Homeಫ್ಯಾಕ್ಟ್‌ಚೆಕ್Fact Check: ಚುನಾವಣಾ ಬಾಂಡ್‌ ಕುರಿತು ಪ್ರಧಾನಿ ಮೋದಿ ನೀಡಿರುವ ಹೇಳಿಕೆ ಸುಳ್ಳು

Fact Check: ಚುನಾವಣಾ ಬಾಂಡ್‌ ಕುರಿತು ಪ್ರಧಾನಿ ಮೋದಿ ನೀಡಿರುವ ಹೇಳಿಕೆ ಸುಳ್ಳು

- Advertisement -
- Advertisement -

ತಮಿಳಿನ ತಂತಿ ಟಿವಿ ಚಾನೆಲ್ ನಡೆಸಿದ ವಿಶೇಷ ಸಂದರ್ಶನದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಚುನಾವಣಾ ಬಾಂಡ್‌ ಕುರಿತು ಮಾತನಾಡಿದ್ದು, ಪ್ರಧಾನಿ ನೀಡಿರುವ ಹೇಳಿಕೆ ಹಲವು ಪ್ರಶ್ನೆಗಳನ್ನು ಹುಟ್ಟು ಹಾಕಿದೆ.

ವಿಶೇಷ ಸಂದರ್ಶನದ ಬರೊಬ್ಬರಿ 1 ಗಂಟೆ 2 ನಿಮಿಷ 56 ಸೆಕೆಂಡ್‌ನ ಸುದೀರ್ಘ ವಿಡಿಯೋವನ್ನು ಸ್ವತಃ ಪ್ರಧಾನಿ ಮೋದಿಯವರೇ ತಮ್ಮ ಅಧಿಕೃತ ಯೂಟ್ಯೂಬ್‌ ಚಾನೆಲ್‌ನಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೋದಲ್ಲಿ 53 ನಿಮಿಷ 58 ಸೆಕೆಂಡ್‌ನಿಂದ 54 ನಿಮಿಷ 43 ಸೆಕೆಂಡ್‌ ನಡುವೆ ಪ್ರಧಾನಿ ಚುನಾವಣಾ ಬಾಂಡ್‌ ಕುರಿತು ಮಾತನಾಡಿರುವುದು ಇದೆ.

ಸಂದರ್ಶನದಲ್ಲಿ ನಿರೂಪಕಿ, “ಸುಪ್ರೀಂ ಕೋರ್ಟ್ ಚುನಾವಣಾ ಬಾಂಡ್‌ ರದ್ದುಪಡಿಸಿರುವುದು ನಿಮ್ಮ ಸರ್ಕಾರಕ್ಕೆ ದೊಡ್ಡ ಹಿನ್ನಡೆಯಲ್ಲವೇ?” ಎಂದು ಪ್ರಧಾನಿಯನ್ನು ಕೇಳಿದ್ದಾರೆ. ಅದಕ್ಕೆ ಉತ್ತರಿಸಿದ ಪ್ರಧಾನಿ, “ನಮಗೆ ಯಾಕೆ ಹಿನ್ನಡೆ? ನೋಡಿ 2014ರ ಮೊದಲು ರಾಜಕೀಯ ಪಕ್ಷಗಳು ಕೋಟ್ಯಾಂತರ ರೂಪಾಯಿ ದೇಣಿಗೆ ಪಡೆಯುತ್ತಿದ್ದವು. ಆದರೆ, ಅದನ್ನು ಯಾರು, ಯಾರಿಗೆ ಕೊಟ್ಟಿದ್ದಾರೆ. ಎಷ್ಟು ಖರ್ಚಾಗಿದೆ ಇತ್ಯಾದಿ ಮಾಹಿತಿ ಗೊತ್ತಾಗುತ್ತಿರಲಿಲ್ಲ. ನಾವು ಚುನಾವಣಾ ಬಾಂಡ್ ತಂದ ಬಳಿಕ, ಯಾರು ಯಾವ ಪಕ್ಷಕ್ಕೆ ದೇಣಿಗೆ ಕೊಟ್ಟಿದ್ದಾರೆ? ಎಷ್ಟು ಕೊಟ್ಟಿದ್ದಾರೆ? ಎಷ್ಟು ಖರ್ಚಾಗಿದೆ? ಎಂಬ ಸಂಪೂರ್ಣ ದಾಖಲಾತಿ ಸಿಗುತ್ತಿತ್ತು” ಎಂದಿದ್ದಾರೆ.

