Homeಫ್ಯಾಕ್ಟ್‌ಚೆಕ್FACT CHECK : ಕ್ರೈಸ್ತರಿಂದ ಭಾರತಕ್ಕೆ ಭಾನುವಾರ ರಜಾ ದಿನ ಬಂತು ಎಂಬ ಪ್ರಧಾನಿ ಮೋದಿ...

FACT CHECK : ಕ್ರೈಸ್ತರಿಂದ ಭಾರತಕ್ಕೆ ಭಾನುವಾರ ರಜಾ ದಿನ ಬಂತು ಎಂಬ ಪ್ರಧಾನಿ ಮೋದಿ ಹೇಳಿಕೆ ಸುಳ್ಳು

- Advertisement -
- Advertisement -

ಮೇ 28ರಂದು ಜಾರ್ಖಂಡ್‌ನ ದುಮ್ಕಾದಲ್ಲಿ ಚುನಾವಣಾ ಭಾಷಣ ಮಾಡಿದ ಪ್ರಧಾನಿ ನರೇಂದ್ರ ಮೋದಿ, “ನಮ್ಮ ದೇಶದಲ್ಲಿ ಭಾನುವಾರ ವಾರದ ರಜೆ ಇದೆ. ಬ್ರಿಟಿಷರು ಇಲ್ಲಿ ಆಳ್ವಿಕೆ ನಡೆಸುತ್ತಿದ್ದಾಗ ಕ್ರಿಶ್ಚಿಯನ್ ಸಮುದಾಯದವರು ರಜಾದಿನವನ್ನು ಹೊಂದಿದ್ದರು. ಈ ಸಂಪ್ರದಾಯ ಅಂದಿನಿಂದ ಪ್ರಾರಂಭವಾಯಿತು. ಭಾನುವಾರದ ರಜೆಗೂ ಹಿಂದೂಗಳಿಗೂ ಸಂಬಂಧವಿಲ್ಲ. ಕಳೆದ 200-300 ವರ್ಷಗಳಿಂದ ಇದು ಚಾಲ್ತಿಯಲ್ಲಿದೆ. ಈಗ ಜಾರ್ಖಂಡ್‌ನ ಒಂದು ಜಿಲ್ಲೆಯಲ್ಲಿ ಭಾನುವಾರದ ಬದಲು, ಶುಕ್ರವಾರ ಅಧಿಕೃತ ರಜೆ ನೀಡಲಾಗುತ್ತಿದೆ” ಎಂದು ಹೇಳಿದ್ದರು.

ಪ್ರಧಾನಿ ಮೋದಿಯವರ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ ಅಪ್ಲೋಡ್ ಮಾಡಲಾದ ಭಾಷಣದ ವಿಡಿಯೋದಲ್ಲಿ 34 ನಿಮಿಷ 55 ಸೆಕೆಂಡ್‌ನಿಂದ ಮೇಲಿನ ಮಾತುಗಳನ್ನು ಆಲಿಸಬಹುದು.

ಫ್ಯಾಕ್ಟ್‌ಚೆಕ್ : ಪ್ರಧಾನಿ ಮೋದಿ ತನ್ನ ಭಾಷಣದಲ್ಲಿ ಹೇಳಿರುವುದು ಸುಳ್ಳು. ಭಾರತದಲ್ಲಿ ಸಮಾಜ ಸುಧಾರಕ, ಹೋರಾಟಗಾರ ನಾರಾಯಣ್ ಮೇಘಾಜಿ ಲೋಖಂಡೆ ಅವರ ಪ್ರಯತ್ನದ ಫಲವಾಗಿ ಮೊದಲ ‘ಬಾಂಬೆ ಮಿಲ್ ಹ್ಯಾಂಡ್ಸ್ ಅಸೋಸಿಯೇಷನ್‘ ​​1890ರಲ್ಲಿ ಎಲ್ಲಾ ಕಾರ್ಮಿಕರಿಗೆ ಭಾನುವಾರದ ರಜಾದಿನವನ್ನು ಘೋಷಿಸಿತು.

