Homeಫ್ಯಾಕ್ಟ್‌ಚೆಕ್Fact Check: ಚುನಾವಣಾ ಬಾಂಡ್‌ ಕುರಿತು ಪ್ರಧಾನಿ ಮೋದಿ ನೀಡಿರುವ ಹೇಳಿಕೆ ಸುಳ್ಳು

Fact Check: ಚುನಾವಣಾ ಬಾಂಡ್‌ ಕುರಿತು ಪ್ರಧಾನಿ ಮೋದಿ ನೀಡಿರುವ ಹೇಳಿಕೆ ಸುಳ್ಳು

- Advertisement -
- Advertisement -

ತಮಿಳಿನ ತಂತಿ ಟಿವಿ ಚಾನೆಲ್ ನಡೆಸಿದ ವಿಶೇಷ ಸಂದರ್ಶನದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಚುನಾವಣಾ ಬಾಂಡ್‌ ಕುರಿತು ಮಾತನಾಡಿದ್ದು, ಪ್ರಧಾನಿ ನೀಡಿರುವ ಹೇಳಿಕೆ ಹಲವು ಪ್ರಶ್ನೆಗಳನ್ನು ಹುಟ್ಟು ಹಾಕಿದೆ.

ವಿಶೇಷ ಸಂದರ್ಶನದ ಬರೊಬ್ಬರಿ 1 ಗಂಟೆ 2 ನಿಮಿಷ 56 ಸೆಕೆಂಡ್‌ನ ಸುದೀರ್ಘ ವಿಡಿಯೋವನ್ನು ಸ್ವತಃ ಪ್ರಧಾನಿ ಮೋದಿಯವರೇ ತಮ್ಮ ಅಧಿಕೃತ ಯೂಟ್ಯೂಬ್‌ ಚಾನೆಲ್‌ನಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೋದಲ್ಲಿ 53 ನಿಮಿಷ 58 ಸೆಕೆಂಡ್‌ನಿಂದ 54 ನಿಮಿಷ 43 ಸೆಕೆಂಡ್‌ ನಡುವೆ ಪ್ರಧಾನಿ ಚುನಾವಣಾ ಬಾಂಡ್‌ ಕುರಿತು ಮಾತನಾಡಿರುವುದು ಇದೆ.

ಸಂದರ್ಶನದಲ್ಲಿ ನಿರೂಪಕಿ, “ಸುಪ್ರೀಂ ಕೋರ್ಟ್ ಚುನಾವಣಾ ಬಾಂಡ್‌ ರದ್ದುಪಡಿಸಿರುವುದು ನಿಮ್ಮ ಸರ್ಕಾರಕ್ಕೆ ದೊಡ್ಡ ಹಿನ್ನಡೆಯಲ್ಲವೇ?” ಎಂದು ಪ್ರಧಾನಿಯನ್ನು ಕೇಳಿದ್ದಾರೆ. ಅದಕ್ಕೆ ಉತ್ತರಿಸಿದ ಪ್ರಧಾನಿ, “ನಮಗೆ ಯಾಕೆ ಹಿನ್ನಡೆ? ನೋಡಿ 2014ರ ಮೊದಲು ರಾಜಕೀಯ ಪಕ್ಷಗಳು ಕೋಟ್ಯಾಂತರ ರೂಪಾಯಿ ದೇಣಿಗೆ ಪಡೆಯುತ್ತಿದ್ದವು. ಆದರೆ, ಅದನ್ನು ಯಾರು, ಯಾರಿಗೆ ಕೊಟ್ಟಿದ್ದಾರೆ. ಎಷ್ಟು ಖರ್ಚಾಗಿದೆ ಇತ್ಯಾದಿ ಮಾಹಿತಿ ಗೊತ್ತಾಗುತ್ತಿರಲಿಲ್ಲ. ನಾವು ಚುನಾವಣಾ ಬಾಂಡ್ ತಂದ ಬಳಿಕ, ಯಾರು ಯಾವ ಪಕ್ಷಕ್ಕೆ ದೇಣಿಗೆ ಕೊಟ್ಟಿದ್ದಾರೆ? ಎಷ್ಟು ಕೊಟ್ಟಿದ್ದಾರೆ? ಎಷ್ಟು ಖರ್ಚಾಗಿದೆ? ಎಂಬ ಸಂಪೂರ್ಣ ದಾಖಲಾತಿ ಸಿಗುತ್ತಿತ್ತು” ಎಂದಿದ್ದಾರೆ.

