Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಹತ್ರಾಸ್‌ ಭೇಟಿಯ ಫೋಟೋದಲ್ಲಿ ಪ್ರಿಯಾಂಕಾ ಗಾಂಧಿ ಅಪ್ಪಿಕೊಂಡಿದ್ದ ಮಹಿಳೆ ಯಾರು?

ಫ್ಯಾಕ್ಟ್‌ಚೆಕ್: ಹತ್ರಾಸ್‌ ಭೇಟಿಯ ಫೋಟೋದಲ್ಲಿ ಪ್ರಿಯಾಂಕಾ ಗಾಂಧಿ ಅಪ್ಪಿಕೊಂಡಿದ್ದ ಮಹಿಳೆ ಯಾರು?

ಸಂತ್ರಸ್ತೆಯ ಭಾಭಿ ಎಂದು ಬಿಂಬಿಸಿಕೊಂಡಿರುವವರನ್ನು ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅಪ್ಪಿಕೊಂಡು ಸಮಾಧಾನಪಡಿಸುತ್ತಿರುವುದು ನಕ್ಸಲ್ ಆಪರೇಟೀವ್‌ನ ಭಾಗ ಎಂದು ಬಿಜೆಪಿಯ ಪ್ರೀತಿ ಗಾಂಧಿ ಆರೋಪಿಸಿದ್ದರು.

- Advertisement -
- Advertisement -

ದೇಶದಲ್ಲಿ ಸಂಚಲನ ಮೂಡಿಸಿದ ಹತ್ರಾಸ್ ಪ್ರಕರಣದ ಸಂತ್ರಸ್ತ ಕುಟುಂಬಕ್ಕೆ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಭೇಟಿ ನಿಡಿ ಸಾಂತ್ವಾನ ಹೇಳಿದ್ದರು. ಅಲ್ಲಿ ತೆಗೆದಿದ್ದ ಸಾಂತ್ವಾನ ಹೇಳುತ್ತಿರುವ ಚಿತ್ರವನ್ನು ಹಲವರು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡು, ಈ ಚಿತ್ರದಲ್ಲಿ ಪ್ರಿಯಾಂಕಾ ಗಾಂಧಿ ಅಪ್ಪಿಕೊಂಡಿದ್ದ ಮಹಿಳೆ ಸಂತ್ರಸ್ತೆಯ ಕುಟುಂಬದವರಲ್ಲ, ಬದಲಿಗೆ ಅಕೆ ಒಬ್ಬ ನಕ್ಸಲೈಟ್ ಎಂದು ಪ್ರತಿಪಾದಿಸಿದ್ದಾರೆ.

ಆಂಧ್ರಪ್ರದೇಶದ ಬಿಜೆಪಿಯ ಮಾಜಿ ಸಂಸದರಾದ ಗೀತಾ ಕೊತ್ತಪಲ್ಲಿ ಎಂಬುವವರು ಈ ಚಿತ್ರವನ್ನು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದು, “ಈ ಮಹಿಳೆ ಯಾರು? ಈಕೆ ಸಂತ್ರಸ್ತೆಯ ತಾಯಿಯಲ್ಲ, ಸಂತ್ರಸ್ತೆಯ ಮನೆಗೆ ಹೇಗೆ ಬಂದರು? ಪ್ರಿಯಾಂಕಾ ಅವರನ್ನು ಅಪ್ಪಿಕೊಳ್ಳಲು ಹೇಗೆ ಅವಕಾಶ ನೀಡಿದರು? ಇದೇ ಮಹಿಳೆಯನ್ನು ಬರ್ಖಾ ದತ್ (ವಾಷಿಂಗ್‌ಟನ್ ಪೋಸ್ಟ್‌ನ ಪತ್ರಕರ್ತರು) ಕೂಡಾ ಸಂದರ್ಶಿಸಿದ್ದಾರೆ… ಇದು ಯೋಜಿತ ಪಿತೂರಿಯಂತೆ ಕಾಣುತ್ತದೆ. ನಿಮ್ಮ ಅಭಿಪ್ರಾಯವೇನು? #FakeNaxalBhabhi” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌‌: ಪಂಜಾಬ್‌‌ನ ಈ ಮಹಿಳಾ ಅಧಿಕಾರಿ ಮೃತಪಟ್ಟಿದ್ದು ಅತ್ಯಾಚಾರದಿಂದಲ್ಲ, ರಸ್ತೆ ಅಫಘಾತದಿಂದ

