Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಹತ್ರಾಸ್‌ ಭೇಟಿಯ ಫೋಟೋದಲ್ಲಿ ಪ್ರಿಯಾಂಕಾ ಗಾಂಧಿ ಅಪ್ಪಿಕೊಂಡಿದ್ದ ಮಹಿಳೆ ಯಾರು?

ಫ್ಯಾಕ್ಟ್‌ಚೆಕ್: ಹತ್ರಾಸ್‌ ಭೇಟಿಯ ಫೋಟೋದಲ್ಲಿ ಪ್ರಿಯಾಂಕಾ ಗಾಂಧಿ ಅಪ್ಪಿಕೊಂಡಿದ್ದ ಮಹಿಳೆ ಯಾರು?

ಸಂತ್ರಸ್ತೆಯ ಭಾಭಿ ಎಂದು ಬಿಂಬಿಸಿಕೊಂಡಿರುವವರನ್ನು ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅಪ್ಪಿಕೊಂಡು ಸಮಾಧಾನಪಡಿಸುತ್ತಿರುವುದು ನಕ್ಸಲ್ ಆಪರೇಟೀವ್‌ನ ಭಾಗ ಎಂದು ಬಿಜೆಪಿಯ ಪ್ರೀತಿ ಗಾಂಧಿ ಆರೋಪಿಸಿದ್ದರು.

- Advertisement -
- Advertisement -

ದೇಶದಲ್ಲಿ ಸಂಚಲನ ಮೂಡಿಸಿದ ಹತ್ರಾಸ್ ಪ್ರಕರಣದ ಸಂತ್ರಸ್ತ ಕುಟುಂಬಕ್ಕೆ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಭೇಟಿ ನಿಡಿ ಸಾಂತ್ವಾನ ಹೇಳಿದ್ದರು. ಅಲ್ಲಿ ತೆಗೆದಿದ್ದ ಸಾಂತ್ವಾನ ಹೇಳುತ್ತಿರುವ ಚಿತ್ರವನ್ನು ಹಲವರು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡು, ಈ ಚಿತ್ರದಲ್ಲಿ ಪ್ರಿಯಾಂಕಾ ಗಾಂಧಿ ಅಪ್ಪಿಕೊಂಡಿದ್ದ ಮಹಿಳೆ ಸಂತ್ರಸ್ತೆಯ ಕುಟುಂಬದವರಲ್ಲ, ಬದಲಿಗೆ ಅಕೆ ಒಬ್ಬ ನಕ್ಸಲೈಟ್ ಎಂದು ಪ್ರತಿಪಾದಿಸಿದ್ದಾರೆ.

ಆಂಧ್ರಪ್ರದೇಶದ ಬಿಜೆಪಿಯ ಮಾಜಿ ಸಂಸದರಾದ ಗೀತಾ ಕೊತ್ತಪಲ್ಲಿ ಎಂಬುವವರು ಈ ಚಿತ್ರವನ್ನು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದು, “ಈ ಮಹಿಳೆ ಯಾರು? ಈಕೆ ಸಂತ್ರಸ್ತೆಯ ತಾಯಿಯಲ್ಲ, ಸಂತ್ರಸ್ತೆಯ ಮನೆಗೆ ಹೇಗೆ ಬಂದರು? ಪ್ರಿಯಾಂಕಾ ಅವರನ್ನು ಅಪ್ಪಿಕೊಳ್ಳಲು ಹೇಗೆ ಅವಕಾಶ ನೀಡಿದರು? ಇದೇ ಮಹಿಳೆಯನ್ನು ಬರ್ಖಾ ದತ್ (ವಾಷಿಂಗ್‌ಟನ್ ಪೋಸ್ಟ್‌ನ ಪತ್ರಕರ್ತರು) ಕೂಡಾ ಸಂದರ್ಶಿಸಿದ್ದಾರೆ… ಇದು ಯೋಜಿತ ಪಿತೂರಿಯಂತೆ ಕಾಣುತ್ತದೆ. ನಿಮ್ಮ ಅಭಿಪ್ರಾಯವೇನು? #FakeNaxalBhabhi” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌‌: ಪಂಜಾಬ್‌‌ನ ಈ ಮಹಿಳಾ ಅಧಿಕಾರಿ ಮೃತಪಟ್ಟಿದ್ದು ಅತ್ಯಾಚಾರದಿಂದಲ್ಲ, ರಸ್ತೆ ಅಫಘಾತದಿಂದ

