Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಹತ್ರಾಸ್‌ ಭೇಟಿಯ ಫೋಟೋದಲ್ಲಿ ಪ್ರಿಯಾಂಕಾ ಗಾಂಧಿ ಅಪ್ಪಿಕೊಂಡಿದ್ದ ಮಹಿಳೆ ಯಾರು?

ಫ್ಯಾಕ್ಟ್‌ಚೆಕ್: ಹತ್ರಾಸ್‌ ಭೇಟಿಯ ಫೋಟೋದಲ್ಲಿ ಪ್ರಿಯಾಂಕಾ ಗಾಂಧಿ ಅಪ್ಪಿಕೊಂಡಿದ್ದ ಮಹಿಳೆ ಯಾರು?

ಸಂತ್ರಸ್ತೆಯ ಭಾಭಿ ಎಂದು ಬಿಂಬಿಸಿಕೊಂಡಿರುವವರನ್ನು ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅಪ್ಪಿಕೊಂಡು ಸಮಾಧಾನಪಡಿಸುತ್ತಿರುವುದು ನಕ್ಸಲ್ ಆಪರೇಟೀವ್‌ನ ಭಾಗ ಎಂದು ಬಿಜೆಪಿಯ ಪ್ರೀತಿ ಗಾಂಧಿ ಆರೋಪಿಸಿದ್ದರು.

- Advertisement -
- Advertisement -

ದೇಶದಲ್ಲಿ ಸಂಚಲನ ಮೂಡಿಸಿದ ಹತ್ರಾಸ್ ಪ್ರಕರಣದ ಸಂತ್ರಸ್ತ ಕುಟುಂಬಕ್ಕೆ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಭೇಟಿ ನಿಡಿ ಸಾಂತ್ವಾನ ಹೇಳಿದ್ದರು. ಅಲ್ಲಿ ತೆಗೆದಿದ್ದ ಸಾಂತ್ವಾನ ಹೇಳುತ್ತಿರುವ ಚಿತ್ರವನ್ನು ಹಲವರು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡು, ಈ ಚಿತ್ರದಲ್ಲಿ ಪ್ರಿಯಾಂಕಾ ಗಾಂಧಿ ಅಪ್ಪಿಕೊಂಡಿದ್ದ ಮಹಿಳೆ ಸಂತ್ರಸ್ತೆಯ ಕುಟುಂಬದವರಲ್ಲ, ಬದಲಿಗೆ ಅಕೆ ಒಬ್ಬ ನಕ್ಸಲೈಟ್ ಎಂದು ಪ್ರತಿಪಾದಿಸಿದ್ದಾರೆ.

ಆಂಧ್ರಪ್ರದೇಶದ ಬಿಜೆಪಿಯ ಮಾಜಿ ಸಂಸದರಾದ ಗೀತಾ ಕೊತ್ತಪಲ್ಲಿ ಎಂಬುವವರು ಈ ಚಿತ್ರವನ್ನು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದು, “ಈ ಮಹಿಳೆ ಯಾರು? ಈಕೆ ಸಂತ್ರಸ್ತೆಯ ತಾಯಿಯಲ್ಲ, ಸಂತ್ರಸ್ತೆಯ ಮನೆಗೆ ಹೇಗೆ ಬಂದರು? ಪ್ರಿಯಾಂಕಾ ಅವರನ್ನು ಅಪ್ಪಿಕೊಳ್ಳಲು ಹೇಗೆ ಅವಕಾಶ ನೀಡಿದರು? ಇದೇ ಮಹಿಳೆಯನ್ನು ಬರ್ಖಾ ದತ್ (ವಾಷಿಂಗ್‌ಟನ್ ಪೋಸ್ಟ್‌ನ ಪತ್ರಕರ್ತರು) ಕೂಡಾ ಸಂದರ್ಶಿಸಿದ್ದಾರೆ… ಇದು ಯೋಜಿತ ಪಿತೂರಿಯಂತೆ ಕಾಣುತ್ತದೆ. ನಿಮ್ಮ ಅಭಿಪ್ರಾಯವೇನು? #FakeNaxalBhabhi” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌‌: ಪಂಜಾಬ್‌‌ನ ಈ ಮಹಿಳಾ ಅಧಿಕಾರಿ ಮೃತಪಟ್ಟಿದ್ದು ಅತ್ಯಾಚಾರದಿಂದಲ್ಲ, ರಸ್ತೆ ಅಫಘಾತದಿಂದ

