Homeಫ್ಯಾಕ್ಟ್‌ಚೆಕ್FACT CHECK : ಅನಂತ್, ರಾಧಿಕಾ ಮದುವೆಯಲ್ಲಿ ಸಲ್ಮಾನ್ ಖಾನ್- ಐಶ್ವರ್ಯಾ ರೈ ಜೊತೆ ಫೋಟೋ?...

FACT CHECK : ಅನಂತ್, ರಾಧಿಕಾ ಮದುವೆಯಲ್ಲಿ ಸಲ್ಮಾನ್ ಖಾನ್- ಐಶ್ವರ್ಯಾ ರೈ ಜೊತೆ ಫೋಟೋ? ಅಸಲಿಯತ್ತೇನು?

- Advertisement -
- Advertisement -

ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಕೇಶ್ ಅಂಬಾನಿ ಹಾಗೂ ರಿಲಯನ್ಸ್ ಫೌಂಡೇಷನ್  ಅಧ್ಯಕ್ಷೆ ನೀತಾ ಅಂಬಾನಿ ದಂಪತಿಯ ಕಿರಿಯ ಮಗ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್  ಅವರ ವಿವಾಹವು ಶುಕ್ರವಾರ ಅದ್ಧೂರಿಯಾಗಿ ನಡೆಯಿತು. ದೇಶ, ವಿದೇಶಗಳಿಂದ ಬಂದಿದ್ದ ಸಾವಿರಾರು ಸಂಖ್ಯೆಯ ಅತಿಥಿಗಳು ಮದುವೆ ಸಮಾರಂಭದಲ್ಲಿ ಭಾಗಿಯಾಗಿದ್ದರು. ರಾಜಕೀಯ ಕ್ಷೇತ್ರದ ಹಲವು ಗಣ್ಯರು, ಸಿನಿ ತಾರೆಯರು ನವ ದಂಪತಿಗೆ ಶುಭ ಕೋರಿದ್ದಾರೆ.

ರಾಧಿಕಾ ಮರ್ಚೆಂಟ್ ಮತ್ತು ಅನಂತ್ ಅಂಬಾನಿ ಅವರ ವಿವಾಹ ಸಮಾರಂಭದಲ್ಲಿ ಸೆಲೆಬ್ರಿಟಿಗಳು ಒಟ್ಟಿಗೆ ಪೋಸ್ ನೀಡುತ್ತಿರುವ ಹಲವಾರು ಫೋಟೋಗಳು ಮತ್ತು ವಿಡಿಯೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿವೆ. ಆದರೆ ನೆಟ್ಟಿಗರನ್ನು ಸ್ಕ್ರೋಲಿಂಗ್ ಮಾಡುವುದನ್ನು ನಿಲ್ಲಿಸುವಂತೆ ಮಾಡಿದ ಒಂದು ಚಿತ್ರವೆಂದರೆ ಐಶ್ವರ್ಯಾ ರೈ ಮತ್ತು ಸಲ್ಮಾನ್ ಖಾನ್ ಒಟ್ಟಿಗೆ ಪೋಸ್ ನೀಡಿರುವ ಫೋಟೊ.

ಐಶ್ವರ್ಯಾ ಮತ್ತು ಸಲ್ಮಾನ್ ಒಟ್ಟಿಗೆ ಪೋಸ್ ನೀಡಿರುವ ಫೋಟೋವನ್ನು ಹಂಚಿಕೊಂಡ ವ್ಯಕ್ತಿಯೊಬ್ಬರು ಹೀಗೆ ಬರೆದಿದ್ದಾರೆ, “ಐಶ್ವರ್ಯಾ ಬಚ್ಚನ್ ಕುಟುಂಬದವರೊಂದಿಗೆ ಬಂದಿಲ್ಲ, ಮತ್ತು ಈಗ ಅವರು ಸಲ್ಮಾನ್ ಭಾಯ್ ಅವರೊಂದಿಗೆ ಪೋಸ್‌ ನೀಡುವ ಮೂಲಕ ಹುಚ್ಚುತನ ಮೆರೆದಿದ್ದಾರೆ. ಎಂಬ ಹೇಳಿಕೆಯನ್ನು ಸೇರಿಸಿದ್ದಾರೆ. 

