Homeಫ್ಯಾಕ್ಟ್‌ಚೆಕ್FACT CHECK : ಅನಂತ್, ರಾಧಿಕಾ ಮದುವೆಯಲ್ಲಿ ಸಲ್ಮಾನ್ ಖಾನ್- ಐಶ್ವರ್ಯಾ ರೈ ಜೊತೆ ಫೋಟೋ?...

FACT CHECK : ಅನಂತ್, ರಾಧಿಕಾ ಮದುವೆಯಲ್ಲಿ ಸಲ್ಮಾನ್ ಖಾನ್- ಐಶ್ವರ್ಯಾ ರೈ ಜೊತೆ ಫೋಟೋ? ಅಸಲಿಯತ್ತೇನು?

- Advertisement -
- Advertisement -

ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಕೇಶ್ ಅಂಬಾನಿ ಹಾಗೂ ರಿಲಯನ್ಸ್ ಫೌಂಡೇಷನ್  ಅಧ್ಯಕ್ಷೆ ನೀತಾ ಅಂಬಾನಿ ದಂಪತಿಯ ಕಿರಿಯ ಮಗ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್  ಅವರ ವಿವಾಹವು ಶುಕ್ರವಾರ ಅದ್ಧೂರಿಯಾಗಿ ನಡೆಯಿತು. ದೇಶ, ವಿದೇಶಗಳಿಂದ ಬಂದಿದ್ದ ಸಾವಿರಾರು ಸಂಖ್ಯೆಯ ಅತಿಥಿಗಳು ಮದುವೆ ಸಮಾರಂಭದಲ್ಲಿ ಭಾಗಿಯಾಗಿದ್ದರು. ರಾಜಕೀಯ ಕ್ಷೇತ್ರದ ಹಲವು ಗಣ್ಯರು, ಸಿನಿ ತಾರೆಯರು ನವ ದಂಪತಿಗೆ ಶುಭ ಕೋರಿದ್ದಾರೆ.

ರಾಧಿಕಾ ಮರ್ಚೆಂಟ್ ಮತ್ತು ಅನಂತ್ ಅಂಬಾನಿ ಅವರ ವಿವಾಹ ಸಮಾರಂಭದಲ್ಲಿ ಸೆಲೆಬ್ರಿಟಿಗಳು ಒಟ್ಟಿಗೆ ಪೋಸ್ ನೀಡುತ್ತಿರುವ ಹಲವಾರು ಫೋಟೋಗಳು ಮತ್ತು ವಿಡಿಯೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿವೆ. ಆದರೆ ನೆಟ್ಟಿಗರನ್ನು ಸ್ಕ್ರೋಲಿಂಗ್ ಮಾಡುವುದನ್ನು ನಿಲ್ಲಿಸುವಂತೆ ಮಾಡಿದ ಒಂದು ಚಿತ್ರವೆಂದರೆ ಐಶ್ವರ್ಯಾ ರೈ ಮತ್ತು ಸಲ್ಮಾನ್ ಖಾನ್ ಒಟ್ಟಿಗೆ ಪೋಸ್ ನೀಡಿರುವ ಫೋಟೊ.

ಐಶ್ವರ್ಯಾ ಮತ್ತು ಸಲ್ಮಾನ್ ಒಟ್ಟಿಗೆ ಪೋಸ್ ನೀಡಿರುವ ಫೋಟೋವನ್ನು ಹಂಚಿಕೊಂಡ ವ್ಯಕ್ತಿಯೊಬ್ಬರು ಹೀಗೆ ಬರೆದಿದ್ದಾರೆ, “ಐಶ್ವರ್ಯಾ ಬಚ್ಚನ್ ಕುಟುಂಬದವರೊಂದಿಗೆ ಬಂದಿಲ್ಲ, ಮತ್ತು ಈಗ ಅವರು ಸಲ್ಮಾನ್ ಭಾಯ್ ಅವರೊಂದಿಗೆ ಪೋಸ್‌ ನೀಡುವ ಮೂಲಕ ಹುಚ್ಚುತನ ಮೆರೆದಿದ್ದಾರೆ. ಎಂಬ ಹೇಳಿಕೆಯನ್ನು ಸೇರಿಸಿದ್ದಾರೆ. 