ಬಿಜೆಪಿ ರಾಷ್ಟ್ರೀಯ ಮಹಿಳಾ ಮೋರ್ಚಾದ ರಾಷ್ಟ್ರೀಯ ಮೇಲ್ವಿಚಾರಕಿ ಪ್ರೀತಿ ಗಾಂಧಿ ಟ್ವೀಟ್ ಮಾಡಿ, “ಸಂತ್ರಸ್ತೆಯ ಭಾಭಿ ಎಂದು ಬಿಂಬಿಸಿಕೊಂಡಿರುವವರನ್ನು ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅಪ್ಪಿಕೊಂಡು ಸಮಾಧಾನಪಡಿಸುತ್ತಿರುವುದು ನಕ್ಸಲ್ ಆಪರೇಟೀವ್‌ನ ಭಾಗ. ಸೆಪ್ಟಂಬರ್ 16 ರಿಂದ 22ರವರೆಗೆ ಸಂತ್ರಸ್ತೆಯ ಮನೆಯಲ್ಲಿಯೇ ಇದ್ದು, ಈಗ ನಿಗೂಢವಾಗಿ ಕಣ್ಮರೆಯಾಗಿದ್ದಾರೆ!! ಈ ಪಿತೂರಿಯ ಮಟ್ಟ ಭಯಾನಕವಾಗಿದೆ. #HthrasCase” ಎಂದು ಬರೆದುಕೊಂಡಿದ್ದಾರೆ. ಇವರು ಟ್ವಿಟ್ಟರ್‌ನಲ್ಲಿ ಸುಮಾರು 4.59 ಲಕ್ಷ ಅನುಯಾಯಿಗಳನ್ನು ಹೊಂದಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: 13 ವರ್ಷದ ಬಾಲಕಿಯನ್ನು ಮುಸ್ಲಿಂ ವ್ಯಕ್ತಿ ಅತ್ಯಾಚಾರ ಮಾಡಿ ಸುಟ್ಟಿದ್ದು ಸುಳ್ಳು!

ಕಳೆದ ಕೆಲವು ದಿನಗಳಿಂದ ಸಂತ್ರಸ್ತೆಯ ಕುಟುಂಬದವರು ಎಂದು ಹೇಳಿಕೊಂಡು ನಕ್ಸಲೈಟ್‌ ಒಬ್ಬರು ಕುಟುಂಬವನ್ನು ಸೇರಿಕೊಂಡಿದ್ದಾರೆ ಎಂದು ಆರೋಪಿಸಲಾಗಿದ್ದು, ಆ ನಕ್ಸಲೈಟ್‌ಗೆ ಸಾಂತ್ವಾನ ಹೇಳಲು ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಹತ್ರಾಸ್‌ಗೆ ಭೇಟಿ ನೀಡಿದ್ದರು ಎಂಬ ವದಂತಿಗಳು ಹರಿದಾಡುತ್ತಿವೆ ಎಂದು ಆಲ್ಟ್‌ ನ್ಯೂಸ್ ವರದಿ ಮಾಡಿದೆ.

ಫೇಸ್‌ಬುಕ್‌ನಲ್ಲಿ, ಸೋಶಿಯಲ್ ತಮಾಶಾ ಎಂಬ ಪುಟವು ಈ ಚಿತ್ರವನ್ನು ಹಂಚಿಕೊಂಡಿದ್ದು, “ನಕಲಿ ಅತ್ತಿಗೆಯೊಂದಿಗೆ ನಕಲಿ ಗಾಂಧಿ” ಎಂದು ಬರೆದಿದೆ. ಫೇಸ್‌ಬುಕ್‌ನ ಈ ಪುಟವು ಈ ಹಿಂದೆಯೂ ಅನೇಕ ಬಾರಿ ಸುಳ್ಳು ಮಾಹಿತಿಯನ್ನು ಹರಡಿದೆ.

