Homeಫ್ಯಾಕ್ಟ್‌ಚೆಕ್FACT CHECK : ಬುರ್ಖಾಧಾರಿ ಮಹಿಳೆಯರಿಗೆ ಸರಪಳಿ ಬಿಗಿದು ಕರೆದೊಯ್ಯುತ್ತಿರುವ ಫೋಟೋ ಎಡಿಟೆಡ್

FACT CHECK : ಬುರ್ಖಾಧಾರಿ ಮಹಿಳೆಯರಿಗೆ ಸರಪಳಿ ಬಿಗಿದು ಕರೆದೊಯ್ಯುತ್ತಿರುವ ಫೋಟೋ ಎಡಿಟೆಡ್

- Advertisement -
- Advertisement -

ಮೂವರು ಬುರ್ಖಾಧಾರಿ ಮಹಿಳೆಯರ ಕಾಲಿಗೆ ಸರಪಳಿ ಬಿಗಿದು, ಆ ಸರಪಳಿಯ ಒಂದು ತುದಿಯನ್ನು ಹಿಡಿದುಕೊಂಡು ವ್ಯಕ್ತಿಯೊಬ್ಬರು ನಡೆಯುತ್ತಿರುವ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

“ವ್ಯಕ್ತಿಯೊಬ್ಬ ತನ್ನ ಮೂವರು ಪತ್ನಿಯರನ್ನು ವಾಯು ವಿಹಾರಕ್ಕೆ ಕರೆದೊಯ್ಯುತ್ತಿರುವ ಫೋಟೋ ಇದು” ಎಂದು ಎಕ್ಸ್‌ ಬಳಕೆದಾರ Naughty BuBu(@INaughtyBuBu) ಬರೆದುಕೊಂಡಿದ್ದಾರೆ.

ಈ ಹಿಂದೆಯೂ ಇದೇ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಆಗಸ್ಟ್ 20, 2021ರಂದು ಈ ಫೋಟೋವನ್ನು ಎಕ್ಸ್‌ನಲ್ಲಿ ಹಂಚಿಕೊಂಡಿದ್ದ Rakesh Krishnan Simha(@ByRakeshSimha)ಎಂಬ ಎಕ್ಸ್ ಬಳಕೆದಾರ “ಅರ್ಫಾ, ಸಬಾ ಮತ್ತು ಸ್ವರಾ ಎಂಬವರು ಉತ್ತರ ಕಾಬೂಲ್‌ನಲ್ಲಿ ವಾಯು ವಿಹಾರಕ್ಕೆ ತೆರಳುತ್ತಿರುವ ಫೋಟೋ ಎಂದು ಒಬ್ಬರು ಇದನ್ನು ನನಗೆ ಕಳುಹಿಸಿದ್ದಾರೆ. ಯಾರಾದರು ಇದು ನಿಜವೋ? ಸುಳ್ಳೋ? ಎಂಬುವುದನ್ನು ಖಚಿತಪಡಿಸಿ. ಸುಳ್ಳು ಸುದ್ದಿ ಹಬ್ಬಿದ ಆರೋಪ ಹೊತ್ತುಕೊಳ್ಳಲು ನನಗೆ ಇಷ್ಟವಿಲ್ಲ” ಎಂದು ಬರೆದುಕೊಂಡಿದ್ದರು.

ಆಗಸ್ಟ್ 16, 2021ರಂದು Dr Meena Kandasamy (@meenakandasamy) ಎಂಬ ಎಕ್ಸ್ ಬಳಕೆದಾರರು “ತಾಲಿಬಾನ್ ಅನ್ನು ತ್ವರಿತವಾಗಿ ಅರ್ಥಮಾಡಿಕೊಳ್ಳಲು ಬಯಸುವ ಪ್ರತಿಯೊಬ್ಬರಿಗೂ, ಅವರು ಅಫ್ಘಾನಿಸ್ತಾನದಲ್ಲಿ ಹೆಚ್ಚು ಕಡಿಮೆ ಆರ್‌ಎಸ್‌ಎಸ್ ಸಮಾನರು” ಎಂದು ಎಕ್ಸ್‌ನಲ್ಲಿ ಪೋಸ್ಟ್ ಹಾಕಿದ್ದರು.

