಟೆಡ್

FACT CHECK : ಬುರ್ಖಾಧಾರಿ ಮಹಿಳೆಯರಿಗೆ ಸರಪಳಿ ಬಿಗಿದು ಕರೆದೊಯ್ಯುತ್ತಿರುವ ಫೋಟೋ ಎಡಿಟೆಡ್

- Advertisement -
- Advertisement -

ಮೂವರು ಬುರ್ಖಾಧಾರಿ ಮಹಿಳೆಯರ ಕಾಲಿಗೆ ಸರಪಳಿ ಬಿಗಿದು, ಆ ಸರಪಳಿಯ ಒಂದು ತುದಿಯನ್ನು ಹಿಡಿದುಕೊಂಡು ವ್ಯಕ್ತಿಯೊಬ್ಬರು ನಡೆಯುತ್ತಿರುವ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

“ವ್ಯಕ್ತಿಯೊಬ್ಬ ತನ್ನ ಮೂವರು ಪತ್ನಿಯರನ್ನು ವಾಯು ವಿಹಾರಕ್ಕೆ ಕರೆದೊಯ್ಯುತ್ತಿರುವ ಫೋಟೋ ಇದು” ಎಂದು ಎಕ್ಸ್‌ ಬಳಕೆದಾರ Naughty BuBu(@INaughtyBuBu) ಬರೆದುಕೊಂಡಿದ್ದಾರೆ.

ಈ ಹಿಂದೆಯೂ ಇದೇ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಆಗಸ್ಟ್ 20, 2021ರಂದು ಈ ಫೋಟೋವನ್ನು ಎಕ್ಸ್‌ನಲ್ಲಿ ಹಂಚಿಕೊಂಡಿದ್ದ Rakesh Krishnan Simha(@ByRakeshSimha)ಎಂಬ ಎಕ್ಸ್ ಬಳಕೆದಾರ “ಅರ್ಫಾ, ಸಬಾ ಮತ್ತು ಸ್ವರಾ ಎಂಬವರು ಉತ್ತರ ಕಾಬೂಲ್‌ನಲ್ಲಿ ವಾಯು ವಿಹಾರಕ್ಕೆ ತೆರಳುತ್ತಿರುವ ಫೋಟೋ ಎಂದು ಒಬ್ಬರು ಇದನ್ನು ನನಗೆ ಕಳುಹಿಸಿದ್ದಾರೆ. ಯಾರಾದರು ಇದು ನಿಜವೋ? ಸುಳ್ಳೋ? ಎಂಬುವುದನ್ನು ಖಚಿತಪಡಿಸಿ. ಸುಳ್ಳು ಸುದ್ದಿ ಹಬ್ಬಿದ ಆರೋಪ ಹೊತ್ತುಕೊಳ್ಳಲು ನನಗೆ ಇಷ್ಟವಿಲ್ಲ” ಎಂದು ಬರೆದುಕೊಂಡಿದ್ದರು.

ಆಗಸ್ಟ್ 16, 2021ರಂದು Dr Meena Kandasamy (@meenakandasamy) ಎಂಬ ಎಕ್ಸ್ ಬಳಕೆದಾರರು “ತಾಲಿಬಾನ್ ಅನ್ನು ತ್ವರಿತವಾಗಿ ಅರ್ಥಮಾಡಿಕೊಳ್ಳಲು ಬಯಸುವ ಪ್ರತಿಯೊಬ್ಬರಿಗೂ, ಅವರು ಅಫ್ಘಾನಿಸ್ತಾನದಲ್ಲಿ ಹೆಚ್ಚು ಕಡಿಮೆ ಆರ್‌ಎಸ್‌ಎಸ್ ಸಮಾನರು” ಎಂದು ಎಕ್ಸ್‌ನಲ್ಲಿ ಪೋಸ್ಟ್ ಹಾಕಿದ್ದರು.

