Homeಫ್ಯಾಕ್ಟ್‌ಚೆಕ್FACT CHECK : ಕ್ರೈಸ್ತರಿಂದ ಭಾರತಕ್ಕೆ ಭಾನುವಾರ ರಜಾ ದಿನ ಬಂತು ಎಂಬ ಪ್ರಧಾನಿ ಮೋದಿ...

FACT CHECK : ಕ್ರೈಸ್ತರಿಂದ ಭಾರತಕ್ಕೆ ಭಾನುವಾರ ರಜಾ ದಿನ ಬಂತು ಎಂಬ ಪ್ರಧಾನಿ ಮೋದಿ ಹೇಳಿಕೆ ಸುಳ್ಳು

- Advertisement -
- Advertisement -

ಮೇ 28ರಂದು ಜಾರ್ಖಂಡ್‌ನ ದುಮ್ಕಾದಲ್ಲಿ ಚುನಾವಣಾ ಭಾಷಣ ಮಾಡಿದ ಪ್ರಧಾನಿ ನರೇಂದ್ರ ಮೋದಿ, “ನಮ್ಮ ದೇಶದಲ್ಲಿ ಭಾನುವಾರ ವಾರದ ರಜೆ ಇದೆ. ಬ್ರಿಟಿಷರು ಇಲ್ಲಿ ಆಳ್ವಿಕೆ ನಡೆಸುತ್ತಿದ್ದಾಗ ಕ್ರಿಶ್ಚಿಯನ್ ಸಮುದಾಯದವರು ರಜಾದಿನವನ್ನು ಹೊಂದಿದ್ದರು. ಈ ಸಂಪ್ರದಾಯ ಅಂದಿನಿಂದ ಪ್ರಾರಂಭವಾಯಿತು. ಭಾನುವಾರದ ರಜೆಗೂ ಹಿಂದೂಗಳಿಗೂ ಸಂಬಂಧವಿಲ್ಲ. ಕಳೆದ 200-300 ವರ್ಷಗಳಿಂದ ಇದು ಚಾಲ್ತಿಯಲ್ಲಿದೆ. ಈಗ ಜಾರ್ಖಂಡ್‌ನ ಒಂದು ಜಿಲ್ಲೆಯಲ್ಲಿ ಭಾನುವಾರದ ಬದಲು, ಶುಕ್ರವಾರ ಅಧಿಕೃತ ರಜೆ ನೀಡಲಾಗುತ್ತಿದೆ” ಎಂದು ಹೇಳಿದ್ದರು.

ಪ್ರಧಾನಿ ಮೋದಿಯವರ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ ಅಪ್ಲೋಡ್ ಮಾಡಲಾದ ಭಾಷಣದ ವಿಡಿಯೋದಲ್ಲಿ 34 ನಿಮಿಷ 55 ಸೆಕೆಂಡ್‌ನಿಂದ ಮೇಲಿನ ಮಾತುಗಳನ್ನು ಆಲಿಸಬಹುದು.

ಫ್ಯಾಕ್ಟ್‌ಚೆಕ್ : ಪ್ರಧಾನಿ ಮೋದಿ ತನ್ನ ಭಾಷಣದಲ್ಲಿ ಹೇಳಿರುವುದು ಸುಳ್ಳು. ಭಾರತದಲ್ಲಿ ಸಮಾಜ ಸುಧಾರಕ, ಹೋರಾಟಗಾರ ನಾರಾಯಣ್ ಮೇಘಾಜಿ ಲೋಖಂಡೆ ಅವರ ಪ್ರಯತ್ನದ ಫಲವಾಗಿ ಮೊದಲ ‘ಬಾಂಬೆ ಮಿಲ್ ಹ್ಯಾಂಡ್ಸ್ ಅಸೋಸಿಯೇಷನ್‘ ​​1890ರಲ್ಲಿ ಎಲ್ಲಾ ಕಾರ್ಮಿಕರಿಗೆ ಭಾನುವಾರದ ರಜಾದಿನವನ್ನು ಘೋಷಿಸಿತು.