ಬಿಜೆಪಿ ರಾಷ್ಟ್ರೀಯ ಮಹಿಳಾ ಮೋರ್ಚಾದ ರಾಷ್ಟ್ರೀಯ ಮೇಲ್ವಿಚಾರಕಿ ಪ್ರೀತಿ ಗಾಂಧಿ ಟ್ವೀಟ್ ಮಾಡಿ, “ಸಂತ್ರಸ್ತೆಯ ಭಾಭಿ ಎಂದು ಬಿಂಬಿಸಿಕೊಂಡಿರುವವರನ್ನು ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅಪ್ಪಿಕೊಂಡು ಸಮಾಧಾನಪಡಿಸುತ್ತಿರುವುದು ನಕ್ಸಲ್ ಆಪರೇಟೀವ್‌ನ ಭಾಗ. ಸೆಪ್ಟಂಬರ್ 16 ರಿಂದ 22ರವರೆಗೆ ಸಂತ್ರಸ್ತೆಯ ಮನೆಯಲ್ಲಿಯೇ ಇದ್ದು, ಈಗ ನಿಗೂಢವಾಗಿ ಕಣ್ಮರೆಯಾಗಿದ್ದಾರೆ!! ಈ ಪಿತೂರಿಯ ಮಟ್ಟ ಭಯಾನಕವಾಗಿದೆ. #HthrasCase” ಎಂದು ಬರೆದುಕೊಂಡಿದ್ದಾರೆ. ಇವರು ಟ್ವಿಟ್ಟರ್‌ನಲ್ಲಿ ಸುಮಾರು 4.59 ಲಕ್ಷ ಅನುಯಾಯಿಗಳನ್ನು ಹೊಂದಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: 13 ವರ್ಷದ ಬಾಲಕಿಯನ್ನು ಮುಸ್ಲಿಂ ವ್ಯಕ್ತಿ ಅತ್ಯಾಚಾರ ಮಾಡಿ ಸುಟ್ಟಿದ್ದು ಸುಳ್ಳು!

ಕಳೆದ ಕೆಲವು ದಿನಗಳಿಂದ ಸಂತ್ರಸ್ತೆಯ ಕುಟುಂಬದವರು ಎಂದು ಹೇಳಿಕೊಂಡು ನಕ್ಸಲೈಟ್‌ ಒಬ್ಬರು ಕುಟುಂಬವನ್ನು ಸೇರಿಕೊಂಡಿದ್ದಾರೆ ಎಂದು ಆರೋಪಿಸಲಾಗಿದ್ದು, ಆ ನಕ್ಸಲೈಟ್‌ಗೆ ಸಾಂತ್ವಾನ ಹೇಳಲು ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಹತ್ರಾಸ್‌ಗೆ ಭೇಟಿ ನೀಡಿದ್ದರು ಎಂಬ ವದಂತಿಗಳು ಹರಿದಾಡುತ್ತಿವೆ ಎಂದು ಆಲ್ಟ್‌ ನ್ಯೂಸ್ ವರದಿ ಮಾಡಿದೆ.

ಫೇಸ್‌ಬುಕ್‌ನಲ್ಲಿ, ಸೋಶಿಯಲ್ ತಮಾಶಾ ಎಂಬ ಪುಟವು ಈ ಚಿತ್ರವನ್ನು ಹಂಚಿಕೊಂಡಿದ್ದು, “ನಕಲಿ ಅತ್ತಿಗೆಯೊಂದಿಗೆ ನಕಲಿ ಗಾಂಧಿ” ಎಂದು ಬರೆದಿದೆ. ಫೇಸ್‌ಬುಕ್‌ನ ಈ ಪುಟವು ಈ ಹಿಂದೆಯೂ ಅನೇಕ ಬಾರಿ ಸುಳ್ಳು ಮಾಹಿತಿಯನ್ನು ಹರಡಿದೆ.

