Homeಫ್ಯಾಕ್ಟ್‌ಚೆಕ್FACT CHECK: ಕರ್ನಾಟಕದಲ್ಲಿ ಎಸ್‌ಸಿ, ಎಸ್‌ಟಿಗಳಿಂದ ಕಿತ್ತುಕೊಂಡು ಮುಸ್ಲಿಮರಿಗೆ ನೀಡಿದ್ದ ಮೀಸಲಾತಿ ರದ್ದುಪಡಿಸಿದ್ದೇವೆ ಎಂಬ ಮೋದಿ...

FACT CHECK: ಕರ್ನಾಟಕದಲ್ಲಿ ಎಸ್‌ಸಿ, ಎಸ್‌ಟಿಗಳಿಂದ ಕಿತ್ತುಕೊಂಡು ಮುಸ್ಲಿಮರಿಗೆ ನೀಡಿದ್ದ ಮೀಸಲಾತಿ ರದ್ದುಪಡಿಸಿದ್ದೇವೆ ಎಂಬ ಮೋದಿ ಹೇಳಿಕೆ ಸುಳ್ಳು

- Advertisement -
- Advertisement -

“ಕಾಂಗ್ರೆಸ್ ಸಂವಿಧಾನವನ್ನು ಗೌರವಿಸಲಿಲ್ಲ. ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಗೌರವಿಸಲಿಲ್ಲ. ಕರ್ನಾಟಕದಲ್ಲಿ ಬಿಜೆಪಿ ಸರ್ಕಾರದ ಮೂಲಕ ನಮಗೆ ಅವಕಾಶ ಸಿಕ್ಕಾಗ ನಾವು ಮಾಡಿದ ಮೊದಲ ಕೆಲಸವೆಂದರೆ, ಎಸ್‌ಸಿ, ಎಸ್‌ಟಿಗಳಿಂದ ಕಿತ್ತುಕೊಂಡು ನೀಡಿದ್ದ ಮುಸ್ಲಿಂ ಕೋಟಾವನ್ನು ನಾವು ನಿಲ್ಲಿಸಿದೆವು. ಹಕ್ಕುದಾರರಿಗೆ ಅವರ ಹಕ್ಕುಗಳನ್ನು ನಾವು ಕೊಟ್ಟೆವು” ಎಂದು ರಾಜಸ್ಥಾನದ ಟೋಂಕ್‌ನಲ್ಲಿ ಮಂಗಳವಾರ (ಏ.23) ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡುವಾಗ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಪ್ರಧಾನಿ ಮೋದಿ ಹೇಳಿದಂತೆ ಕರ್ನಾಟಕದಲ್ಲಿ ಎಸ್‌ಸಿ, ಎಸ್‌ಟಿಗಳಿಂದ ಕಿತ್ತುಕೊಂಡು ಮುಸ್ಲಿಮರಿಗೆ ನೀಡಿದ್ದ 4% ಮೀಸಲಾತಿಯನ್ನು ಬಿಜೆಪಿ ಸರ್ಕಾರ ಇದ್ದಾಗ ರದ್ದುಪಡಿಸಿ, ಅದನ್ನು ಮತ್ತೆ ಎಸ್‌ಸಿ, ಎಸ್‌ಟಿಗಳಿಗೆ ನೀಡಿದ್ದು ನಿಜಾನಾ? ಎಂಬುವುದರ ಸತ್ಯಾಸತ್ಯತೆಯನ್ನು ನಾನುಗೌರಿ.ಕಾಂ ಪರಿಶೀಲನೆ ನಡೆಸಿದೆ.

ಫ್ಯಾಕ್ಟ್‌ಚೆಕ್ : ಮಾರ್ಚ್ 2023ರಲ್ಲಿ, ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ, ರಾಜ್ಯದ ಬಿಜೆಪಿ ಸರ್ಕಾರವು “2ಬಿ” ಹಿಂದುಳಿದ ವರ್ಗದ ಅಡಿಯಲ್ಲಿ ಮುಸ್ಲಿಮರಿಗೆ ನೀಡಲಾದ 4% ಮೀಸಲಾತಿಯನ್ನು ರದ್ದುಗೊಳಿಸಿತ್ತು ಮತ್ತು ಸಮುದಾಯವನ್ನು ಸಾಮಾನ್ಯ ವರ್ಗದ EWSನ 10% ಕೋಟಾದಡಿ ತಂದಿತ್ತು.

