Homeಫ್ಯಾಕ್ಟ್‌ಚೆಕ್FACT CHECK: ಕರ್ನಾಟಕದಲ್ಲಿ ಎಸ್‌ಸಿ, ಎಸ್‌ಟಿಗಳಿಂದ ಕಿತ್ತುಕೊಂಡು ಮುಸ್ಲಿಮರಿಗೆ ನೀಡಿದ್ದ ಮೀಸಲಾತಿ ರದ್ದುಪಡಿಸಿದ್ದೇವೆ ಎಂಬ ಮೋದಿ...

FACT CHECK: ಕರ್ನಾಟಕದಲ್ಲಿ ಎಸ್‌ಸಿ, ಎಸ್‌ಟಿಗಳಿಂದ ಕಿತ್ತುಕೊಂಡು ಮುಸ್ಲಿಮರಿಗೆ ನೀಡಿದ್ದ ಮೀಸಲಾತಿ ರದ್ದುಪಡಿಸಿದ್ದೇವೆ ಎಂಬ ಮೋದಿ ಹೇಳಿಕೆ ಸುಳ್ಳು

- Advertisement -
- Advertisement -

“ಕಾಂಗ್ರೆಸ್ ಸಂವಿಧಾನವನ್ನು ಗೌರವಿಸಲಿಲ್ಲ. ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಗೌರವಿಸಲಿಲ್ಲ. ಕರ್ನಾಟಕದಲ್ಲಿ ಬಿಜೆಪಿ ಸರ್ಕಾರದ ಮೂಲಕ ನಮಗೆ ಅವಕಾಶ ಸಿಕ್ಕಾಗ ನಾವು ಮಾಡಿದ ಮೊದಲ ಕೆಲಸವೆಂದರೆ, ಎಸ್‌ಸಿ, ಎಸ್‌ಟಿಗಳಿಂದ ಕಿತ್ತುಕೊಂಡು ನೀಡಿದ್ದ ಮುಸ್ಲಿಂ ಕೋಟಾವನ್ನು ನಾವು ನಿಲ್ಲಿಸಿದೆವು. ಹಕ್ಕುದಾರರಿಗೆ ಅವರ ಹಕ್ಕುಗಳನ್ನು ನಾವು ಕೊಟ್ಟೆವು” ಎಂದು ರಾಜಸ್ಥಾನದ ಟೋಂಕ್‌ನಲ್ಲಿ ಮಂಗಳವಾರ (ಏ.23) ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡುವಾಗ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಪ್ರಧಾನಿ ಮೋದಿ ಹೇಳಿದಂತೆ ಕರ್ನಾಟಕದಲ್ಲಿ ಎಸ್‌ಸಿ, ಎಸ್‌ಟಿಗಳಿಂದ ಕಿತ್ತುಕೊಂಡು ಮುಸ್ಲಿಮರಿಗೆ ನೀಡಿದ್ದ 4% ಮೀಸಲಾತಿಯನ್ನು ಬಿಜೆಪಿ ಸರ್ಕಾರ ಇದ್ದಾಗ ರದ್ದುಪಡಿಸಿ, ಅದನ್ನು ಮತ್ತೆ ಎಸ್‌ಸಿ, ಎಸ್‌ಟಿಗಳಿಗೆ ನೀಡಿದ್ದು ನಿಜಾನಾ? ಎಂಬುವುದರ ಸತ್ಯಾಸತ್ಯತೆಯನ್ನು ನಾನುಗೌರಿ.ಕಾಂ ಪರಿಶೀಲನೆ ನಡೆಸಿದೆ.

ಫ್ಯಾಕ್ಟ್‌ಚೆಕ್ : ಮಾರ್ಚ್ 2023ರಲ್ಲಿ, ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ, ರಾಜ್ಯದ ಬಿಜೆಪಿ ಸರ್ಕಾರವು “2ಬಿ” ಹಿಂದುಳಿದ ವರ್ಗದ ಅಡಿಯಲ್ಲಿ ಮುಸ್ಲಿಮರಿಗೆ ನೀಡಲಾದ 4% ಮೀಸಲಾತಿಯನ್ನು ರದ್ದುಗೊಳಿಸಿತ್ತು ಮತ್ತು ಸಮುದಾಯವನ್ನು ಸಾಮಾನ್ಯ ವರ್ಗದ EWSನ 10% ಕೋಟಾದಡಿ ತಂದಿತ್ತು.