ಆದರೆ ಐಶ್ವರ್ಯಾ ಮತ್ತು ಸಲ್ಮಾನ್ ಒಟ್ಟಿಗೆ ಪೋಸ್ ನೀಡಿರುವ ಬಗ್ಗೆ ಹಲವರು ಅನುಮಾನ ವ್ಯಕ್ತಪಡಿಸಿದ್ದು ಈ ವೈರಲ್ ಚಿತ್ರ ಎಡಿಟೆಡ್ ಎಂದು ಪ್ರತಿಕ್ರಿಯಿಸಿದ್ದಾರೆ. ಹಾಗಿದ್ದರೆ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್  ಅವರ ಮದುವೆ ಪೋಟೊಗಳಲ್ಲಿ ಹೆಚ್ಚು ವೈರಲ್ ಆಗುತ್ತಿರುವ ಐಶ್ವರ್ಯಾ ಮತ್ತು ಸಲ್ಮಾನ್ ಒಟ್ಟಿಗೆ ಪೋಸ್ ನೀಡಿರುವ ಫೋಟೊದ ನೈಜತೆಯನ್ನು ಪರಿಶೀಲಿಸಲು ಗೂಗಲ್ ಸರ್ಚ್ ಮಾಡಿದಾಗ,  ಜೂಮ್ ಟಿವಿ ಹಂಚಿಕೊಂಡಿರುವ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ಮದುವೆಯ ಸಂದರ್ಭದಲ್ಲಿ ಸಲ್ಮಾನ್ ಖಾನ್ ಚಿತ್ರಗಳನ್ನು ಹಂಚಿಕೊಂಡಿದ್ದು ನಮಗೆ ಲಭ್ಯವಾಗಿವೆ. ಫೋಟೊದಲ್ಲಿ, ನಟ ಸಲ್ಮಾನ್ ಖಾನ್ ತನ್ನ ಸಹೋದರಿ ಅರ್ಪಿತಾ ಖಾನ್ ಜೊತೆ ಪೋಸ್ ನೀಡಿದ್ದು, ವೈರಲ್ ಫೋಟೋದಲ್ಲಿ ಕಂಡುಬರುವಂತೆ ಅದೇ ಹಿನ್ನೆಲೆಯಲ್ಲಿ ಮತ್ತು ಉಡುಪಿನಲ್ಲಿ ಕಾಣಿಸಿಕೊಂಡಿದ್ದಾರೆ. 

ಜುಲೈ 12 ರಂದು ಮುಕೇಶ್ ಅಂಬಾನಿ ಮಗ ಅಂನತ್ ಅಂಬಾನಿ ಮದುವೆಗೆ ಬಾಲಿವುಡ್ ನಟರು ಆಗಮಿಸುವ ಮಾಧ್ಯಮದ ತುಣುಕುಗಳು ಲಭ್ಯವಾಗಿದೆ. ವಿವಿಧ ಮಾಧ್ಯಮಗಳು ಹಂಚಿಕೊಂಡ ಹಲವಾರು ವಿಡಿಯೋಗಳಲ್ಲಿ ಸಲ್ಮಾನ್ ಖಾನ್ ಸಹೋದರಿ ಅರ್ಪಿತಾ ಖಾನ್ ಅವರೊಂದಿಗೆ ಸ್ಥಳಕ್ಕೆ ಆಗಮಿಸುತ್ತಿರುವುದನ್ನು ತೋರಿಸಿದೆ. ಮತ್ತೊಂದೆಡೆ ಐಶ್ವರ್ಯಾ ರೈ ಬಚ್ಚನ್ ತಮ್ಮ ಮಗಳು ಆರಾಧ್ಯ ಜೊತೆ ಫೋಟೋಗಳಿಗೆ ಪೋಸ್ ಕೊಟ್ಟಿದ್ದಾರೆ. ಈ ಸಮಯದಲ್ಲಿ ಸಲ್ಮಾನ್ ಮತ್ತು ಐಶ್ವರ್ಯಾ ಒಟ್ಟಿಗೆ ಇರುವ ಯಾವ ಚಿತ್ರವನ್ನು ಮಾಧ್ಯಮಗಳು ಹಂಚಿಕೊಂಡಿಲ್ಲ ಎಂಬುದು ಸ್ಪಷ್ಟವಾಗಿದೆ.