ಇದಕ್ಕೆ ತಿರುಗೇಟು ಕೊಡುವ ವೇಳೆ ನಾವು ಮೇಲ್ಗಡೆ ಉಲ್ಲೇಖಿಸಿದ ವೈರಲ್ ಪೋಟೋವನ್ನು ಹಂಚಿಕೊಂಡಿದ್ದ
TheCorporateLady🇮🇳 (@PallaviJaiswal0)ಎಂಬ ಬಳಕೆದಾರರು ” ತಾಲಿಬಾನ್ ಅನ್ನು ಅರ್ಥಮಾಡಿಕೊಳ್ಳಲು ತ್ವರಿತ ಮಾರ್ಗ! ಅದು ಇಂದಿನ ಆಫ್ಘಾನಿಸ್ತಾನದಲ್ಲಿ. ನೀವೂ ಒಮ್ಮೆ ಅಲ್ಲಿಯೇ ಇರಲು ಪ್ರಯತ್ನಿಸಿ. ಆರ್‌ಎಸ್‌ಎಸ್‌ ಅನ್ನು ಅರ್ಥಮಾಡಿಕೊಳ್ಳಲು ನಿಮಗೆ ಬುದ್ಧಿ ಶಕ್ತಿಯ ಅಗತ್ಯವಿದೆ. ಭಾರತದಲ್ಲಿ ಮಹಿಳೆಯರು ಸುರಕ್ಷಿತವಾಗಿದ್ದಾರೆ ಮತ್ತು ಮುಕ್ತವಾಗಿ ತಿರುಗಾಡುತ್ತಿದ್ದಾರೆ.” ಎಂದು ಬರೆದುಕೊಂಡಿದ್ದರು.

 

ಫ್ಯಾಕ್ಟ್‌ಚೆಕ್ : ನಾವು ಮೇಲ್ಗಡೆ ಉಲ್ಲೇಖಿಸಿದ ವೈರಲ್ ಫೋಟೋದ ಕುರಿತು ಸತ್ಯಾಸತ್ಯತೆ ಪರಿಶೀಲಿಸಿದ್ದೇವೆ. ಮೊದಲು fakeimagedetector.com ಎಂಬ ವೆಬ್‌ಸೈಟ್‌ನಲ್ಲಿ ಫೋಟೋ ನಿಜವಾದ್ದದ್ದೇ ಅಥವಾ ಎಡಿಟೆಡಾ? ಎಂದು ಪರಿಶೀಲಿಸಿದ್ದೇವೆ. ಈ ವೇಳೆ ಈ ಫೋಟೋ ರಚಿತ ಅಥವಾ ಎಡಿಟೆಡ್ ಎಂದು ತೋರುತ್ತಿದೆ ಎಂಬುವುದಾಗಿ ವೆಬ್‌ಸೈಟ್‌ ತಿಳಿಸಿದೆ.

ಬಳಿಕ ನಾವು ಗೂಗಲ್‌ ರಿವರ್ಸ್ ಇಮೇಜ್‌ನಲ್ಲಿ ಫೋಟೋ ಹಾಕಿ ಸರ್ಚ್ ಮಾಡಿದ್ದೇವೆ. ಈ ವೇಳೆ ನಮಗೆ ಫೋಟೋ ಕುರಿತು ಯಾವುದೇ ಸ್ಪಷ್ಟ ಮಾಹಿತಿ ದೊರೆತಿಲ್ಲ.

ಆದರೆ 29 ಮಾರ್ಚ್‌ 2017 ರಂದು ಈ ವೈರಲ್‌ ಫೋಟೋಗೆ ಹೋಲಿಕೆಯಾಗುವಂತಹ ಒಂದು ಫೋಟೋ ಮಾರ್ಡನ್‌ ಡಿಪ್ಲೋಮೆಸಿ ಎಂಬ ವೆಬ್‌ ಸೈಟ್‌ ಅಂಕಣದಲ್ಲಿ ಬಳಸಿಕೊಂಡಿರುವುದು ಕಂಡು ಬಂದಿದೆ. ಆದರೆ, ವೆಬ್‌ಸೈಟ್‌ನಲ್ಲಿ ಫೋಟೋದಲ್ಲಿ ವೈರಲ್‌ ಫೋಟೋದಲ್ಲಿ ಇದ್ದಂತ ಸರಪಳಿ ಕಂಡು ಬಂದಿಲ್ಲ.

