Homeಫ್ಯಾಕ್ಟ್‌ಚೆಕ್FACT CHECK: ಕರ್ನಾಟಕದಲ್ಲಿ ಎಸ್‌ಸಿ, ಎಸ್‌ಟಿಗಳಿಂದ ಕಿತ್ತುಕೊಂಡು ಮುಸ್ಲಿಮರಿಗೆ ನೀಡಿದ್ದ ಮೀಸಲಾತಿ ರದ್ದುಪಡಿಸಿದ್ದೇವೆ ಎಂಬ ಮೋದಿ...

FACT CHECK: ಕರ್ನಾಟಕದಲ್ಲಿ ಎಸ್‌ಸಿ, ಎಸ್‌ಟಿಗಳಿಂದ ಕಿತ್ತುಕೊಂಡು ಮುಸ್ಲಿಮರಿಗೆ ನೀಡಿದ್ದ ಮೀಸಲಾತಿ ರದ್ದುಪಡಿಸಿದ್ದೇವೆ ಎಂಬ ಮೋದಿ ಹೇಳಿಕೆ ಸುಳ್ಳು

- Advertisement -
- Advertisement -

“ಕಾಂಗ್ರೆಸ್ ಸಂವಿಧಾನವನ್ನು ಗೌರವಿಸಲಿಲ್ಲ. ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಗೌರವಿಸಲಿಲ್ಲ. ಕರ್ನಾಟಕದಲ್ಲಿ ಬಿಜೆಪಿ ಸರ್ಕಾರದ ಮೂಲಕ ನಮಗೆ ಅವಕಾಶ ಸಿಕ್ಕಾಗ ನಾವು ಮಾಡಿದ ಮೊದಲ ಕೆಲಸವೆಂದರೆ, ಎಸ್‌ಸಿ, ಎಸ್‌ಟಿಗಳಿಂದ ಕಿತ್ತುಕೊಂಡು ನೀಡಿದ್ದ ಮುಸ್ಲಿಂ ಕೋಟಾವನ್ನು ನಾವು ನಿಲ್ಲಿಸಿದೆವು. ಹಕ್ಕುದಾರರಿಗೆ ಅವರ ಹಕ್ಕುಗಳನ್ನು ನಾವು ಕೊಟ್ಟೆವು” ಎಂದು ರಾಜಸ್ಥಾನದ ಟೋಂಕ್‌ನಲ್ಲಿ ಮಂಗಳವಾರ (ಏ.23) ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡುವಾಗ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಪ್ರಧಾನಿ ಮೋದಿ ಹೇಳಿದಂತೆ ಕರ್ನಾಟಕದಲ್ಲಿ ಎಸ್‌ಸಿ, ಎಸ್‌ಟಿಗಳಿಂದ ಕಿತ್ತುಕೊಂಡು ಮುಸ್ಲಿಮರಿಗೆ ನೀಡಿದ್ದ 4% ಮೀಸಲಾತಿಯನ್ನು ಬಿಜೆಪಿ ಸರ್ಕಾರ ಇದ್ದಾಗ ರದ್ದುಪಡಿಸಿ, ಅದನ್ನು ಮತ್ತೆ ಎಸ್‌ಸಿ, ಎಸ್‌ಟಿಗಳಿಗೆ ನೀಡಿದ್ದು ನಿಜಾನಾ? ಎಂಬುವುದರ ಸತ್ಯಾಸತ್ಯತೆಯನ್ನು ನಾನುಗೌರಿ.ಕಾಂ ಪರಿಶೀಲನೆ ನಡೆಸಿದೆ.

ಫ್ಯಾಕ್ಟ್‌ಚೆಕ್ : ಮಾರ್ಚ್ 2023ರಲ್ಲಿ, ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ, ರಾಜ್ಯದ ಬಿಜೆಪಿ ಸರ್ಕಾರವು “2ಬಿ” ಹಿಂದುಳಿದ ವರ್ಗದ ಅಡಿಯಲ್ಲಿ ಮುಸ್ಲಿಮರಿಗೆ ನೀಡಲಾದ 4% ಮೀಸಲಾತಿಯನ್ನು ರದ್ದುಗೊಳಿಸಿತ್ತು ಮತ್ತು ಸಮುದಾಯವನ್ನು ಸಾಮಾನ್ಯ ವರ್ಗದ EWSನ 10% ಕೋಟಾದಡಿ ತಂದಿತ್ತು.