ವಾಸ್ತವವಾಗಿ, ನಟ ಸಲ್ಮಾನ್ ಖಾನ್ ಮತ್ತು ಐಶ್ವರ್ಯಾ ರೈ ಇಬ್ಬರೂ ಮದುವೆ ಸಮಾರಂಭದಲ್ಲಿ ಭಾಗವಹಿಸಿದ್ದು ನಿಜ, ಆದರೆ ಇಬ್ಬರು ಜೊತೆಯಾಗಿ ನಿಂತು ಫೋಟೊಗೆ ಪೋಸ್‌ ನೀಡಿದ್ದಾರೆ ಎಂಬುದು ಸುಳ್ಳು, ಎರಡು ಬೇರೆ ಬೇರೆ ಚಿತ್ರವನ್ನು ಎಡಿಟ್‌ ಮಾಡಿ ಸಲ್ಮಾನ್ ಖಾನ್ ಮತ್ತು ಐಶ್ವರ್ಯಾ ರೈ ಒಟ್ಟಿಗೆ ಫೋಸ್ ನೀಡಿರುವಂತೆ ರಚಿಸಲಾಗಿದೆ.

 

ಈಗ ಕೃತಕ ಬುದ್ಧಿಮತ್ತೆಯ(AI) ಜಗತ್ತಿನಲ್ಲಿ ವಾಸಿಸುತ್ತಿದ್ದೇವೆ ಮತ್ತು ಸಲ್ಮಾನ್ ಖಾನ್ ಐಶ್ವರ್ಯಾ ರೈ ಅವರೊಂದಿಗೆ ಪೋಸ್ ನೀಡುತ್ತಿರುವ ಈ ಚಿತ್ರದಂತೆಯೇ ನಾವು ನೋಡುವ ಎಲ್ಲವೂ ನಿಜವಲ್ಲ. ಈ ಚಿತ್ರವು ಕಾಡ್ಗಿಚ್ಚಿನಂತೆ ವೈರಲ್ ಆಗುತ್ತಿದೆ ಮತ್ತು ಇದು ‘ಹಮ್ ದಿಲ್ ದೇ ಚುಕೇ ಸನಮ್ 2’ ಕೇಳುವ ಅನೇಕರನ್ನು ಗೊಂದಲಕ್ಕೀಡು ಮಾಡಿದೆ. ಒಬ್ಬ ಅಭಿಮಾನಿ “ಹಮ್ ದಿಲ್ ದೇ ಚುಕೆ ಸನಮ್ 2 ಗಾಗಿ ಸಲ್ಮಾನ್ ಖಾನ್ ಮತ್ತು ಐಶ್ವರ್ಯಾ ರೈ ಒಟ್ಟಿಗೆ” ಎಂದು ಬರೆದಿದ್ದಾರೆ. “AI ನಿಜವಾಗಿಯೂ ಅಪಾಯಕಾರಿ” ಎಂದು ಜಾಗೃತ ಅಭಿಮಾನಿಯೊಬ್ಬರು ಕಾಮೆಂಟ್ ಮಾಡಿದ್ದಾರೆ.

ಸಲ್ಮಾನ್ ಖಾನ್ ತಮ್ಮ ಸಹೋದರಿ ಅರ್ಪಿತಾ ಅವರೊಂದಿಗೆ ಕ್ಯಾಮೆರಾಗೆ ಪೋಸ್ ನೀಡಿದರೆ, ಐಶ್ವರ್ಯಾ ರೈ ತಮ್ಮ ಮಗಳು ಆರಾಧ್ಯ ಅವರೊಂದಿಗೆ ಫೋಟೊದಲ್ಲಿ ಇರುವುದನ್ನು ಕಾಣಬಹುದು.  ಈ ಎರಡು ಬೇರೆ ಬೇರೆ ಚಿತ್ರವನ್ನು ಜೋಡಿಸಿ ಎಡಿಟ್ ಮಾಡಿ ತಪ್ಪಾಗಿ ಹಂಚಿಕೊಳ್ಳಲಾಗಿದೆ. 

ಇದನ್ನೂ ಓದಿ : FACT CHECK : ನಿರ್ಮಲಾ ಸೀತಾರಾಮನ್ ಕಚೇರಿಗೆ ಹೋಗಲು ದೆಹಲಿ ಮೆಟ್ರೋ ಬಳಸುತ್ತಾರೆ ಎಂಬುವುದು ನಿಜವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...