Homeಫ್ಯಾಕ್ಟ್‌ಚೆಕ್FACT CHECK : ಕ್ರೈಸ್ತರಿಂದ ಭಾರತಕ್ಕೆ ಭಾನುವಾರ ರಜಾ ದಿನ ಬಂತು ಎಂಬ ಪ್ರಧಾನಿ ಮೋದಿ...

FACT CHECK : ಕ್ರೈಸ್ತರಿಂದ ಭಾರತಕ್ಕೆ ಭಾನುವಾರ ರಜಾ ದಿನ ಬಂತು ಎಂಬ ಪ್ರಧಾನಿ ಮೋದಿ ಹೇಳಿಕೆ ಸುಳ್ಳು

- Advertisement -
- Advertisement -

ಮೇ 28ರಂದು ಜಾರ್ಖಂಡ್‌ನ ದುಮ್ಕಾದಲ್ಲಿ ಚುನಾವಣಾ ಭಾಷಣ ಮಾಡಿದ ಪ್ರಧಾನಿ ನರೇಂದ್ರ ಮೋದಿ, “ನಮ್ಮ ದೇಶದಲ್ಲಿ ಭಾನುವಾರ ವಾರದ ರಜೆ ಇದೆ. ಬ್ರಿಟಿಷರು ಇಲ್ಲಿ ಆಳ್ವಿಕೆ ನಡೆಸುತ್ತಿದ್ದಾಗ ಕ್ರಿಶ್ಚಿಯನ್ ಸಮುದಾಯದವರು ರಜಾದಿನವನ್ನು ಹೊಂದಿದ್ದರು. ಈ ಸಂಪ್ರದಾಯ ಅಂದಿನಿಂದ ಪ್ರಾರಂಭವಾಯಿತು. ಭಾನುವಾರದ ರಜೆಗೂ ಹಿಂದೂಗಳಿಗೂ ಸಂಬಂಧವಿಲ್ಲ. ಕಳೆದ 200-300 ವರ್ಷಗಳಿಂದ ಇದು ಚಾಲ್ತಿಯಲ್ಲಿದೆ. ಈಗ ಜಾರ್ಖಂಡ್‌ನ ಒಂದು ಜಿಲ್ಲೆಯಲ್ಲಿ ಭಾನುವಾರದ ಬದಲು, ಶುಕ್ರವಾರ ಅಧಿಕೃತ ರಜೆ ನೀಡಲಾಗುತ್ತಿದೆ” ಎಂದು ಹೇಳಿದ್ದರು.

ಪ್ರಧಾನಿ ಮೋದಿಯವರ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ ಅಪ್ಲೋಡ್ ಮಾಡಲಾದ ಭಾಷಣದ ವಿಡಿಯೋದಲ್ಲಿ 34 ನಿಮಿಷ 55 ಸೆಕೆಂಡ್‌ನಿಂದ ಮೇಲಿನ ಮಾತುಗಳನ್ನು ಆಲಿಸಬಹುದು.

ಫ್ಯಾಕ್ಟ್‌ಚೆಕ್ : ಪ್ರಧಾನಿ ಮೋದಿ ತನ್ನ ಭಾಷಣದಲ್ಲಿ ಹೇಳಿರುವುದು ಸುಳ್ಳು. ಭಾರತದಲ್ಲಿ ಸಮಾಜ ಸುಧಾರಕ, ಹೋರಾಟಗಾರ ನಾರಾಯಣ್ ಮೇಘಾಜಿ ಲೋಖಂಡೆ ಅವರ ಪ್ರಯತ್ನದ ಫಲವಾಗಿ ಮೊದಲ ‘ಬಾಂಬೆ ಮಿಲ್ ಹ್ಯಾಂಡ್ಸ್ ಅಸೋಸಿಯೇಷನ್‘ ​​1890ರಲ್ಲಿ ಎಲ್ಲಾ ಕಾರ್ಮಿಕರಿಗೆ ಭಾನುವಾರದ ರಜಾದಿನವನ್ನು ಘೋಷಿಸಿತು.

