Homeಫ್ಯಾಕ್ಟ್‌ಚೆಕ್FACT CHECK : ಕ್ರೈಸ್ತರಿಂದ ಭಾರತಕ್ಕೆ ಭಾನುವಾರ ರಜಾ ದಿನ ಬಂತು ಎಂಬ ಪ್ರಧಾನಿ ಮೋದಿ...

FACT CHECK : ಕ್ರೈಸ್ತರಿಂದ ಭಾರತಕ್ಕೆ ಭಾನುವಾರ ರಜಾ ದಿನ ಬಂತು ಎಂಬ ಪ್ರಧಾನಿ ಮೋದಿ ಹೇಳಿಕೆ ಸುಳ್ಳು

- Advertisement -
- Advertisement -

ಮೇ 28ರಂದು ಜಾರ್ಖಂಡ್‌ನ ದುಮ್ಕಾದಲ್ಲಿ ಚುನಾವಣಾ ಭಾಷಣ ಮಾಡಿದ ಪ್ರಧಾನಿ ನರೇಂದ್ರ ಮೋದಿ, “ನಮ್ಮ ದೇಶದಲ್ಲಿ ಭಾನುವಾರ ವಾರದ ರಜೆ ಇದೆ. ಬ್ರಿಟಿಷರು ಇಲ್ಲಿ ಆಳ್ವಿಕೆ ನಡೆಸುತ್ತಿದ್ದಾಗ ಕ್ರಿಶ್ಚಿಯನ್ ಸಮುದಾಯದವರು ರಜಾದಿನವನ್ನು ಹೊಂದಿದ್ದರು. ಈ ಸಂಪ್ರದಾಯ ಅಂದಿನಿಂದ ಪ್ರಾರಂಭವಾಯಿತು. ಭಾನುವಾರದ ರಜೆಗೂ ಹಿಂದೂಗಳಿಗೂ ಸಂಬಂಧವಿಲ್ಲ. ಕಳೆದ 200-300 ವರ್ಷಗಳಿಂದ ಇದು ಚಾಲ್ತಿಯಲ್ಲಿದೆ. ಈಗ ಜಾರ್ಖಂಡ್‌ನ ಒಂದು ಜಿಲ್ಲೆಯಲ್ಲಿ ಭಾನುವಾರದ ಬದಲು, ಶುಕ್ರವಾರ ಅಧಿಕೃತ ರಜೆ ನೀಡಲಾಗುತ್ತಿದೆ” ಎಂದು ಹೇಳಿದ್ದರು.

ಪ್ರಧಾನಿ ಮೋದಿಯವರ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ ಅಪ್ಲೋಡ್ ಮಾಡಲಾದ ಭಾಷಣದ ವಿಡಿಯೋದಲ್ಲಿ 34 ನಿಮಿಷ 55 ಸೆಕೆಂಡ್‌ನಿಂದ ಮೇಲಿನ ಮಾತುಗಳನ್ನು ಆಲಿಸಬಹುದು.

ಫ್ಯಾಕ್ಟ್‌ಚೆಕ್ : ಪ್ರಧಾನಿ ಮೋದಿ ತನ್ನ ಭಾಷಣದಲ್ಲಿ ಹೇಳಿರುವುದು ಸುಳ್ಳು. ಭಾರತದಲ್ಲಿ ಸಮಾಜ ಸುಧಾರಕ, ಹೋರಾಟಗಾರ ನಾರಾಯಣ್ ಮೇಘಾಜಿ ಲೋಖಂಡೆ ಅವರ ಪ್ರಯತ್ನದ ಫಲವಾಗಿ ಮೊದಲ ‘ಬಾಂಬೆ ಮಿಲ್ ಹ್ಯಾಂಡ್ಸ್ ಅಸೋಸಿಯೇಷನ್‘ ​​1890ರಲ್ಲಿ ಎಲ್ಲಾ ಕಾರ್ಮಿಕರಿಗೆ ಭಾನುವಾರದ ರಜಾದಿನವನ್ನು ಘೋಷಿಸಿತು.

