Homeಫ್ಯಾಕ್ಟ್‌ಚೆಕ್FACT CHECK : ಕ್ರೈಸ್ತರಿಂದ ಭಾರತಕ್ಕೆ ಭಾನುವಾರ ರಜಾ ದಿನ ಬಂತು ಎಂಬ ಪ್ರಧಾನಿ ಮೋದಿ...

FACT CHECK : ಕ್ರೈಸ್ತರಿಂದ ಭಾರತಕ್ಕೆ ಭಾನುವಾರ ರಜಾ ದಿನ ಬಂತು ಎಂಬ ಪ್ರಧಾನಿ ಮೋದಿ ಹೇಳಿಕೆ ಸುಳ್ಳು

- Advertisement -
- Advertisement -

ಮೇ 28ರಂದು ಜಾರ್ಖಂಡ್‌ನ ದುಮ್ಕಾದಲ್ಲಿ ಚುನಾವಣಾ ಭಾಷಣ ಮಾಡಿದ ಪ್ರಧಾನಿ ನರೇಂದ್ರ ಮೋದಿ, “ನಮ್ಮ ದೇಶದಲ್ಲಿ ಭಾನುವಾರ ವಾರದ ರಜೆ ಇದೆ. ಬ್ರಿಟಿಷರು ಇಲ್ಲಿ ಆಳ್ವಿಕೆ ನಡೆಸುತ್ತಿದ್ದಾಗ ಕ್ರಿಶ್ಚಿಯನ್ ಸಮುದಾಯದವರು ರಜಾದಿನವನ್ನು ಹೊಂದಿದ್ದರು. ಈ ಸಂಪ್ರದಾಯ ಅಂದಿನಿಂದ ಪ್ರಾರಂಭವಾಯಿತು. ಭಾನುವಾರದ ರಜೆಗೂ ಹಿಂದೂಗಳಿಗೂ ಸಂಬಂಧವಿಲ್ಲ. ಕಳೆದ 200-300 ವರ್ಷಗಳಿಂದ ಇದು ಚಾಲ್ತಿಯಲ್ಲಿದೆ. ಈಗ ಜಾರ್ಖಂಡ್‌ನ ಒಂದು ಜಿಲ್ಲೆಯಲ್ಲಿ ಭಾನುವಾರದ ಬದಲು, ಶುಕ್ರವಾರ ಅಧಿಕೃತ ರಜೆ ನೀಡಲಾಗುತ್ತಿದೆ” ಎಂದು ಹೇಳಿದ್ದರು.

ಪ್ರಧಾನಿ ಮೋದಿಯವರ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ ಅಪ್ಲೋಡ್ ಮಾಡಲಾದ ಭಾಷಣದ ವಿಡಿಯೋದಲ್ಲಿ 34 ನಿಮಿಷ 55 ಸೆಕೆಂಡ್‌ನಿಂದ ಮೇಲಿನ ಮಾತುಗಳನ್ನು ಆಲಿಸಬಹುದು.

ಫ್ಯಾಕ್ಟ್‌ಚೆಕ್ : ಪ್ರಧಾನಿ ಮೋದಿ ತನ್ನ ಭಾಷಣದಲ್ಲಿ ಹೇಳಿರುವುದು ಸುಳ್ಳು. ಭಾರತದಲ್ಲಿ ಸಮಾಜ ಸುಧಾರಕ, ಹೋರಾಟಗಾರ ನಾರಾಯಣ್ ಮೇಘಾಜಿ ಲೋಖಂಡೆ ಅವರ ಪ್ರಯತ್ನದ ಫಲವಾಗಿ ಮೊದಲ ‘ಬಾಂಬೆ ಮಿಲ್ ಹ್ಯಾಂಡ್ಸ್ ಅಸೋಸಿಯೇಷನ್‘ ​​1890ರಲ್ಲಿ ಎಲ್ಲಾ ಕಾರ್ಮಿಕರಿಗೆ ಭಾನುವಾರದ ರಜಾದಿನವನ್ನು ಘೋಷಿಸಿತು.