ಯೂಟ್ಯೂಬ್‌ ವಿಡಿಯೋ ಲಿಂಕ್ ಇಲ್ಲಿದೆ 

ಪ್ರಧಾನಿ ಮೋದಿಯವರು ನೀಡಿರುವ ಈ ಹೇಳಿಕೆ ಮತ್ತು ಸುಪ್ರೀಂ ಕೋರ್ಟ್‌ನಲ್ಲಿ ಚುನಾವಣಾ ಬಾಂಡ್‌ ಪ್ರಕರಣದ ವಿಚಾರಣೆ ವೇಳೆ ನಡೆದ ಕೆಲವು ಸನ್ನಿವೇಶಗಳು ಹೊಂದಾಣಿಕೆಯಾಗುತ್ತಿಲ್ಲ. ಹಾಗಾಗಿ, ಪ್ರಧಾನಿ ಹೇಳಿರುವುದು ನಿಜವೇ? ಎಂದು ನೋಡೋಣ.

ಫ್ಯಾಕ್ಟ್‌ಚೆಕ್ : ಪ್ರಧಾನಿ ನರೇಂದ್ರ ಮೋದಿ ನೀಡಿರುವ ಹೇಳಿಕೆ ಎಷ್ಟು ಸತ್ಯ ಎಂಬುವುದರ ಕುರಿತು ನಾನುಗೌರಿ.ಕಾಂ ಸತ್ಯಾಸತ್ಯತೆ ಪರಿಶೀಲನೆ ನಡೆಸಿದೆ. ಇದಕ್ಕಾಗಿ ಚುನಾವಣಾ ಬಾಂಡ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈ ಹಿಂದೆ ಮಾಧ್ಯಮಗಳಲ್ಲಿ ಪ್ರಕಟಗೊಂಡ ವರದಿಗಳನ್ನು ನಾವು ಗಮನಿಸಿದ್ದೇವೆ.

ಅಕ್ಟೋಬರ್ 30, 2023ರಂದು Livelaw.in ಪ್ರಕಟಿಸಿದ ‘Citizens Don’t Have Right To Know Source Of Political Parties’ Funds : Attorney General Tells Supreme Court In Electoral Bonds Case’ಎಂಬ ಶೀರ್ಷಿಕೆಯ ವರದಿಯಲ್ಲಿ ” ಚುನಾವಣಾ ಬಾಂಡ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತ ಸರ್ಕಾರ ಅಟಾರ್ನಿ ಜನರಲ್ ಆರ್‌. ವೆಂಕಟರಮಣಿ ಅವರು ಸುಪ್ರೀಂ ಕೋರ್ಟ್‌ಗೆ ಪ್ರತಿಕ್ರಿಯೆ ನೀಡಿದ್ದು, ಸಂವಿಧಾನದ ವಿಧಿ 19(1)(ಎ) ಅಡಿಯಲ್ಲಿ ರಾಜಕೀಯ ಪಕ್ಷಗಳ ದೇಣಿಗೆ ಕುರಿತು ನಾಗರಿಕರಿಗೆ ಮಾಹಿತಿ ಪಡೆಯುವ ಹಕ್ಕಿಲ್ಲ ಎಂದು ತಿಳಿಸಿದ್ದಾರೆ. ಚುನಾವಣಾ ಬಾಂಡ್‌ ಮಾಹಿತಿ ಒದಗಿಸುವಂತೆ ಪ್ರತಿಪಾದಿಸಿದ ಅರ್ಜಿದಾರರ ವಾದವನ್ನು ಅಟಾರ್ನಿ ಜನರಲ್ ತಳ್ಳಿ ಹಾಕಿದ್ದಾರೆ ಎಂದು” ತಿಳಿಸಿದೆ.