ಭಾರತದಲ್ಲಿದ್ದ ಬ್ರಿಟಿಷರು ಚರ್ಚ್‌ಗೆ ತೆರಳಲು ಮತ್ತು ವಾರಾಂತ್ಯದಲ್ಲಿ ಬಿಡುವು ಮಾಡಿಕೊಳ್ಳಲು ಭಾನುವಾರದ ದಿನ ರಜೆಯನ್ನು ಹೊಂದಿದ್ದರು. ಆದರೆ, ಭಾರತದ ಕಾರ್ಮಿಕರಿಗೆ ಮಾತ್ರ ಯಾವುದೇ ರೀತಿಯ ವಾರದ ರಜೆ ಇರಲಿಲ್ಲ. ಭಾರತದ ಕಾರ್ಮಿಕರು ವಾರದ 7 ದಿನವೂ ಕೂಡ ದುಡಿಯಲೇ ಬೇಕಾಗಿತ್ತು. ಹೀಗಾಗಿ, ಮೊದಲು ಮುಂಬೈನ ಹತ್ತಿ ಗಿರಣಿಯಲ್ಲಿ ಕೆಲಸ ಮಾಡುತ್ತಿದ್ದ ನಾರಾಯಣ್ ಮೇಘಾಜಿ ಲೋಖಂಡೆ ಅವರು 1880ರಲ್ಲಿ ತಮ್ಮ ಕೆಲಸವನ್ನು ತೊರೆದಿದ್ದರು.

ಬಳಿಕ ಮರಾಠಿಯ ದೀನ ಬಂಧು ಪತ್ರಿಕೆಯ ಕಾರ್ಯನಿರ್ವಹಣೆಯನ್ನು ನೋಡಿಕೊಂಡಿದ್ದ ಅವರು, ದೇಶದ ಕಾರ್ಮಿಕರ ಸಮಸ್ಯೆಯನ್ನು ಬಗೆಹರಿಸಲು ‘ಬಾಂಬೆ ಮಿಲ್ ಹ್ಯಾಂಡ್ಸ್ ಅಸೋಸಿಯೇಷನ್’ ​​ಎಂದು ಕರೆಯಲ್ಪಡುವ ಭಾರತದಲ್ಲಿ ಮೊದಲ ಕಾರ್ಮಿಕ ಸಂಘವನ್ನು ಪ್ರಾರಂಭಿಸಿದರು. ಈ ಸಂಘಟನೆಯ ಮೂಲಕ ಭಾನುವಾರ ಭಾರತದ ಕಾರ್ಮಿಕರಿಗೆ ರಜೆ ಘೋಷಣೆ ಮಾಡಲು ಹೆಚ್ಚು ಪ್ರಚಾರ ಮಾಡಲಾಯಿತು.

ಜೂನ್‌ 10,1890ರಲ್ಲಿ ಬಾಂಬೆಯ ರೇಸ್ ಕೋರ್ಸ್ ಮೈದಾನದಲ್ಲಿ 10 ಸಾವಿರ ಕಾರ್ಮಿಕರು ಪ್ರತಿಭಟನೆ ನಡೆಸಿ ಮುಷ್ಕರವನ್ನು ಘೋಷಿಸಿದ ನಂತರ, ಗಿರಣಿ ಮಾಲೀಕರ ಸಂಘವು ಅಂತಿಮವಾಗಿ ಶರಣಾಯಿತು ಮತ್ತು 1890 ರಲ್ಲಿ ಕಾರ್ಮಿಕರಿಗೆ ಭಾನುವಾರ ರಜಾದಿನವನ್ನು ಘೋಷಿಸಿತು.

ಮಹಾರಾಷ್ಟ್ರದ ಪುಣೆ ಜಿಲ್ಲೆಯಲ್ಲಿ ಜನಿಸಿದ ಸಮಾಜ ಸುಧಾರಕ ಮತ್ತು ಹೋರಾಟಗಾರ ಲೋಖಂಡೆ ಅವರು ‘ಭಾರತದ ಟ್ರೇಡ್ ಯೂನಿಯನ್ ಚಳವಳಿಯ ಪಿತಾಮಹ’ ಎಂದು ಪ್ರಶಂಸಿಸಲ್ಪಟ್ಟರು.

