Homeಫ್ಯಾಕ್ಟ್‌ಚೆಕ್FACT CHECK: ಕರ್ನಾಟಕದಲ್ಲಿ ಎಸ್‌ಸಿ, ಎಸ್‌ಟಿಗಳಿಂದ ಕಿತ್ತುಕೊಂಡು ಮುಸ್ಲಿಮರಿಗೆ ನೀಡಿದ್ದ ಮೀಸಲಾತಿ ರದ್ದುಪಡಿಸಿದ್ದೇವೆ ಎಂಬ ಮೋದಿ...

FACT CHECK: ಕರ್ನಾಟಕದಲ್ಲಿ ಎಸ್‌ಸಿ, ಎಸ್‌ಟಿಗಳಿಂದ ಕಿತ್ತುಕೊಂಡು ಮುಸ್ಲಿಮರಿಗೆ ನೀಡಿದ್ದ ಮೀಸಲಾತಿ ರದ್ದುಪಡಿಸಿದ್ದೇವೆ ಎಂಬ ಮೋದಿ ಹೇಳಿಕೆ ಸುಳ್ಳು

- Advertisement -
- Advertisement -

“ಕಾಂಗ್ರೆಸ್ ಸಂವಿಧಾನವನ್ನು ಗೌರವಿಸಲಿಲ್ಲ. ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಗೌರವಿಸಲಿಲ್ಲ. ಕರ್ನಾಟಕದಲ್ಲಿ ಬಿಜೆಪಿ ಸರ್ಕಾರದ ಮೂಲಕ ನಮಗೆ ಅವಕಾಶ ಸಿಕ್ಕಾಗ ನಾವು ಮಾಡಿದ ಮೊದಲ ಕೆಲಸವೆಂದರೆ, ಎಸ್‌ಸಿ, ಎಸ್‌ಟಿಗಳಿಂದ ಕಿತ್ತುಕೊಂಡು ನೀಡಿದ್ದ ಮುಸ್ಲಿಂ ಕೋಟಾವನ್ನು ನಾವು ನಿಲ್ಲಿಸಿದೆವು. ಹಕ್ಕುದಾರರಿಗೆ ಅವರ ಹಕ್ಕುಗಳನ್ನು ನಾವು ಕೊಟ್ಟೆವು” ಎಂದು ರಾಜಸ್ಥಾನದ ಟೋಂಕ್‌ನಲ್ಲಿ ಮಂಗಳವಾರ (ಏ.23) ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡುವಾಗ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಪ್ರಧಾನಿ ಮೋದಿ ಹೇಳಿದಂತೆ ಕರ್ನಾಟಕದಲ್ಲಿ ಎಸ್‌ಸಿ, ಎಸ್‌ಟಿಗಳಿಂದ ಕಿತ್ತುಕೊಂಡು ಮುಸ್ಲಿಮರಿಗೆ ನೀಡಿದ್ದ 4% ಮೀಸಲಾತಿಯನ್ನು ಬಿಜೆಪಿ ಸರ್ಕಾರ ಇದ್ದಾಗ ರದ್ದುಪಡಿಸಿ, ಅದನ್ನು ಮತ್ತೆ ಎಸ್‌ಸಿ, ಎಸ್‌ಟಿಗಳಿಗೆ ನೀಡಿದ್ದು ನಿಜಾನಾ? ಎಂಬುವುದರ ಸತ್ಯಾಸತ್ಯತೆಯನ್ನು ನಾನುಗೌರಿ.ಕಾಂ ಪರಿಶೀಲನೆ ನಡೆಸಿದೆ.

ಫ್ಯಾಕ್ಟ್‌ಚೆಕ್ : ಮಾರ್ಚ್ 2023ರಲ್ಲಿ, ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ, ರಾಜ್ಯದ ಬಿಜೆಪಿ ಸರ್ಕಾರವು “2ಬಿ” ಹಿಂದುಳಿದ ವರ್ಗದ ಅಡಿಯಲ್ಲಿ ಮುಸ್ಲಿಮರಿಗೆ ನೀಡಲಾದ 4% ಮೀಸಲಾತಿಯನ್ನು ರದ್ದುಗೊಳಿಸಿತ್ತು ಮತ್ತು ಸಮುದಾಯವನ್ನು ಸಾಮಾನ್ಯ ವರ್ಗದ EWSನ 10% ಕೋಟಾದಡಿ ತಂದಿತ್ತು.

