Homeಫ್ಯಾಕ್ಟ್‌ಚೆಕ್FACT CHECK : ಅನಂತ್, ರಾಧಿಕಾ ಮದುವೆಯಲ್ಲಿ ಸಲ್ಮಾನ್ ಖಾನ್- ಐಶ್ವರ್ಯಾ ರೈ ಜೊತೆ ಫೋಟೋ?...

FACT CHECK : ಅನಂತ್, ರಾಧಿಕಾ ಮದುವೆಯಲ್ಲಿ ಸಲ್ಮಾನ್ ಖಾನ್- ಐಶ್ವರ್ಯಾ ರೈ ಜೊತೆ ಫೋಟೋ? ಅಸಲಿಯತ್ತೇನು?

- Advertisement -
- Advertisement -

ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಕೇಶ್ ಅಂಬಾನಿ ಹಾಗೂ ರಿಲಯನ್ಸ್ ಫೌಂಡೇಷನ್  ಅಧ್ಯಕ್ಷೆ ನೀತಾ ಅಂಬಾನಿ ದಂಪತಿಯ ಕಿರಿಯ ಮಗ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್  ಅವರ ವಿವಾಹವು ಶುಕ್ರವಾರ ಅದ್ಧೂರಿಯಾಗಿ ನಡೆಯಿತು. ದೇಶ, ವಿದೇಶಗಳಿಂದ ಬಂದಿದ್ದ ಸಾವಿರಾರು ಸಂಖ್ಯೆಯ ಅತಿಥಿಗಳು ಮದುವೆ ಸಮಾರಂಭದಲ್ಲಿ ಭಾಗಿಯಾಗಿದ್ದರು. ರಾಜಕೀಯ ಕ್ಷೇತ್ರದ ಹಲವು ಗಣ್ಯರು, ಸಿನಿ ತಾರೆಯರು ನವ ದಂಪತಿಗೆ ಶುಭ ಕೋರಿದ್ದಾರೆ.

ರಾಧಿಕಾ ಮರ್ಚೆಂಟ್ ಮತ್ತು ಅನಂತ್ ಅಂಬಾನಿ ಅವರ ವಿವಾಹ ಸಮಾರಂಭದಲ್ಲಿ ಸೆಲೆಬ್ರಿಟಿಗಳು ಒಟ್ಟಿಗೆ ಪೋಸ್ ನೀಡುತ್ತಿರುವ ಹಲವಾರು ಫೋಟೋಗಳು ಮತ್ತು ವಿಡಿಯೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿವೆ. ಆದರೆ ನೆಟ್ಟಿಗರನ್ನು ಸ್ಕ್ರೋಲಿಂಗ್ ಮಾಡುವುದನ್ನು ನಿಲ್ಲಿಸುವಂತೆ ಮಾಡಿದ ಒಂದು ಚಿತ್ರವೆಂದರೆ ಐಶ್ವರ್ಯಾ ರೈ ಮತ್ತು ಸಲ್ಮಾನ್ ಖಾನ್ ಒಟ್ಟಿಗೆ ಪೋಸ್ ನೀಡಿರುವ ಫೋಟೊ.

ಐಶ್ವರ್ಯಾ ಮತ್ತು ಸಲ್ಮಾನ್ ಒಟ್ಟಿಗೆ ಪೋಸ್ ನೀಡಿರುವ ಫೋಟೋವನ್ನು ಹಂಚಿಕೊಂಡ ವ್ಯಕ್ತಿಯೊಬ್ಬರು ಹೀಗೆ ಬರೆದಿದ್ದಾರೆ, “ಐಶ್ವರ್ಯಾ ಬಚ್ಚನ್ ಕುಟುಂಬದವರೊಂದಿಗೆ ಬಂದಿಲ್ಲ, ಮತ್ತು ಈಗ ಅವರು ಸಲ್ಮಾನ್ ಭಾಯ್ ಅವರೊಂದಿಗೆ ಪೋಸ್‌ ನೀಡುವ ಮೂಲಕ ಹುಚ್ಚುತನ ಮೆರೆದಿದ್ದಾರೆ. ಎಂಬ ಹೇಳಿಕೆಯನ್ನು ಸೇರಿಸಿದ್ದಾರೆ. 