ಮುಸ್ಲಿಮರಿಗೆ ನೀಡಲಾಗಿದ್ದ 4% ಮೀಸಲಾತಿಯನ್ನು ಒಕ್ಕಲಿಗರು ಮತ್ತು ಲಿಂಗಾಯತರಿಗೆ ಹಂಚಲು ಸರ್ಕಾರ ಮುಂದಾಗಿತ್ತು. ಒಕ್ಕಗಲಿಗರು 3ಎ ಅಡಿ 4 % ಮತ್ತು ಲಿಂಗಾಯತರು 3ಬಿ ಅಡಿ 5% ಮೀಸಲಾತಿ ಹೊಂದಿದ್ದರು. ಸರ್ಕಾರ ಒಕ್ಕಲಿಗರಿಗೆ 2 (ಸಿ) ಅಡಿಯಲ್ಲಿ 6% ಮತ್ತು ಲಿಂಗಾಯತರಿಗೆ 2 (ಡಿ) ಅಡಿಯಲ್ಲಿ 7% ಮೀಸಲಾತಿ ನೀಡಲು ನಿರ್ಧರಿಸಿತ್ತು. ಆದರೆ, ಇದು ಇನ್ನೂ ಜಾರಿಗೆ ಬಂದಿಲ್ಲ. ಸರ್ಕಾರದ ನಿರ್ಧಾರ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ. ಹಾಗಾಗಿ, ಪ್ರಕರಣ ಈಗ ನ್ಯಾಯಾಲಯದಲ್ಲಿದೆ.

ಇನ್ನು, ‘2ಬಿ’ ಹಿಂದುಳಿದ ವರ್ಗದ ಅಡಿಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಹಿಂದುಳಿದಿರುವಿಕೆಯ ಆಧಾರದ ಮೇಲೆ ಸರ್ಕಾರಿ ಉದ್ಯೋಗಗಳು ಮತ್ತು ಶಿಕ್ಷಣದಲ್ಲಿ ಮುಸ್ಲಿಮರಿಗೆ 4% ಮೀಸಲಾತಿಯನ್ನು ನೀಡಿದ್ದು, 1994 ರಲ್ಲಿ ಹೆಚ್ ಡಿ ದೇವೇಗೌಡ ನೇತೃತ್ವದ ಸರ್ಕಾರ. ಇದು, 1918 ರಲ್ಲಿ ಅಂದಿನ ಮೈಸೂರು ರಾಜಪ್ರಭುತ್ವದ ಆಳ್ವಿಕೆಯಲ್ಲಿ ಪ್ರಾರಂಭಿಸಿದ ಕ್ರಮದ ಮುಂದುವರಿದ ಭಾಗವಾಗಿತ್ತು ಎಂದು ತಿಳಿದು ಬಂದಿದೆ.

ಸದ್ಯಕ್ಕೆ, ರಾಜ್ಯದಲ್ಲಿ ಮುಸ್ಲಿಮರಿಗೆ ಒಬಿಸಿಯ 2ಬಿ ಅಡಿಯಲ್ಲಿ ನೀಡಲಾಗಿದ್ದ 4% ಮೀಸಲಾತಿ ರದ್ದಾಗಿಲ್ಲ. ಮುಸ್ಲಿಮರನ್ನು 10% ಮೀಸಲಾತಿ ಇರುವ ಇಡಬ್ಯುಎಸ್‌ ಅಡಿ ತರುವ ಪ್ರಯತ್ನವೂ ಸಫಲಗೊಂಡಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.

ಇನ್ನು ಎಸ್‌ಸಿ, ಎಸ್‌ಟಿ ವಿಚಾರಕ್ಕೆ ಬಂದರೆ, ಅವರ ಮೀಸಲಾತಿ ಈ ಹಿಂದಿನಿಂದಲೂ ಯಥಾ ಸ್ಥಿತಿಯಲ್ಲಿ ಇದೆ. ಎಸ್‌ಸಿಗಳಿಗೆ 15% ಮತ್ತು ಎಸ್‌ಟಿಗಳಿಗೆ 3% ಮೀಸಲಾತಿ ನೀಡಲಾಗಿದೆ. ಮುಸ್ಲಿಮರಿಗೆ ಒಬಿಸಿಯ 2ಬಿ ಅಡಿ ಪ್ರತ್ಯೇಕವಾಗಿ 4% ನೀಡಲಾಗಿತ್ತೇ ಹೊರತು, ಎಸ್‌ಸಿ, ಎಸ್‌ಟಿಗಳಿಂದ ಕಿತ್ತುಕೊಂಡು ಕೊಟ್ಟಿರಲಿಲ್ಲ. ಹಾಗಾಗಿ,ಎಸ್‌ಸಿ, ಎಸ್‌ಟಿಗಳಿಂದ ಕಿತ್ತು ಮುಸ್ಲಿಮರಿಗೆ ನೀಡಲಾಗಿದ್ದ 4% ಮೀಸಲಾತಿ ರದ್ದುಪಡಿಸಿದ್ದೇವೆ ಎಂಬ ಪ್ರಧಾನಿ ಮೋದಿಯವರ ಹೇಳಿಕೆ ಸುಳ್ಳು.

