Homeಫ್ಯಾಕ್ಟ್‌ಚೆಕ್FACT CHECK : ಕ್ರೈಸ್ತರಿಂದ ಭಾರತಕ್ಕೆ ಭಾನುವಾರ ರಜಾ ದಿನ ಬಂತು ಎಂಬ ಪ್ರಧಾನಿ ಮೋದಿ...

FACT CHECK : ಕ್ರೈಸ್ತರಿಂದ ಭಾರತಕ್ಕೆ ಭಾನುವಾರ ರಜಾ ದಿನ ಬಂತು ಎಂಬ ಪ್ರಧಾನಿ ಮೋದಿ ಹೇಳಿಕೆ ಸುಳ್ಳು

- Advertisement -
- Advertisement -

ಮೇ 28ರಂದು ಜಾರ್ಖಂಡ್‌ನ ದುಮ್ಕಾದಲ್ಲಿ ಚುನಾವಣಾ ಭಾಷಣ ಮಾಡಿದ ಪ್ರಧಾನಿ ನರೇಂದ್ರ ಮೋದಿ, “ನಮ್ಮ ದೇಶದಲ್ಲಿ ಭಾನುವಾರ ವಾರದ ರಜೆ ಇದೆ. ಬ್ರಿಟಿಷರು ಇಲ್ಲಿ ಆಳ್ವಿಕೆ ನಡೆಸುತ್ತಿದ್ದಾಗ ಕ್ರಿಶ್ಚಿಯನ್ ಸಮುದಾಯದವರು ರಜಾದಿನವನ್ನು ಹೊಂದಿದ್ದರು. ಈ ಸಂಪ್ರದಾಯ ಅಂದಿನಿಂದ ಪ್ರಾರಂಭವಾಯಿತು. ಭಾನುವಾರದ ರಜೆಗೂ ಹಿಂದೂಗಳಿಗೂ ಸಂಬಂಧವಿಲ್ಲ. ಕಳೆದ 200-300 ವರ್ಷಗಳಿಂದ ಇದು ಚಾಲ್ತಿಯಲ್ಲಿದೆ. ಈಗ ಜಾರ್ಖಂಡ್‌ನ ಒಂದು ಜಿಲ್ಲೆಯಲ್ಲಿ ಭಾನುವಾರದ ಬದಲು, ಶುಕ್ರವಾರ ಅಧಿಕೃತ ರಜೆ ನೀಡಲಾಗುತ್ತಿದೆ” ಎಂದು ಹೇಳಿದ್ದರು.

ಪ್ರಧಾನಿ ಮೋದಿಯವರ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ ಅಪ್ಲೋಡ್ ಮಾಡಲಾದ ಭಾಷಣದ ವಿಡಿಯೋದಲ್ಲಿ 34 ನಿಮಿಷ 55 ಸೆಕೆಂಡ್‌ನಿಂದ ಮೇಲಿನ ಮಾತುಗಳನ್ನು ಆಲಿಸಬಹುದು.

ಫ್ಯಾಕ್ಟ್‌ಚೆಕ್ : ಪ್ರಧಾನಿ ಮೋದಿ ತನ್ನ ಭಾಷಣದಲ್ಲಿ ಹೇಳಿರುವುದು ಸುಳ್ಳು. ಭಾರತದಲ್ಲಿ ಸಮಾಜ ಸುಧಾರಕ, ಹೋರಾಟಗಾರ ನಾರಾಯಣ್ ಮೇಘಾಜಿ ಲೋಖಂಡೆ ಅವರ ಪ್ರಯತ್ನದ ಫಲವಾಗಿ ಮೊದಲ ‘ಬಾಂಬೆ ಮಿಲ್ ಹ್ಯಾಂಡ್ಸ್ ಅಸೋಸಿಯೇಷನ್‘ ​​1890ರಲ್ಲಿ ಎಲ್ಲಾ ಕಾರ್ಮಿಕರಿಗೆ ಭಾನುವಾರದ ರಜಾದಿನವನ್ನು ಘೋಷಿಸಿತು.

