Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಹತ್ರಾಸ್‌ ಭೇಟಿಯ ಫೋಟೋದಲ್ಲಿ ಪ್ರಿಯಾಂಕಾ ಗಾಂಧಿ ಅಪ್ಪಿಕೊಂಡಿದ್ದ ಮಹಿಳೆ ಯಾರು?

ಫ್ಯಾಕ್ಟ್‌ಚೆಕ್: ಹತ್ರಾಸ್‌ ಭೇಟಿಯ ಫೋಟೋದಲ್ಲಿ ಪ್ರಿಯಾಂಕಾ ಗಾಂಧಿ ಅಪ್ಪಿಕೊಂಡಿದ್ದ ಮಹಿಳೆ ಯಾರು?

ಸಂತ್ರಸ್ತೆಯ ಭಾಭಿ ಎಂದು ಬಿಂಬಿಸಿಕೊಂಡಿರುವವರನ್ನು ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅಪ್ಪಿಕೊಂಡು ಸಮಾಧಾನಪಡಿಸುತ್ತಿರುವುದು ನಕ್ಸಲ್ ಆಪರೇಟೀವ್‌ನ ಭಾಗ ಎಂದು ಬಿಜೆಪಿಯ ಪ್ರೀತಿ ಗಾಂಧಿ ಆರೋಪಿಸಿದ್ದರು.

- Advertisement -
- Advertisement -

ದೇಶದಲ್ಲಿ ಸಂಚಲನ ಮೂಡಿಸಿದ ಹತ್ರಾಸ್ ಪ್ರಕರಣದ ಸಂತ್ರಸ್ತ ಕುಟುಂಬಕ್ಕೆ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಭೇಟಿ ನಿಡಿ ಸಾಂತ್ವಾನ ಹೇಳಿದ್ದರು. ಅಲ್ಲಿ ತೆಗೆದಿದ್ದ ಸಾಂತ್ವಾನ ಹೇಳುತ್ತಿರುವ ಚಿತ್ರವನ್ನು ಹಲವರು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡು, ಈ ಚಿತ್ರದಲ್ಲಿ ಪ್ರಿಯಾಂಕಾ ಗಾಂಧಿ ಅಪ್ಪಿಕೊಂಡಿದ್ದ ಮಹಿಳೆ ಸಂತ್ರಸ್ತೆಯ ಕುಟುಂಬದವರಲ್ಲ, ಬದಲಿಗೆ ಅಕೆ ಒಬ್ಬ ನಕ್ಸಲೈಟ್ ಎಂದು ಪ್ರತಿಪಾದಿಸಿದ್ದಾರೆ.

ಆಂಧ್ರಪ್ರದೇಶದ ಬಿಜೆಪಿಯ ಮಾಜಿ ಸಂಸದರಾದ ಗೀತಾ ಕೊತ್ತಪಲ್ಲಿ ಎಂಬುವವರು ಈ ಚಿತ್ರವನ್ನು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದು, “ಈ ಮಹಿಳೆ ಯಾರು? ಈಕೆ ಸಂತ್ರಸ್ತೆಯ ತಾಯಿಯಲ್ಲ, ಸಂತ್ರಸ್ತೆಯ ಮನೆಗೆ ಹೇಗೆ ಬಂದರು? ಪ್ರಿಯಾಂಕಾ ಅವರನ್ನು ಅಪ್ಪಿಕೊಳ್ಳಲು ಹೇಗೆ ಅವಕಾಶ ನೀಡಿದರು? ಇದೇ ಮಹಿಳೆಯನ್ನು ಬರ್ಖಾ ದತ್ (ವಾಷಿಂಗ್‌ಟನ್ ಪೋಸ್ಟ್‌ನ ಪತ್ರಕರ್ತರು) ಕೂಡಾ ಸಂದರ್ಶಿಸಿದ್ದಾರೆ… ಇದು ಯೋಜಿತ ಪಿತೂರಿಯಂತೆ ಕಾಣುತ್ತದೆ. ನಿಮ್ಮ ಅಭಿಪ್ರಾಯವೇನು? #FakeNaxalBhabhi” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌‌: ಪಂಜಾಬ್‌‌ನ ಈ ಮಹಿಳಾ ಅಧಿಕಾರಿ ಮೃತಪಟ್ಟಿದ್ದು ಅತ್ಯಾಚಾರದಿಂದಲ್ಲ, ರಸ್ತೆ ಅಫಘಾತದಿಂದ