ಮುಸ್ಲಿಮರಿಗೆ ನೀಡಲಾಗಿದ್ದ 4% ಮೀಸಲಾತಿಯನ್ನು ಒಕ್ಕಲಿಗರು ಮತ್ತು ಲಿಂಗಾಯತರಿಗೆ ಹಂಚಲು ಸರ್ಕಾರ ಮುಂದಾಗಿತ್ತು. ಒಕ್ಕಗಲಿಗರು 3ಎ ಅಡಿ 4 % ಮತ್ತು ಲಿಂಗಾಯತರು 3ಬಿ ಅಡಿ 5% ಮೀಸಲಾತಿ ಹೊಂದಿದ್ದರು. ಸರ್ಕಾರ ಒಕ್ಕಲಿಗರಿಗೆ 2 (ಸಿ) ಅಡಿಯಲ್ಲಿ 6% ಮತ್ತು ಲಿಂಗಾಯತರಿಗೆ 2 (ಡಿ) ಅಡಿಯಲ್ಲಿ 7% ಮೀಸಲಾತಿ ನೀಡಲು ನಿರ್ಧರಿಸಿತ್ತು. ಆದರೆ, ಇದು ಇನ್ನೂ ಜಾರಿಗೆ ಬಂದಿಲ್ಲ. ಸರ್ಕಾರದ ನಿರ್ಧಾರ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ. ಹಾಗಾಗಿ, ಪ್ರಕರಣ ಈಗ ನ್ಯಾಯಾಲಯದಲ್ಲಿದೆ.

ಇನ್ನು, ‘2ಬಿ’ ಹಿಂದುಳಿದ ವರ್ಗದ ಅಡಿಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಹಿಂದುಳಿದಿರುವಿಕೆಯ ಆಧಾರದ ಮೇಲೆ ಸರ್ಕಾರಿ ಉದ್ಯೋಗಗಳು ಮತ್ತು ಶಿಕ್ಷಣದಲ್ಲಿ ಮುಸ್ಲಿಮರಿಗೆ 4% ಮೀಸಲಾತಿಯನ್ನು ನೀಡಿದ್ದು, 1994 ರಲ್ಲಿ ಹೆಚ್ ಡಿ ದೇವೇಗೌಡ ನೇತೃತ್ವದ ಸರ್ಕಾರ. ಇದು, 1918 ರಲ್ಲಿ ಅಂದಿನ ಮೈಸೂರು ರಾಜಪ್ರಭುತ್ವದ ಆಳ್ವಿಕೆಯಲ್ಲಿ ಪ್ರಾರಂಭಿಸಿದ ಕ್ರಮದ ಮುಂದುವರಿದ ಭಾಗವಾಗಿತ್ತು ಎಂದು ತಿಳಿದು ಬಂದಿದೆ.

ಸದ್ಯಕ್ಕೆ, ರಾಜ್ಯದಲ್ಲಿ ಮುಸ್ಲಿಮರಿಗೆ ಒಬಿಸಿಯ 2ಬಿ ಅಡಿಯಲ್ಲಿ ನೀಡಲಾಗಿದ್ದ 4% ಮೀಸಲಾತಿ ರದ್ದಾಗಿಲ್ಲ. ಮುಸ್ಲಿಮರನ್ನು 10% ಮೀಸಲಾತಿ ಇರುವ ಇಡಬ್ಯುಎಸ್‌ ಅಡಿ ತರುವ ಪ್ರಯತ್ನವೂ ಸಫಲಗೊಂಡಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.