ಮುಸ್ಲಿಮರಿಗೆ ನೀಡಲಾಗಿದ್ದ 4% ಮೀಸಲಾತಿಯನ್ನು ಒಕ್ಕಲಿಗರು ಮತ್ತು ಲಿಂಗಾಯತರಿಗೆ ಹಂಚಲು ಸರ್ಕಾರ ಮುಂದಾಗಿತ್ತು. ಒಕ್ಕಗಲಿಗರು 3ಎ ಅಡಿ 4 % ಮತ್ತು ಲಿಂಗಾಯತರು 3ಬಿ ಅಡಿ 5% ಮೀಸಲಾತಿ ಹೊಂದಿದ್ದರು. ಸರ್ಕಾರ ಒಕ್ಕಲಿಗರಿಗೆ 2 (ಸಿ) ಅಡಿಯಲ್ಲಿ 6% ಮತ್ತು ಲಿಂಗಾಯತರಿಗೆ 2 (ಡಿ) ಅಡಿಯಲ್ಲಿ 7% ಮೀಸಲಾತಿ ನೀಡಲು ನಿರ್ಧರಿಸಿತ್ತು. ಆದರೆ, ಇದು ಇನ್ನೂ ಜಾರಿಗೆ ಬಂದಿಲ್ಲ. ಸರ್ಕಾರದ ನಿರ್ಧಾರ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ. ಹಾಗಾಗಿ, ಪ್ರಕರಣ ಈಗ ನ್ಯಾಯಾಲಯದಲ್ಲಿದೆ.

ಇನ್ನು, ‘2ಬಿ’ ಹಿಂದುಳಿದ ವರ್ಗದ ಅಡಿಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಹಿಂದುಳಿದಿರುವಿಕೆಯ ಆಧಾರದ ಮೇಲೆ ಸರ್ಕಾರಿ ಉದ್ಯೋಗಗಳು ಮತ್ತು ಶಿಕ್ಷಣದಲ್ಲಿ ಮುಸ್ಲಿಮರಿಗೆ 4% ಮೀಸಲಾತಿಯನ್ನು ನೀಡಿದ್ದು, 1994 ರಲ್ಲಿ ಹೆಚ್ ಡಿ ದೇವೇಗೌಡ ನೇತೃತ್ವದ ಸರ್ಕಾರ. ಇದು, 1918 ರಲ್ಲಿ ಅಂದಿನ ಮೈಸೂರು ರಾಜಪ್ರಭುತ್ವದ ಆಳ್ವಿಕೆಯಲ್ಲಿ ಪ್ರಾರಂಭಿಸಿದ ಕ್ರಮದ ಮುಂದುವರಿದ ಭಾಗವಾಗಿತ್ತು ಎಂದು ತಿಳಿದು ಬಂದಿದೆ.

ಸದ್ಯಕ್ಕೆ, ರಾಜ್ಯದಲ್ಲಿ ಮುಸ್ಲಿಮರಿಗೆ ಒಬಿಸಿಯ 2ಬಿ ಅಡಿಯಲ್ಲಿ ನೀಡಲಾಗಿದ್ದ 4% ಮೀಸಲಾತಿ ರದ್ದಾಗಿಲ್ಲ. ಮುಸ್ಲಿಮರನ್ನು 10% ಮೀಸಲಾತಿ ಇರುವ ಇಡಬ್ಯುಎಸ್‌ ಅಡಿ ತರುವ ಪ್ರಯತ್ನವೂ ಸಫಲಗೊಂಡಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.

ಇನ್ನು ಎಸ್‌ಸಿ, ಎಸ್‌ಟಿ ವಿಚಾರಕ್ಕೆ ಬಂದರೆ, ಅವರ ಮೀಸಲಾತಿ ಈ ಹಿಂದಿನಿಂದಲೂ ಯಥಾ ಸ್ಥಿತಿಯಲ್ಲಿ ಇದೆ. ಎಸ್‌ಸಿಗಳಿಗೆ 15% ಮತ್ತು ಎಸ್‌ಟಿಗಳಿಗೆ 3% ಮೀಸಲಾತಿ ನೀಡಲಾಗಿದೆ. ಮುಸ್ಲಿಮರಿಗೆ ಒಬಿಸಿಯ 2ಬಿ ಅಡಿ ಪ್ರತ್ಯೇಕವಾಗಿ 4% ನೀಡಲಾಗಿತ್ತೇ ಹೊರತು, ಎಸ್‌ಸಿ, ಎಸ್‌ಟಿಗಳಿಂದ ಕಿತ್ತುಕೊಂಡು ಕೊಟ್ಟಿರಲಿಲ್ಲ. ಹಾಗಾಗಿ,ಎಸ್‌ಸಿ, ಎಸ್‌ಟಿಗಳಿಂದ ಕಿತ್ತು ಮುಸ್ಲಿಮರಿಗೆ ನೀಡಲಾಗಿದ್ದ 4% ಮೀಸಲಾತಿ ರದ್ದುಪಡಿಸಿದ್ದೇವೆ ಎಂಬ ಪ್ರಧಾನಿ ಮೋದಿಯವರ ಹೇಳಿಕೆ ಸುಳ್ಳು.