ಭಾರತದಲ್ಲಿದ್ದ ಬ್ರಿಟಿಷರು ಚರ್ಚ್‌ಗೆ ತೆರಳಲು ಮತ್ತು ವಾರಾಂತ್ಯದಲ್ಲಿ ಬಿಡುವು ಮಾಡಿಕೊಳ್ಳಲು ಭಾನುವಾರದ ದಿನ ರಜೆಯನ್ನು ಹೊಂದಿದ್ದರು. ಆದರೆ, ಭಾರತದ ಕಾರ್ಮಿಕರಿಗೆ ಮಾತ್ರ ಯಾವುದೇ ರೀತಿಯ ವಾರದ ರಜೆ ಇರಲಿಲ್ಲ. ಭಾರತದ ಕಾರ್ಮಿಕರು ವಾರದ 7 ದಿನವೂ ಕೂಡ ದುಡಿಯಲೇ ಬೇಕಾಗಿತ್ತು. ಹೀಗಾಗಿ, ಮೊದಲು ಮುಂಬೈನ ಹತ್ತಿ ಗಿರಣಿಯಲ್ಲಿ ಕೆಲಸ ಮಾಡುತ್ತಿದ್ದ ನಾರಾಯಣ್ ಮೇಘಾಜಿ ಲೋಖಂಡೆ ಅವರು 1880ರಲ್ಲಿ ತಮ್ಮ ಕೆಲಸವನ್ನು ತೊರೆದಿದ್ದರು.

ಬಳಿಕ ಮರಾಠಿಯ ದೀನ ಬಂಧು ಪತ್ರಿಕೆಯ ಕಾರ್ಯನಿರ್ವಹಣೆಯನ್ನು ನೋಡಿಕೊಂಡಿದ್ದ ಅವರು, ದೇಶದ ಕಾರ್ಮಿಕರ ಸಮಸ್ಯೆಯನ್ನು ಬಗೆಹರಿಸಲು ‘ಬಾಂಬೆ ಮಿಲ್ ಹ್ಯಾಂಡ್ಸ್ ಅಸೋಸಿಯೇಷನ್’ ​​ಎಂದು ಕರೆಯಲ್ಪಡುವ ಭಾರತದಲ್ಲಿ ಮೊದಲ ಕಾರ್ಮಿಕ ಸಂಘವನ್ನು ಪ್ರಾರಂಭಿಸಿದರು. ಈ ಸಂಘಟನೆಯ ಮೂಲಕ ಭಾನುವಾರ ಭಾರತದ ಕಾರ್ಮಿಕರಿಗೆ ರಜೆ ಘೋಷಣೆ ಮಾಡಲು ಹೆಚ್ಚು ಪ್ರಚಾರ ಮಾಡಲಾಯಿತು.

ಜೂನ್‌ 10,1890ರಲ್ಲಿ ಬಾಂಬೆಯ ರೇಸ್ ಕೋರ್ಸ್ ಮೈದಾನದಲ್ಲಿ 10 ಸಾವಿರ ಕಾರ್ಮಿಕರು ಪ್ರತಿಭಟನೆ ನಡೆಸಿ ಮುಷ್ಕರವನ್ನು ಘೋಷಿಸಿದ ನಂತರ, ಗಿರಣಿ ಮಾಲೀಕರ ಸಂಘವು ಅಂತಿಮವಾಗಿ ಶರಣಾಯಿತು ಮತ್ತು 1890 ರಲ್ಲಿ ಕಾರ್ಮಿಕರಿಗೆ ಭಾನುವಾರ ರಜಾದಿನವನ್ನು ಘೋಷಿಸಿತು.

ಮಹಾರಾಷ್ಟ್ರದ ಪುಣೆ ಜಿಲ್ಲೆಯಲ್ಲಿ ಜನಿಸಿದ ಸಮಾಜ ಸುಧಾರಕ ಮತ್ತು ಹೋರಾಟಗಾರ ಲೋಖಂಡೆ ಅವರು ‘ಭಾರತದ ಟ್ರೇಡ್ ಯೂನಿಯನ್ ಚಳವಳಿಯ ಪಿತಾಮಹ’ ಎಂದು ಪ್ರಶಂಸಿಸಲ್ಪಟ್ಟರು.