ಸುದ್ದಿ ಲಿಂಕ್ ಇಲ್ಲಿದೆ 

ಜನವರಿ 11, 2020ರಂದು ‘thewire.in’ಪ್ರಕಟಿಸಿದ ‘Electoral Bonds: SBI Refuses Yet Again to Divulge Information on Rs 1 Crore Donors’ಎಂಬ ಶೀರ್ಷಿಕೆಯ ವರದಿಯಲ್ಲಿ “ಚುನಾವಣಾ ಬಾಂಡ್‌ಗಳನ್ನು ವಿತರಿಸಲು ಕೇಂದ್ರದಿಂದ ಅಧಿಕಾರ ಪಡೆದಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, 1 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಚುನಾವಣಾ ಬಾಂಡ್‌ಗಳನ್ನು ಖರೀದಿಸಿದ ದೊಡ್ಡ ದಾನಿಗಳ ವಿವರಗಳನ್ನು ‘ಮಾಹಿತಿ ಹಕ್ಕು ಕಾಯ್ದೆ’ಯಡಿ ಬಹಿರಂಗಪಡಿಸಲು ಮತ್ತೊಮ್ಮೆ ನಿರಾಕರಿಸಿದೆ.” ಎಂದು ಹೇಳಿದೆ.

ಸುದ್ದಿ ಲಿಂಕ್ ಇಲ್ಲಿದೆ 

ಫೆಬ್ರವರಿ 15, 2024ರಂದು ಚುನಾವಣಾ ಬಾಂಡ್ ಯೋಜನೆಯನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್‌ “ಈ ಯೋಜನೆ ಅಸಂವಿಧಾನಿಕ ಮತ್ತು ಜನರ ‘ಮಾಹಿತಿ ಹಕ್ಕಿಗೆ’ ವಿರುದ್ದವಾಗಿದೆ ಎಂದು ಸ್ಪಷ್ಟವಾಗಿ ಹೇಳಿದೆ. ಈ ಮೂಲಕ ನಮಗೆ ತಿಳಿಯುವುದು ಏನೆಂದರೆ, ಚುನಾವಣಾ ಬಾಂಡ್‌ನ ಮಾಹಿಯು ‘ಮಾಹಿತಿ ಹಕ್ಕು ಕಾಯ್ದೆ'(ಆರ್‌ಟಿಐ) ಅಡಿ ದೊರೆಯುತ್ತಿರಲಿಲ್ಲ ಎಂಬುದು.

ಸುದ್ದಿ ಲಿಂಕ್ ಇಲ್ಲಿದೆ 

ಫೆ.15ರಂದು ಚುನಾವಣಾ ಬಾಂಡ್ ಯೋಜನೆ ರದ್ದುಗೊಳಿಸಿ ಐತಿಹಾಸಿಕ ತೀರ್ಪು ನೀಡಿದ್ದ ಸುಪ್ರೀಂ ಕೋರ್ಟ್, ಮಾರ್ಚ್ 6ರೊಳಗೆ ಚುನಾವಣಾ ಆಯೋಗಕ್ಕೆ ಬಾಂಡ್‌ಗಳ ಕುರಿತು ಮಾಹಿತಿಯನ್ನು ಒದಗಿಸುವಂತೆ ಎಸ್‌ಬಿಐಗೆ ಸೂಚಿಸಿತ್ತು ಮತ್ತು ಈ ಮಾಹಿತಿಯನ್ನು ಮಾರ್ಚ್ 12ರೊಳಗೆ ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿತ್ತು.

2024ರ ಮಾರ್ಚ್ 6ರೊಳಗೆ ಮಾಹಿತಿ ಒದಗಿಸದ ಎಸ್‌ಬಿಐ, ಮಾರ್ಚ್ 4ರಂದು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿ ಬಾಂಡ್‌ ಮಾಹಿತಿ ಒದಗಿಸಲು ಜೂನ್‌ 30ರವರೆಗೆ ಸಮಯ ವಿಸ್ತರಣೆ ಮಾಡುವಂತೆ ಸೂಚಿಸಿತ್ತು. ಮಾರ್ಚ್‌ 11ರಂದು ಈ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಎಸ್‌ಬಿಐಗೆ ಛೀಮಾರಿ ಹಾಕಿ ನಾಳೆಯೊಳಗೆ (ಮಾರ್ಚ್‌ 12) ಮಾಹಿತಿ ಒದಗಿಸಿ ಎಂದು ಖಡಕ್ ಆದೇಶ ನೀಡಿತ್ತು. ಮಾರ್ಚ್‌ 15ರೊಳಗೆ ಎಸ್‌ಬಿಐ ನೀಡಿದ ಮಾಹಿತಿಯನ್ನು ವೆಬ್‌ಸೈಟ್‌ನಲ್ಲಿ ಪ್ರಕಟಿಸುವಂತೆ ಚುನಾವಣಾ ಆಯೋಗಕ್ಕೂ ನಿರ್ದೇಶನ ನೀಡಿತ್ತು.