ಯೂಟ್ಯೂಬ್‌ ವಿಡಿಯೋ ಲಿಂಕ್ ಇಲ್ಲಿದೆ 

ಪ್ರಧಾನಿ ಮೋದಿಯವರು ನೀಡಿರುವ ಈ ಹೇಳಿಕೆ ಮತ್ತು ಸುಪ್ರೀಂ ಕೋರ್ಟ್‌ನಲ್ಲಿ ಚುನಾವಣಾ ಬಾಂಡ್‌ ಪ್ರಕರಣದ ವಿಚಾರಣೆ ವೇಳೆ ನಡೆದ ಕೆಲವು ಸನ್ನಿವೇಶಗಳು ಹೊಂದಾಣಿಕೆಯಾಗುತ್ತಿಲ್ಲ. ಹಾಗಾಗಿ, ಪ್ರಧಾನಿ ಹೇಳಿರುವುದು ನಿಜವೇ? ಎಂದು ನೋಡೋಣ.

ಫ್ಯಾಕ್ಟ್‌ಚೆಕ್ : ಪ್ರಧಾನಿ ನರೇಂದ್ರ ಮೋದಿ ನೀಡಿರುವ ಹೇಳಿಕೆ ಎಷ್ಟು ಸತ್ಯ ಎಂಬುವುದರ ಕುರಿತು ನಾನುಗೌರಿ.ಕಾಂ ಸತ್ಯಾಸತ್ಯತೆ ಪರಿಶೀಲನೆ ನಡೆಸಿದೆ. ಇದಕ್ಕಾಗಿ ಚುನಾವಣಾ ಬಾಂಡ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈ ಹಿಂದೆ ಮಾಧ್ಯಮಗಳಲ್ಲಿ ಪ್ರಕಟಗೊಂಡ ವರದಿಗಳನ್ನು ನಾವು ಗಮನಿಸಿದ್ದೇವೆ.

ಅಕ್ಟೋಬರ್ 30, 2023ರಂದು Livelaw.in ಪ್ರಕಟಿಸಿದ ‘Citizens Don’t Have Right To Know Source Of Political Parties’ Funds : Attorney General Tells Supreme Court In Electoral Bonds Case’ಎಂಬ ಶೀರ್ಷಿಕೆಯ ವರದಿಯಲ್ಲಿ ” ಚುನಾವಣಾ ಬಾಂಡ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತ ಸರ್ಕಾರ ಅಟಾರ್ನಿ ಜನರಲ್ ಆರ್‌. ವೆಂಕಟರಮಣಿ ಅವರು ಸುಪ್ರೀಂ ಕೋರ್ಟ್‌ಗೆ ಪ್ರತಿಕ್ರಿಯೆ ನೀಡಿದ್ದು, ಸಂವಿಧಾನದ ವಿಧಿ 19(1)(ಎ) ಅಡಿಯಲ್ಲಿ ರಾಜಕೀಯ ಪಕ್ಷಗಳ ದೇಣಿಗೆ ಕುರಿತು ನಾಗರಿಕರಿಗೆ ಮಾಹಿತಿ ಪಡೆಯುವ ಹಕ್ಕಿಲ್ಲ ಎಂದು ತಿಳಿಸಿದ್ದಾರೆ. ಚುನಾವಣಾ ಬಾಂಡ್‌ ಮಾಹಿತಿ ಒದಗಿಸುವಂತೆ ಪ್ರತಿಪಾದಿಸಿದ ಅರ್ಜಿದಾರರ ವಾದವನ್ನು ಅಟಾರ್ನಿ ಜನರಲ್ ತಳ್ಳಿ ಹಾಕಿದ್ದಾರೆ ಎಂದು” ತಿಳಿಸಿದೆ.