ಬಿಜೆಪಿ ರಾಷ್ಟ್ರೀಯ ಮಹಿಳಾ ಮೋರ್ಚಾದ ರಾಷ್ಟ್ರೀಯ ಮೇಲ್ವಿಚಾರಕಿ ಪ್ರೀತಿ ಗಾಂಧಿ ಟ್ವೀಟ್ ಮಾಡಿ, “ಸಂತ್ರಸ್ತೆಯ ಭಾಭಿ ಎಂದು ಬಿಂಬಿಸಿಕೊಂಡಿರುವವರನ್ನು ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅಪ್ಪಿಕೊಂಡು ಸಮಾಧಾನಪಡಿಸುತ್ತಿರುವುದು ನಕ್ಸಲ್ ಆಪರೇಟೀವ್‌ನ ಭಾಗ. ಸೆಪ್ಟಂಬರ್ 16 ರಿಂದ 22ರವರೆಗೆ ಸಂತ್ರಸ್ತೆಯ ಮನೆಯಲ್ಲಿಯೇ ಇದ್ದು, ಈಗ ನಿಗೂಢವಾಗಿ ಕಣ್ಮರೆಯಾಗಿದ್ದಾರೆ!! ಈ ಪಿತೂರಿಯ ಮಟ್ಟ ಭಯಾನಕವಾಗಿದೆ. #HthrasCase” ಎಂದು ಬರೆದುಕೊಂಡಿದ್ದಾರೆ. ಇವರು ಟ್ವಿಟ್ಟರ್‌ನಲ್ಲಿ ಸುಮಾರು 4.59 ಲಕ್ಷ ಅನುಯಾಯಿಗಳನ್ನು ಹೊಂದಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: 13 ವರ್ಷದ ಬಾಲಕಿಯನ್ನು ಮುಸ್ಲಿಂ ವ್ಯಕ್ತಿ ಅತ್ಯಾಚಾರ ಮಾಡಿ ಸುಟ್ಟಿದ್ದು ಸುಳ್ಳು!

ಕಳೆದ ಕೆಲವು ದಿನಗಳಿಂದ ಸಂತ್ರಸ್ತೆಯ ಕುಟುಂಬದವರು ಎಂದು ಹೇಳಿಕೊಂಡು ನಕ್ಸಲೈಟ್‌ ಒಬ್ಬರು ಕುಟುಂಬವನ್ನು ಸೇರಿಕೊಂಡಿದ್ದಾರೆ ಎಂದು ಆರೋಪಿಸಲಾಗಿದ್ದು, ಆ ನಕ್ಸಲೈಟ್‌ಗೆ ಸಾಂತ್ವಾನ ಹೇಳಲು ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಹತ್ರಾಸ್‌ಗೆ ಭೇಟಿ ನೀಡಿದ್ದರು ಎಂಬ ವದಂತಿಗಳು ಹರಿದಾಡುತ್ತಿವೆ ಎಂದು ಆಲ್ಟ್‌ ನ್ಯೂಸ್ ವರದಿ ಮಾಡಿದೆ.

ಫೇಸ್‌ಬುಕ್‌ನಲ್ಲಿ, ಸೋಶಿಯಲ್ ತಮಾಶಾ ಎಂಬ ಪುಟವು ಈ ಚಿತ್ರವನ್ನು ಹಂಚಿಕೊಂಡಿದ್ದು, “ನಕಲಿ ಅತ್ತಿಗೆಯೊಂದಿಗೆ ನಕಲಿ ಗಾಂಧಿ” ಎಂದು ಬರೆದಿದೆ. ಫೇಸ್‌ಬುಕ್‌ನ ಈ ಪುಟವು ಈ ಹಿಂದೆಯೂ ಅನೇಕ ಬಾರಿ ಸುಳ್ಳು ಮಾಹಿತಿಯನ್ನು ಹರಡಿದೆ.