ಇನ್ನು ಎಸ್‌ಸಿ, ಎಸ್‌ಟಿ ವಿಚಾರಕ್ಕೆ ಬಂದರೆ, ಅವರ ಮೀಸಲಾತಿ ಈ ಹಿಂದಿನಿಂದಲೂ ಯಥಾ ಸ್ಥಿತಿಯಲ್ಲಿ ಇದೆ. ಎಸ್‌ಸಿಗಳಿಗೆ 15% ಮತ್ತು ಎಸ್‌ಟಿಗಳಿಗೆ 3% ಮೀಸಲಾತಿ ನೀಡಲಾಗಿದೆ. ಮುಸ್ಲಿಮರಿಗೆ ಒಬಿಸಿಯ 2ಬಿ ಅಡಿ ಪ್ರತ್ಯೇಕವಾಗಿ 4% ನೀಡಲಾಗಿತ್ತೇ ಹೊರತು, ಎಸ್‌ಸಿ, ಎಸ್‌ಟಿಗಳಿಂದ ಕಿತ್ತುಕೊಂಡು ಕೊಟ್ಟಿರಲಿಲ್ಲ. ಹಾಗಾಗಿ,ಎಸ್‌ಸಿ, ಎಸ್‌ಟಿಗಳಿಂದ ಕಿತ್ತು ಮುಸ್ಲಿಮರಿಗೆ ನೀಡಲಾಗಿದ್ದ 4% ಮೀಸಲಾತಿ ರದ್ದುಪಡಿಸಿದ್ದೇವೆ ಎಂಬ ಪ್ರಧಾನಿ ಮೋದಿಯವರ ಹೇಳಿಕೆ ಸುಳ್ಳು.

ಪ್ರಧಾನಿ ಮಾತನಾಡುವಾಗ, ಮುಸ್ಲಿಮರ 4% ಮೀಸಲಾತಿ ರದ್ದುಪಡಿಸಿ ಎಸ್‌ಸಿ, ಎಸ್‌ಟಿಗಳಿಗೆ ಅವರ ಹಕ್ಕು ಕೊಟ್ಟಿದ್ದೇವೆ ಎಂದಿದ್ದಾರೆ. ಇದರರ್ಥ, ಮುಸ್ಲಿಮರಿಂದ ಕಿತ್ತುಕೊಂಡ 4% ಎಸ್‌ಸಿ, ಎಸ್‌ಟಿಗಳಿಗೆ ಮರಳಿಸಿದ್ದೇವೆ ಎಂದು. ಇದು ಸುಳ್ಳು ಹೇಳಿಕೆಯಾಗಿದೆ. ಮುಸ್ಲಿಮರಿಗೆ ನೀಡಲಾಗಿದ್ದ 4% ಮೀಸಲಾತಿ ರದ್ದುಪಡಿಸಿ ಎಸ್‌ಸಿ, ಎಸ್‌ಟಿಗಳಿಗೆ ನೀಡಿಲ್ಲ.

ಪ್ರಧಾನಿ ನೀಡಿರುವ ಮತ್ತೊಂದು ಹೇಳಿಕೆ, ಕರ್ನಾಟಕದಲ್ಲಿ ಬಿಜೆಪಿ ಸರ್ಕಾರದ ಮೂಲಕ ನಮಗೆ ಅವಕಾಶ ಸಿಕ್ಕಾಗ ಮೊದಲು ಮಾಡಿದ ಕೆಲಸ ಮುಸ್ಲಿಮರ 4% ಮೀಸಲಾತಿ ರದ್ದುಪಡಿಸಿದ್ದು ಎಂಬುವುದು. ಆದರೆ, ಇದೂ ಸುಳ್ಳು ಹೇಳಿಕೆಯಾಗಿದೆ. ಬಿಜೆಪಿ ಸರ್ಕಾರ ಮುಸ್ಲಿಮರ ಮೀಸಲಾತಿ ರದ್ದುಪಡಿಸಿದ್ದು, ತಮ್ಮ ಅಧಿಕಾರವದಿಯ ಅಂತ್ಯದಲ್ಲಿ. ಅಂದರೆ, ಮಾರ್ಚ್‌ 2023ರಲ್ಲಿ.