ಆದರೆ ಐಶ್ವರ್ಯಾ ಮತ್ತು ಸಲ್ಮಾನ್ ಒಟ್ಟಿಗೆ ಪೋಸ್ ನೀಡಿರುವ ಬಗ್ಗೆ ಹಲವರು ಅನುಮಾನ ವ್ಯಕ್ತಪಡಿಸಿದ್ದು ಈ ವೈರಲ್ ಚಿತ್ರ ಎಡಿಟೆಡ್ ಎಂದು ಪ್ರತಿಕ್ರಿಯಿಸಿದ್ದಾರೆ. ಹಾಗಿದ್ದರೆ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್  ಅವರ ಮದುವೆ ಪೋಟೊಗಳಲ್ಲಿ ಹೆಚ್ಚು ವೈರಲ್ ಆಗುತ್ತಿರುವ ಐಶ್ವರ್ಯಾ ಮತ್ತು ಸಲ್ಮಾನ್ ಒಟ್ಟಿಗೆ ಪೋಸ್ ನೀಡಿರುವ ಫೋಟೊದ ನೈಜತೆಯನ್ನು ಪರಿಶೀಲಿಸಲು ಗೂಗಲ್ ಸರ್ಚ್ ಮಾಡಿದಾಗ,  ಜೂಮ್ ಟಿವಿ ಹಂಚಿಕೊಂಡಿರುವ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ಮದುವೆಯ ಸಂದರ್ಭದಲ್ಲಿ ಸಲ್ಮಾನ್ ಖಾನ್ ಚಿತ್ರಗಳನ್ನು ಹಂಚಿಕೊಂಡಿದ್ದು ನಮಗೆ ಲಭ್ಯವಾಗಿವೆ. ಫೋಟೊದಲ್ಲಿ, ನಟ ಸಲ್ಮಾನ್ ಖಾನ್ ತನ್ನ ಸಹೋದರಿ ಅರ್ಪಿತಾ ಖಾನ್ ಜೊತೆ ಪೋಸ್ ನೀಡಿದ್ದು, ವೈರಲ್ ಫೋಟೋದಲ್ಲಿ ಕಂಡುಬರುವಂತೆ ಅದೇ ಹಿನ್ನೆಲೆಯಲ್ಲಿ ಮತ್ತು ಉಡುಪಿನಲ್ಲಿ ಕಾಣಿಸಿಕೊಂಡಿದ್ದಾರೆ. 

ಜುಲೈ 12 ರಂದು ಮುಕೇಶ್ ಅಂಬಾನಿ ಮಗ ಅಂನತ್ ಅಂಬಾನಿ ಮದುವೆಗೆ ಬಾಲಿವುಡ್ ನಟರು ಆಗಮಿಸುವ ಮಾಧ್ಯಮದ ತುಣುಕುಗಳು ಲಭ್ಯವಾಗಿದೆ. ವಿವಿಧ ಮಾಧ್ಯಮಗಳು ಹಂಚಿಕೊಂಡ ಹಲವಾರು ವಿಡಿಯೋಗಳಲ್ಲಿ ಸಲ್ಮಾನ್ ಖಾನ್ ಸಹೋದರಿ ಅರ್ಪಿತಾ ಖಾನ್ ಅವರೊಂದಿಗೆ ಸ್ಥಳಕ್ಕೆ ಆಗಮಿಸುತ್ತಿರುವುದನ್ನು ತೋರಿಸಿದೆ. ಮತ್ತೊಂದೆಡೆ ಐಶ್ವರ್ಯಾ ರೈ ಬಚ್ಚನ್ ತಮ್ಮ ಮಗಳು ಆರಾಧ್ಯ ಜೊತೆ ಫೋಟೋಗಳಿಗೆ ಪೋಸ್ ಕೊಟ್ಟಿದ್ದಾರೆ. ಈ ಸಮಯದಲ್ಲಿ ಸಲ್ಮಾನ್ ಮತ್ತು ಐಶ್ವರ್ಯಾ ಒಟ್ಟಿಗೆ ಇರುವ ಯಾವ ಚಿತ್ರವನ್ನು ಮಾಧ್ಯಮಗಳು ಹಂಚಿಕೊಂಡಿಲ್ಲ ಎಂಬುದು ಸ್ಪಷ್ಟವಾಗಿದೆ.