ಸುದ್ದಿ ಲಿಂಕ್ ಇಲ್ಲಿದೆ 

ಜನವರಿ 11, 2020ರಂದು ‘thewire.in’ಪ್ರಕಟಿಸಿದ ‘Electoral Bonds: SBI Refuses Yet Again to Divulge Information on Rs 1 Crore Donors’ಎಂಬ ಶೀರ್ಷಿಕೆಯ ವರದಿಯಲ್ಲಿ “ಚುನಾವಣಾ ಬಾಂಡ್‌ಗಳನ್ನು ವಿತರಿಸಲು ಕೇಂದ್ರದಿಂದ ಅಧಿಕಾರ ಪಡೆದಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, 1 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಚುನಾವಣಾ ಬಾಂಡ್‌ಗಳನ್ನು ಖರೀದಿಸಿದ ದೊಡ್ಡ ದಾನಿಗಳ ವಿವರಗಳನ್ನು ‘ಮಾಹಿತಿ ಹಕ್ಕು ಕಾಯ್ದೆ’ಯಡಿ ಬಹಿರಂಗಪಡಿಸಲು ಮತ್ತೊಮ್ಮೆ ನಿರಾಕರಿಸಿದೆ.” ಎಂದು ಹೇಳಿದೆ.

ಸುದ್ದಿ ಲಿಂಕ್ ಇಲ್ಲಿದೆ 

ಫೆಬ್ರವರಿ 15, 2024ರಂದು ಚುನಾವಣಾ ಬಾಂಡ್ ಯೋಜನೆಯನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್‌ “ಈ ಯೋಜನೆ ಅಸಂವಿಧಾನಿಕ ಮತ್ತು ಜನರ ‘ಮಾಹಿತಿ ಹಕ್ಕಿಗೆ’ ವಿರುದ್ದವಾಗಿದೆ ಎಂದು ಸ್ಪಷ್ಟವಾಗಿ ಹೇಳಿದೆ. ಈ ಮೂಲಕ ನಮಗೆ ತಿಳಿಯುವುದು ಏನೆಂದರೆ, ಚುನಾವಣಾ ಬಾಂಡ್‌ನ ಮಾಹಿಯು ‘ಮಾಹಿತಿ ಹಕ್ಕು ಕಾಯ್ದೆ'(ಆರ್‌ಟಿಐ) ಅಡಿ ದೊರೆಯುತ್ತಿರಲಿಲ್ಲ ಎಂಬುದು.

ಸುದ್ದಿ ಲಿಂಕ್ ಇಲ್ಲಿದೆ 

ಫೆ.15ರಂದು ಚುನಾವಣಾ ಬಾಂಡ್ ಯೋಜನೆ ರದ್ದುಗೊಳಿಸಿ ಐತಿಹಾಸಿಕ ತೀರ್ಪು ನೀಡಿದ್ದ ಸುಪ್ರೀಂ ಕೋರ್ಟ್, ಮಾರ್ಚ್ 6ರೊಳಗೆ ಚುನಾವಣಾ ಆಯೋಗಕ್ಕೆ ಬಾಂಡ್‌ಗಳ ಕುರಿತು ಮಾಹಿತಿಯನ್ನು ಒದಗಿಸುವಂತೆ ಎಸ್‌ಬಿಐಗೆ ಸೂಚಿಸಿತ್ತು ಮತ್ತು ಈ ಮಾಹಿತಿಯನ್ನು ಮಾರ್ಚ್ 12ರೊಳಗೆ ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿತ್ತು.

2024ರ ಮಾರ್ಚ್ 6ರೊಳಗೆ ಮಾಹಿತಿ ಒದಗಿಸದ ಎಸ್‌ಬಿಐ, ಮಾರ್ಚ್ 4ರಂದು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿ ಬಾಂಡ್‌ ಮಾಹಿತಿ ಒದಗಿಸಲು ಜೂನ್‌ 30ರವರೆಗೆ ಸಮಯ ವಿಸ್ತರಣೆ ಮಾಡುವಂತೆ ಸೂಚಿಸಿತ್ತು. ಮಾರ್ಚ್‌ 11ರಂದು ಈ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಎಸ್‌ಬಿಐಗೆ ಛೀಮಾರಿ ಹಾಕಿ ನಾಳೆಯೊಳಗೆ (ಮಾರ್ಚ್‌ 12) ಮಾಹಿತಿ ಒದಗಿಸಿ ಎಂದು ಖಡಕ್ ಆದೇಶ ನೀಡಿತ್ತು. ಮಾರ್ಚ್‌ 15ರೊಳಗೆ ಎಸ್‌ಬಿಐ ನೀಡಿದ ಮಾಹಿತಿಯನ್ನು ವೆಬ್‌ಸೈಟ್‌ನಲ್ಲಿ ಪ್ರಕಟಿಸುವಂತೆ ಚುನಾವಣಾ ಆಯೋಗಕ್ಕೂ ನಿರ್ದೇಶನ ನೀಡಿತ್ತು.