ಇದನ್ನೂ ಓದಿ: ನರೇಂದ್ರ ಮೋದಿ ಗುಜರಾತ್‌ನಲ್ಲಿ ಕ್ರೂಸ್ ಹಡಗು ಸೇವೆಯನ್ನು ಪ್ರಾರಂಭಿಸಿದ್ದಾರೆಯೇ? ಇಲ್ಲಿದೆ ವಿವರ

ಹೀಗೆ ಸಾಮಾಜಿಕ ಮಾಧ್ಯಮಗಳು ಸೇರಿದಂತೆ, ಪರ್ಫಾರ್ಮ್ ಇಂಡಿಯಾ, ವಿಕೆ ನ್ಯೂಸ್, ಬೆಸ್ಟ್ ಹಿಂದಿ ನ್ಯೂಸ್ ಮತ್ತು ಹರಿಯಾಣ ಅಬ್ಟಾಕ್ ಸೇರಿದಂತೆ ಕೆಲವು ವೆಬ್‌ಸೈಟ್‌ಗಳೂ ಸಹ ಪ್ರಿಯಾಂಕಾ ಅಪ್ಪಿಕೊಂಡಿದ್ದ ಮಹಿಳೆ ಸಂತ್ರಸ್ತೆಯ ಸಂಬಂಧಿಯಲ್ಲ ಎಂಬ ಪ್ರತಿಪಾದನೆಯೊಂದಿಗೆ ವರದಿಗಳನ್ನು ಮಾಡಿವೆ.

ಫ್ಯಾಕ್ಟ್-ಚೆಕ್:

ಅಕ್ಟೋಬರ್ 3 ರಂದು ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ರಾಹುಲ್ ಗಾಂಧಿ ಸಂತ್ರಸ್ತೆಯ ಕುಟುಂಬವನ್ನು ಭೇಟಿಯಾದರು. ಹಲವಾರು ಮಾಧ್ಯಮ ಸಂಸ್ಥೆಗಳು ಈ ಸಭೆಯ ಚಿತ್ರಗಳನ್ನು ಮತ್ತು ವಿಡಿಯೋ ತುಣುಕನ್ನು ಅಪ್‌ಲೋಡ್ ಮಾಡಿವೆ. ಅದೇ ದಿನ ನಡೆದ ಇಂಡಿಯಾ ಟುಡೆ ವರದಿಯ ಪ್ರಕಾರ ಪ್ರಿಯಾಂಕಾ ಗಾಂಧಿ ಹತ್ರಾಸ್ ಸಂತ್ರಸ್ತೆಯ ತಾಯಿಯನ್ನು ತಬ್ಬಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಕಂಗನಾಗೆ ಬೆಂಬಲ ನೀಡಲು ಮುಂಬೈಗೆ ಆಗಮಿಸಿತೆ ಕರ್ಣಿಸೇನಾ!: ಸತ್ಯಾಸತ್ಯತೆ ಏನು..?

ಸುದ್ದಿ ಸಂಸ್ಥೆ ಎಎನ್‌ಐ ಮತ್ತು ಪತ್ರಕರ್ತೆ ಮರಿಯಾ ಶಕಿಲ್ ಅವರು ಅಕ್ಟೋಬರ್ 3 ರಂದು, ಪ್ರಿಯಾಂಕಾ ಗಾಂಧಿ ಇಬ್ಬರು ಮಹಿಳೆಯರನ್ನು ಅಪ್ಪಿಕೊಂಡಿದ್ದ ವೀಡಿಯೊವನ್ನು ಟ್ವೀಟ್ ಮಾಡಿದ್ದಾರೆ. ಇದರಲ್ಲಿ ಸಂತ್ರಸ್ತೆಯ ತಾಯಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ತಬ್ಬಿಕೊಳ್ಳುತ್ತಿರುವುದನ್ನು ಕಾಣಬಹುದು.