ಆದರೆ ಐಶ್ವರ್ಯಾ ಮತ್ತು ಸಲ್ಮಾನ್ ಒಟ್ಟಿಗೆ ಪೋಸ್ ನೀಡಿರುವ ಬಗ್ಗೆ ಹಲವರು ಅನುಮಾನ ವ್ಯಕ್ತಪಡಿಸಿದ್ದು ಈ ವೈರಲ್ ಚಿತ್ರ ಎಡಿಟೆಡ್ ಎಂದು ಪ್ರತಿಕ್ರಿಯಿಸಿದ್ದಾರೆ. ಹಾಗಿದ್ದರೆ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್  ಅವರ ಮದುವೆ ಪೋಟೊಗಳಲ್ಲಿ ಹೆಚ್ಚು ವೈರಲ್ ಆಗುತ್ತಿರುವ ಐಶ್ವರ್ಯಾ ಮತ್ತು ಸಲ್ಮಾನ್ ಒಟ್ಟಿಗೆ ಪೋಸ್ ನೀಡಿರುವ ಫೋಟೊದ ನೈಜತೆಯನ್ನು ಪರಿಶೀಲಿಸಲು ಗೂಗಲ್ ಸರ್ಚ್ ಮಾಡಿದಾಗ,  ಜೂಮ್ ಟಿವಿ ಹಂಚಿಕೊಂಡಿರುವ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ಮದುವೆಯ ಸಂದರ್ಭದಲ್ಲಿ ಸಲ್ಮಾನ್ ಖಾನ್ ಚಿತ್ರಗಳನ್ನು ಹಂಚಿಕೊಂಡಿದ್ದು ನಮಗೆ ಲಭ್ಯವಾಗಿವೆ. ಫೋಟೊದಲ್ಲಿ, ನಟ ಸಲ್ಮಾನ್ ಖಾನ್ ತನ್ನ ಸಹೋದರಿ ಅರ್ಪಿತಾ ಖಾನ್ ಜೊತೆ ಪೋಸ್ ನೀಡಿದ್ದು, ವೈರಲ್ ಫೋಟೋದಲ್ಲಿ ಕಂಡುಬರುವಂತೆ ಅದೇ ಹಿನ್ನೆಲೆಯಲ್ಲಿ ಮತ್ತು ಉಡುಪಿನಲ್ಲಿ ಕಾಣಿಸಿಕೊಂಡಿದ್ದಾರೆ. 

ಜುಲೈ 12 ರಂದು ಮುಕೇಶ್ ಅಂಬಾನಿ ಮಗ ಅಂನತ್ ಅಂಬಾನಿ ಮದುವೆಗೆ ಬಾಲಿವುಡ್ ನಟರು ಆಗಮಿಸುವ ಮಾಧ್ಯಮದ ತುಣುಕುಗಳು ಲಭ್ಯವಾಗಿದೆ. ವಿವಿಧ ಮಾಧ್ಯಮಗಳು ಹಂಚಿಕೊಂಡ ಹಲವಾರು ವಿಡಿಯೋಗಳಲ್ಲಿ ಸಲ್ಮಾನ್ ಖಾನ್ ಸಹೋದರಿ ಅರ್ಪಿತಾ ಖಾನ್ ಅವರೊಂದಿಗೆ ಸ್ಥಳಕ್ಕೆ ಆಗಮಿಸುತ್ತಿರುವುದನ್ನು ತೋರಿಸಿದೆ. ಮತ್ತೊಂದೆಡೆ ಐಶ್ವರ್ಯಾ ರೈ ಬಚ್ಚನ್ ತಮ್ಮ ಮಗಳು ಆರಾಧ್ಯ ಜೊತೆ ಫೋಟೋಗಳಿಗೆ ಪೋಸ್ ಕೊಟ್ಟಿದ್ದಾರೆ. ಈ ಸಮಯದಲ್ಲಿ ಸಲ್ಮಾನ್ ಮತ್ತು ಐಶ್ವರ್ಯಾ ಒಟ್ಟಿಗೆ ಇರುವ ಯಾವ ಚಿತ್ರವನ್ನು ಮಾಧ್ಯಮಗಳು ಹಂಚಿಕೊಂಡಿಲ್ಲ ಎಂಬುದು ಸ್ಪಷ್ಟವಾಗಿದೆ.