ಗಮನಾರ್ಹ ಸಂಗತಿಯೆಂದರೆ, ಎಸ್‌ಸಿ, ಎಸ್‌ಟಿಗಳಿಂದ ಕಿತ್ತುಕೊಂಡು ಮುಸ್ಲಿಮರಿಗೆ 4% ಮೀಸಲಾತಿಯನ್ನು ನೀಡಲಾಗಿತ್ತು ಎಂದು ಪ್ರಧಾನಿ ಹೇಳಿದ್ದಾರೆ. ಆದರೆ, ಈ ಮೀಸಲಾತಿ ಮುಸ್ಲಿಮರಿಗೆ ನೀಡಿದ್ದು, ಹೆಚ್‌.ಡಿ ದೇವೇಗೌಡರ ನೇತೃತ್ವದ ಜನತಾದಳ ಸರ್ಕಾರ. ಇದೇ ದೇವೇಗೌಡರ ಪಕ್ಷ ಜೆಡಿಎಸ್‌ ಈಗ ಕರ್ನಾಟಕದಲ್ಲಿ ಬಿಜೆಪಿಯ ಮೈತ್ರಿ ಪಕ್ಷವಾಗಿದೆ. ದೇವೇಗೌಡರು ಮತ್ತು ಮೋದಿ ಇತ್ತೀಚೆಗೆ ಪರಸ್ಪರ ಹೊಗಳಿಕೆಯ ಮಾತುಗಳನ್ನಾಡಿದ್ದರು.

ಇದನ್ನೂ ಓದಿ : FACT CHECK: ಜಾತಿ ಗಣತಿ ಕುರಿತ ರಾಹುಲ್ ಗಾಂಧಿಯ ವೈರಲ್ ಕ್ಲಿಪ್ ಎಡಿಟೆಡ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೇಮಕಾತಿ ಅಕ್ರಮ ಖಂಡಿಸಿ ಜಾರ್ಖಂಡ್‌ನಲ್ಲಿ ಧರಣಿ: ವಿದ್ಯಾರ್ಥಿಗಳ ಹೋರಾಟಕ್ಕೆ ತಲೆಬಾಗಿದ ಸಿಎಂ ಹೇಮಂತ್ ಸೊರೇನ್, ‘ನ್ಯಾಯದ ಭರವಸೆ’

ಜಾರ್ಖಂಡ್‌ನ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳು ಹಾಗೂ ಯುವಜನತೆ ತಮ್ಮ ಭವಿಷ್ಯದ ಭದ್ರತೆಗಾಗಿ ಬೀದಿಗಿಳಿದು ನಡೆಸುತ್ತಿರುವ ಬೃಹತ್ ಪ್ರತಿಭಟನೆ ಈಗ ಇಡೀ ರಾಜ್ಯದ ಗಮನ ಸೆಳೆದಿದೆ. ಜಾರ್ಖಂಡ್ ಸಾರ್ವಜನಿಕ ಸೇವಾ ಆಯೋಗ (JPSC) ಮತ್ತು...

ಪ.ಬಂಗಾಳ : ಮಮತಾ ಬ್ಯಾನರ್ಜಿ ಕಾರಿನ ಮೇಲೆ ದಾಳಿ; ಕಲ್ಲು, ಚಪ್ಪಲಿ ತೂರಿದ ಗುಂಪು

ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತನ ಮನೆಗೆ ಹೋಗುತ್ತಿದ್ದಾಗ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇದ್ದ ಕಾರಿನ ಮೇಲೆ ಗುಂಪೊಂದು ದಾಳಿ ನಡೆಸಿದ ಘಟನೆ ಭಾನುವಾರ...