ಪ್ರಧಾನಿ ಮಾತನಾಡುವಾಗ, ಮುಸ್ಲಿಮರ 4% ಮೀಸಲಾತಿ ರದ್ದುಪಡಿಸಿ ಎಸ್‌ಸಿ, ಎಸ್‌ಟಿಗಳಿಗೆ ಅವರ ಹಕ್ಕು ಕೊಟ್ಟಿದ್ದೇವೆ ಎಂದಿದ್ದಾರೆ. ಇದರರ್ಥ, ಮುಸ್ಲಿಮರಿಂದ ಕಿತ್ತುಕೊಂಡ 4% ಎಸ್‌ಸಿ, ಎಸ್‌ಟಿಗಳಿಗೆ ಮರಳಿಸಿದ್ದೇವೆ ಎಂದು. ಇದು ಸುಳ್ಳು ಹೇಳಿಕೆಯಾಗಿದೆ. ಮುಸ್ಲಿಮರಿಗೆ ನೀಡಲಾಗಿದ್ದ 4% ಮೀಸಲಾತಿ ರದ್ದುಪಡಿಸಿ ಎಸ್‌ಸಿ, ಎಸ್‌ಟಿಗಳಿಗೆ ನೀಡಿಲ್ಲ.

ಪ್ರಧಾನಿ ನೀಡಿರುವ ಮತ್ತೊಂದು ಹೇಳಿಕೆ, ಕರ್ನಾಟಕದಲ್ಲಿ ಬಿಜೆಪಿ ಸರ್ಕಾರದ ಮೂಲಕ ನಮಗೆ ಅವಕಾಶ ಸಿಕ್ಕಾಗ ಮೊದಲು ಮಾಡಿದ ಕೆಲಸ ಮುಸ್ಲಿಮರ 4% ಮೀಸಲಾತಿ ರದ್ದುಪಡಿಸಿದ್ದು ಎಂಬುವುದು. ಆದರೆ, ಇದೂ ಸುಳ್ಳು ಹೇಳಿಕೆಯಾಗಿದೆ. ಬಿಜೆಪಿ ಸರ್ಕಾರ ಮುಸ್ಲಿಮರ ಮೀಸಲಾತಿ ರದ್ದುಪಡಿಸಿದ್ದು, ತಮ್ಮ ಅಧಿಕಾರವದಿಯ ಅಂತ್ಯದಲ್ಲಿ. ಅಂದರೆ, ಮಾರ್ಚ್‌ 2023ರಲ್ಲಿ.

ಗಮನಾರ್ಹ ಸಂಗತಿಯೆಂದರೆ, ಎಸ್‌ಸಿ, ಎಸ್‌ಟಿಗಳಿಂದ ಕಿತ್ತುಕೊಂಡು ಮುಸ್ಲಿಮರಿಗೆ 4% ಮೀಸಲಾತಿಯನ್ನು ನೀಡಲಾಗಿತ್ತು ಎಂದು ಪ್ರಧಾನಿ ಹೇಳಿದ್ದಾರೆ. ಆದರೆ, ಈ ಮೀಸಲಾತಿ ಮುಸ್ಲಿಮರಿಗೆ ನೀಡಿದ್ದು, ಹೆಚ್‌.ಡಿ ದೇವೇಗೌಡರ ನೇತೃತ್ವದ ಜನತಾದಳ ಸರ್ಕಾರ. ಇದೇ ದೇವೇಗೌಡರ ಪಕ್ಷ ಜೆಡಿಎಸ್‌ ಈಗ ಕರ್ನಾಟಕದಲ್ಲಿ ಬಿಜೆಪಿಯ ಮೈತ್ರಿ ಪಕ್ಷವಾಗಿದೆ. ದೇವೇಗೌಡರು ಮತ್ತು ಮೋದಿ ಇತ್ತೀಚೆಗೆ ಪರಸ್ಪರ ಹೊಗಳಿಕೆಯ ಮಾತುಗಳನ್ನಾಡಿದ್ದರು.

ಇದನ್ನೂ ಓದಿ : FACT CHECK: ಜಾತಿ ಗಣತಿ ಕುರಿತ ರಾಹುಲ್ ಗಾಂಧಿಯ ವೈರಲ್ ಕ್ಲಿಪ್ ಎಡಿಟೆಡ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...