ವಾಸ್ತವವಾಗಿ, ನಟ ಸಲ್ಮಾನ್ ಖಾನ್ ಮತ್ತು ಐಶ್ವರ್ಯಾ ರೈ ಇಬ್ಬರೂ ಮದುವೆ ಸಮಾರಂಭದಲ್ಲಿ ಭಾಗವಹಿಸಿದ್ದು ನಿಜ, ಆದರೆ ಇಬ್ಬರು ಜೊತೆಯಾಗಿ ನಿಂತು ಫೋಟೊಗೆ ಪೋಸ್‌ ನೀಡಿದ್ದಾರೆ ಎಂಬುದು ಸುಳ್ಳು, ಎರಡು ಬೇರೆ ಬೇರೆ ಚಿತ್ರವನ್ನು ಎಡಿಟ್‌ ಮಾಡಿ ಸಲ್ಮಾನ್ ಖಾನ್ ಮತ್ತು ಐಶ್ವರ್ಯಾ ರೈ ಒಟ್ಟಿಗೆ ಫೋಸ್ ನೀಡಿರುವಂತೆ ರಚಿಸಲಾಗಿದೆ.

 

ಈಗ ಕೃತಕ ಬುದ್ಧಿಮತ್ತೆಯ(AI) ಜಗತ್ತಿನಲ್ಲಿ ವಾಸಿಸುತ್ತಿದ್ದೇವೆ ಮತ್ತು ಸಲ್ಮಾನ್ ಖಾನ್ ಐಶ್ವರ್ಯಾ ರೈ ಅವರೊಂದಿಗೆ ಪೋಸ್ ನೀಡುತ್ತಿರುವ ಈ ಚಿತ್ರದಂತೆಯೇ ನಾವು ನೋಡುವ ಎಲ್ಲವೂ ನಿಜವಲ್ಲ. ಈ ಚಿತ್ರವು ಕಾಡ್ಗಿಚ್ಚಿನಂತೆ ವೈರಲ್ ಆಗುತ್ತಿದೆ ಮತ್ತು ಇದು ‘ಹಮ್ ದಿಲ್ ದೇ ಚುಕೇ ಸನಮ್ 2’ ಕೇಳುವ ಅನೇಕರನ್ನು ಗೊಂದಲಕ್ಕೀಡು ಮಾಡಿದೆ. ಒಬ್ಬ ಅಭಿಮಾನಿ “ಹಮ್ ದಿಲ್ ದೇ ಚುಕೆ ಸನಮ್ 2 ಗಾಗಿ ಸಲ್ಮಾನ್ ಖಾನ್ ಮತ್ತು ಐಶ್ವರ್ಯಾ ರೈ ಒಟ್ಟಿಗೆ” ಎಂದು ಬರೆದಿದ್ದಾರೆ. “AI ನಿಜವಾಗಿಯೂ ಅಪಾಯಕಾರಿ” ಎಂದು ಜಾಗೃತ ಅಭಿಮಾನಿಯೊಬ್ಬರು ಕಾಮೆಂಟ್ ಮಾಡಿದ್ದಾರೆ.

ಸಲ್ಮಾನ್ ಖಾನ್ ತಮ್ಮ ಸಹೋದರಿ ಅರ್ಪಿತಾ ಅವರೊಂದಿಗೆ ಕ್ಯಾಮೆರಾಗೆ ಪೋಸ್ ನೀಡಿದರೆ, ಐಶ್ವರ್ಯಾ ರೈ ತಮ್ಮ ಮಗಳು ಆರಾಧ್ಯ ಅವರೊಂದಿಗೆ ಫೋಟೊದಲ್ಲಿ ಇರುವುದನ್ನು ಕಾಣಬಹುದು.  ಈ ಎರಡು ಬೇರೆ ಬೇರೆ ಚಿತ್ರವನ್ನು ಜೋಡಿಸಿ ಎಡಿಟ್ ಮಾಡಿ ತಪ್ಪಾಗಿ ಹಂಚಿಕೊಳ್ಳಲಾಗಿದೆ. 

ಇದನ್ನೂ ಓದಿ : FACT CHECK : ನಿರ್ಮಲಾ ಸೀತಾರಾಮನ್ ಕಚೇರಿಗೆ ಹೋಗಲು ದೆಹಲಿ ಮೆಟ್ರೋ ಬಳಸುತ್ತಾರೆ ಎಂಬುವುದು ನಿಜವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...