ಕೊನೆಗೂ ಮಾರ್ಚ್‌ 12 ರಂದು ಚುನಾವಣಾ ಬಾಂಡ್‌ಗಳ ಕುರಿತ ಮಾಹಿತಿಯನ್ನು ಎಸ್‌ಬಿಐ ಚುನಾವಣಾ ಆಯೋಗಕ್ಕೆ ನೀಡಿತ್ತು. ಅದನ್ನು ಗಡುವಿಗಿಂತ ಒಂದು ದಿನ ಮೊದಲೇ, ಅಂದರೆ ಮಾರ್ಚ್‌ 14ರಂದು ಸಂಜೆಯೇ ಚುನಾವಣಾ ಆಯೋಗ ವೆಬ್‌ಸೈಟ್‌ನಲ್ಲಿ ಪ್ರಕಟಿಸಿತ್ತು. ಇದರಿಂದ ಮೊದಲ ಬಾರಿಗೆ ದೇಶದ ಯಾವ ಉದ್ಯಮ ಸಂಸ್ಥೆಗಳು ಮತ್ತು ವ್ಯಕ್ತಿಗಳು ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡಿದ್ದಾರೆ. ಎಷ್ಟು ನೀಡಿದ್ದಾರೆ. ರಾಜಕೀಯ ಪಕ್ಷಗಳು ಪಡೆದ ದೇಣಿಗೆ ಎಷ್ಟು ಇತ್ಯಾದಿ ಬಯಲಾಗಿತ್ತು.

ಆದರೆ, ಯಾವ ಸಂಸ್ಥೆ ಅಥವಾ ವ್ಯಕ್ತಿ ನಿರ್ದಿಷ್ಟವಾಗಿ ಯಾವ ರಾಜಕೀಯ ಪಕ್ಷಕ್ಕೆ ದೇಣಿಗೆ ನೀಡಿದ್ದಾರೆ ಎಂಬ ಮಾಹಿತಿ ಹೊರ ಬಂದಿರಲಿಲ್ಲ. ಕಾರಣ, ಅದನ್ನು ಕಂಡು ಹಿಡಿಯಲು ಸಹಕಾರಿಯಾಗುವ ವಿಶೇಷ ಸಂಖ್ಯೆ ಅಥವಾ ‘ಆಲ್ಫಾ ನ್ಯೂಮರಿಕ್ ನಂಬರ್’ ಅನ್ನು ಎಸ್‌ಬಿಐ ಚುನಾವಣಾ ಆಯೋಗಕ್ಕೆ ನೀಡಿರಲಿಲ್ಲ. ಮಾರ್ಚ್‌ 18ರಂದು ಮತ್ತೊಮ್ಮೆ ಎಸ್‌ಬಿಐ ಅನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್, ಆಲ್ಫಾ ನ್ಯೂಮರಿಕ್ ನಂಬರ್ ಸಹಿತ ಎಲ್ಲಾ ಮಾಹಿತಿಗಳನ್ನು ಮಾರ್ಚ್‌ 21ರ ಒಳಗೆ ಚುನಾವಣಾ ಆಯೋಗಕ್ಕೆ ನೀಡುವಂತೆ ಸೂಸಿತ್ತು.

ಮಾರ್ಚ್ 21ರಂದು ‘ಆಲ್ಫಾ ನ್ಯೂಮರಿಕ್’ ನಂಬರ್ ಸೇರಿದಂತೆ ಎಲ್ಲಾ ಮಾಹಿತಿಗಳನ್ನು ಚುನಾವಣಾ ಆಯೋಗಕ್ಕೆ ನೀಡಿದ್ದೇವೆ ಎಂದು ಎಸ್‌ಬಿಐ ಅಧ್ಯಕ್ಷರು ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿದ್ದರು. ಅಂದೇ ಸಂಜೆ ಚುನಾವಣಾ ಆಯೋಗ ಬಾಂಡ್‌ ನಂಬರ್‌ಗಳೊಂದಿಗೆ ತನ್ನ ವೆಬ್‌ಸೈಟ್‌ನಲ್ಲಿ ಮಾಹಿತಿ ಪ್ರಕಟಿಸಿತ್ತು.

