Homeಫ್ಯಾಕ್ಟ್‌ಚೆಕ್FACT CHECK : ಕ್ರೈಸ್ತರಿಂದ ಭಾರತಕ್ಕೆ ಭಾನುವಾರ ರಜಾ ದಿನ ಬಂತು ಎಂಬ ಪ್ರಧಾನಿ ಮೋದಿ...

FACT CHECK : ಕ್ರೈಸ್ತರಿಂದ ಭಾರತಕ್ಕೆ ಭಾನುವಾರ ರಜಾ ದಿನ ಬಂತು ಎಂಬ ಪ್ರಧಾನಿ ಮೋದಿ ಹೇಳಿಕೆ ಸುಳ್ಳು

- Advertisement -
- Advertisement -

ಮೇ 28ರಂದು ಜಾರ್ಖಂಡ್‌ನ ದುಮ್ಕಾದಲ್ಲಿ ಚುನಾವಣಾ ಭಾಷಣ ಮಾಡಿದ ಪ್ರಧಾನಿ ನರೇಂದ್ರ ಮೋದಿ, “ನಮ್ಮ ದೇಶದಲ್ಲಿ ಭಾನುವಾರ ವಾರದ ರಜೆ ಇದೆ. ಬ್ರಿಟಿಷರು ಇಲ್ಲಿ ಆಳ್ವಿಕೆ ನಡೆಸುತ್ತಿದ್ದಾಗ ಕ್ರಿಶ್ಚಿಯನ್ ಸಮುದಾಯದವರು ರಜಾದಿನವನ್ನು ಹೊಂದಿದ್ದರು. ಈ ಸಂಪ್ರದಾಯ ಅಂದಿನಿಂದ ಪ್ರಾರಂಭವಾಯಿತು. ಭಾನುವಾರದ ರಜೆಗೂ ಹಿಂದೂಗಳಿಗೂ ಸಂಬಂಧವಿಲ್ಲ. ಕಳೆದ 200-300 ವರ್ಷಗಳಿಂದ ಇದು ಚಾಲ್ತಿಯಲ್ಲಿದೆ. ಈಗ ಜಾರ್ಖಂಡ್‌ನ ಒಂದು ಜಿಲ್ಲೆಯಲ್ಲಿ ಭಾನುವಾರದ ಬದಲು, ಶುಕ್ರವಾರ ಅಧಿಕೃತ ರಜೆ ನೀಡಲಾಗುತ್ತಿದೆ” ಎಂದು ಹೇಳಿದ್ದರು.

ಪ್ರಧಾನಿ ಮೋದಿಯವರ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ ಅಪ್ಲೋಡ್ ಮಾಡಲಾದ ಭಾಷಣದ ವಿಡಿಯೋದಲ್ಲಿ 34 ನಿಮಿಷ 55 ಸೆಕೆಂಡ್‌ನಿಂದ ಮೇಲಿನ ಮಾತುಗಳನ್ನು ಆಲಿಸಬಹುದು.

ಫ್ಯಾಕ್ಟ್‌ಚೆಕ್ : ಪ್ರಧಾನಿ ಮೋದಿ ತನ್ನ ಭಾಷಣದಲ್ಲಿ ಹೇಳಿರುವುದು ಸುಳ್ಳು. ಭಾರತದಲ್ಲಿ ಸಮಾಜ ಸುಧಾರಕ, ಹೋರಾಟಗಾರ ನಾರಾಯಣ್ ಮೇಘಾಜಿ ಲೋಖಂಡೆ ಅವರ ಪ್ರಯತ್ನದ ಫಲವಾಗಿ ಮೊದಲ ‘ಬಾಂಬೆ ಮಿಲ್ ಹ್ಯಾಂಡ್ಸ್ ಅಸೋಸಿಯೇಷನ್‘ ​​1890ರಲ್ಲಿ ಎಲ್ಲಾ ಕಾರ್ಮಿಕರಿಗೆ ಭಾನುವಾರದ ರಜಾದಿನವನ್ನು ಘೋಷಿಸಿತು.