SIR ನೆಪದಲ್ಲಿ 1 ಕೋಟಿ ಮತ ಡಿಲೀಟ್ ಮಾಡೋ ಸಂಚು: ಎಚ್ಚೆತ್ತುಕೊಳ್ಳುವಂತೆ ಕಾರ್ಯಕರ್ತರಿಗೆ ಡಿ.ಕೆ. ಶಿವಕುಮಾರ್ ಕರೆ

SIR ನೆಪದಲ್ಲಿ ಮತದಾರರ ಪಟ್ಟಿಯಿಂದ ಒಂದು ಕೋಟಿಗೂ ಹೆಚ್ಚು ಮತಗಳನ್ನು ಅಳಿಸುವ ಸಂಚು ನಡೆಯುತ್ತಿದೆ, ಕಾಂಗ್ರೆಸ್ ಕಾರ್ಯಕರ್ತರು ಈ ವಿಚಾರದಲ್ಲಿ ಎಚ್ಚೆತ್ತುಕೊಳ್ಳಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರೆ ನೀಡಿದರು. ಕೆಪಿಸಿಸಿ ಕಚೇರಿಯ...

‘ಮೋದಿ ದೇಶದ ಯುವಕರನ್ನು ಸಬಲೀಕರಣಗೊಳಿಸಲು ಶ್ರಮಿಸುತ್ತಿದ್ದಾರೆ ’: ‘ಜೆನ್ ಝೀ’ಗಳನ್ನು ‘ಬಾಹ್ಯ ಶಕ್ತಿಗಳು ದಾರಿ ತಪ್ಪಿಸುತ್ತಿವೆ’: ಒಡಿಶಾ ಸಿಎಂ ಮೋಹನ್ ಚರಣ್ ಮಾಝಿ

ಭುವನೇಶ್ವರ: ಜಾಗತಿಕ ವೇದಿಕೆಯಲ್ಲಿ "ತಮ್ಮನ್ನು ದಾರಿ ತಪ್ಪಿಸಲು ಮತ್ತು ಭಾರತವನ್ನು ದುರ್ಬಲಗೊಳಿಸಲು" ನಿರಂತರವಾಗಿ ಪ್ರಯತ್ನಿಸುತ್ತಿರುವ "ಬಾಹ್ಯ ಶಕ್ತಿಗಳಿಗೆ" ಬಲಿಯಾಗಬೇಡಿ ಎಂದು ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಭಾನುವಾರ ಜೆನ್ ಝೀ (GEN-Z)...

ಪದವಿ ಪ್ರದಾನ ಸಮಾರಂಭಕ್ಕೆ CJI ಆಹ್ವಾನಿಸಲು ಹೈದರಾಬಾದ್ ಕಾನೂನು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ವಿರೋಧ

ಹೈದರಾಬಾದ್‌ನ ‘ನಾಲ್ಸಾರ್’ (NALSAR) ಕಾನೂನು ವಿಶ್ವವಿದ್ಯಾಲಯದ ಪದವಿ ಪ್ರದಾನ ಸಮಾರಂಭಕ್ಕೆ ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಬಾರದು ಎಂದು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಒಂದು ಗುಂಪು ಆಡಳಿತ...

3ನೇ ಹಂತದ ‘SIR’ ಕರಡು ಮತದಾರರ ಪಟ್ಟಿ ಬಿಡುಗಡೆ: 12 ರಾಜ್ಯಗಳಲ್ಲಿ 1.58 ಕೋಟಿ ಮತದಾರರ ಹೆಸರು ಕೈಬಿಟ್ಟ ಆಯೋಗ, ಇನ್ನು ಕರ್ನಾಟಕ ಬಾಕಿ

3ನೇ ಹಂತದದಲ್ಲಿ ದೇಶದ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಜುಲೈನಿಂದ ನಡೆಸಲಾದ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಪ್ರಕ್ರಿಯೆಯ ಬಳಿಕ ಬಿಡುಗಡೆಯಾದ ಕರಡು ಮತದಾರರ ಪಟ್ಟಿಯಲ್ಲಿ ಭಾರಿ ಪ್ರಮಾಣದ ಹೆಸರುಗಳು...