ಇದೇ ರೀತಿಯಾಗಿ 27 ಆಗಸ್ಟ್‌ 2017 ರಂದು ‘ಪತಿಗಿಂತ ಪತ್ನಿ ಒಂದು ಹೆಜ್ಜೆ ಮುಂದೆ ಇಡುತ್ತಿದ್ದ ಕಾರಣ ಪತಿ ಪತ್ನಿಗೆ ವಿಚ್ಚೇದನ ನೀಡಿದ್ದಾರೆ’ ಎಂಬ ವರದಿಯೊಂದಿಗೆ ಎಬಿಪಿ ಬೆಂಗಾಲ್ ಈ ಫೋಟೋ ಹಂಚಿಕೊಳ್ಳಲಾಗಿದೆ. ಆದರೆ, ಈ ವರದಿಯಲ್ಲಿ ಪೋಟೋವನ್ನು ಸಾಂಕೇತಿಕ ಚಿತ್ರ ಎಂದು ಉಲ್ಲೇಖಿಸಲಾಗಿದೆ. ಹಾಗಾಗಿ, ಈ ವರದಿಯಲ್ಲಿ ಕೂಡ ಇದು ಸಾಂಕೇತಿಕ ಚಿತ್ರವಾಗಿ ಬಳಕೆಯಾಗಿದೆ.

ನಾವು ಫೋಟೋ ಕುರಿತು ಇನ್ನಷ್ಟು ಮಾಹಿತಿ ಹುಡುಕಿದಾಗ 2011ರಲ್ಲಿ RabbitMatch.org ಮತ್ತು Wicked Thoughts ಎಂಬ ಎರಡೂ ಬ್ಲಾಗ್‌ಗಳು ಅಫ್ಘಾನಿಸ್ತಾನದಲ್ಲಿನ ಲಿಂಗ ತಾರತಮ್ಯಗಳ ಕುರಿತು ಅಂಕಣ ಬರೆಯಲು ಈ ಚಿತ್ರಗಳನ್ನು ಬಳಸಿಕೊಂಡಿರುವುದು ಕಂಡು ಬಂದಿದೆ. ಆದರೆ, ಅಲ್ಲೂ ಕೂಡ ಈ ಫೋಟೋವನ್ನು ಸಾಂಕೇತಿಕವಾಗಿ ಬಳಸಿಕೊಳ್ಳಲಾಗಿದೆ. ಆದರೆ, ಇಲ್ಲೂ ಕೂಡ ಸರಪಳಿಗಳು ಕಂಡು ಬಂದಿಲ್ಲ. ಹಾಗಾಗಿ, ಇದೊಂದು ಎಡಿಟೆಡ್‌ ಫೋಟೋ ಎಂಬುವುದು ಸ್ಪಷ್ಟವಾಗಿದೆ.

ಲಭ್ಯ ಮೂಲಗಳನ್ನು ಬಳಸಿ ನಾವು ನಡೆಸಿದ ಪರಿಶೀಲನೆಯಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬ ತನ್ನ ಮೂವರು ಪತ್ನಿಯರ ಕಾಲಿಗೆ ಸರಪಳಿ ಬಿಗಿದು ವಾಯು ವಿಹಾರಕ್ಕೆ ಕರೆದೊಯ್ಯುತ್ತಿದ್ದಾನೆ ಎಂದು ಹಂಚಿಕೊಳ್ಳಲಾದ ಫೋಟೋ ಎಡಿಟೆಡ್ ಎಂದು ಗೊತ್ತಾಗಿದೆ.

ಇದನ್ನೂ ಓದಿ : FACT CHECK : ಕಾಸರಗೋಡಿನಲ್ಲಿ ಮುಸ್ಲಿಂ ಯುವಕರು ಪಾಕಿಸ್ತಾನ ಕ್ರಿಕೆಟ್ ತಂಡದ ಜೆರ್ಸಿ ಧರಿಸಿ ಸಂಭ್ರಮಿಸಿದ್ದಾರೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...