ಭಾರತದಲ್ಲಿದ್ದ ಬ್ರಿಟಿಷರು ಚರ್ಚ್‌ಗೆ ತೆರಳಲು ಮತ್ತು ವಾರಾಂತ್ಯದಲ್ಲಿ ಬಿಡುವು ಮಾಡಿಕೊಳ್ಳಲು ಭಾನುವಾರದ ದಿನ ರಜೆಯನ್ನು ಹೊಂದಿದ್ದರು. ಆದರೆ, ಭಾರತದ ಕಾರ್ಮಿಕರಿಗೆ ಮಾತ್ರ ಯಾವುದೇ ರೀತಿಯ ವಾರದ ರಜೆ ಇರಲಿಲ್ಲ. ಭಾರತದ ಕಾರ್ಮಿಕರು ವಾರದ 7 ದಿನವೂ ಕೂಡ ದುಡಿಯಲೇ ಬೇಕಾಗಿತ್ತು. ಹೀಗಾಗಿ, ಮೊದಲು ಮುಂಬೈನ ಹತ್ತಿ ಗಿರಣಿಯಲ್ಲಿ ಕೆಲಸ ಮಾಡುತ್ತಿದ್ದ ನಾರಾಯಣ್ ಮೇಘಾಜಿ ಲೋಖಂಡೆ ಅವರು 1880ರಲ್ಲಿ ತಮ್ಮ ಕೆಲಸವನ್ನು ತೊರೆದಿದ್ದರು.

ಬಳಿಕ ಮರಾಠಿಯ ದೀನ ಬಂಧು ಪತ್ರಿಕೆಯ ಕಾರ್ಯನಿರ್ವಹಣೆಯನ್ನು ನೋಡಿಕೊಂಡಿದ್ದ ಅವರು, ದೇಶದ ಕಾರ್ಮಿಕರ ಸಮಸ್ಯೆಯನ್ನು ಬಗೆಹರಿಸಲು ‘ಬಾಂಬೆ ಮಿಲ್ ಹ್ಯಾಂಡ್ಸ್ ಅಸೋಸಿಯೇಷನ್’ ​​ಎಂದು ಕರೆಯಲ್ಪಡುವ ಭಾರತದಲ್ಲಿ ಮೊದಲ ಕಾರ್ಮಿಕ ಸಂಘವನ್ನು ಪ್ರಾರಂಭಿಸಿದರು. ಈ ಸಂಘಟನೆಯ ಮೂಲಕ ಭಾನುವಾರ ಭಾರತದ ಕಾರ್ಮಿಕರಿಗೆ ರಜೆ ಘೋಷಣೆ ಮಾಡಲು ಹೆಚ್ಚು ಪ್ರಚಾರ ಮಾಡಲಾಯಿತು.

ಜೂನ್‌ 10,1890ರಲ್ಲಿ ಬಾಂಬೆಯ ರೇಸ್ ಕೋರ್ಸ್ ಮೈದಾನದಲ್ಲಿ 10 ಸಾವಿರ ಕಾರ್ಮಿಕರು ಪ್ರತಿಭಟನೆ ನಡೆಸಿ ಮುಷ್ಕರವನ್ನು ಘೋಷಿಸಿದ ನಂತರ, ಗಿರಣಿ ಮಾಲೀಕರ ಸಂಘವು ಅಂತಿಮವಾಗಿ ಶರಣಾಯಿತು ಮತ್ತು 1890 ರಲ್ಲಿ ಕಾರ್ಮಿಕರಿಗೆ ಭಾನುವಾರ ರಜಾದಿನವನ್ನು ಘೋಷಿಸಿತು.

ಮಹಾರಾಷ್ಟ್ರದ ಪುಣೆ ಜಿಲ್ಲೆಯಲ್ಲಿ ಜನಿಸಿದ ಸಮಾಜ ಸುಧಾರಕ ಮತ್ತು ಹೋರಾಟಗಾರ ಲೋಖಂಡೆ ಅವರು ‘ಭಾರತದ ಟ್ರೇಡ್ ಯೂನಿಯನ್ ಚಳವಳಿಯ ಪಿತಾಮಹ’ ಎಂದು ಪ್ರಶಂಸಿಸಲ್ಪಟ್ಟರು.

