HomeಮುಖಪುಟFACT CHECK: ಉದ್ಯಾನವನಗಳಲ್ಲಿ ಯೋಗ ಮಾಡುವುದನ್ನು ತಡೆಯುತ್ತೇವೆ ಎಂದು ಪ್ರಿಯಾಂಕಾ ಗಾಂಧಿ ಹೇಳಿಲ್ಲ

FACT CHECK: ಉದ್ಯಾನವನಗಳಲ್ಲಿ ಯೋಗ ಮಾಡುವುದನ್ನು ತಡೆಯುತ್ತೇವೆ ಎಂದು ಪ್ರಿಯಾಂಕಾ ಗಾಂಧಿ ಹೇಳಿಲ್ಲ

- Advertisement -
- Advertisement -

“ರಸ್ತೆಯಲ್ಲಿ ನಮಾಜ್ ಮಾಡದಂತೆ ನೀವು ತಡೆಯುವುದಾದರೆ, ಉದ್ಯಾನವನಗಳಲ್ಲಿ ಯೋಗ ಕೂಡ ಮಾಡುವುದನ್ನು ನಾವು ತಡೆಯುತ್ತೇವೆ-ಪ್ರಿಯಾಂಕಾ ವಾದ್ರಾ”

“ಹಿಂದೂಗಳೇ, ಕಾಂಗ್ರೆಸ್ ಪಕ್ಷ ನೇರವಾಗಿ ಹಿಂದೂಗಳ ಅಸ್ಮಿತೆಗೆ ಧಕ್ಕೆ ತರುವ ಕೆಲಸ ಮಾಡುತ್ತಿದೆ. ನೀವಿನ್ನೂ ನಿಮ್ಮ ಸ್ಥಳೀಯ ಕಾಂಗ್ರೆಸ್ ನಾಯಕರನ್ನು ಬೆಂಬಲಿಸಿ ಇಂತಹ ದೇಶದ್ರೋಹಿಗಳಿಗೆ ಬಲ ತುಂಬುತ್ತೀರಾ?”

ಈ ರೀತಿ ಹೇಳಲಾದ ಪೋಸ್ಟರ್ ಒಂದು ಬಿಜೆಪಿ ಪರ ಮಾಧ್ಯಮ ಪೋಸ್ಟ್‌ ಕಾರ್ಡ್ ಹೆಸರಿನಲ್ಲಿ ಹರಿದಾಡುತ್ತಿದೆ.

ಫ್ಯಾಕ್ಟ್‌ಚೆಕ್ : ಪೋಸ್ಟ್‌ ಕಾರ್ಡ್ ಹೆಸರಿನ ಪೋಸ್ಟರಿನಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿಯವರ ಹೇಳಿಕೆ ಎಂದು ಹಂಚಿಕೊಳ್ಳಲಾಗುತ್ತಿರುವ ವಿಷಯದ ಕುರಿತು ನಾನುಗೌರಿ.ಕಾಂ ಸತ್ಯಾಸತ್ಯತೆ ಪರಿಶೀಲನೆ ನಡೆಸಿದೆ.

ಇದಕ್ಕಾಗಿ ನಾವು ಮೊದಲು ಪ್ರಿಯಾಂಕಾ ಗಾಂಧಿ ಆ ರೀತಿಯ ಹೇಳಿಕೆ ನೀಡಿದ್ದಾರೆಯೇ? ಎಂದು ತಿಳಿದುಕೊಳ್ಳಲು ಗೂಗಲ್‌ನಲ್ಲಿ ಹುಡುಕಾಡಿದ್ದೇವೆ.

ನಮ್ಮ ಪರಿಶೀಲನೆ ವೇಳೆ “ಉದ್ಯಾನವನಗಳಲ್ಲಿ ಯೋಗ ಮಾಡುವುದನ್ನು ತಡೆಯುತ್ತೇವೆ ಎಂದು ಪ್ರಿಯಾಂಕಾ ಗಾಂಧಿ ಹೇಳಿರುವ ಯಾವುದೇ ಮಾಧ್ಯಮ ವರದಿಗಳು ನಮಗೆ ದೊರೆತಿಲ್ಲ. ಹಾಗಾಗಿ, ವೈರಲ್ ಪೋಸ್ಟರ್‌ನಲ್ಲಿರುವ ವಿಚಾರ ಸುಳ್ಳು ಎಂದು ಖಚಿತಪಡಿಸಬಹುದು.

ವೈರಲ್ ಪೋಸ್ಟರ್‌ನಲ್ಲಿರುವ ವಿಷಯದ ಕುರಿತು ನಾವು ಇನ್ನಷ್ಟು ಸರ್ಚ್‌ ಮಾಡಿದಾಗ ಮೇ 27,2020ರಂದು ಇಂಗ್ಲಿಷ್ ಫ್ಯಾಕ್ಟ್‌ಚೆಕ್ ವೆಬ್‌ಸೈಟ್‌ factly.in ಈ ಕುರಿತು ಸತ್ಯಾಸತ್ಯತೆ ಪರಿಶೀಲನೆ ನಡೆಸಿರುವುದು ಗೊತ್ತಾಗಿದೆ. factly.in ಕೂಡ ಪ್ರಿಯಾಂಕಾ ಗಾಂಧಿ ಆ ರೀತಿಯ ಯಾವುದೇ ಹೇಳಿಕೆ ಕೊಟ್ಟಿಲ್ಲ. ಈ ಬಗ್ಗೆ ಯಾವುದೇ ಮಾಧ್ಯಮ ವರದಿಗಳು ದೊರೆತಿಲ್ಲ ಎಂದು ಹೇಳಿದೆ.

ನಮ್ಮ ಪರಿಶೀಲನೆಯಲ್ಲಿ ತಿಳಿದು ಬಂದ ಅಂಶವೇನೆಂದರೆ, ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಉದ್ಯಾನವನಗಳಲ್ಲಿ ಯೋಗ ಮಾಡುವುದನ್ನು ತಡೆಯುತ್ತೇವೆ ಎಂದು ಎಲ್ಲೂ ಹೇಳಿಲ್ಲ. ಪ್ರಿಯಾಂಕಾ ಗಾಂಧಿ ಆ ರೀತಿಯ ಹೇಳಿಕೆ ನೀಡಿದ್ದಾರೆ ಎಂದು ಹಿಂದಿಯಲ್ಲಿ ಸುಳ್ಳು ಪೋಸ್ಟರ್ ಮಾಡಿ ಹಂಚಿಕೊಳ್ಳಲಾಗಿತ್ತು. ಅದನ್ನು ನೋಡಿ ಕನ್ನಡದ ಪೋಸ್ಟ್ ಕಾರ್ಡ್‌ ಪೋಸ್ಟರ್‌ ಮಾಡಿ ಹಂಚಿರುವ ಸಾಧ್ಯತೆಯಿದೆ.

ಇದನ್ನೂ ಓದಿ : Fact Check : ನಿರುದ್ಯೋಗ ಕುರಿತ ಬಿಜೆಪಿ ಸಂಸದನ ಹೇಳಿಕೆಯ ವಿಡಿಯೋ ‘ಡೀಪ್ ಫೇಕ್’ ಅಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...