Homeಫ್ಯಾಕ್ಟ್‌ಚೆಕ್FACT CHECK: ಕರ್ನಾಟಕದಲ್ಲಿ ಎಸ್‌ಸಿ, ಎಸ್‌ಟಿಗಳಿಂದ ಕಿತ್ತುಕೊಂಡು ಮುಸ್ಲಿಮರಿಗೆ ನೀಡಿದ್ದ ಮೀಸಲಾತಿ ರದ್ದುಪಡಿಸಿದ್ದೇವೆ ಎಂಬ ಮೋದಿ...

FACT CHECK: ಕರ್ನಾಟಕದಲ್ಲಿ ಎಸ್‌ಸಿ, ಎಸ್‌ಟಿಗಳಿಂದ ಕಿತ್ತುಕೊಂಡು ಮುಸ್ಲಿಮರಿಗೆ ನೀಡಿದ್ದ ಮೀಸಲಾತಿ ರದ್ದುಪಡಿಸಿದ್ದೇವೆ ಎಂಬ ಮೋದಿ ಹೇಳಿಕೆ ಸುಳ್ಳು

- Advertisement -
- Advertisement -

“ಕಾಂಗ್ರೆಸ್ ಸಂವಿಧಾನವನ್ನು ಗೌರವಿಸಲಿಲ್ಲ. ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಗೌರವಿಸಲಿಲ್ಲ. ಕರ್ನಾಟಕದಲ್ಲಿ ಬಿಜೆಪಿ ಸರ್ಕಾರದ ಮೂಲಕ ನಮಗೆ ಅವಕಾಶ ಸಿಕ್ಕಾಗ ನಾವು ಮಾಡಿದ ಮೊದಲ ಕೆಲಸವೆಂದರೆ, ಎಸ್‌ಸಿ, ಎಸ್‌ಟಿಗಳಿಂದ ಕಿತ್ತುಕೊಂಡು ನೀಡಿದ್ದ ಮುಸ್ಲಿಂ ಕೋಟಾವನ್ನು ನಾವು ನಿಲ್ಲಿಸಿದೆವು. ಹಕ್ಕುದಾರರಿಗೆ ಅವರ ಹಕ್ಕುಗಳನ್ನು ನಾವು ಕೊಟ್ಟೆವು” ಎಂದು ರಾಜಸ್ಥಾನದ ಟೋಂಕ್‌ನಲ್ಲಿ ಮಂಗಳವಾರ (ಏ.23) ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡುವಾಗ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಪ್ರಧಾನಿ ಮೋದಿ ಹೇಳಿದಂತೆ ಕರ್ನಾಟಕದಲ್ಲಿ ಎಸ್‌ಸಿ, ಎಸ್‌ಟಿಗಳಿಂದ ಕಿತ್ತುಕೊಂಡು ಮುಸ್ಲಿಮರಿಗೆ ನೀಡಿದ್ದ 4% ಮೀಸಲಾತಿಯನ್ನು ಬಿಜೆಪಿ ಸರ್ಕಾರ ಇದ್ದಾಗ ರದ್ದುಪಡಿಸಿ, ಅದನ್ನು ಮತ್ತೆ ಎಸ್‌ಸಿ, ಎಸ್‌ಟಿಗಳಿಗೆ ನೀಡಿದ್ದು ನಿಜಾನಾ? ಎಂಬುವುದರ ಸತ್ಯಾಸತ್ಯತೆಯನ್ನು ನಾನುಗೌರಿ.ಕಾಂ ಪರಿಶೀಲನೆ ನಡೆಸಿದೆ.

ಫ್ಯಾಕ್ಟ್‌ಚೆಕ್ : ಮಾರ್ಚ್ 2023ರಲ್ಲಿ, ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ, ರಾಜ್ಯದ ಬಿಜೆಪಿ ಸರ್ಕಾರವು “2ಬಿ” ಹಿಂದುಳಿದ ವರ್ಗದ ಅಡಿಯಲ್ಲಿ ಮುಸ್ಲಿಮರಿಗೆ ನೀಡಲಾದ 4% ಮೀಸಲಾತಿಯನ್ನು ರದ್ದುಗೊಳಿಸಿತ್ತು ಮತ್ತು ಸಮುದಾಯವನ್ನು ಸಾಮಾನ್ಯ ವರ್ಗದ EWSನ 10% ಕೋಟಾದಡಿ ತಂದಿತ್ತು.