ಮುಸ್ಲಿಮರಿಗೆ ನೀಡಲಾಗಿದ್ದ 4% ಮೀಸಲಾತಿಯನ್ನು ಒಕ್ಕಲಿಗರು ಮತ್ತು ಲಿಂಗಾಯತರಿಗೆ ಹಂಚಲು ಸರ್ಕಾರ ಮುಂದಾಗಿತ್ತು. ಒಕ್ಕಗಲಿಗರು 3ಎ ಅಡಿ 4 % ಮತ್ತು ಲಿಂಗಾಯತರು 3ಬಿ ಅಡಿ 5% ಮೀಸಲಾತಿ ಹೊಂದಿದ್ದರು. ಸರ್ಕಾರ ಒಕ್ಕಲಿಗರಿಗೆ 2 (ಸಿ) ಅಡಿಯಲ್ಲಿ 6% ಮತ್ತು ಲಿಂಗಾಯತರಿಗೆ 2 (ಡಿ) ಅಡಿಯಲ್ಲಿ 7% ಮೀಸಲಾತಿ ನೀಡಲು ನಿರ್ಧರಿಸಿತ್ತು. ಆದರೆ, ಇದು ಇನ್ನೂ ಜಾರಿಗೆ ಬಂದಿಲ್ಲ. ಸರ್ಕಾರದ ನಿರ್ಧಾರ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ. ಹಾಗಾಗಿ, ಪ್ರಕರಣ ಈಗ ನ್ಯಾಯಾಲಯದಲ್ಲಿದೆ.

ಇನ್ನು, ‘2ಬಿ’ ಹಿಂದುಳಿದ ವರ್ಗದ ಅಡಿಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಹಿಂದುಳಿದಿರುವಿಕೆಯ ಆಧಾರದ ಮೇಲೆ ಸರ್ಕಾರಿ ಉದ್ಯೋಗಗಳು ಮತ್ತು ಶಿಕ್ಷಣದಲ್ಲಿ ಮುಸ್ಲಿಮರಿಗೆ 4% ಮೀಸಲಾತಿಯನ್ನು ನೀಡಿದ್ದು, 1994 ರಲ್ಲಿ ಹೆಚ್ ಡಿ ದೇವೇಗೌಡ ನೇತೃತ್ವದ ಸರ್ಕಾರ. ಇದು, 1918 ರಲ್ಲಿ ಅಂದಿನ ಮೈಸೂರು ರಾಜಪ್ರಭುತ್ವದ ಆಳ್ವಿಕೆಯಲ್ಲಿ ಪ್ರಾರಂಭಿಸಿದ ಕ್ರಮದ ಮುಂದುವರಿದ ಭಾಗವಾಗಿತ್ತು ಎಂದು ತಿಳಿದು ಬಂದಿದೆ.

ಸದ್ಯಕ್ಕೆ, ರಾಜ್ಯದಲ್ಲಿ ಮುಸ್ಲಿಮರಿಗೆ ಒಬಿಸಿಯ 2ಬಿ ಅಡಿಯಲ್ಲಿ ನೀಡಲಾಗಿದ್ದ 4% ಮೀಸಲಾತಿ ರದ್ದಾಗಿಲ್ಲ. ಮುಸ್ಲಿಮರನ್ನು 10% ಮೀಸಲಾತಿ ಇರುವ ಇಡಬ್ಯುಎಸ್‌ ಅಡಿ ತರುವ ಪ್ರಯತ್ನವೂ ಸಫಲಗೊಂಡಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.

ಇನ್ನು ಎಸ್‌ಸಿ, ಎಸ್‌ಟಿ ವಿಚಾರಕ್ಕೆ ಬಂದರೆ, ಅವರ ಮೀಸಲಾತಿ ಈ ಹಿಂದಿನಿಂದಲೂ ಯಥಾ ಸ್ಥಿತಿಯಲ್ಲಿ ಇದೆ. ಎಸ್‌ಸಿಗಳಿಗೆ 15% ಮತ್ತು ಎಸ್‌ಟಿಗಳಿಗೆ 3% ಮೀಸಲಾತಿ ನೀಡಲಾಗಿದೆ. ಮುಸ್ಲಿಮರಿಗೆ ಒಬಿಸಿಯ 2ಬಿ ಅಡಿ ಪ್ರತ್ಯೇಕವಾಗಿ 4% ನೀಡಲಾಗಿತ್ತೇ ಹೊರತು, ಎಸ್‌ಸಿ, ಎಸ್‌ಟಿಗಳಿಂದ ಕಿತ್ತುಕೊಂಡು ಕೊಟ್ಟಿರಲಿಲ್ಲ. ಹಾಗಾಗಿ,ಎಸ್‌ಸಿ, ಎಸ್‌ಟಿಗಳಿಂದ ಕಿತ್ತು ಮುಸ್ಲಿಮರಿಗೆ ನೀಡಲಾಗಿದ್ದ 4% ಮೀಸಲಾತಿ ರದ್ದುಪಡಿಸಿದ್ದೇವೆ ಎಂಬ ಪ್ರಧಾನಿ ಮೋದಿಯವರ ಹೇಳಿಕೆ ಸುಳ್ಳು.