ಭಾರತದಲ್ಲಿದ್ದ ಬ್ರಿಟಿಷರು ಚರ್ಚ್‌ಗೆ ತೆರಳಲು ಮತ್ತು ವಾರಾಂತ್ಯದಲ್ಲಿ ಬಿಡುವು ಮಾಡಿಕೊಳ್ಳಲು ಭಾನುವಾರದ ದಿನ ರಜೆಯನ್ನು ಹೊಂದಿದ್ದರು. ಆದರೆ, ಭಾರತದ ಕಾರ್ಮಿಕರಿಗೆ ಮಾತ್ರ ಯಾವುದೇ ರೀತಿಯ ವಾರದ ರಜೆ ಇರಲಿಲ್ಲ. ಭಾರತದ ಕಾರ್ಮಿಕರು ವಾರದ 7 ದಿನವೂ ಕೂಡ ದುಡಿಯಲೇ ಬೇಕಾಗಿತ್ತು. ಹೀಗಾಗಿ, ಮೊದಲು ಮುಂಬೈನ ಹತ್ತಿ ಗಿರಣಿಯಲ್ಲಿ ಕೆಲಸ ಮಾಡುತ್ತಿದ್ದ ನಾರಾಯಣ್ ಮೇಘಾಜಿ ಲೋಖಂಡೆ ಅವರು 1880ರಲ್ಲಿ ತಮ್ಮ ಕೆಲಸವನ್ನು ತೊರೆದಿದ್ದರು.

ಬಳಿಕ ಮರಾಠಿಯ ದೀನ ಬಂಧು ಪತ್ರಿಕೆಯ ಕಾರ್ಯನಿರ್ವಹಣೆಯನ್ನು ನೋಡಿಕೊಂಡಿದ್ದ ಅವರು, ದೇಶದ ಕಾರ್ಮಿಕರ ಸಮಸ್ಯೆಯನ್ನು ಬಗೆಹರಿಸಲು ‘ಬಾಂಬೆ ಮಿಲ್ ಹ್ಯಾಂಡ್ಸ್ ಅಸೋಸಿಯೇಷನ್’ ​​ಎಂದು ಕರೆಯಲ್ಪಡುವ ಭಾರತದಲ್ಲಿ ಮೊದಲ ಕಾರ್ಮಿಕ ಸಂಘವನ್ನು ಪ್ರಾರಂಭಿಸಿದರು. ಈ ಸಂಘಟನೆಯ ಮೂಲಕ ಭಾನುವಾರ ಭಾರತದ ಕಾರ್ಮಿಕರಿಗೆ ರಜೆ ಘೋಷಣೆ ಮಾಡಲು ಹೆಚ್ಚು ಪ್ರಚಾರ ಮಾಡಲಾಯಿತು.

ಜೂನ್‌ 10,1890ರಲ್ಲಿ ಬಾಂಬೆಯ ರೇಸ್ ಕೋರ್ಸ್ ಮೈದಾನದಲ್ಲಿ 10 ಸಾವಿರ ಕಾರ್ಮಿಕರು ಪ್ರತಿಭಟನೆ ನಡೆಸಿ ಮುಷ್ಕರವನ್ನು ಘೋಷಿಸಿದ ನಂತರ, ಗಿರಣಿ ಮಾಲೀಕರ ಸಂಘವು ಅಂತಿಮವಾಗಿ ಶರಣಾಯಿತು ಮತ್ತು 1890 ರಲ್ಲಿ ಕಾರ್ಮಿಕರಿಗೆ ಭಾನುವಾರ ರಜಾದಿನವನ್ನು ಘೋಷಿಸಿತು.

ಮಹಾರಾಷ್ಟ್ರದ ಪುಣೆ ಜಿಲ್ಲೆಯಲ್ಲಿ ಜನಿಸಿದ ಸಮಾಜ ಸುಧಾರಕ ಮತ್ತು ಹೋರಾಟಗಾರ ಲೋಖಂಡೆ ಅವರು ‘ಭಾರತದ ಟ್ರೇಡ್ ಯೂನಿಯನ್ ಚಳವಳಿಯ ಪಿತಾಮಹ’ ಎಂದು ಪ್ರಶಂಸಿಸಲ್ಪಟ್ಟರು.