ಮುಸ್ಲಿಮರಿಗೆ ನೀಡಲಾಗಿದ್ದ 4% ಮೀಸಲಾತಿಯನ್ನು ಒಕ್ಕಲಿಗರು ಮತ್ತು ಲಿಂಗಾಯತರಿಗೆ ಹಂಚಲು ಸರ್ಕಾರ ಮುಂದಾಗಿತ್ತು. ಒಕ್ಕಗಲಿಗರು 3ಎ ಅಡಿ 4 % ಮತ್ತು ಲಿಂಗಾಯತರು 3ಬಿ ಅಡಿ 5% ಮೀಸಲಾತಿ ಹೊಂದಿದ್ದರು. ಸರ್ಕಾರ ಒಕ್ಕಲಿಗರಿಗೆ 2 (ಸಿ) ಅಡಿಯಲ್ಲಿ 6% ಮತ್ತು ಲಿಂಗಾಯತರಿಗೆ 2 (ಡಿ) ಅಡಿಯಲ್ಲಿ 7% ಮೀಸಲಾತಿ ನೀಡಲು ನಿರ್ಧರಿಸಿತ್ತು. ಆದರೆ, ಇದು ಇನ್ನೂ ಜಾರಿಗೆ ಬಂದಿಲ್ಲ. ಸರ್ಕಾರದ ನಿರ್ಧಾರ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ. ಹಾಗಾಗಿ, ಪ್ರಕರಣ ಈಗ ನ್ಯಾಯಾಲಯದಲ್ಲಿದೆ.

ಇನ್ನು, ‘2ಬಿ’ ಹಿಂದುಳಿದ ವರ್ಗದ ಅಡಿಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಹಿಂದುಳಿದಿರುವಿಕೆಯ ಆಧಾರದ ಮೇಲೆ ಸರ್ಕಾರಿ ಉದ್ಯೋಗಗಳು ಮತ್ತು ಶಿಕ್ಷಣದಲ್ಲಿ ಮುಸ್ಲಿಮರಿಗೆ 4% ಮೀಸಲಾತಿಯನ್ನು ನೀಡಿದ್ದು, 1994 ರಲ್ಲಿ ಹೆಚ್ ಡಿ ದೇವೇಗೌಡ ನೇತೃತ್ವದ ಸರ್ಕಾರ. ಇದು, 1918 ರಲ್ಲಿ ಅಂದಿನ ಮೈಸೂರು ರಾಜಪ್ರಭುತ್ವದ ಆಳ್ವಿಕೆಯಲ್ಲಿ ಪ್ರಾರಂಭಿಸಿದ ಕ್ರಮದ ಮುಂದುವರಿದ ಭಾಗವಾಗಿತ್ತು ಎಂದು ತಿಳಿದು ಬಂದಿದೆ.

ಸದ್ಯಕ್ಕೆ, ರಾಜ್ಯದಲ್ಲಿ ಮುಸ್ಲಿಮರಿಗೆ ಒಬಿಸಿಯ 2ಬಿ ಅಡಿಯಲ್ಲಿ ನೀಡಲಾಗಿದ್ದ 4% ಮೀಸಲಾತಿ ರದ್ದಾಗಿಲ್ಲ. ಮುಸ್ಲಿಮರನ್ನು 10% ಮೀಸಲಾತಿ ಇರುವ ಇಡಬ್ಯುಎಸ್‌ ಅಡಿ ತರುವ ಪ್ರಯತ್ನವೂ ಸಫಲಗೊಂಡಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.

ಇನ್ನು ಎಸ್‌ಸಿ, ಎಸ್‌ಟಿ ವಿಚಾರಕ್ಕೆ ಬಂದರೆ, ಅವರ ಮೀಸಲಾತಿ ಈ ಹಿಂದಿನಿಂದಲೂ ಯಥಾ ಸ್ಥಿತಿಯಲ್ಲಿ ಇದೆ. ಎಸ್‌ಸಿಗಳಿಗೆ 15% ಮತ್ತು ಎಸ್‌ಟಿಗಳಿಗೆ 3% ಮೀಸಲಾತಿ ನೀಡಲಾಗಿದೆ. ಮುಸ್ಲಿಮರಿಗೆ ಒಬಿಸಿಯ 2ಬಿ ಅಡಿ ಪ್ರತ್ಯೇಕವಾಗಿ 4% ನೀಡಲಾಗಿತ್ತೇ ಹೊರತು, ಎಸ್‌ಸಿ, ಎಸ್‌ಟಿಗಳಿಂದ ಕಿತ್ತುಕೊಂಡು ಕೊಟ್ಟಿರಲಿಲ್ಲ. ಹಾಗಾಗಿ,ಎಸ್‌ಸಿ, ಎಸ್‌ಟಿಗಳಿಂದ ಕಿತ್ತು ಮುಸ್ಲಿಮರಿಗೆ ನೀಡಲಾಗಿದ್ದ 4% ಮೀಸಲಾತಿ ರದ್ದುಪಡಿಸಿದ್ದೇವೆ ಎಂಬ ಪ್ರಧಾನಿ ಮೋದಿಯವರ ಹೇಳಿಕೆ ಸುಳ್ಳು.