ಭಾರತದಲ್ಲಿದ್ದ ಬ್ರಿಟಿಷರು ಚರ್ಚ್‌ಗೆ ತೆರಳಲು ಮತ್ತು ವಾರಾಂತ್ಯದಲ್ಲಿ ಬಿಡುವು ಮಾಡಿಕೊಳ್ಳಲು ಭಾನುವಾರದ ದಿನ ರಜೆಯನ್ನು ಹೊಂದಿದ್ದರು. ಆದರೆ, ಭಾರತದ ಕಾರ್ಮಿಕರಿಗೆ ಮಾತ್ರ ಯಾವುದೇ ರೀತಿಯ ವಾರದ ರಜೆ ಇರಲಿಲ್ಲ. ಭಾರತದ ಕಾರ್ಮಿಕರು ವಾರದ 7 ದಿನವೂ ಕೂಡ ದುಡಿಯಲೇ ಬೇಕಾಗಿತ್ತು. ಹೀಗಾಗಿ, ಮೊದಲು ಮುಂಬೈನ ಹತ್ತಿ ಗಿರಣಿಯಲ್ಲಿ ಕೆಲಸ ಮಾಡುತ್ತಿದ್ದ ನಾರಾಯಣ್ ಮೇಘಾಜಿ ಲೋಖಂಡೆ ಅವರು 1880ರಲ್ಲಿ ತಮ್ಮ ಕೆಲಸವನ್ನು ತೊರೆದಿದ್ದರು.

ಬಳಿಕ ಮರಾಠಿಯ ದೀನ ಬಂಧು ಪತ್ರಿಕೆಯ ಕಾರ್ಯನಿರ್ವಹಣೆಯನ್ನು ನೋಡಿಕೊಂಡಿದ್ದ ಅವರು, ದೇಶದ ಕಾರ್ಮಿಕರ ಸಮಸ್ಯೆಯನ್ನು ಬಗೆಹರಿಸಲು ‘ಬಾಂಬೆ ಮಿಲ್ ಹ್ಯಾಂಡ್ಸ್ ಅಸೋಸಿಯೇಷನ್’ ​​ಎಂದು ಕರೆಯಲ್ಪಡುವ ಭಾರತದಲ್ಲಿ ಮೊದಲ ಕಾರ್ಮಿಕ ಸಂಘವನ್ನು ಪ್ರಾರಂಭಿಸಿದರು. ಈ ಸಂಘಟನೆಯ ಮೂಲಕ ಭಾನುವಾರ ಭಾರತದ ಕಾರ್ಮಿಕರಿಗೆ ರಜೆ ಘೋಷಣೆ ಮಾಡಲು ಹೆಚ್ಚು ಪ್ರಚಾರ ಮಾಡಲಾಯಿತು.

ಜೂನ್‌ 10,1890ರಲ್ಲಿ ಬಾಂಬೆಯ ರೇಸ್ ಕೋರ್ಸ್ ಮೈದಾನದಲ್ಲಿ 10 ಸಾವಿರ ಕಾರ್ಮಿಕರು ಪ್ರತಿಭಟನೆ ನಡೆಸಿ ಮುಷ್ಕರವನ್ನು ಘೋಷಿಸಿದ ನಂತರ, ಗಿರಣಿ ಮಾಲೀಕರ ಸಂಘವು ಅಂತಿಮವಾಗಿ ಶರಣಾಯಿತು ಮತ್ತು 1890 ರಲ್ಲಿ ಕಾರ್ಮಿಕರಿಗೆ ಭಾನುವಾರ ರಜಾದಿನವನ್ನು ಘೋಷಿಸಿತು.

ಮಹಾರಾಷ್ಟ್ರದ ಪುಣೆ ಜಿಲ್ಲೆಯಲ್ಲಿ ಜನಿಸಿದ ಸಮಾಜ ಸುಧಾರಕ ಮತ್ತು ಹೋರಾಟಗಾರ ಲೋಖಂಡೆ ಅವರು ‘ಭಾರತದ ಟ್ರೇಡ್ ಯೂನಿಯನ್ ಚಳವಳಿಯ ಪಿತಾಮಹ’ ಎಂದು ಪ್ರಶಂಸಿಸಲ್ಪಟ್ಟರು.