ಬಿಜೆಪಿ ರಾಷ್ಟ್ರೀಯ ಮಹಿಳಾ ಮೋರ್ಚಾದ ರಾಷ್ಟ್ರೀಯ ಮೇಲ್ವಿಚಾರಕಿ ಪ್ರೀತಿ ಗಾಂಧಿ ಟ್ವೀಟ್ ಮಾಡಿ, “ಸಂತ್ರಸ್ತೆಯ ಭಾಭಿ ಎಂದು ಬಿಂಬಿಸಿಕೊಂಡಿರುವವರನ್ನು ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅಪ್ಪಿಕೊಂಡು ಸಮಾಧಾನಪಡಿಸುತ್ತಿರುವುದು ನಕ್ಸಲ್ ಆಪರೇಟೀವ್‌ನ ಭಾಗ. ಸೆಪ್ಟಂಬರ್ 16 ರಿಂದ 22ರವರೆಗೆ ಸಂತ್ರಸ್ತೆಯ ಮನೆಯಲ್ಲಿಯೇ ಇದ್ದು, ಈಗ ನಿಗೂಢವಾಗಿ ಕಣ್ಮರೆಯಾಗಿದ್ದಾರೆ!! ಈ ಪಿತೂರಿಯ ಮಟ್ಟ ಭಯಾನಕವಾಗಿದೆ. #HthrasCase” ಎಂದು ಬರೆದುಕೊಂಡಿದ್ದಾರೆ. ಇವರು ಟ್ವಿಟ್ಟರ್‌ನಲ್ಲಿ ಸುಮಾರು 4.59 ಲಕ್ಷ ಅನುಯಾಯಿಗಳನ್ನು ಹೊಂದಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: 13 ವರ್ಷದ ಬಾಲಕಿಯನ್ನು ಮುಸ್ಲಿಂ ವ್ಯಕ್ತಿ ಅತ್ಯಾಚಾರ ಮಾಡಿ ಸುಟ್ಟಿದ್ದು ಸುಳ್ಳು!

ಕಳೆದ ಕೆಲವು ದಿನಗಳಿಂದ ಸಂತ್ರಸ್ತೆಯ ಕುಟುಂಬದವರು ಎಂದು ಹೇಳಿಕೊಂಡು ನಕ್ಸಲೈಟ್‌ ಒಬ್ಬರು ಕುಟುಂಬವನ್ನು ಸೇರಿಕೊಂಡಿದ್ದಾರೆ ಎಂದು ಆರೋಪಿಸಲಾಗಿದ್ದು, ಆ ನಕ್ಸಲೈಟ್‌ಗೆ ಸಾಂತ್ವಾನ ಹೇಳಲು ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಹತ್ರಾಸ್‌ಗೆ ಭೇಟಿ ನೀಡಿದ್ದರು ಎಂಬ ವದಂತಿಗಳು ಹರಿದಾಡುತ್ತಿವೆ ಎಂದು ಆಲ್ಟ್‌ ನ್ಯೂಸ್ ವರದಿ ಮಾಡಿದೆ.

ಫೇಸ್‌ಬುಕ್‌ನಲ್ಲಿ, ಸೋಶಿಯಲ್ ತಮಾಶಾ ಎಂಬ ಪುಟವು ಈ ಚಿತ್ರವನ್ನು ಹಂಚಿಕೊಂಡಿದ್ದು, “ನಕಲಿ ಅತ್ತಿಗೆಯೊಂದಿಗೆ ನಕಲಿ ಗಾಂಧಿ” ಎಂದು ಬರೆದಿದೆ. ಫೇಸ್‌ಬುಕ್‌ನ ಈ ಪುಟವು ಈ ಹಿಂದೆಯೂ ಅನೇಕ ಬಾರಿ ಸುಳ್ಳು ಮಾಹಿತಿಯನ್ನು ಹರಡಿದೆ.