ಪ್ರಿಯಾಂಕಾ ಗಾಂಧಿ ವಾದ್ರಾ ನಿಜಕ್ಕೂ ಸಂತ್ರಸ್ತೆಯ ತಾಯಿಯನ್ನು ತಬ್ಬಿಕೊಳ್ಳುತ್ತಿದ್ದಾರೆ ಎಂಬುದನ್ನು ಸಂತ್ರಸ್ತೆಯ ತಾಯಿ ಧರಿಸಿರುವ ಸೀರೆಯ ಗುರುತಿನಿಂದ ಪತ್ತೆಮಾಡಬಹುದಾಗಿದೆ. ಚಿತ್ರದಲ್ಲಿ ಮಹಿಳೆಯ ಮುಖವನ್ನು ತೋರಿಸದ ಕಾರಣ, ಇತರ ಮಾಧ್ಯಮ ಸಂಸ್ಥೆಗಳು ಮತ್ತು ಅವರೊಂದಿಗೆ ಮಾತನಾಡಿದ ಪತ್ರಕರ್ತರು ಪಡೆದ ದೃಶ್ಯಗಳನ್ನು ಬಳಸಿದೆ.

ಅಕ್ಟೋಬರ್ 3 ರಂದು, ಬರ್ಖಾ ದತ್ ಸಂತ್ರಸ್ತೆಯ ತಾಯಿಯೊಂದಿಗಿರುವ ಚಿತ್ರವನ್ನು ಟ್ವೀಟ್ ಮಾಡಿದ್ದಾರೆ. ಇಲ್ಲಿ, ಪ್ರಿಯಾಂಕಾರನ್ನು ತಬ್ಬಿಕೊಳ್ಳುವಾಗ ಆಕೆ ಧರಿಸಿದ್ದ ಅದೇ ಸೀರೆಯಲ್ಲಿಯೇ ಕಾಣಿಸಿಕೊಂಡಿದ್ದಾರೆ. ಇಂಡಿಯಾ ಟುಡೆ ಸಹ ಅದೇ ದಿನ ಸಂತ್ರಸ್ತೆಯ ತಾಯಿ ಮತ್ತು ಸಹೋದರನೊಂದಿಗೆ ಮಾತನಾಡಿದೆ. ಈ ವೀಡಿಯೊದಲ್ಲೂ ಸಂತ್ರಸ್ತೆಯ ತಾಯಿ ಅದೇ ಸೀರೆ ಧರಿಸಿರುವುದು ಕಂಡುಬರುತ್ತದೆ.

ಇದನ್ನೂ ಓದಿ: ಕೇರಳದ ಹಿಂದೂ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ? ಇಲ್ಲಿದೆ ಫ್ಯಾಕ್ಟ್‌ಚೆಕ್‌ ವಿವರ

ಇದಲ್ಲದೆ, ಸಂತ್ರಸ್ತೆಯ ತಾಯಿಯನ್ನು ಸೆಪ್ಟೆಂಬರ್ 30 ರಂದು ಟೈಮ್ಸ್ ನೌ ಮಾಧ್ಯಮದವರು ಸಂದರ್ಶಿಸಿದರು. ಅಲ್ಲಿ ಅವರನ್ನು ಮತ್ತೆ ಅದೇ ಸೀರೆಯಲ್ಲಿ ಕಾಣಬಹುದು.

ಆದ್ದರಿಂದ, ವೈರಲ್ ಆಗುತ್ತಿರುವ ಫೋಟೋದಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ ತಬ್ಬಿಕೊಳ್ಳುತ್ತಿರುವುದು ಸಂತ್ರಸ್ತೆಯ ತಾಯಿ ಎಂದು ಖಚಿತವಾಗಿ ಹೇಳಬಹುದು.

ಹತ್ರಾಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕಷ್ಟು ಸುಳ್ಳು ಸುದ್ದಿಗಳು ಹರಿದಾಡುತ್ತಿದ್ದು, ಅವುಗಳ ಸಾಲಿಗೆ ಈಗ ಮತ್ತೊಂದು ಸೇರ್ಪಡೆಯೇ ಈ ನಕ್ಸಲ್ ಸುದ್ದಿ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಮುಸ್ಲಿಂ ಮದುವೆಯಲ್ಲಿ ಪಾಲ್ಗೊಂಡಿದ್ದಕ್ಕೆ ಕೇರಳದ RSS ಕಾರ್ಯಕರ್ತನ ಮೇಲೆ ಹಲ್ಲೆ ಮಾಡಲಾಯಿತೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...