1997ರಲ್ಲಿ ಪ್ರಕಟವಾದ ನಳಿನಿ ಪಂಡಿತ್ ಅವರ ‘ನಾರಾಯಣ ಮೇಘಾಜಿ ಲೋಖಂಡೆ: ದಿ ಫಾದರ್ ಆಫ್ ಟ್ರೇಡ್ ಯೂನಿಯನ್ ಮೂವ್ಮೆಂಟ್ ಇನ್ ಇಂಡಿಯಾ’ ಎಂಬ ಜರ್ನಲ್ ಲೇಖನದಲ್ಲಿ ಈ ಕುರಿತು ಮಾಹಿತಿಯಿದೆ.

ಲೇಖನದ ಲಿಂಕ್ ಇಲ್ಲಿದೆ

ಲೋಖಂಡೆಯವರ ಪ್ರಯತ್ನದಿಂದ ಭಾನುವಾರದ ರಜೆ ಮಾತ್ರವಲ್ಲದೆ, ಕಾರ್ಮಿಕ ವಲಯದಲ್ಲಿ ಇತರ ಹಲವು ಬದಲಾವಣೆಯೂ ಅಯಿತು. ಅವುಗಳು ಹೀಗಿವೆ…

  • ಗಿರಣಿ ಕಾರ್ಮಿಕರಿಗೆ ಭಾನುವಾರ ವಾರದ ರಜೆ
  • ಕೆಲಸಗಾರರಿಗೆ ಮಧ್ಯಾಹ್ನದ ಅರ್ಧ ಗಂಟೆಯ ವಿರಾಮ
  • ಬೆಳಿಗ್ಗೆ 6:30ಕ್ಕೆ ಕೆಲಸ ಪ್ರಾರಂಭಿಸಿ, ಸೂರ್ಯಾಸ್ತದ ಹೊತ್ತಿಗೆ ಕೊನೆಗೊಳಿಸುವುದು
  • ಕಾರ್ಮಿಕರಿಗೆ ಪ್ರತಿ ತಿಂಗಳು 15ನೇ ತಾರೀಖಿನೊಳಗೆ ವೇತನ ನೀಡುವುದು

‘ಎನ್‌.ಎಂ ಲೋಖಂಡೆ ಮಹಾರಾಷ್ಟ್ರ ಇನ್‌ಸ್ಟಿಟ್ಯೂಟ್ ಆಫ್ ಲೇಬರ್ ಸ್ಟಡೀಸ್’ ಅನ್ನು 7 ಜುಲೈ 1947 ರಂದು ಭಾರತದ ಮಾಜಿ ಹಂಗಾಮಿ ಪ್ರಧಾನ ಮಂತ್ರಿ ಮತ್ತು ಬಾಂಬೆ ಪ್ರಾಂತ್ಯದ ಕಾರ್ಮಿಕ ಸಚಿವ ಗುಲ್ಜಾರಿಲಾಲ್ ನಂದಾ ಅವರು ಸ್ಥಾಪಿಸಿದರು.

ಈ ಕಾಲೇಜಿನ ಅಧಿಕೃತ ವೆಬ್‌ಸೈಟ್ ಕೂಡ 1890 ರಲ್ಲಿ ಭಾನುವಾರವನ್ನು ರಜಾದಿನವಾಗಿ ಘೋಷಿಸಿದ ಬಗ್ಗೆ ಮಾಹಿತಿಯನ್ನು ನೀಡುತ್ತದೆ.

ಇದನ್ನೂ ಓದಿ : FACT CHECK : ರಾಹುಲ್ ಗಾಂಧಿಯ ಹಿಂಬದಿ ಇರುವ ಫೋಟೋ ಕ್ರೈಸ್ತ ಧರ್ಮಕ್ಕೆ ಸಂಬಂಧಿಸಿದ್ದಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...