ಪ್ರಧಾನಿ ಮಾತನಾಡುವಾಗ, ಮುಸ್ಲಿಮರ 4% ಮೀಸಲಾತಿ ರದ್ದುಪಡಿಸಿ ಎಸ್‌ಸಿ, ಎಸ್‌ಟಿಗಳಿಗೆ ಅವರ ಹಕ್ಕು ಕೊಟ್ಟಿದ್ದೇವೆ ಎಂದಿದ್ದಾರೆ. ಇದರರ್ಥ, ಮುಸ್ಲಿಮರಿಂದ ಕಿತ್ತುಕೊಂಡ 4% ಎಸ್‌ಸಿ, ಎಸ್‌ಟಿಗಳಿಗೆ ಮರಳಿಸಿದ್ದೇವೆ ಎಂದು. ಇದು ಸುಳ್ಳು ಹೇಳಿಕೆಯಾಗಿದೆ. ಮುಸ್ಲಿಮರಿಗೆ ನೀಡಲಾಗಿದ್ದ 4% ಮೀಸಲಾತಿ ರದ್ದುಪಡಿಸಿ ಎಸ್‌ಸಿ, ಎಸ್‌ಟಿಗಳಿಗೆ ನೀಡಿಲ್ಲ.

ಪ್ರಧಾನಿ ನೀಡಿರುವ ಮತ್ತೊಂದು ಹೇಳಿಕೆ, ಕರ್ನಾಟಕದಲ್ಲಿ ಬಿಜೆಪಿ ಸರ್ಕಾರದ ಮೂಲಕ ನಮಗೆ ಅವಕಾಶ ಸಿಕ್ಕಾಗ ಮೊದಲು ಮಾಡಿದ ಕೆಲಸ ಮುಸ್ಲಿಮರ 4% ಮೀಸಲಾತಿ ರದ್ದುಪಡಿಸಿದ್ದು ಎಂಬುವುದು. ಆದರೆ, ಇದೂ ಸುಳ್ಳು ಹೇಳಿಕೆಯಾಗಿದೆ. ಬಿಜೆಪಿ ಸರ್ಕಾರ ಮುಸ್ಲಿಮರ ಮೀಸಲಾತಿ ರದ್ದುಪಡಿಸಿದ್ದು, ತಮ್ಮ ಅಧಿಕಾರವದಿಯ ಅಂತ್ಯದಲ್ಲಿ. ಅಂದರೆ, ಮಾರ್ಚ್‌ 2023ರಲ್ಲಿ.

ಗಮನಾರ್ಹ ಸಂಗತಿಯೆಂದರೆ, ಎಸ್‌ಸಿ, ಎಸ್‌ಟಿಗಳಿಂದ ಕಿತ್ತುಕೊಂಡು ಮುಸ್ಲಿಮರಿಗೆ 4% ಮೀಸಲಾತಿಯನ್ನು ನೀಡಲಾಗಿತ್ತು ಎಂದು ಪ್ರಧಾನಿ ಹೇಳಿದ್ದಾರೆ. ಆದರೆ, ಈ ಮೀಸಲಾತಿ ಮುಸ್ಲಿಮರಿಗೆ ನೀಡಿದ್ದು, ಹೆಚ್‌.ಡಿ ದೇವೇಗೌಡರ ನೇತೃತ್ವದ ಜನತಾದಳ ಸರ್ಕಾರ. ಇದೇ ದೇವೇಗೌಡರ ಪಕ್ಷ ಜೆಡಿಎಸ್‌ ಈಗ ಕರ್ನಾಟಕದಲ್ಲಿ ಬಿಜೆಪಿಯ ಮೈತ್ರಿ ಪಕ್ಷವಾಗಿದೆ. ದೇವೇಗೌಡರು ಮತ್ತು ಮೋದಿ ಇತ್ತೀಚೆಗೆ ಪರಸ್ಪರ ಹೊಗಳಿಕೆಯ ಮಾತುಗಳನ್ನಾಡಿದ್ದರು.