ಭಾರತದಲ್ಲಿದ್ದ ಬ್ರಿಟಿಷರು ಚರ್ಚ್‌ಗೆ ತೆರಳಲು ಮತ್ತು ವಾರಾಂತ್ಯದಲ್ಲಿ ಬಿಡುವು ಮಾಡಿಕೊಳ್ಳಲು ಭಾನುವಾರದ ದಿನ ರಜೆಯನ್ನು ಹೊಂದಿದ್ದರು. ಆದರೆ, ಭಾರತದ ಕಾರ್ಮಿಕರಿಗೆ ಮಾತ್ರ ಯಾವುದೇ ರೀತಿಯ ವಾರದ ರಜೆ ಇರಲಿಲ್ಲ. ಭಾರತದ ಕಾರ್ಮಿಕರು ವಾರದ 7 ದಿನವೂ ಕೂಡ ದುಡಿಯಲೇ ಬೇಕಾಗಿತ್ತು. ಹೀಗಾಗಿ, ಮೊದಲು ಮುಂಬೈನ ಹತ್ತಿ ಗಿರಣಿಯಲ್ಲಿ ಕೆಲಸ ಮಾಡುತ್ತಿದ್ದ ನಾರಾಯಣ್ ಮೇಘಾಜಿ ಲೋಖಂಡೆ ಅವರು 1880ರಲ್ಲಿ ತಮ್ಮ ಕೆಲಸವನ್ನು ತೊರೆದಿದ್ದರು.

ಬಳಿಕ ಮರಾಠಿಯ ದೀನ ಬಂಧು ಪತ್ರಿಕೆಯ ಕಾರ್ಯನಿರ್ವಹಣೆಯನ್ನು ನೋಡಿಕೊಂಡಿದ್ದ ಅವರು, ದೇಶದ ಕಾರ್ಮಿಕರ ಸಮಸ್ಯೆಯನ್ನು ಬಗೆಹರಿಸಲು ‘ಬಾಂಬೆ ಮಿಲ್ ಹ್ಯಾಂಡ್ಸ್ ಅಸೋಸಿಯೇಷನ್’ ​​ಎಂದು ಕರೆಯಲ್ಪಡುವ ಭಾರತದಲ್ಲಿ ಮೊದಲ ಕಾರ್ಮಿಕ ಸಂಘವನ್ನು ಪ್ರಾರಂಭಿಸಿದರು. ಈ ಸಂಘಟನೆಯ ಮೂಲಕ ಭಾನುವಾರ ಭಾರತದ ಕಾರ್ಮಿಕರಿಗೆ ರಜೆ ಘೋಷಣೆ ಮಾಡಲು ಹೆಚ್ಚು ಪ್ರಚಾರ ಮಾಡಲಾಯಿತು.

ಜೂನ್‌ 10,1890ರಲ್ಲಿ ಬಾಂಬೆಯ ರೇಸ್ ಕೋರ್ಸ್ ಮೈದಾನದಲ್ಲಿ 10 ಸಾವಿರ ಕಾರ್ಮಿಕರು ಪ್ರತಿಭಟನೆ ನಡೆಸಿ ಮುಷ್ಕರವನ್ನು ಘೋಷಿಸಿದ ನಂತರ, ಗಿರಣಿ ಮಾಲೀಕರ ಸಂಘವು ಅಂತಿಮವಾಗಿ ಶರಣಾಯಿತು ಮತ್ತು 1890 ರಲ್ಲಿ ಕಾರ್ಮಿಕರಿಗೆ ಭಾನುವಾರ ರಜಾದಿನವನ್ನು ಘೋಷಿಸಿತು.

ಮಹಾರಾಷ್ಟ್ರದ ಪುಣೆ ಜಿಲ್ಲೆಯಲ್ಲಿ ಜನಿಸಿದ ಸಮಾಜ ಸುಧಾರಕ ಮತ್ತು ಹೋರಾಟಗಾರ ಲೋಖಂಡೆ ಅವರು ‘ಭಾರತದ ಟ್ರೇಡ್ ಯೂನಿಯನ್ ಚಳವಳಿಯ ಪಿತಾಮಹ’ ಎಂದು ಪ್ರಶಂಸಿಸಲ್ಪಟ್ಟರು.