ಭಾರತದಲ್ಲಿದ್ದ ಬ್ರಿಟಿಷರು ಚರ್ಚ್‌ಗೆ ತೆರಳಲು ಮತ್ತು ವಾರಾಂತ್ಯದಲ್ಲಿ ಬಿಡುವು ಮಾಡಿಕೊಳ್ಳಲು ಭಾನುವಾರದ ದಿನ ರಜೆಯನ್ನು ಹೊಂದಿದ್ದರು. ಆದರೆ, ಭಾರತದ ಕಾರ್ಮಿಕರಿಗೆ ಮಾತ್ರ ಯಾವುದೇ ರೀತಿಯ ವಾರದ ರಜೆ ಇರಲಿಲ್ಲ. ಭಾರತದ ಕಾರ್ಮಿಕರು ವಾರದ 7 ದಿನವೂ ಕೂಡ ದುಡಿಯಲೇ ಬೇಕಾಗಿತ್ತು. ಹೀಗಾಗಿ, ಮೊದಲು ಮುಂಬೈನ ಹತ್ತಿ ಗಿರಣಿಯಲ್ಲಿ ಕೆಲಸ ಮಾಡುತ್ತಿದ್ದ ನಾರಾಯಣ್ ಮೇಘಾಜಿ ಲೋಖಂಡೆ ಅವರು 1880ರಲ್ಲಿ ತಮ್ಮ ಕೆಲಸವನ್ನು ತೊರೆದಿದ್ದರು.

ಬಳಿಕ ಮರಾಠಿಯ ದೀನ ಬಂಧು ಪತ್ರಿಕೆಯ ಕಾರ್ಯನಿರ್ವಹಣೆಯನ್ನು ನೋಡಿಕೊಂಡಿದ್ದ ಅವರು, ದೇಶದ ಕಾರ್ಮಿಕರ ಸಮಸ್ಯೆಯನ್ನು ಬಗೆಹರಿಸಲು ‘ಬಾಂಬೆ ಮಿಲ್ ಹ್ಯಾಂಡ್ಸ್ ಅಸೋಸಿಯೇಷನ್’ ​​ಎಂದು ಕರೆಯಲ್ಪಡುವ ಭಾರತದಲ್ಲಿ ಮೊದಲ ಕಾರ್ಮಿಕ ಸಂಘವನ್ನು ಪ್ರಾರಂಭಿಸಿದರು. ಈ ಸಂಘಟನೆಯ ಮೂಲಕ ಭಾನುವಾರ ಭಾರತದ ಕಾರ್ಮಿಕರಿಗೆ ರಜೆ ಘೋಷಣೆ ಮಾಡಲು ಹೆಚ್ಚು ಪ್ರಚಾರ ಮಾಡಲಾಯಿತು.

ಜೂನ್‌ 10,1890ರಲ್ಲಿ ಬಾಂಬೆಯ ರೇಸ್ ಕೋರ್ಸ್ ಮೈದಾನದಲ್ಲಿ 10 ಸಾವಿರ ಕಾರ್ಮಿಕರು ಪ್ರತಿಭಟನೆ ನಡೆಸಿ ಮುಷ್ಕರವನ್ನು ಘೋಷಿಸಿದ ನಂತರ, ಗಿರಣಿ ಮಾಲೀಕರ ಸಂಘವು ಅಂತಿಮವಾಗಿ ಶರಣಾಯಿತು ಮತ್ತು 1890 ರಲ್ಲಿ ಕಾರ್ಮಿಕರಿಗೆ ಭಾನುವಾರ ರಜಾದಿನವನ್ನು ಘೋಷಿಸಿತು.

ಮಹಾರಾಷ್ಟ್ರದ ಪುಣೆ ಜಿಲ್ಲೆಯಲ್ಲಿ ಜನಿಸಿದ ಸಮಾಜ ಸುಧಾರಕ ಮತ್ತು ಹೋರಾಟಗಾರ ಲೋಖಂಡೆ ಅವರು ‘ಭಾರತದ ಟ್ರೇಡ್ ಯೂನಿಯನ್ ಚಳವಳಿಯ ಪಿತಾಮಹ’ ಎಂದು ಪ್ರಶಂಸಿಸಲ್ಪಟ್ಟರು.

