Homeಫ್ಯಾಕ್ಟ್‌ಚೆಕ್FACT CHECK : ಅನಂತ್, ರಾಧಿಕಾ ಮದುವೆಯಲ್ಲಿ ಸಲ್ಮಾನ್ ಖಾನ್- ಐಶ್ವರ್ಯಾ ರೈ ಜೊತೆ ಫೋಟೋ?...

FACT CHECK : ಅನಂತ್, ರಾಧಿಕಾ ಮದುವೆಯಲ್ಲಿ ಸಲ್ಮಾನ್ ಖಾನ್- ಐಶ್ವರ್ಯಾ ರೈ ಜೊತೆ ಫೋಟೋ? ಅಸಲಿಯತ್ತೇನು?

- Advertisement -
- Advertisement -

ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಕೇಶ್ ಅಂಬಾನಿ ಹಾಗೂ ರಿಲಯನ್ಸ್ ಫೌಂಡೇಷನ್  ಅಧ್ಯಕ್ಷೆ ನೀತಾ ಅಂಬಾನಿ ದಂಪತಿಯ ಕಿರಿಯ ಮಗ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್  ಅವರ ವಿವಾಹವು ಶುಕ್ರವಾರ ಅದ್ಧೂರಿಯಾಗಿ ನಡೆಯಿತು. ದೇಶ, ವಿದೇಶಗಳಿಂದ ಬಂದಿದ್ದ ಸಾವಿರಾರು ಸಂಖ್ಯೆಯ ಅತಿಥಿಗಳು ಮದುವೆ ಸಮಾರಂಭದಲ್ಲಿ ಭಾಗಿಯಾಗಿದ್ದರು. ರಾಜಕೀಯ ಕ್ಷೇತ್ರದ ಹಲವು ಗಣ್ಯರು, ಸಿನಿ ತಾರೆಯರು ನವ ದಂಪತಿಗೆ ಶುಭ ಕೋರಿದ್ದಾರೆ.

ರಾಧಿಕಾ ಮರ್ಚೆಂಟ್ ಮತ್ತು ಅನಂತ್ ಅಂಬಾನಿ ಅವರ ವಿವಾಹ ಸಮಾರಂಭದಲ್ಲಿ ಸೆಲೆಬ್ರಿಟಿಗಳು ಒಟ್ಟಿಗೆ ಪೋಸ್ ನೀಡುತ್ತಿರುವ ಹಲವಾರು ಫೋಟೋಗಳು ಮತ್ತು ವಿಡಿಯೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿವೆ. ಆದರೆ ನೆಟ್ಟಿಗರನ್ನು ಸ್ಕ್ರೋಲಿಂಗ್ ಮಾಡುವುದನ್ನು ನಿಲ್ಲಿಸುವಂತೆ ಮಾಡಿದ ಒಂದು ಚಿತ್ರವೆಂದರೆ ಐಶ್ವರ್ಯಾ ರೈ ಮತ್ತು ಸಲ್ಮಾನ್ ಖಾನ್ ಒಟ್ಟಿಗೆ ಪೋಸ್ ನೀಡಿರುವ ಫೋಟೊ.

ಐಶ್ವರ್ಯಾ ಮತ್ತು ಸಲ್ಮಾನ್ ಒಟ್ಟಿಗೆ ಪೋಸ್ ನೀಡಿರುವ ಫೋಟೋವನ್ನು ಹಂಚಿಕೊಂಡ ವ್ಯಕ್ತಿಯೊಬ್ಬರು ಹೀಗೆ ಬರೆದಿದ್ದಾರೆ, “ಐಶ್ವರ್ಯಾ ಬಚ್ಚನ್ ಕುಟುಂಬದವರೊಂದಿಗೆ ಬಂದಿಲ್ಲ, ಮತ್ತು ಈಗ ಅವರು ಸಲ್ಮಾನ್ ಭಾಯ್ ಅವರೊಂದಿಗೆ ಪೋಸ್‌ ನೀಡುವ ಮೂಲಕ ಹುಚ್ಚುತನ ಮೆರೆದಿದ್ದಾರೆ. ಎಂಬ ಹೇಳಿಕೆಯನ್ನು ಸೇರಿಸಿದ್ದಾರೆ. 