ಎಸ್‌ಬಿಐ ನೀಡಿದ ಆಲ್ಪಾ ನ್ಯೂಮರಿಕ್ ಕೋಡ್‌ ಬಳಸಿ ಅನೇಕ ಮಾಧ್ಯಮ ಸಂಸ್ಥೆಗಳು, ವ್ಯಕ್ತಿಗಳು ಯಾವ ರಾಜಕೀಯ ಪಕ್ಷಕ್ಕೆ, ಎಷ್ಟು ದೇಣಿಗೆ ನೀಡಿದ್ದಾರೆ ಎಂಬ ಮಾಹಿತಿ ಹೊರಗೆಳೆದಿದ್ದರು. ಈ ಮೂಲಕ ಚುನಾವಣಾ ಬಾಂಡ್ ಎಂಬ ‘ಅಸಂವಿಧಾನಿಕ’ ಯೋಜನೆಯ ಬಣ್ಣ ಬಯಲಾಗಿತ್ತು.

ನಾವು ಮೇಲೆ ಉಲ್ಲೇಖಿಸಿದ ಮಾಧ್ಯಮ ವರದಿಗಳು ಇತರ ಮಾಹಿತಿಯನ್ನು ಗಮನಿಸುವುದಾದರೆ, ಸುಪ್ರೀಂ ಕೋರ್ಟ್ ಛೀಮಾರಿ ಹಾಕಿದ ಬಳಿಕವಷ್ಟೇ ಚುನಾವಣಾ ಬಾಂಡ್‌ಗಳ ಮಾಹಿತಿ ಹೊರ ಬಂದಿದೆ. ಅದಕ್ಕೂ ಮುನ್ನ ಆರ್‌ಟಿಐ ಅಡಿ ಅರ್ಜಿ ಹಾಕಿದರೂ, ಮಾಹಿತಿ ಸಿಗುತ್ತಿರಲಿಲ್ಲ. ಆರ್‌ಟಿಐ ಅಡಿ ಮಾಹಿತಿ ನೀಡಲು ಸಾಧ್ಯವಿಲ್ಲ ಎಂದು ಸ್ವತಃ ಅಟಾರ್ನಿ ಜನರಲ್ ಅವರೇ ಸುಪ್ರೀಂ ಕೋರ್ಟ್‌ನಲ್ಲಿ ಹೇಳಿದ್ದರು. ಹಾಗಾಗಿ, “ನಾವು ಚುನಾವಣಾ ಬಾಂಡ್‌ ತಂದ ಬಳಿಕ ಯಾವ ರಾಜಕೀಯ ಪಕ್ಷಕ್ಕೆ ಯಾರು, ಎಷ್ಟೆಷ್ಟು ದೇಣಿಗೆ ಕೊಟ್ಟಿದ್ದಾರೆ ಎಂಬ ಮಾಹಿತಿ ಗೊತ್ತಾಗುತ್ತಿತ್ತು” ಎಂಬ ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆ ಸಂಪೂರ್ಣ ಸುಳ್ಳಾಗಿದೆ. ಸುಪ್ರೀಂ ಕೋರ್ಟ್‌ ಚುನಾವಣಾ ಬಾಂಡ್‌ ರದ್ದುಗೊಳಿಸಿ ಮಾಹಿತಿ ಬಹಿರಂಗಪಡಿಸುವಂತೆ ಆದೇಶ ನೀಡಿರದಿದ್ದರೆ, ಇವತ್ತಿಗೂ ಬಾಂಡ್‌ಗಳ ಮಾಹಿತಿ ಜನ ಸಾಮಾನ್ಯಗರಿಗೆ ಗೊತ್ತಾಗುತ್ತಿರಲಿಲ್ಲ.

ಇದನ್ನೂ ಓದಿ : Fact Check: ಪ್ರಧಾನಿಯಾಗಿದ್ದ ಮನಮೋಹನ್ ಸಿಂಗ್‌ರನ್ನು ಸೋನಿಯಾ ಗಾಂಧಿ ಅವಮಾನಿಸಿದ್ದರು ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...