1997ರಲ್ಲಿ ಪ್ರಕಟವಾದ ನಳಿನಿ ಪಂಡಿತ್ ಅವರ ‘ನಾರಾಯಣ ಮೇಘಾಜಿ ಲೋಖಂಡೆ: ದಿ ಫಾದರ್ ಆಫ್ ಟ್ರೇಡ್ ಯೂನಿಯನ್ ಮೂವ್ಮೆಂಟ್ ಇನ್ ಇಂಡಿಯಾ’ ಎಂಬ ಜರ್ನಲ್ ಲೇಖನದಲ್ಲಿ ಈ ಕುರಿತು ಮಾಹಿತಿಯಿದೆ.

ಲೇಖನದ ಲಿಂಕ್ ಇಲ್ಲಿದೆ

ಲೋಖಂಡೆಯವರ ಪ್ರಯತ್ನದಿಂದ ಭಾನುವಾರದ ರಜೆ ಮಾತ್ರವಲ್ಲದೆ, ಕಾರ್ಮಿಕ ವಲಯದಲ್ಲಿ ಇತರ ಹಲವು ಬದಲಾವಣೆಯೂ ಅಯಿತು. ಅವುಗಳು ಹೀಗಿವೆ…

  • ಗಿರಣಿ ಕಾರ್ಮಿಕರಿಗೆ ಭಾನುವಾರ ವಾರದ ರಜೆ
  • ಕೆಲಸಗಾರರಿಗೆ ಮಧ್ಯಾಹ್ನದ ಅರ್ಧ ಗಂಟೆಯ ವಿರಾಮ
  • ಬೆಳಿಗ್ಗೆ 6:30ಕ್ಕೆ ಕೆಲಸ ಪ್ರಾರಂಭಿಸಿ, ಸೂರ್ಯಾಸ್ತದ ಹೊತ್ತಿಗೆ ಕೊನೆಗೊಳಿಸುವುದು
  • ಕಾರ್ಮಿಕರಿಗೆ ಪ್ರತಿ ತಿಂಗಳು 15ನೇ ತಾರೀಖಿನೊಳಗೆ ವೇತನ ನೀಡುವುದು

‘ಎನ್‌.ಎಂ ಲೋಖಂಡೆ ಮಹಾರಾಷ್ಟ್ರ ಇನ್‌ಸ್ಟಿಟ್ಯೂಟ್ ಆಫ್ ಲೇಬರ್ ಸ್ಟಡೀಸ್’ ಅನ್ನು 7 ಜುಲೈ 1947 ರಂದು ಭಾರತದ ಮಾಜಿ ಹಂಗಾಮಿ ಪ್ರಧಾನ ಮಂತ್ರಿ ಮತ್ತು ಬಾಂಬೆ ಪ್ರಾಂತ್ಯದ ಕಾರ್ಮಿಕ ಸಚಿವ ಗುಲ್ಜಾರಿಲಾಲ್ ನಂದಾ ಅವರು ಸ್ಥಾಪಿಸಿದರು.

ಈ ಕಾಲೇಜಿನ ಅಧಿಕೃತ ವೆಬ್‌ಸೈಟ್ ಕೂಡ 1890 ರಲ್ಲಿ ಭಾನುವಾರವನ್ನು ರಜಾದಿನವಾಗಿ ಘೋಷಿಸಿದ ಬಗ್ಗೆ ಮಾಹಿತಿಯನ್ನು ನೀಡುತ್ತದೆ.

ಇದನ್ನೂ ಓದಿ : FACT CHECK : ರಾಹುಲ್ ಗಾಂಧಿಯ ಹಿಂಬದಿ ಇರುವ ಫೋಟೋ ಕ್ರೈಸ್ತ ಧರ್ಮಕ್ಕೆ ಸಂಬಂಧಿಸಿದ್ದಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...