ಆದರೆ ಐಶ್ವರ್ಯಾ ಮತ್ತು ಸಲ್ಮಾನ್ ಒಟ್ಟಿಗೆ ಪೋಸ್ ನೀಡಿರುವ ಬಗ್ಗೆ ಹಲವರು ಅನುಮಾನ ವ್ಯಕ್ತಪಡಿಸಿದ್ದು ಈ ವೈರಲ್ ಚಿತ್ರ ಎಡಿಟೆಡ್ ಎಂದು ಪ್ರತಿಕ್ರಿಯಿಸಿದ್ದಾರೆ. ಹಾಗಿದ್ದರೆ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್  ಅವರ ಮದುವೆ ಪೋಟೊಗಳಲ್ಲಿ ಹೆಚ್ಚು ವೈರಲ್ ಆಗುತ್ತಿರುವ ಐಶ್ವರ್ಯಾ ಮತ್ತು ಸಲ್ಮಾನ್ ಒಟ್ಟಿಗೆ ಪೋಸ್ ನೀಡಿರುವ ಫೋಟೊದ ನೈಜತೆಯನ್ನು ಪರಿಶೀಲಿಸಲು ಗೂಗಲ್ ಸರ್ಚ್ ಮಾಡಿದಾಗ,  ಜೂಮ್ ಟಿವಿ ಹಂಚಿಕೊಂಡಿರುವ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ಮದುವೆಯ ಸಂದರ್ಭದಲ್ಲಿ ಸಲ್ಮಾನ್ ಖಾನ್ ಚಿತ್ರಗಳನ್ನು ಹಂಚಿಕೊಂಡಿದ್ದು ನಮಗೆ ಲಭ್ಯವಾಗಿವೆ. ಫೋಟೊದಲ್ಲಿ, ನಟ ಸಲ್ಮಾನ್ ಖಾನ್ ತನ್ನ ಸಹೋದರಿ ಅರ್ಪಿತಾ ಖಾನ್ ಜೊತೆ ಪೋಸ್ ನೀಡಿದ್ದು, ವೈರಲ್ ಫೋಟೋದಲ್ಲಿ ಕಂಡುಬರುವಂತೆ ಅದೇ ಹಿನ್ನೆಲೆಯಲ್ಲಿ ಮತ್ತು ಉಡುಪಿನಲ್ಲಿ ಕಾಣಿಸಿಕೊಂಡಿದ್ದಾರೆ. 

ಜುಲೈ 12 ರಂದು ಮುಕೇಶ್ ಅಂಬಾನಿ ಮಗ ಅಂನತ್ ಅಂಬಾನಿ ಮದುವೆಗೆ ಬಾಲಿವುಡ್ ನಟರು ಆಗಮಿಸುವ ಮಾಧ್ಯಮದ ತುಣುಕುಗಳು ಲಭ್ಯವಾಗಿದೆ. ವಿವಿಧ ಮಾಧ್ಯಮಗಳು ಹಂಚಿಕೊಂಡ ಹಲವಾರು ವಿಡಿಯೋಗಳಲ್ಲಿ ಸಲ್ಮಾನ್ ಖಾನ್ ಸಹೋದರಿ ಅರ್ಪಿತಾ ಖಾನ್ ಅವರೊಂದಿಗೆ ಸ್ಥಳಕ್ಕೆ ಆಗಮಿಸುತ್ತಿರುವುದನ್ನು ತೋರಿಸಿದೆ. ಮತ್ತೊಂದೆಡೆ ಐಶ್ವರ್ಯಾ ರೈ ಬಚ್ಚನ್ ತಮ್ಮ ಮಗಳು ಆರಾಧ್ಯ ಜೊತೆ ಫೋಟೋಗಳಿಗೆ ಪೋಸ್ ಕೊಟ್ಟಿದ್ದಾರೆ. ಈ ಸಮಯದಲ್ಲಿ ಸಲ್ಮಾನ್ ಮತ್ತು ಐಶ್ವರ್ಯಾ ಒಟ್ಟಿಗೆ ಇರುವ ಯಾವ ಚಿತ್ರವನ್ನು ಮಾಧ್ಯಮಗಳು ಹಂಚಿಕೊಂಡಿಲ್ಲ ಎಂಬುದು ಸ್ಪಷ್ಟವಾಗಿದೆ.