ಇದನ್ನೂ ಓದಿ: ನರೇಂದ್ರ ಮೋದಿ ಗುಜರಾತ್‌ನಲ್ಲಿ ಕ್ರೂಸ್ ಹಡಗು ಸೇವೆಯನ್ನು ಪ್ರಾರಂಭಿಸಿದ್ದಾರೆಯೇ? ಇಲ್ಲಿದೆ ವಿವರ

ಹೀಗೆ ಸಾಮಾಜಿಕ ಮಾಧ್ಯಮಗಳು ಸೇರಿದಂತೆ, ಪರ್ಫಾರ್ಮ್ ಇಂಡಿಯಾ, ವಿಕೆ ನ್ಯೂಸ್, ಬೆಸ್ಟ್ ಹಿಂದಿ ನ್ಯೂಸ್ ಮತ್ತು ಹರಿಯಾಣ ಅಬ್ಟಾಕ್ ಸೇರಿದಂತೆ ಕೆಲವು ವೆಬ್‌ಸೈಟ್‌ಗಳೂ ಸಹ ಪ್ರಿಯಾಂಕಾ ಅಪ್ಪಿಕೊಂಡಿದ್ದ ಮಹಿಳೆ ಸಂತ್ರಸ್ತೆಯ ಸಂಬಂಧಿಯಲ್ಲ ಎಂಬ ಪ್ರತಿಪಾದನೆಯೊಂದಿಗೆ ವರದಿಗಳನ್ನು ಮಾಡಿವೆ.

ಫ್ಯಾಕ್ಟ್-ಚೆಕ್:

ಅಕ್ಟೋಬರ್ 3 ರಂದು ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ರಾಹುಲ್ ಗಾಂಧಿ ಸಂತ್ರಸ್ತೆಯ ಕುಟುಂಬವನ್ನು ಭೇಟಿಯಾದರು. ಹಲವಾರು ಮಾಧ್ಯಮ ಸಂಸ್ಥೆಗಳು ಈ ಸಭೆಯ ಚಿತ್ರಗಳನ್ನು ಮತ್ತು ವಿಡಿಯೋ ತುಣುಕನ್ನು ಅಪ್‌ಲೋಡ್ ಮಾಡಿವೆ. ಅದೇ ದಿನ ನಡೆದ ಇಂಡಿಯಾ ಟುಡೆ ವರದಿಯ ಪ್ರಕಾರ ಪ್ರಿಯಾಂಕಾ ಗಾಂಧಿ ಹತ್ರಾಸ್ ಸಂತ್ರಸ್ತೆಯ ತಾಯಿಯನ್ನು ತಬ್ಬಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಕಂಗನಾಗೆ ಬೆಂಬಲ ನೀಡಲು ಮುಂಬೈಗೆ ಆಗಮಿಸಿತೆ ಕರ್ಣಿಸೇನಾ!: ಸತ್ಯಾಸತ್ಯತೆ ಏನು..?

ಸುದ್ದಿ ಸಂಸ್ಥೆ ಎಎನ್‌ಐ ಮತ್ತು ಪತ್ರಕರ್ತೆ ಮರಿಯಾ ಶಕಿಲ್ ಅವರು ಅಕ್ಟೋಬರ್ 3 ರಂದು, ಪ್ರಿಯಾಂಕಾ ಗಾಂಧಿ ಇಬ್ಬರು ಮಹಿಳೆಯರನ್ನು ಅಪ್ಪಿಕೊಂಡಿದ್ದ ವೀಡಿಯೊವನ್ನು ಟ್ವೀಟ್ ಮಾಡಿದ್ದಾರೆ. ಇದರಲ್ಲಿ ಸಂತ್ರಸ್ತೆಯ ತಾಯಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ತಬ್ಬಿಕೊಳ್ಳುತ್ತಿರುವುದನ್ನು ಕಾಣಬಹುದು.