ದಾರುಲ್ ಉಲೂಮ್ ದಿಯೋಬಂದ್ ಆವರಣದಲ್ಲಿ ಶಿವಲಿಂಗವಿದೆ ಎಂದ ಹಿಂದುತ್ವ ಸಂಘಟನೆ : ಆ.11ರಂದು ಗಂಗಾಜಲ ಅರ್ಪಿಸುವುದಾಗಿ ಘೋಷಣೆ

ಉತ್ತರ ಪ್ರದೇಶದ ದಿಯೋಬಂದ್‌ನಲ್ಲಿರುವ ಪ್ರಸಿದ್ದ ಮುಸ್ಲಿಂ ಶಿಕ್ಷಣ ಸಂಸ್ಥೆ ದಾರುಲ್ ಉಲೂಮ್ ಆವರಣದಲ್ಲಿ ಶಿವಲಿಂಗವಿದೆ ಎಂದು ಪ್ರತಿಪಾದಿಸಿರುವ ಹಿಂದೂ ರಕ್ಷಾ ದಳ ಸಂಘಟನೆ, ಆಗಸ್ಟ್ 11 ರಂದು ಸಂಸ್ಥೆಗೆ ಭೇಟಿ ನೀಡಿ ಗಂಗಾಜಲ...

‘ಮೋದಿ ನಮ್ಮನ್ನು ಗುಂಡಿಕ್ಕಿ ಕೊಂದರೂ ಈ ಜೀವಿತಾವಧಿಯಲ್ಲಿ ವಂದೇ ಮಾತರಂ ಪೂರ್ಣ ಆವೃತ್ತಿ ಹಾಡುವುದಿಲ್ಲ’: ಕೇರಳ ಕಾಂಗ್ರೆಸ್ ಸಂಸದ ರಾಜಮೋಹನ್ ಉನ್ನಿತ್ತಾನ್

ಕಾಸರಗೋಡು (ಕೇರಳ): ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ 'ಹರ್ ಘರ್ ತಿರಂಗಾ' ಅಭಿಯಾನದ ಸಮಯದಲ್ಲಿ ರಾಷ್ಟ್ರಗೀತೆ 'ವಂದೇ ಮಾತರಂ'ನ ಸಂಪೂರ್ಣ ವಾಗ್ವಾದ/ಆವೃತ್ತಿಯನ್ನು ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಸಂವಹನದ ಸುತ್ತ ಭಾರಿ ವಿವಾದ...

ಮೊಜ್ತಬಾ ಖಾಮಿನೈ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದ ಇಸ್ರೇಲ್ ಮಾಧ್ಯಮಗಳು : ವಿಡಿಯೋ ಬಿಡುಗಡೆ ಮಾಡಿ ಕೌಂಟರ್ ಕೊಟ್ಟ ಇರಾನ್

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಾಮಿನೈ ಅವರ ಆರೋಗ್ಯ ಸ್ಥಿತಿ 'ಅತ್ಯಂತ ಗಂಭೀರವಾಗಿದೆ' ಎಂದು ಇಸ್ರೇಲಿ ಮಾಧ್ಯಮಗಳು ವರದಿ ಮಾಡಿದ ಬೆನ್ನಲ್ಲೇ, ಅವರು ಉತ್ತಮ ಆರೋಗ್ಯದಿಂದ ಇರುವಂತೆ ಕಾಣಿಸುವ ದಿನಾಂಕವಿಲ್ಲದ ವಿಡಿಯೋ ಒಂದನ್ನು...

‘ಬ್ರಿಟಿಷರಿಂದ ಕಠಿಣ ಶಿಕ್ಷೆ ಅನುಭವಿಸಿದವರು ಸಾವರ್ಕರ್’ ಎಂಬ ಕೇರಳ ಶಾಲೆಯೊಂದರ ಕ್ವಿಜ್‌ ಪ್ರಶ್ನೆ ತಂದಿಟ್ಟ ವಿವಾದ

ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರಂ ಮತ್ತು ಕುಂಬಳೆ ಉಪಜಿಲ್ಲೆಗಳ ಕಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಸ್ವಾತಂತ್ರ್ಯ ದಿನಾಚರಣೆ ಕ್ವಿಜ್‌ನಲ್ಲಿ ವಿ ವಿನಾಯಕ ದಾಮೋದರ ಸಾವರ್ಕರ್ ಕುರಿತಾದ ಪ್ರಶ್ನೆಯೊಂದು ತೀವ್ರ ವಿವಾದಕ್ಕೆ ಕಾರಣವಾಗಿದೆ....