1997ರಲ್ಲಿ ಪ್ರಕಟವಾದ ನಳಿನಿ ಪಂಡಿತ್ ಅವರ ‘ನಾರಾಯಣ ಮೇಘಾಜಿ ಲೋಖಂಡೆ: ದಿ ಫಾದರ್ ಆಫ್ ಟ್ರೇಡ್ ಯೂನಿಯನ್ ಮೂವ್ಮೆಂಟ್ ಇನ್ ಇಂಡಿಯಾ’ ಎಂಬ ಜರ್ನಲ್ ಲೇಖನದಲ್ಲಿ ಈ ಕುರಿತು ಮಾಹಿತಿಯಿದೆ.

ಲೇಖನದ ಲಿಂಕ್ ಇಲ್ಲಿದೆ

ಲೋಖಂಡೆಯವರ ಪ್ರಯತ್ನದಿಂದ ಭಾನುವಾರದ ರಜೆ ಮಾತ್ರವಲ್ಲದೆ, ಕಾರ್ಮಿಕ ವಲಯದಲ್ಲಿ ಇತರ ಹಲವು ಬದಲಾವಣೆಯೂ ಅಯಿತು. ಅವುಗಳು ಹೀಗಿವೆ…

  • ಗಿರಣಿ ಕಾರ್ಮಿಕರಿಗೆ ಭಾನುವಾರ ವಾರದ ರಜೆ
  • ಕೆಲಸಗಾರರಿಗೆ ಮಧ್ಯಾಹ್ನದ ಅರ್ಧ ಗಂಟೆಯ ವಿರಾಮ
  • ಬೆಳಿಗ್ಗೆ 6:30ಕ್ಕೆ ಕೆಲಸ ಪ್ರಾರಂಭಿಸಿ, ಸೂರ್ಯಾಸ್ತದ ಹೊತ್ತಿಗೆ ಕೊನೆಗೊಳಿಸುವುದು
  • ಕಾರ್ಮಿಕರಿಗೆ ಪ್ರತಿ ತಿಂಗಳು 15ನೇ ತಾರೀಖಿನೊಳಗೆ ವೇತನ ನೀಡುವುದು

‘ಎನ್‌.ಎಂ ಲೋಖಂಡೆ ಮಹಾರಾಷ್ಟ್ರ ಇನ್‌ಸ್ಟಿಟ್ಯೂಟ್ ಆಫ್ ಲೇಬರ್ ಸ್ಟಡೀಸ್’ ಅನ್ನು 7 ಜುಲೈ 1947 ರಂದು ಭಾರತದ ಮಾಜಿ ಹಂಗಾಮಿ ಪ್ರಧಾನ ಮಂತ್ರಿ ಮತ್ತು ಬಾಂಬೆ ಪ್ರಾಂತ್ಯದ ಕಾರ್ಮಿಕ ಸಚಿವ ಗುಲ್ಜಾರಿಲಾಲ್ ನಂದಾ ಅವರು ಸ್ಥಾಪಿಸಿದರು.

ಈ ಕಾಲೇಜಿನ ಅಧಿಕೃತ ವೆಬ್‌ಸೈಟ್ ಕೂಡ 1890 ರಲ್ಲಿ ಭಾನುವಾರವನ್ನು ರಜಾದಿನವಾಗಿ ಘೋಷಿಸಿದ ಬಗ್ಗೆ ಮಾಹಿತಿಯನ್ನು ನೀಡುತ್ತದೆ.

ಇದನ್ನೂ ಓದಿ : FACT CHECK : ರಾಹುಲ್ ಗಾಂಧಿಯ ಹಿಂಬದಿ ಇರುವ ಫೋಟೋ ಕ್ರೈಸ್ತ ಧರ್ಮಕ್ಕೆ ಸಂಬಂಧಿಸಿದ್ದಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...