ಇದನ್ನೂ ಓದಿ: ನರೇಂದ್ರ ಮೋದಿ ಗುಜರಾತ್‌ನಲ್ಲಿ ಕ್ರೂಸ್ ಹಡಗು ಸೇವೆಯನ್ನು ಪ್ರಾರಂಭಿಸಿದ್ದಾರೆಯೇ? ಇಲ್ಲಿದೆ ವಿವರ

ಹೀಗೆ ಸಾಮಾಜಿಕ ಮಾಧ್ಯಮಗಳು ಸೇರಿದಂತೆ, ಪರ್ಫಾರ್ಮ್ ಇಂಡಿಯಾ, ವಿಕೆ ನ್ಯೂಸ್, ಬೆಸ್ಟ್ ಹಿಂದಿ ನ್ಯೂಸ್ ಮತ್ತು ಹರಿಯಾಣ ಅಬ್ಟಾಕ್ ಸೇರಿದಂತೆ ಕೆಲವು ವೆಬ್‌ಸೈಟ್‌ಗಳೂ ಸಹ ಪ್ರಿಯಾಂಕಾ ಅಪ್ಪಿಕೊಂಡಿದ್ದ ಮಹಿಳೆ ಸಂತ್ರಸ್ತೆಯ ಸಂಬಂಧಿಯಲ್ಲ ಎಂಬ ಪ್ರತಿಪಾದನೆಯೊಂದಿಗೆ ವರದಿಗಳನ್ನು ಮಾಡಿವೆ.

ಫ್ಯಾಕ್ಟ್-ಚೆಕ್:

ಅಕ್ಟೋಬರ್ 3 ರಂದು ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ರಾಹುಲ್ ಗಾಂಧಿ ಸಂತ್ರಸ್ತೆಯ ಕುಟುಂಬವನ್ನು ಭೇಟಿಯಾದರು. ಹಲವಾರು ಮಾಧ್ಯಮ ಸಂಸ್ಥೆಗಳು ಈ ಸಭೆಯ ಚಿತ್ರಗಳನ್ನು ಮತ್ತು ವಿಡಿಯೋ ತುಣುಕನ್ನು ಅಪ್‌ಲೋಡ್ ಮಾಡಿವೆ. ಅದೇ ದಿನ ನಡೆದ ಇಂಡಿಯಾ ಟುಡೆ ವರದಿಯ ಪ್ರಕಾರ ಪ್ರಿಯಾಂಕಾ ಗಾಂಧಿ ಹತ್ರಾಸ್ ಸಂತ್ರಸ್ತೆಯ ತಾಯಿಯನ್ನು ತಬ್ಬಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಕಂಗನಾಗೆ ಬೆಂಬಲ ನೀಡಲು ಮುಂಬೈಗೆ ಆಗಮಿಸಿತೆ ಕರ್ಣಿಸೇನಾ!: ಸತ್ಯಾಸತ್ಯತೆ ಏನು..?

ಸುದ್ದಿ ಸಂಸ್ಥೆ ಎಎನ್‌ಐ ಮತ್ತು ಪತ್ರಕರ್ತೆ ಮರಿಯಾ ಶಕಿಲ್ ಅವರು ಅಕ್ಟೋಬರ್ 3 ರಂದು, ಪ್ರಿಯಾಂಕಾ ಗಾಂಧಿ ಇಬ್ಬರು ಮಹಿಳೆಯರನ್ನು ಅಪ್ಪಿಕೊಂಡಿದ್ದ ವೀಡಿಯೊವನ್ನು ಟ್ವೀಟ್ ಮಾಡಿದ್ದಾರೆ. ಇದರಲ್ಲಿ ಸಂತ್ರಸ್ತೆಯ ತಾಯಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ತಬ್ಬಿಕೊಳ್ಳುತ್ತಿರುವುದನ್ನು ಕಾಣಬಹುದು.