1997ರಲ್ಲಿ ಪ್ರಕಟವಾದ ನಳಿನಿ ಪಂಡಿತ್ ಅವರ ‘ನಾರಾಯಣ ಮೇಘಾಜಿ ಲೋಖಂಡೆ: ದಿ ಫಾದರ್ ಆಫ್ ಟ್ರೇಡ್ ಯೂನಿಯನ್ ಮೂವ್ಮೆಂಟ್ ಇನ್ ಇಂಡಿಯಾ’ ಎಂಬ ಜರ್ನಲ್ ಲೇಖನದಲ್ಲಿ ಈ ಕುರಿತು ಮಾಹಿತಿಯಿದೆ.

ಲೇಖನದ ಲಿಂಕ್ ಇಲ್ಲಿದೆ

ಲೋಖಂಡೆಯವರ ಪ್ರಯತ್ನದಿಂದ ಭಾನುವಾರದ ರಜೆ ಮಾತ್ರವಲ್ಲದೆ, ಕಾರ್ಮಿಕ ವಲಯದಲ್ಲಿ ಇತರ ಹಲವು ಬದಲಾವಣೆಯೂ ಅಯಿತು. ಅವುಗಳು ಹೀಗಿವೆ…

  • ಗಿರಣಿ ಕಾರ್ಮಿಕರಿಗೆ ಭಾನುವಾರ ವಾರದ ರಜೆ
  • ಕೆಲಸಗಾರರಿಗೆ ಮಧ್ಯಾಹ್ನದ ಅರ್ಧ ಗಂಟೆಯ ವಿರಾಮ
  • ಬೆಳಿಗ್ಗೆ 6:30ಕ್ಕೆ ಕೆಲಸ ಪ್ರಾರಂಭಿಸಿ, ಸೂರ್ಯಾಸ್ತದ ಹೊತ್ತಿಗೆ ಕೊನೆಗೊಳಿಸುವುದು
  • ಕಾರ್ಮಿಕರಿಗೆ ಪ್ರತಿ ತಿಂಗಳು 15ನೇ ತಾರೀಖಿನೊಳಗೆ ವೇತನ ನೀಡುವುದು

‘ಎನ್‌.ಎಂ ಲೋಖಂಡೆ ಮಹಾರಾಷ್ಟ್ರ ಇನ್‌ಸ್ಟಿಟ್ಯೂಟ್ ಆಫ್ ಲೇಬರ್ ಸ್ಟಡೀಸ್’ ಅನ್ನು 7 ಜುಲೈ 1947 ರಂದು ಭಾರತದ ಮಾಜಿ ಹಂಗಾಮಿ ಪ್ರಧಾನ ಮಂತ್ರಿ ಮತ್ತು ಬಾಂಬೆ ಪ್ರಾಂತ್ಯದ ಕಾರ್ಮಿಕ ಸಚಿವ ಗುಲ್ಜಾರಿಲಾಲ್ ನಂದಾ ಅವರು ಸ್ಥಾಪಿಸಿದರು.

ಈ ಕಾಲೇಜಿನ ಅಧಿಕೃತ ವೆಬ್‌ಸೈಟ್ ಕೂಡ 1890 ರಲ್ಲಿ ಭಾನುವಾರವನ್ನು ರಜಾದಿನವಾಗಿ ಘೋಷಿಸಿದ ಬಗ್ಗೆ ಮಾಹಿತಿಯನ್ನು ನೀಡುತ್ತದೆ.

ಇದನ್ನೂ ಓದಿ : FACT CHECK : ರಾಹುಲ್ ಗಾಂಧಿಯ ಹಿಂಬದಿ ಇರುವ ಫೋಟೋ ಕ್ರೈಸ್ತ ಧರ್ಮಕ್ಕೆ ಸಂಬಂಧಿಸಿದ್ದಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...