ಕೊನೆಗೂ ಮಾರ್ಚ್‌ 12 ರಂದು ಚುನಾವಣಾ ಬಾಂಡ್‌ಗಳ ಕುರಿತ ಮಾಹಿತಿಯನ್ನು ಎಸ್‌ಬಿಐ ಚುನಾವಣಾ ಆಯೋಗಕ್ಕೆ ನೀಡಿತ್ತು. ಅದನ್ನು ಗಡುವಿಗಿಂತ ಒಂದು ದಿನ ಮೊದಲೇ, ಅಂದರೆ ಮಾರ್ಚ್‌ 14ರಂದು ಸಂಜೆಯೇ ಚುನಾವಣಾ ಆಯೋಗ ವೆಬ್‌ಸೈಟ್‌ನಲ್ಲಿ ಪ್ರಕಟಿಸಿತ್ತು. ಇದರಿಂದ ಮೊದಲ ಬಾರಿಗೆ ದೇಶದ ಯಾವ ಉದ್ಯಮ ಸಂಸ್ಥೆಗಳು ಮತ್ತು ವ್ಯಕ್ತಿಗಳು ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡಿದ್ದಾರೆ. ಎಷ್ಟು ನೀಡಿದ್ದಾರೆ. ರಾಜಕೀಯ ಪಕ್ಷಗಳು ಪಡೆದ ದೇಣಿಗೆ ಎಷ್ಟು ಇತ್ಯಾದಿ ಬಯಲಾಗಿತ್ತು.

ಆದರೆ, ಯಾವ ಸಂಸ್ಥೆ ಅಥವಾ ವ್ಯಕ್ತಿ ನಿರ್ದಿಷ್ಟವಾಗಿ ಯಾವ ರಾಜಕೀಯ ಪಕ್ಷಕ್ಕೆ ದೇಣಿಗೆ ನೀಡಿದ್ದಾರೆ ಎಂಬ ಮಾಹಿತಿ ಹೊರ ಬಂದಿರಲಿಲ್ಲ. ಕಾರಣ, ಅದನ್ನು ಕಂಡು ಹಿಡಿಯಲು ಸಹಕಾರಿಯಾಗುವ ವಿಶೇಷ ಸಂಖ್ಯೆ ಅಥವಾ ‘ಆಲ್ಫಾ ನ್ಯೂಮರಿಕ್ ನಂಬರ್’ ಅನ್ನು ಎಸ್‌ಬಿಐ ಚುನಾವಣಾ ಆಯೋಗಕ್ಕೆ ನೀಡಿರಲಿಲ್ಲ. ಮಾರ್ಚ್‌ 18ರಂದು ಮತ್ತೊಮ್ಮೆ ಎಸ್‌ಬಿಐ ಅನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್, ಆಲ್ಫಾ ನ್ಯೂಮರಿಕ್ ನಂಬರ್ ಸಹಿತ ಎಲ್ಲಾ ಮಾಹಿತಿಗಳನ್ನು ಮಾರ್ಚ್‌ 21ರ ಒಳಗೆ ಚುನಾವಣಾ ಆಯೋಗಕ್ಕೆ ನೀಡುವಂತೆ ಸೂಸಿತ್ತು.

ಮಾರ್ಚ್ 21ರಂದು ‘ಆಲ್ಫಾ ನ್ಯೂಮರಿಕ್’ ನಂಬರ್ ಸೇರಿದಂತೆ ಎಲ್ಲಾ ಮಾಹಿತಿಗಳನ್ನು ಚುನಾವಣಾ ಆಯೋಗಕ್ಕೆ ನೀಡಿದ್ದೇವೆ ಎಂದು ಎಸ್‌ಬಿಐ ಅಧ್ಯಕ್ಷರು ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿದ್ದರು. ಅಂದೇ ಸಂಜೆ ಚುನಾವಣಾ ಆಯೋಗ ಬಾಂಡ್‌ ನಂಬರ್‌ಗಳೊಂದಿಗೆ ತನ್ನ ವೆಬ್‌ಸೈಟ್‌ನಲ್ಲಿ ಮಾಹಿತಿ ಪ್ರಕಟಿಸಿತ್ತು.