ಇದನ್ನೂ ಓದಿ: ನರೇಂದ್ರ ಮೋದಿ ಗುಜರಾತ್‌ನಲ್ಲಿ ಕ್ರೂಸ್ ಹಡಗು ಸೇವೆಯನ್ನು ಪ್ರಾರಂಭಿಸಿದ್ದಾರೆಯೇ? ಇಲ್ಲಿದೆ ವಿವರ

ಹೀಗೆ ಸಾಮಾಜಿಕ ಮಾಧ್ಯಮಗಳು ಸೇರಿದಂತೆ, ಪರ್ಫಾರ್ಮ್ ಇಂಡಿಯಾ, ವಿಕೆ ನ್ಯೂಸ್, ಬೆಸ್ಟ್ ಹಿಂದಿ ನ್ಯೂಸ್ ಮತ್ತು ಹರಿಯಾಣ ಅಬ್ಟಾಕ್ ಸೇರಿದಂತೆ ಕೆಲವು ವೆಬ್‌ಸೈಟ್‌ಗಳೂ ಸಹ ಪ್ರಿಯಾಂಕಾ ಅಪ್ಪಿಕೊಂಡಿದ್ದ ಮಹಿಳೆ ಸಂತ್ರಸ್ತೆಯ ಸಂಬಂಧಿಯಲ್ಲ ಎಂಬ ಪ್ರತಿಪಾದನೆಯೊಂದಿಗೆ ವರದಿಗಳನ್ನು ಮಾಡಿವೆ.

ಫ್ಯಾಕ್ಟ್-ಚೆಕ್:

ಅಕ್ಟೋಬರ್ 3 ರಂದು ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ರಾಹುಲ್ ಗಾಂಧಿ ಸಂತ್ರಸ್ತೆಯ ಕುಟುಂಬವನ್ನು ಭೇಟಿಯಾದರು. ಹಲವಾರು ಮಾಧ್ಯಮ ಸಂಸ್ಥೆಗಳು ಈ ಸಭೆಯ ಚಿತ್ರಗಳನ್ನು ಮತ್ತು ವಿಡಿಯೋ ತುಣುಕನ್ನು ಅಪ್‌ಲೋಡ್ ಮಾಡಿವೆ. ಅದೇ ದಿನ ನಡೆದ ಇಂಡಿಯಾ ಟುಡೆ ವರದಿಯ ಪ್ರಕಾರ ಪ್ರಿಯಾಂಕಾ ಗಾಂಧಿ ಹತ್ರಾಸ್ ಸಂತ್ರಸ್ತೆಯ ತಾಯಿಯನ್ನು ತಬ್ಬಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಕಂಗನಾಗೆ ಬೆಂಬಲ ನೀಡಲು ಮುಂಬೈಗೆ ಆಗಮಿಸಿತೆ ಕರ್ಣಿಸೇನಾ!: ಸತ್ಯಾಸತ್ಯತೆ ಏನು..?

ಸುದ್ದಿ ಸಂಸ್ಥೆ ಎಎನ್‌ಐ ಮತ್ತು ಪತ್ರಕರ್ತೆ ಮರಿಯಾ ಶಕಿಲ್ ಅವರು ಅಕ್ಟೋಬರ್ 3 ರಂದು, ಪ್ರಿಯಾಂಕಾ ಗಾಂಧಿ ಇಬ್ಬರು ಮಹಿಳೆಯರನ್ನು ಅಪ್ಪಿಕೊಂಡಿದ್ದ ವೀಡಿಯೊವನ್ನು ಟ್ವೀಟ್ ಮಾಡಿದ್ದಾರೆ. ಇದರಲ್ಲಿ ಸಂತ್ರಸ್ತೆಯ ತಾಯಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ತಬ್ಬಿಕೊಳ್ಳುತ್ತಿರುವುದನ್ನು ಕಾಣಬಹುದು.