ಪ್ರಧಾನಿ ಮಾತನಾಡುವಾಗ, ಮುಸ್ಲಿಮರ 4% ಮೀಸಲಾತಿ ರದ್ದುಪಡಿಸಿ ಎಸ್‌ಸಿ, ಎಸ್‌ಟಿಗಳಿಗೆ ಅವರ ಹಕ್ಕು ಕೊಟ್ಟಿದ್ದೇವೆ ಎಂದಿದ್ದಾರೆ. ಇದರರ್ಥ, ಮುಸ್ಲಿಮರಿಂದ ಕಿತ್ತುಕೊಂಡ 4% ಎಸ್‌ಸಿ, ಎಸ್‌ಟಿಗಳಿಗೆ ಮರಳಿಸಿದ್ದೇವೆ ಎಂದು. ಇದು ಸುಳ್ಳು ಹೇಳಿಕೆಯಾಗಿದೆ. ಮುಸ್ಲಿಮರಿಗೆ ನೀಡಲಾಗಿದ್ದ 4% ಮೀಸಲಾತಿ ರದ್ದುಪಡಿಸಿ ಎಸ್‌ಸಿ, ಎಸ್‌ಟಿಗಳಿಗೆ ನೀಡಿಲ್ಲ.

ಪ್ರಧಾನಿ ನೀಡಿರುವ ಮತ್ತೊಂದು ಹೇಳಿಕೆ, ಕರ್ನಾಟಕದಲ್ಲಿ ಬಿಜೆಪಿ ಸರ್ಕಾರದ ಮೂಲಕ ನಮಗೆ ಅವಕಾಶ ಸಿಕ್ಕಾಗ ಮೊದಲು ಮಾಡಿದ ಕೆಲಸ ಮುಸ್ಲಿಮರ 4% ಮೀಸಲಾತಿ ರದ್ದುಪಡಿಸಿದ್ದು ಎಂಬುವುದು. ಆದರೆ, ಇದೂ ಸುಳ್ಳು ಹೇಳಿಕೆಯಾಗಿದೆ. ಬಿಜೆಪಿ ಸರ್ಕಾರ ಮುಸ್ಲಿಮರ ಮೀಸಲಾತಿ ರದ್ದುಪಡಿಸಿದ್ದು, ತಮ್ಮ ಅಧಿಕಾರವದಿಯ ಅಂತ್ಯದಲ್ಲಿ. ಅಂದರೆ, ಮಾರ್ಚ್‌ 2023ರಲ್ಲಿ.

ಗಮನಾರ್ಹ ಸಂಗತಿಯೆಂದರೆ, ಎಸ್‌ಸಿ, ಎಸ್‌ಟಿಗಳಿಂದ ಕಿತ್ತುಕೊಂಡು ಮುಸ್ಲಿಮರಿಗೆ 4% ಮೀಸಲಾತಿಯನ್ನು ನೀಡಲಾಗಿತ್ತು ಎಂದು ಪ್ರಧಾನಿ ಹೇಳಿದ್ದಾರೆ. ಆದರೆ, ಈ ಮೀಸಲಾತಿ ಮುಸ್ಲಿಮರಿಗೆ ನೀಡಿದ್ದು, ಹೆಚ್‌.ಡಿ ದೇವೇಗೌಡರ ನೇತೃತ್ವದ ಜನತಾದಳ ಸರ್ಕಾರ. ಇದೇ ದೇವೇಗೌಡರ ಪಕ್ಷ ಜೆಡಿಎಸ್‌ ಈಗ ಕರ್ನಾಟಕದಲ್ಲಿ ಬಿಜೆಪಿಯ ಮೈತ್ರಿ ಪಕ್ಷವಾಗಿದೆ. ದೇವೇಗೌಡರು ಮತ್ತು ಮೋದಿ ಇತ್ತೀಚೆಗೆ ಪರಸ್ಪರ ಹೊಗಳಿಕೆಯ ಮಾತುಗಳನ್ನಾಡಿದ್ದರು.

ಇದನ್ನೂ ಓದಿ : FACT CHECK: ಜಾತಿ ಗಣತಿ ಕುರಿತ ರಾಹುಲ್ ಗಾಂಧಿಯ ವೈರಲ್ ಕ್ಲಿಪ್ ಎಡಿಟೆಡ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...