ಎಸ್‌ಬಿಐ ನೀಡಿದ ಆಲ್ಪಾ ನ್ಯೂಮರಿಕ್ ಕೋಡ್‌ ಬಳಸಿ ಅನೇಕ ಮಾಧ್ಯಮ ಸಂಸ್ಥೆಗಳು, ವ್ಯಕ್ತಿಗಳು ಯಾವ ರಾಜಕೀಯ ಪಕ್ಷಕ್ಕೆ, ಎಷ್ಟು ದೇಣಿಗೆ ನೀಡಿದ್ದಾರೆ ಎಂಬ ಮಾಹಿತಿ ಹೊರಗೆಳೆದಿದ್ದರು. ಈ ಮೂಲಕ ಚುನಾವಣಾ ಬಾಂಡ್ ಎಂಬ ‘ಅಸಂವಿಧಾನಿಕ’ ಯೋಜನೆಯ ಬಣ್ಣ ಬಯಲಾಗಿತ್ತು.

ನಾವು ಮೇಲೆ ಉಲ್ಲೇಖಿಸಿದ ಮಾಧ್ಯಮ ವರದಿಗಳು ಇತರ ಮಾಹಿತಿಯನ್ನು ಗಮನಿಸುವುದಾದರೆ, ಸುಪ್ರೀಂ ಕೋರ್ಟ್ ಛೀಮಾರಿ ಹಾಕಿದ ಬಳಿಕವಷ್ಟೇ ಚುನಾವಣಾ ಬಾಂಡ್‌ಗಳ ಮಾಹಿತಿ ಹೊರ ಬಂದಿದೆ. ಅದಕ್ಕೂ ಮುನ್ನ ಆರ್‌ಟಿಐ ಅಡಿ ಅರ್ಜಿ ಹಾಕಿದರೂ, ಮಾಹಿತಿ ಸಿಗುತ್ತಿರಲಿಲ್ಲ. ಆರ್‌ಟಿಐ ಅಡಿ ಮಾಹಿತಿ ನೀಡಲು ಸಾಧ್ಯವಿಲ್ಲ ಎಂದು ಸ್ವತಃ ಅಟಾರ್ನಿ ಜನರಲ್ ಅವರೇ ಸುಪ್ರೀಂ ಕೋರ್ಟ್‌ನಲ್ಲಿ ಹೇಳಿದ್ದರು. ಹಾಗಾಗಿ, “ನಾವು ಚುನಾವಣಾ ಬಾಂಡ್‌ ತಂದ ಬಳಿಕ ಯಾವ ರಾಜಕೀಯ ಪಕ್ಷಕ್ಕೆ ಯಾರು, ಎಷ್ಟೆಷ್ಟು ದೇಣಿಗೆ ಕೊಟ್ಟಿದ್ದಾರೆ ಎಂಬ ಮಾಹಿತಿ ಗೊತ್ತಾಗುತ್ತಿತ್ತು” ಎಂಬ ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆ ಸಂಪೂರ್ಣ ಸುಳ್ಳಾಗಿದೆ. ಸುಪ್ರೀಂ ಕೋರ್ಟ್‌ ಚುನಾವಣಾ ಬಾಂಡ್‌ ರದ್ದುಗೊಳಿಸಿ ಮಾಹಿತಿ ಬಹಿರಂಗಪಡಿಸುವಂತೆ ಆದೇಶ ನೀಡಿರದಿದ್ದರೆ, ಇವತ್ತಿಗೂ ಬಾಂಡ್‌ಗಳ ಮಾಹಿತಿ ಜನ ಸಾಮಾನ್ಯಗರಿಗೆ ಗೊತ್ತಾಗುತ್ತಿರಲಿಲ್ಲ.

ಇದನ್ನೂ ಓದಿ : Fact Check: ಪ್ರಧಾನಿಯಾಗಿದ್ದ ಮನಮೋಹನ್ ಸಿಂಗ್‌ರನ್ನು ಸೋನಿಯಾ ಗಾಂಧಿ ಅವಮಾನಿಸಿದ್ದರು ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...