ಪ್ರಿಯಾಂಕಾ ಗಾಂಧಿ ವಾದ್ರಾ ನಿಜಕ್ಕೂ ಸಂತ್ರಸ್ತೆಯ ತಾಯಿಯನ್ನು ತಬ್ಬಿಕೊಳ್ಳುತ್ತಿದ್ದಾರೆ ಎಂಬುದನ್ನು ಸಂತ್ರಸ್ತೆಯ ತಾಯಿ ಧರಿಸಿರುವ ಸೀರೆಯ ಗುರುತಿನಿಂದ ಪತ್ತೆಮಾಡಬಹುದಾಗಿದೆ. ಚಿತ್ರದಲ್ಲಿ ಮಹಿಳೆಯ ಮುಖವನ್ನು ತೋರಿಸದ ಕಾರಣ, ಇತರ ಮಾಧ್ಯಮ ಸಂಸ್ಥೆಗಳು ಮತ್ತು ಅವರೊಂದಿಗೆ ಮಾತನಾಡಿದ ಪತ್ರಕರ್ತರು ಪಡೆದ ದೃಶ್ಯಗಳನ್ನು ಬಳಸಿದೆ.

ಅಕ್ಟೋಬರ್ 3 ರಂದು, ಬರ್ಖಾ ದತ್ ಸಂತ್ರಸ್ತೆಯ ತಾಯಿಯೊಂದಿಗಿರುವ ಚಿತ್ರವನ್ನು ಟ್ವೀಟ್ ಮಾಡಿದ್ದಾರೆ. ಇಲ್ಲಿ, ಪ್ರಿಯಾಂಕಾರನ್ನು ತಬ್ಬಿಕೊಳ್ಳುವಾಗ ಆಕೆ ಧರಿಸಿದ್ದ ಅದೇ ಸೀರೆಯಲ್ಲಿಯೇ ಕಾಣಿಸಿಕೊಂಡಿದ್ದಾರೆ. ಇಂಡಿಯಾ ಟುಡೆ ಸಹ ಅದೇ ದಿನ ಸಂತ್ರಸ್ತೆಯ ತಾಯಿ ಮತ್ತು ಸಹೋದರನೊಂದಿಗೆ ಮಾತನಾಡಿದೆ. ಈ ವೀಡಿಯೊದಲ್ಲೂ ಸಂತ್ರಸ್ತೆಯ ತಾಯಿ ಅದೇ ಸೀರೆ ಧರಿಸಿರುವುದು ಕಂಡುಬರುತ್ತದೆ.

ಇದನ್ನೂ ಓದಿ: ಕೇರಳದ ಹಿಂದೂ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ? ಇಲ್ಲಿದೆ ಫ್ಯಾಕ್ಟ್‌ಚೆಕ್‌ ವಿವರ

ಇದಲ್ಲದೆ, ಸಂತ್ರಸ್ತೆಯ ತಾಯಿಯನ್ನು ಸೆಪ್ಟೆಂಬರ್ 30 ರಂದು ಟೈಮ್ಸ್ ನೌ ಮಾಧ್ಯಮದವರು ಸಂದರ್ಶಿಸಿದರು. ಅಲ್ಲಿ ಅವರನ್ನು ಮತ್ತೆ ಅದೇ ಸೀರೆಯಲ್ಲಿ ಕಾಣಬಹುದು.

ಆದ್ದರಿಂದ, ವೈರಲ್ ಆಗುತ್ತಿರುವ ಫೋಟೋದಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ ತಬ್ಬಿಕೊಳ್ಳುತ್ತಿರುವುದು ಸಂತ್ರಸ್ತೆಯ ತಾಯಿ ಎಂದು ಖಚಿತವಾಗಿ ಹೇಳಬಹುದು.

ಹತ್ರಾಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕಷ್ಟು ಸುಳ್ಳು ಸುದ್ದಿಗಳು ಹರಿದಾಡುತ್ತಿದ್ದು, ಅವುಗಳ ಸಾಲಿಗೆ ಈಗ ಮತ್ತೊಂದು ಸೇರ್ಪಡೆಯೇ ಈ ನಕ್ಸಲ್ ಸುದ್ದಿ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಮುಸ್ಲಿಂ ಮದುವೆಯಲ್ಲಿ ಪಾಲ್ಗೊಂಡಿದ್ದಕ್ಕೆ ಕೇರಳದ RSS ಕಾರ್ಯಕರ್ತನ ಮೇಲೆ ಹಲ್ಲೆ ಮಾಡಲಾಯಿತೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...