ಇದನ್ನೂ ಓದಿ : FACT CHECK: ಜಾತಿ ಗಣತಿ ಕುರಿತ ರಾಹುಲ್ ಗಾಂಧಿಯ ವೈರಲ್ ಕ್ಲಿಪ್ ಎಡಿಟೆಡ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಬಂಧನ

ಭಾರತೀಯ ಯುವ ಕಾಂಗ್ರೆಸ್ (ಐವೈಸಿ) ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಅವರನ್ನು ದೆಹಲಿ ಪೊಲೀಸರು ಮಂಗಳವಾರ (ಫೆ. 24) ಮುಂಜಾನೆ ಸುಮಾರು 4:30ಕ್ಕೆ ಬಂಧಿಸಿದ್ದಾರೆ. ಕಳೆದ ವಾರ ದೆಹಲಿಯ ಭಾರತ್ ಮಂಟಪದಲ್ಲಿ ನಡೆದ...

ಭೂ ವಿವಾದದಲ್ಲಿ ಸಹೋದರರ ಹತ್ಯೆ; ಒಂದೇ ಕುಟುಂಬದ 13 ಮಂದಿಗೆ ಜೀವಾವಧಿ ಶಿಕ್ಷೆ

ಭೂ ವಿವಾದಕ್ಕೆ ಸಂಬಂಧಿಸಿದಂತೆ ಸುಮಾರು 10 ವರ್ಷಗಳ ಹಿಂದೆ ಇಬ್ಬರು ಸಹೋದರರನ್ನು ಹತ್ಯೆಗೈದ ಪ್ರಕರಣದಲ್ಲಿ ಒಂದೇ ಕುಟುಂಬದ 13 ಮಂದಿಗೆ ಉತ್ತರ ಪ್ರದೇಶದ ಸಹರಾನ್‌ಪುರದ ಸ್ಥಳೀಯ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು...

ಉತ್ತರ ಪ್ರದೇಶ: ಬಜರಂಗದಳ ದೂರಿನ ಮೇರೆಗೆ ಮತಾಂತರ ವಿರೋಧಿ ಕಾನೂನಿನಡಿಯಲ್ಲಿ ಕೇರಳ ಮೂಲದ ಪಾದ್ರಿಯ ಬಂಧನ

ಬಜರಂಗದಳ ಸದಸ್ಯರು ನೀಡಿದ ದೂರಿನ ಮೇರೆಗೆ ಧಾರ್ಮಿಕ ಮತಾಂತರದ ಆರೋಪದ ಮೇಲೆ ಕೇರಳದ ಪಾದ್ರಿಯೊಬ್ಬರನ್ನು ಉತ್ತರ ಪ್ರದೇಶದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ತಿರುವನಂತಪುರಂ ಮೂಲದ ಪಾದ್ರಿ ಜೋಸ್ ಥಾಮಸ್,...

‘ನಾಚಿಕೆಗೇಡು ಅಂದ್ರೇನು ನಾನು ಹೇಳ್ತೇನೆ’: ಅಮೆರಿಕ ವ್ಯಾಪಾರ ಒಪ್ಪಂದ, ಎಪ್‌ಸ್ಟೀನ್ ಫೈಲ್ಸ್ ಉಲ್ಲೇಖಿಸಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಎಐ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ಶರ್ಟ್‌ ಬಿಚ್ಚಿ ಪ್ರತಿಭಟಿಸಿದ್ದನ್ನು 'ಗಲೀಜು, ನಾಚಿಕೆಗೇಡು'ಎಂದಿದ್ದ ಪ್ರಧಾನಿ ನರೇಂದ್ರ ಮೋದಿಯವರಿಗೆ ವಿಪಕ್ಷ ನಾಯಕ ರಾಹುಲ್ ಗಾಂಧಿ ತಿರುಗೇಟು ನೀಡಿದ್ದಾರೆ. ವಿಡಿಯೋ ಮೂಲಕ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, "ಪ್ರಧಾನಿ...

ಜಾರ್ಖಂಡ್ | ಏರ್ ಆಂಬ್ಯುಲೆನ್ಸ್ ಪತನ : ರೋಗಿ, ವೈದ್ಯ ಸೇರಿ 7 ಮಂದಿ ಸಾವು

ರಾಂಚಿಯಿಂದ ದೆಹಲಿಗೆ ತೆರಳುತ್ತಿದ್ದ ಏರ್ ಆಂಬ್ಯುಲೆನ್ಸ್ ಜಾರ್ಖಂಡ್‌ನ ಛಾತ್ರಾ ಜಿಲ್ಲೆಯಲ್ಲಿ ಸೋಮವಾರ (ಫೆ.24) ಪತನಗೊಂಡಿದ್ದು, ಅದರಲ್ಲಿದ್ದ ಎಲ್ಲಾ ಏಳು ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ರೆಡ್‌ಬರ್ಡ್‌ ಏರ್ವೇಸ್ ಪ್ರೈವೆಟ್ ಲಿಮಿಟೆಡ್ ಎಂಬ ಸಂಸ್ಥೆ ನಿರ್ವಹಣೆ...

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...