1997ರಲ್ಲಿ ಪ್ರಕಟವಾದ ನಳಿನಿ ಪಂಡಿತ್ ಅವರ ‘ನಾರಾಯಣ ಮೇಘಾಜಿ ಲೋಖಂಡೆ: ದಿ ಫಾದರ್ ಆಫ್ ಟ್ರೇಡ್ ಯೂನಿಯನ್ ಮೂವ್ಮೆಂಟ್ ಇನ್ ಇಂಡಿಯಾ’ ಎಂಬ ಜರ್ನಲ್ ಲೇಖನದಲ್ಲಿ ಈ ಕುರಿತು ಮಾಹಿತಿಯಿದೆ.

ಲೇಖನದ ಲಿಂಕ್ ಇಲ್ಲಿದೆ

ಲೋಖಂಡೆಯವರ ಪ್ರಯತ್ನದಿಂದ ಭಾನುವಾರದ ರಜೆ ಮಾತ್ರವಲ್ಲದೆ, ಕಾರ್ಮಿಕ ವಲಯದಲ್ಲಿ ಇತರ ಹಲವು ಬದಲಾವಣೆಯೂ ಅಯಿತು. ಅವುಗಳು ಹೀಗಿವೆ…

  • ಗಿರಣಿ ಕಾರ್ಮಿಕರಿಗೆ ಭಾನುವಾರ ವಾರದ ರಜೆ
  • ಕೆಲಸಗಾರರಿಗೆ ಮಧ್ಯಾಹ್ನದ ಅರ್ಧ ಗಂಟೆಯ ವಿರಾಮ
  • ಬೆಳಿಗ್ಗೆ 6:30ಕ್ಕೆ ಕೆಲಸ ಪ್ರಾರಂಭಿಸಿ, ಸೂರ್ಯಾಸ್ತದ ಹೊತ್ತಿಗೆ ಕೊನೆಗೊಳಿಸುವುದು
  • ಕಾರ್ಮಿಕರಿಗೆ ಪ್ರತಿ ತಿಂಗಳು 15ನೇ ತಾರೀಖಿನೊಳಗೆ ವೇತನ ನೀಡುವುದು

‘ಎನ್‌.ಎಂ ಲೋಖಂಡೆ ಮಹಾರಾಷ್ಟ್ರ ಇನ್‌ಸ್ಟಿಟ್ಯೂಟ್ ಆಫ್ ಲೇಬರ್ ಸ್ಟಡೀಸ್’ ಅನ್ನು 7 ಜುಲೈ 1947 ರಂದು ಭಾರತದ ಮಾಜಿ ಹಂಗಾಮಿ ಪ್ರಧಾನ ಮಂತ್ರಿ ಮತ್ತು ಬಾಂಬೆ ಪ್ರಾಂತ್ಯದ ಕಾರ್ಮಿಕ ಸಚಿವ ಗುಲ್ಜಾರಿಲಾಲ್ ನಂದಾ ಅವರು ಸ್ಥಾಪಿಸಿದರು.

ಈ ಕಾಲೇಜಿನ ಅಧಿಕೃತ ವೆಬ್‌ಸೈಟ್ ಕೂಡ 1890 ರಲ್ಲಿ ಭಾನುವಾರವನ್ನು ರಜಾದಿನವಾಗಿ ಘೋಷಿಸಿದ ಬಗ್ಗೆ ಮಾಹಿತಿಯನ್ನು ನೀಡುತ್ತದೆ.

ಇದನ್ನೂ ಓದಿ : FACT CHECK : ರಾಹುಲ್ ಗಾಂಧಿಯ ಹಿಂಬದಿ ಇರುವ ಫೋಟೋ ಕ್ರೈಸ್ತ ಧರ್ಮಕ್ಕೆ ಸಂಬಂಧಿಸಿದ್ದಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...