ಪ್ರಧಾನಿ ಮಾತನಾಡುವಾಗ, ಮುಸ್ಲಿಮರ 4% ಮೀಸಲಾತಿ ರದ್ದುಪಡಿಸಿ ಎಸ್‌ಸಿ, ಎಸ್‌ಟಿಗಳಿಗೆ ಅವರ ಹಕ್ಕು ಕೊಟ್ಟಿದ್ದೇವೆ ಎಂದಿದ್ದಾರೆ. ಇದರರ್ಥ, ಮುಸ್ಲಿಮರಿಂದ ಕಿತ್ತುಕೊಂಡ 4% ಎಸ್‌ಸಿ, ಎಸ್‌ಟಿಗಳಿಗೆ ಮರಳಿಸಿದ್ದೇವೆ ಎಂದು. ಇದು ಸುಳ್ಳು ಹೇಳಿಕೆಯಾಗಿದೆ. ಮುಸ್ಲಿಮರಿಗೆ ನೀಡಲಾಗಿದ್ದ 4% ಮೀಸಲಾತಿ ರದ್ದುಪಡಿಸಿ ಎಸ್‌ಸಿ, ಎಸ್‌ಟಿಗಳಿಗೆ ನೀಡಿಲ್ಲ.

ಪ್ರಧಾನಿ ನೀಡಿರುವ ಮತ್ತೊಂದು ಹೇಳಿಕೆ, ಕರ್ನಾಟಕದಲ್ಲಿ ಬಿಜೆಪಿ ಸರ್ಕಾರದ ಮೂಲಕ ನಮಗೆ ಅವಕಾಶ ಸಿಕ್ಕಾಗ ಮೊದಲು ಮಾಡಿದ ಕೆಲಸ ಮುಸ್ಲಿಮರ 4% ಮೀಸಲಾತಿ ರದ್ದುಪಡಿಸಿದ್ದು ಎಂಬುವುದು. ಆದರೆ, ಇದೂ ಸುಳ್ಳು ಹೇಳಿಕೆಯಾಗಿದೆ. ಬಿಜೆಪಿ ಸರ್ಕಾರ ಮುಸ್ಲಿಮರ ಮೀಸಲಾತಿ ರದ್ದುಪಡಿಸಿದ್ದು, ತಮ್ಮ ಅಧಿಕಾರವದಿಯ ಅಂತ್ಯದಲ್ಲಿ. ಅಂದರೆ, ಮಾರ್ಚ್‌ 2023ರಲ್ಲಿ.

ಗಮನಾರ್ಹ ಸಂಗತಿಯೆಂದರೆ, ಎಸ್‌ಸಿ, ಎಸ್‌ಟಿಗಳಿಂದ ಕಿತ್ತುಕೊಂಡು ಮುಸ್ಲಿಮರಿಗೆ 4% ಮೀಸಲಾತಿಯನ್ನು ನೀಡಲಾಗಿತ್ತು ಎಂದು ಪ್ರಧಾನಿ ಹೇಳಿದ್ದಾರೆ. ಆದರೆ, ಈ ಮೀಸಲಾತಿ ಮುಸ್ಲಿಮರಿಗೆ ನೀಡಿದ್ದು, ಹೆಚ್‌.ಡಿ ದೇವೇಗೌಡರ ನೇತೃತ್ವದ ಜನತಾದಳ ಸರ್ಕಾರ. ಇದೇ ದೇವೇಗೌಡರ ಪಕ್ಷ ಜೆಡಿಎಸ್‌ ಈಗ ಕರ್ನಾಟಕದಲ್ಲಿ ಬಿಜೆಪಿಯ ಮೈತ್ರಿ ಪಕ್ಷವಾಗಿದೆ. ದೇವೇಗೌಡರು ಮತ್ತು ಮೋದಿ ಇತ್ತೀಚೆಗೆ ಪರಸ್ಪರ ಹೊಗಳಿಕೆಯ ಮಾತುಗಳನ್ನಾಡಿದ್ದರು.

ಇದನ್ನೂ ಓದಿ : FACT CHECK: ಜಾತಿ ಗಣತಿ ಕುರಿತ ರಾಹುಲ್ ಗಾಂಧಿಯ ವೈರಲ್ ಕ್ಲಿಪ್ ಎಡಿಟೆಡ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...