ಇದಕ್ಕೆ ತಿರುಗೇಟು ಕೊಡುವ ವೇಳೆ ನಾವು ಮೇಲ್ಗಡೆ ಉಲ್ಲೇಖಿಸಿದ ವೈರಲ್ ಪೋಟೋವನ್ನು ಹಂಚಿಕೊಂಡಿದ್ದ
TheCorporateLady🇮🇳 (@PallaviJaiswal0)ಎಂಬ ಬಳಕೆದಾರರು ” ತಾಲಿಬಾನ್ ಅನ್ನು ಅರ್ಥಮಾಡಿಕೊಳ್ಳಲು ತ್ವರಿತ ಮಾರ್ಗ! ಅದು ಇಂದಿನ ಆಫ್ಘಾನಿಸ್ತಾನದಲ್ಲಿ. ನೀವೂ ಒಮ್ಮೆ ಅಲ್ಲಿಯೇ ಇರಲು ಪ್ರಯತ್ನಿಸಿ. ಆರ್‌ಎಸ್‌ಎಸ್‌ ಅನ್ನು ಅರ್ಥಮಾಡಿಕೊಳ್ಳಲು ನಿಮಗೆ ಬುದ್ಧಿ ಶಕ್ತಿಯ ಅಗತ್ಯವಿದೆ. ಭಾರತದಲ್ಲಿ ಮಹಿಳೆಯರು ಸುರಕ್ಷಿತವಾಗಿದ್ದಾರೆ ಮತ್ತು ಮುಕ್ತವಾಗಿ ತಿರುಗಾಡುತ್ತಿದ್ದಾರೆ.” ಎಂದು ಬರೆದುಕೊಂಡಿದ್ದರು.

 

ಫ್ಯಾಕ್ಟ್‌ಚೆಕ್ : ನಾವು ಮೇಲ್ಗಡೆ ಉಲ್ಲೇಖಿಸಿದ ವೈರಲ್ ಫೋಟೋದ ಕುರಿತು ಸತ್ಯಾಸತ್ಯತೆ ಪರಿಶೀಲಿಸಿದ್ದೇವೆ. ಮೊದಲು fakeimagedetector.com ಎಂಬ ವೆಬ್‌ಸೈಟ್‌ನಲ್ಲಿ ಫೋಟೋ ನಿಜವಾದ್ದದ್ದೇ ಅಥವಾ ಎಡಿಟೆಡಾ? ಎಂದು ಪರಿಶೀಲಿಸಿದ್ದೇವೆ. ಈ ವೇಳೆ ಈ ಫೋಟೋ ರಚಿತ ಅಥವಾ ಎಡಿಟೆಡ್ ಎಂದು ತೋರುತ್ತಿದೆ ಎಂಬುವುದಾಗಿ ವೆಬ್‌ಸೈಟ್‌ ತಿಳಿಸಿದೆ.

ಬಳಿಕ ನಾವು ಗೂಗಲ್‌ ರಿವರ್ಸ್ ಇಮೇಜ್‌ನಲ್ಲಿ ಫೋಟೋ ಹಾಕಿ ಸರ್ಚ್ ಮಾಡಿದ್ದೇವೆ. ಈ ವೇಳೆ ನಮಗೆ ಫೋಟೋ ಕುರಿತು ಯಾವುದೇ ಸ್ಪಷ್ಟ ಮಾಹಿತಿ ದೊರೆತಿಲ್ಲ.

ಆದರೆ 29 ಮಾರ್ಚ್‌ 2017 ರಂದು ಈ ವೈರಲ್‌ ಫೋಟೋಗೆ ಹೋಲಿಕೆಯಾಗುವಂತಹ ಒಂದು ಫೋಟೋ ಮಾರ್ಡನ್‌ ಡಿಪ್ಲೋಮೆಸಿ ಎಂಬ ವೆಬ್‌ ಸೈಟ್‌ ಅಂಕಣದಲ್ಲಿ ಬಳಸಿಕೊಂಡಿರುವುದು ಕಂಡು ಬಂದಿದೆ. ಆದರೆ, ವೆಬ್‌ಸೈಟ್‌ನಲ್ಲಿ ಫೋಟೋದಲ್ಲಿ ವೈರಲ್‌ ಫೋಟೋದಲ್ಲಿ ಇದ್ದಂತ ಸರಪಳಿ ಕಂಡು ಬಂದಿಲ್ಲ.