1997ರಲ್ಲಿ ಪ್ರಕಟವಾದ ನಳಿನಿ ಪಂಡಿತ್ ಅವರ ‘ನಾರಾಯಣ ಮೇಘಾಜಿ ಲೋಖಂಡೆ: ದಿ ಫಾದರ್ ಆಫ್ ಟ್ರೇಡ್ ಯೂನಿಯನ್ ಮೂವ್ಮೆಂಟ್ ಇನ್ ಇಂಡಿಯಾ’ ಎಂಬ ಜರ್ನಲ್ ಲೇಖನದಲ್ಲಿ ಈ ಕುರಿತು ಮಾಹಿತಿಯಿದೆ.

ಲೇಖನದ ಲಿಂಕ್ ಇಲ್ಲಿದೆ

ಲೋಖಂಡೆಯವರ ಪ್ರಯತ್ನದಿಂದ ಭಾನುವಾರದ ರಜೆ ಮಾತ್ರವಲ್ಲದೆ, ಕಾರ್ಮಿಕ ವಲಯದಲ್ಲಿ ಇತರ ಹಲವು ಬದಲಾವಣೆಯೂ ಅಯಿತು. ಅವುಗಳು ಹೀಗಿವೆ…

  • ಗಿರಣಿ ಕಾರ್ಮಿಕರಿಗೆ ಭಾನುವಾರ ವಾರದ ರಜೆ
  • ಕೆಲಸಗಾರರಿಗೆ ಮಧ್ಯಾಹ್ನದ ಅರ್ಧ ಗಂಟೆಯ ವಿರಾಮ
  • ಬೆಳಿಗ್ಗೆ 6:30ಕ್ಕೆ ಕೆಲಸ ಪ್ರಾರಂಭಿಸಿ, ಸೂರ್ಯಾಸ್ತದ ಹೊತ್ತಿಗೆ ಕೊನೆಗೊಳಿಸುವುದು
  • ಕಾರ್ಮಿಕರಿಗೆ ಪ್ರತಿ ತಿಂಗಳು 15ನೇ ತಾರೀಖಿನೊಳಗೆ ವೇತನ ನೀಡುವುದು

‘ಎನ್‌.ಎಂ ಲೋಖಂಡೆ ಮಹಾರಾಷ್ಟ್ರ ಇನ್‌ಸ್ಟಿಟ್ಯೂಟ್ ಆಫ್ ಲೇಬರ್ ಸ್ಟಡೀಸ್’ ಅನ್ನು 7 ಜುಲೈ 1947 ರಂದು ಭಾರತದ ಮಾಜಿ ಹಂಗಾಮಿ ಪ್ರಧಾನ ಮಂತ್ರಿ ಮತ್ತು ಬಾಂಬೆ ಪ್ರಾಂತ್ಯದ ಕಾರ್ಮಿಕ ಸಚಿವ ಗುಲ್ಜಾರಿಲಾಲ್ ನಂದಾ ಅವರು ಸ್ಥಾಪಿಸಿದರು.

ಈ ಕಾಲೇಜಿನ ಅಧಿಕೃತ ವೆಬ್‌ಸೈಟ್ ಕೂಡ 1890 ರಲ್ಲಿ ಭಾನುವಾರವನ್ನು ರಜಾದಿನವಾಗಿ ಘೋಷಿಸಿದ ಬಗ್ಗೆ ಮಾಹಿತಿಯನ್ನು ನೀಡುತ್ತದೆ.

ಇದನ್ನೂ ಓದಿ : FACT CHECK : ರಾಹುಲ್ ಗಾಂಧಿಯ ಹಿಂಬದಿ ಇರುವ ಫೋಟೋ ಕ್ರೈಸ್ತ ಧರ್ಮಕ್ಕೆ ಸಂಬಂಧಿಸಿದ್ದಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...