ವಾಸ್ತವವಾಗಿ, ನಟ ಸಲ್ಮಾನ್ ಖಾನ್ ಮತ್ತು ಐಶ್ವರ್ಯಾ ರೈ ಇಬ್ಬರೂ ಮದುವೆ ಸಮಾರಂಭದಲ್ಲಿ ಭಾಗವಹಿಸಿದ್ದು ನಿಜ, ಆದರೆ ಇಬ್ಬರು ಜೊತೆಯಾಗಿ ನಿಂತು ಫೋಟೊಗೆ ಪೋಸ್‌ ನೀಡಿದ್ದಾರೆ ಎಂಬುದು ಸುಳ್ಳು, ಎರಡು ಬೇರೆ ಬೇರೆ ಚಿತ್ರವನ್ನು ಎಡಿಟ್‌ ಮಾಡಿ ಸಲ್ಮಾನ್ ಖಾನ್ ಮತ್ತು ಐಶ್ವರ್ಯಾ ರೈ ಒಟ್ಟಿಗೆ ಫೋಸ್ ನೀಡಿರುವಂತೆ ರಚಿಸಲಾಗಿದೆ.

 

ಈಗ ಕೃತಕ ಬುದ್ಧಿಮತ್ತೆಯ(AI) ಜಗತ್ತಿನಲ್ಲಿ ವಾಸಿಸುತ್ತಿದ್ದೇವೆ ಮತ್ತು ಸಲ್ಮಾನ್ ಖಾನ್ ಐಶ್ವರ್ಯಾ ರೈ ಅವರೊಂದಿಗೆ ಪೋಸ್ ನೀಡುತ್ತಿರುವ ಈ ಚಿತ್ರದಂತೆಯೇ ನಾವು ನೋಡುವ ಎಲ್ಲವೂ ನಿಜವಲ್ಲ. ಈ ಚಿತ್ರವು ಕಾಡ್ಗಿಚ್ಚಿನಂತೆ ವೈರಲ್ ಆಗುತ್ತಿದೆ ಮತ್ತು ಇದು ‘ಹಮ್ ದಿಲ್ ದೇ ಚುಕೇ ಸನಮ್ 2’ ಕೇಳುವ ಅನೇಕರನ್ನು ಗೊಂದಲಕ್ಕೀಡು ಮಾಡಿದೆ. ಒಬ್ಬ ಅಭಿಮಾನಿ “ಹಮ್ ದಿಲ್ ದೇ ಚುಕೆ ಸನಮ್ 2 ಗಾಗಿ ಸಲ್ಮಾನ್ ಖಾನ್ ಮತ್ತು ಐಶ್ವರ್ಯಾ ರೈ ಒಟ್ಟಿಗೆ” ಎಂದು ಬರೆದಿದ್ದಾರೆ. “AI ನಿಜವಾಗಿಯೂ ಅಪಾಯಕಾರಿ” ಎಂದು ಜಾಗೃತ ಅಭಿಮಾನಿಯೊಬ್ಬರು ಕಾಮೆಂಟ್ ಮಾಡಿದ್ದಾರೆ.

ಸಲ್ಮಾನ್ ಖಾನ್ ತಮ್ಮ ಸಹೋದರಿ ಅರ್ಪಿತಾ ಅವರೊಂದಿಗೆ ಕ್ಯಾಮೆರಾಗೆ ಪೋಸ್ ನೀಡಿದರೆ, ಐಶ್ವರ್ಯಾ ರೈ ತಮ್ಮ ಮಗಳು ಆರಾಧ್ಯ ಅವರೊಂದಿಗೆ ಫೋಟೊದಲ್ಲಿ ಇರುವುದನ್ನು ಕಾಣಬಹುದು.  ಈ ಎರಡು ಬೇರೆ ಬೇರೆ ಚಿತ್ರವನ್ನು ಜೋಡಿಸಿ ಎಡಿಟ್ ಮಾಡಿ ತಪ್ಪಾಗಿ ಹಂಚಿಕೊಳ್ಳಲಾಗಿದೆ. 

ಇದನ್ನೂ ಓದಿ : FACT CHECK : ನಿರ್ಮಲಾ ಸೀತಾರಾಮನ್ ಕಚೇರಿಗೆ ಹೋಗಲು ದೆಹಲಿ ಮೆಟ್ರೋ ಬಳಸುತ್ತಾರೆ ಎಂಬುವುದು ನಿಜವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...