ಪ್ರಿಯಾಂಕಾ ಗಾಂಧಿ ವಾದ್ರಾ ನಿಜಕ್ಕೂ ಸಂತ್ರಸ್ತೆಯ ತಾಯಿಯನ್ನು ತಬ್ಬಿಕೊಳ್ಳುತ್ತಿದ್ದಾರೆ ಎಂಬುದನ್ನು ಸಂತ್ರಸ್ತೆಯ ತಾಯಿ ಧರಿಸಿರುವ ಸೀರೆಯ ಗುರುತಿನಿಂದ ಪತ್ತೆಮಾಡಬಹುದಾಗಿದೆ. ಚಿತ್ರದಲ್ಲಿ ಮಹಿಳೆಯ ಮುಖವನ್ನು ತೋರಿಸದ ಕಾರಣ, ಇತರ ಮಾಧ್ಯಮ ಸಂಸ್ಥೆಗಳು ಮತ್ತು ಅವರೊಂದಿಗೆ ಮಾತನಾಡಿದ ಪತ್ರಕರ್ತರು ಪಡೆದ ದೃಶ್ಯಗಳನ್ನು ಬಳಸಿದೆ.

ಅಕ್ಟೋಬರ್ 3 ರಂದು, ಬರ್ಖಾ ದತ್ ಸಂತ್ರಸ್ತೆಯ ತಾಯಿಯೊಂದಿಗಿರುವ ಚಿತ್ರವನ್ನು ಟ್ವೀಟ್ ಮಾಡಿದ್ದಾರೆ. ಇಲ್ಲಿ, ಪ್ರಿಯಾಂಕಾರನ್ನು ತಬ್ಬಿಕೊಳ್ಳುವಾಗ ಆಕೆ ಧರಿಸಿದ್ದ ಅದೇ ಸೀರೆಯಲ್ಲಿಯೇ ಕಾಣಿಸಿಕೊಂಡಿದ್ದಾರೆ. ಇಂಡಿಯಾ ಟುಡೆ ಸಹ ಅದೇ ದಿನ ಸಂತ್ರಸ್ತೆಯ ತಾಯಿ ಮತ್ತು ಸಹೋದರನೊಂದಿಗೆ ಮಾತನಾಡಿದೆ. ಈ ವೀಡಿಯೊದಲ್ಲೂ ಸಂತ್ರಸ್ತೆಯ ತಾಯಿ ಅದೇ ಸೀರೆ ಧರಿಸಿರುವುದು ಕಂಡುಬರುತ್ತದೆ.

ಇದನ್ನೂ ಓದಿ: ಕೇರಳದ ಹಿಂದೂ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ? ಇಲ್ಲಿದೆ ಫ್ಯಾಕ್ಟ್‌ಚೆಕ್‌ ವಿವರ

ಇದಲ್ಲದೆ, ಸಂತ್ರಸ್ತೆಯ ತಾಯಿಯನ್ನು ಸೆಪ್ಟೆಂಬರ್ 30 ರಂದು ಟೈಮ್ಸ್ ನೌ ಮಾಧ್ಯಮದವರು ಸಂದರ್ಶಿಸಿದರು. ಅಲ್ಲಿ ಅವರನ್ನು ಮತ್ತೆ ಅದೇ ಸೀರೆಯಲ್ಲಿ ಕಾಣಬಹುದು.

ಆದ್ದರಿಂದ, ವೈರಲ್ ಆಗುತ್ತಿರುವ ಫೋಟೋದಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ ತಬ್ಬಿಕೊಳ್ಳುತ್ತಿರುವುದು ಸಂತ್ರಸ್ತೆಯ ತಾಯಿ ಎಂದು ಖಚಿತವಾಗಿ ಹೇಳಬಹುದು.

ಹತ್ರಾಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕಷ್ಟು ಸುಳ್ಳು ಸುದ್ದಿಗಳು ಹರಿದಾಡುತ್ತಿದ್ದು, ಅವುಗಳ ಸಾಲಿಗೆ ಈಗ ಮತ್ತೊಂದು ಸೇರ್ಪಡೆಯೇ ಈ ನಕ್ಸಲ್ ಸುದ್ದಿ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಮುಸ್ಲಿಂ ಮದುವೆಯಲ್ಲಿ ಪಾಲ್ಗೊಂಡಿದ್ದಕ್ಕೆ ಕೇರಳದ RSS ಕಾರ್ಯಕರ್ತನ ಮೇಲೆ ಹಲ್ಲೆ ಮಾಡಲಾಯಿತೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...