1997ರಲ್ಲಿ ಪ್ರಕಟವಾದ ನಳಿನಿ ಪಂಡಿತ್ ಅವರ ‘ನಾರಾಯಣ ಮೇಘಾಜಿ ಲೋಖಂಡೆ: ದಿ ಫಾದರ್ ಆಫ್ ಟ್ರೇಡ್ ಯೂನಿಯನ್ ಮೂವ್ಮೆಂಟ್ ಇನ್ ಇಂಡಿಯಾ’ ಎಂಬ ಜರ್ನಲ್ ಲೇಖನದಲ್ಲಿ ಈ ಕುರಿತು ಮಾಹಿತಿಯಿದೆ.

ಲೇಖನದ ಲಿಂಕ್ ಇಲ್ಲಿದೆ

ಲೋಖಂಡೆಯವರ ಪ್ರಯತ್ನದಿಂದ ಭಾನುವಾರದ ರಜೆ ಮಾತ್ರವಲ್ಲದೆ, ಕಾರ್ಮಿಕ ವಲಯದಲ್ಲಿ ಇತರ ಹಲವು ಬದಲಾವಣೆಯೂ ಅಯಿತು. ಅವುಗಳು ಹೀಗಿವೆ…

  • ಗಿರಣಿ ಕಾರ್ಮಿಕರಿಗೆ ಭಾನುವಾರ ವಾರದ ರಜೆ
  • ಕೆಲಸಗಾರರಿಗೆ ಮಧ್ಯಾಹ್ನದ ಅರ್ಧ ಗಂಟೆಯ ವಿರಾಮ
  • ಬೆಳಿಗ್ಗೆ 6:30ಕ್ಕೆ ಕೆಲಸ ಪ್ರಾರಂಭಿಸಿ, ಸೂರ್ಯಾಸ್ತದ ಹೊತ್ತಿಗೆ ಕೊನೆಗೊಳಿಸುವುದು
  • ಕಾರ್ಮಿಕರಿಗೆ ಪ್ರತಿ ತಿಂಗಳು 15ನೇ ತಾರೀಖಿನೊಳಗೆ ವೇತನ ನೀಡುವುದು

‘ಎನ್‌.ಎಂ ಲೋಖಂಡೆ ಮಹಾರಾಷ್ಟ್ರ ಇನ್‌ಸ್ಟಿಟ್ಯೂಟ್ ಆಫ್ ಲೇಬರ್ ಸ್ಟಡೀಸ್’ ಅನ್ನು 7 ಜುಲೈ 1947 ರಂದು ಭಾರತದ ಮಾಜಿ ಹಂಗಾಮಿ ಪ್ರಧಾನ ಮಂತ್ರಿ ಮತ್ತು ಬಾಂಬೆ ಪ್ರಾಂತ್ಯದ ಕಾರ್ಮಿಕ ಸಚಿವ ಗುಲ್ಜಾರಿಲಾಲ್ ನಂದಾ ಅವರು ಸ್ಥಾಪಿಸಿದರು.

ಈ ಕಾಲೇಜಿನ ಅಧಿಕೃತ ವೆಬ್‌ಸೈಟ್ ಕೂಡ 1890 ರಲ್ಲಿ ಭಾನುವಾರವನ್ನು ರಜಾದಿನವಾಗಿ ಘೋಷಿಸಿದ ಬಗ್ಗೆ ಮಾಹಿತಿಯನ್ನು ನೀಡುತ್ತದೆ.

ಇದನ್ನೂ ಓದಿ : FACT CHECK : ರಾಹುಲ್ ಗಾಂಧಿಯ ಹಿಂಬದಿ ಇರುವ ಫೋಟೋ ಕ್ರೈಸ್ತ ಧರ್ಮಕ್ಕೆ ಸಂಬಂಧಿಸಿದ್ದಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...