ಪ್ರಿಯಾಂಕಾ ಗಾಂಧಿ ವಾದ್ರಾ ನಿಜಕ್ಕೂ ಸಂತ್ರಸ್ತೆಯ ತಾಯಿಯನ್ನು ತಬ್ಬಿಕೊಳ್ಳುತ್ತಿದ್ದಾರೆ ಎಂಬುದನ್ನು ಸಂತ್ರಸ್ತೆಯ ತಾಯಿ ಧರಿಸಿರುವ ಸೀರೆಯ ಗುರುತಿನಿಂದ ಪತ್ತೆಮಾಡಬಹುದಾಗಿದೆ. ಚಿತ್ರದಲ್ಲಿ ಮಹಿಳೆಯ ಮುಖವನ್ನು ತೋರಿಸದ ಕಾರಣ, ಇತರ ಮಾಧ್ಯಮ ಸಂಸ್ಥೆಗಳು ಮತ್ತು ಅವರೊಂದಿಗೆ ಮಾತನಾಡಿದ ಪತ್ರಕರ್ತರು ಪಡೆದ ದೃಶ್ಯಗಳನ್ನು ಬಳಸಿದೆ.

ಅಕ್ಟೋಬರ್ 3 ರಂದು, ಬರ್ಖಾ ದತ್ ಸಂತ್ರಸ್ತೆಯ ತಾಯಿಯೊಂದಿಗಿರುವ ಚಿತ್ರವನ್ನು ಟ್ವೀಟ್ ಮಾಡಿದ್ದಾರೆ. ಇಲ್ಲಿ, ಪ್ರಿಯಾಂಕಾರನ್ನು ತಬ್ಬಿಕೊಳ್ಳುವಾಗ ಆಕೆ ಧರಿಸಿದ್ದ ಅದೇ ಸೀರೆಯಲ್ಲಿಯೇ ಕಾಣಿಸಿಕೊಂಡಿದ್ದಾರೆ. ಇಂಡಿಯಾ ಟುಡೆ ಸಹ ಅದೇ ದಿನ ಸಂತ್ರಸ್ತೆಯ ತಾಯಿ ಮತ್ತು ಸಹೋದರನೊಂದಿಗೆ ಮಾತನಾಡಿದೆ. ಈ ವೀಡಿಯೊದಲ್ಲೂ ಸಂತ್ರಸ್ತೆಯ ತಾಯಿ ಅದೇ ಸೀರೆ ಧರಿಸಿರುವುದು ಕಂಡುಬರುತ್ತದೆ.

ಇದನ್ನೂ ಓದಿ: ಕೇರಳದ ಹಿಂದೂ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ? ಇಲ್ಲಿದೆ ಫ್ಯಾಕ್ಟ್‌ಚೆಕ್‌ ವಿವರ

ಇದಲ್ಲದೆ, ಸಂತ್ರಸ್ತೆಯ ತಾಯಿಯನ್ನು ಸೆಪ್ಟೆಂಬರ್ 30 ರಂದು ಟೈಮ್ಸ್ ನೌ ಮಾಧ್ಯಮದವರು ಸಂದರ್ಶಿಸಿದರು. ಅಲ್ಲಿ ಅವರನ್ನು ಮತ್ತೆ ಅದೇ ಸೀರೆಯಲ್ಲಿ ಕಾಣಬಹುದು.

ಆದ್ದರಿಂದ, ವೈರಲ್ ಆಗುತ್ತಿರುವ ಫೋಟೋದಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ ತಬ್ಬಿಕೊಳ್ಳುತ್ತಿರುವುದು ಸಂತ್ರಸ್ತೆಯ ತಾಯಿ ಎಂದು ಖಚಿತವಾಗಿ ಹೇಳಬಹುದು.

ಹತ್ರಾಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕಷ್ಟು ಸುಳ್ಳು ಸುದ್ದಿಗಳು ಹರಿದಾಡುತ್ತಿದ್ದು, ಅವುಗಳ ಸಾಲಿಗೆ ಈಗ ಮತ್ತೊಂದು ಸೇರ್ಪಡೆಯೇ ಈ ನಕ್ಸಲ್ ಸುದ್ದಿ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಮುಸ್ಲಿಂ ಮದುವೆಯಲ್ಲಿ ಪಾಲ್ಗೊಂಡಿದ್ದಕ್ಕೆ ಕೇರಳದ RSS ಕಾರ್ಯಕರ್ತನ ಮೇಲೆ ಹಲ್ಲೆ ಮಾಡಲಾಯಿತೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...