ವಾಸ್ತವವಾಗಿ, ನಟ ಸಲ್ಮಾನ್ ಖಾನ್ ಮತ್ತು ಐಶ್ವರ್ಯಾ ರೈ ಇಬ್ಬರೂ ಮದುವೆ ಸಮಾರಂಭದಲ್ಲಿ ಭಾಗವಹಿಸಿದ್ದು ನಿಜ, ಆದರೆ ಇಬ್ಬರು ಜೊತೆಯಾಗಿ ನಿಂತು ಫೋಟೊಗೆ ಪೋಸ್‌ ನೀಡಿದ್ದಾರೆ ಎಂಬುದು ಸುಳ್ಳು, ಎರಡು ಬೇರೆ ಬೇರೆ ಚಿತ್ರವನ್ನು ಎಡಿಟ್‌ ಮಾಡಿ ಸಲ್ಮಾನ್ ಖಾನ್ ಮತ್ತು ಐಶ್ವರ್ಯಾ ರೈ ಒಟ್ಟಿಗೆ ಫೋಸ್ ನೀಡಿರುವಂತೆ ರಚಿಸಲಾಗಿದೆ.

 

ಈಗ ಕೃತಕ ಬುದ್ಧಿಮತ್ತೆಯ(AI) ಜಗತ್ತಿನಲ್ಲಿ ವಾಸಿಸುತ್ತಿದ್ದೇವೆ ಮತ್ತು ಸಲ್ಮಾನ್ ಖಾನ್ ಐಶ್ವರ್ಯಾ ರೈ ಅವರೊಂದಿಗೆ ಪೋಸ್ ನೀಡುತ್ತಿರುವ ಈ ಚಿತ್ರದಂತೆಯೇ ನಾವು ನೋಡುವ ಎಲ್ಲವೂ ನಿಜವಲ್ಲ. ಈ ಚಿತ್ರವು ಕಾಡ್ಗಿಚ್ಚಿನಂತೆ ವೈರಲ್ ಆಗುತ್ತಿದೆ ಮತ್ತು ಇದು ‘ಹಮ್ ದಿಲ್ ದೇ ಚುಕೇ ಸನಮ್ 2’ ಕೇಳುವ ಅನೇಕರನ್ನು ಗೊಂದಲಕ್ಕೀಡು ಮಾಡಿದೆ. ಒಬ್ಬ ಅಭಿಮಾನಿ “ಹಮ್ ದಿಲ್ ದೇ ಚುಕೆ ಸನಮ್ 2 ಗಾಗಿ ಸಲ್ಮಾನ್ ಖಾನ್ ಮತ್ತು ಐಶ್ವರ್ಯಾ ರೈ ಒಟ್ಟಿಗೆ” ಎಂದು ಬರೆದಿದ್ದಾರೆ. “AI ನಿಜವಾಗಿಯೂ ಅಪಾಯಕಾರಿ” ಎಂದು ಜಾಗೃತ ಅಭಿಮಾನಿಯೊಬ್ಬರು ಕಾಮೆಂಟ್ ಮಾಡಿದ್ದಾರೆ.

ಸಲ್ಮಾನ್ ಖಾನ್ ತಮ್ಮ ಸಹೋದರಿ ಅರ್ಪಿತಾ ಅವರೊಂದಿಗೆ ಕ್ಯಾಮೆರಾಗೆ ಪೋಸ್ ನೀಡಿದರೆ, ಐಶ್ವರ್ಯಾ ರೈ ತಮ್ಮ ಮಗಳು ಆರಾಧ್ಯ ಅವರೊಂದಿಗೆ ಫೋಟೊದಲ್ಲಿ ಇರುವುದನ್ನು ಕಾಣಬಹುದು.  ಈ ಎರಡು ಬೇರೆ ಬೇರೆ ಚಿತ್ರವನ್ನು ಜೋಡಿಸಿ ಎಡಿಟ್ ಮಾಡಿ ತಪ್ಪಾಗಿ ಹಂಚಿಕೊಳ್ಳಲಾಗಿದೆ. 

ಇದನ್ನೂ ಓದಿ : FACT CHECK : ನಿರ್ಮಲಾ ಸೀತಾರಾಮನ್ ಕಚೇರಿಗೆ ಹೋಗಲು ದೆಹಲಿ ಮೆಟ್ರೋ ಬಳಸುತ್ತಾರೆ ಎಂಬುವುದು ನಿಜವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...