ಇದೇ ರೀತಿಯಾಗಿ 27 ಆಗಸ್ಟ್‌ 2017 ರಂದು ‘ಪತಿಗಿಂತ ಪತ್ನಿ ಒಂದು ಹೆಜ್ಜೆ ಮುಂದೆ ಇಡುತ್ತಿದ್ದ ಕಾರಣ ಪತಿ ಪತ್ನಿಗೆ ವಿಚ್ಚೇದನ ನೀಡಿದ್ದಾರೆ’ ಎಂಬ ವರದಿಯೊಂದಿಗೆ ಎಬಿಪಿ ಬೆಂಗಾಲ್ ಈ ಫೋಟೋ ಹಂಚಿಕೊಳ್ಳಲಾಗಿದೆ. ಆದರೆ, ಈ ವರದಿಯಲ್ಲಿ ಪೋಟೋವನ್ನು ಸಾಂಕೇತಿಕ ಚಿತ್ರ ಎಂದು ಉಲ್ಲೇಖಿಸಲಾಗಿದೆ. ಹಾಗಾಗಿ, ಈ ವರದಿಯಲ್ಲಿ ಕೂಡ ಇದು ಸಾಂಕೇತಿಕ ಚಿತ್ರವಾಗಿ ಬಳಕೆಯಾಗಿದೆ.

ನಾವು ಫೋಟೋ ಕುರಿತು ಇನ್ನಷ್ಟು ಮಾಹಿತಿ ಹುಡುಕಿದಾಗ 2011ರಲ್ಲಿ RabbitMatch.org ಮತ್ತು Wicked Thoughts ಎಂಬ ಎರಡೂ ಬ್ಲಾಗ್‌ಗಳು ಅಫ್ಘಾನಿಸ್ತಾನದಲ್ಲಿನ ಲಿಂಗ ತಾರತಮ್ಯಗಳ ಕುರಿತು ಅಂಕಣ ಬರೆಯಲು ಈ ಚಿತ್ರಗಳನ್ನು ಬಳಸಿಕೊಂಡಿರುವುದು ಕಂಡು ಬಂದಿದೆ. ಆದರೆ, ಅಲ್ಲೂ ಕೂಡ ಈ ಫೋಟೋವನ್ನು ಸಾಂಕೇತಿಕವಾಗಿ ಬಳಸಿಕೊಳ್ಳಲಾಗಿದೆ. ಆದರೆ, ಇಲ್ಲೂ ಕೂಡ ಸರಪಳಿಗಳು ಕಂಡು ಬಂದಿಲ್ಲ. ಹಾಗಾಗಿ, ಇದೊಂದು ಎಡಿಟೆಡ್‌ ಫೋಟೋ ಎಂಬುವುದು ಸ್ಪಷ್ಟವಾಗಿದೆ.

ಲಭ್ಯ ಮೂಲಗಳನ್ನು ಬಳಸಿ ನಾವು ನಡೆಸಿದ ಪರಿಶೀಲನೆಯಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬ ತನ್ನ ಮೂವರು ಪತ್ನಿಯರ ಕಾಲಿಗೆ ಸರಪಳಿ ಬಿಗಿದು ವಾಯು ವಿಹಾರಕ್ಕೆ ಕರೆದೊಯ್ಯುತ್ತಿದ್ದಾನೆ ಎಂದು ಹಂಚಿಕೊಳ್ಳಲಾದ ಫೋಟೋ ಎಡಿಟೆಡ್ ಎಂದು ಗೊತ್ತಾಗಿದೆ.

ಇದನ್ನೂ ಓದಿ : FACT CHECK : ಕಾಸರಗೋಡಿನಲ್ಲಿ ಮುಸ್ಲಿಂ ಯುವಕರು ಪಾಕಿಸ್ತಾನ ಕ್ರಿಕೆಟ್ ತಂಡದ ಜೆರ್ಸಿ ಧರಿಸಿ ಸಂಭ್ರಮಿಸಿದ್ದಾರೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...