Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಹತ್ರಾಸ್‌ ಭೇಟಿಯ ಫೋಟೋದಲ್ಲಿ ಪ್ರಿಯಾಂಕಾ ಗಾಂಧಿ ಅಪ್ಪಿಕೊಂಡಿದ್ದ ಮಹಿಳೆ ಯಾರು?

ಫ್ಯಾಕ್ಟ್‌ಚೆಕ್: ಹತ್ರಾಸ್‌ ಭೇಟಿಯ ಫೋಟೋದಲ್ಲಿ ಪ್ರಿಯಾಂಕಾ ಗಾಂಧಿ ಅಪ್ಪಿಕೊಂಡಿದ್ದ ಮಹಿಳೆ ಯಾರು?

ಸಂತ್ರಸ್ತೆಯ ಭಾಭಿ ಎಂದು ಬಿಂಬಿಸಿಕೊಂಡಿರುವವರನ್ನು ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅಪ್ಪಿಕೊಂಡು ಸಮಾಧಾನಪಡಿಸುತ್ತಿರುವುದು ನಕ್ಸಲ್ ಆಪರೇಟೀವ್‌ನ ಭಾಗ ಎಂದು ಬಿಜೆಪಿಯ ಪ್ರೀತಿ ಗಾಂಧಿ ಆರೋಪಿಸಿದ್ದರು.

- Advertisement -
- Advertisement -

ದೇಶದಲ್ಲಿ ಸಂಚಲನ ಮೂಡಿಸಿದ ಹತ್ರಾಸ್ ಪ್ರಕರಣದ ಸಂತ್ರಸ್ತ ಕುಟುಂಬಕ್ಕೆ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಭೇಟಿ ನಿಡಿ ಸಾಂತ್ವಾನ ಹೇಳಿದ್ದರು. ಅಲ್ಲಿ ತೆಗೆದಿದ್ದ ಸಾಂತ್ವಾನ ಹೇಳುತ್ತಿರುವ ಚಿತ್ರವನ್ನು ಹಲವರು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡು, ಈ ಚಿತ್ರದಲ್ಲಿ ಪ್ರಿಯಾಂಕಾ ಗಾಂಧಿ ಅಪ್ಪಿಕೊಂಡಿದ್ದ ಮಹಿಳೆ ಸಂತ್ರಸ್ತೆಯ ಕುಟುಂಬದವರಲ್ಲ, ಬದಲಿಗೆ ಅಕೆ ಒಬ್ಬ ನಕ್ಸಲೈಟ್ ಎಂದು ಪ್ರತಿಪಾದಿಸಿದ್ದಾರೆ.

ಆಂಧ್ರಪ್ರದೇಶದ ಬಿಜೆಪಿಯ ಮಾಜಿ ಸಂಸದರಾದ ಗೀತಾ ಕೊತ್ತಪಲ್ಲಿ ಎಂಬುವವರು ಈ ಚಿತ್ರವನ್ನು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದು, “ಈ ಮಹಿಳೆ ಯಾರು? ಈಕೆ ಸಂತ್ರಸ್ತೆಯ ತಾಯಿಯಲ್ಲ, ಸಂತ್ರಸ್ತೆಯ ಮನೆಗೆ ಹೇಗೆ ಬಂದರು? ಪ್ರಿಯಾಂಕಾ ಅವರನ್ನು ಅಪ್ಪಿಕೊಳ್ಳಲು ಹೇಗೆ ಅವಕಾಶ ನೀಡಿದರು? ಇದೇ ಮಹಿಳೆಯನ್ನು ಬರ್ಖಾ ದತ್ (ವಾಷಿಂಗ್‌ಟನ್ ಪೋಸ್ಟ್‌ನ ಪತ್ರಕರ್ತರು) ಕೂಡಾ ಸಂದರ್ಶಿಸಿದ್ದಾರೆ… ಇದು ಯೋಜಿತ ಪಿತೂರಿಯಂತೆ ಕಾಣುತ್ತದೆ. ನಿಮ್ಮ ಅಭಿಪ್ರಾಯವೇನು? #FakeNaxalBhabhi” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌‌: ಪಂಜಾಬ್‌‌ನ ಈ ಮಹಿಳಾ ಅಧಿಕಾರಿ ಮೃತಪಟ್ಟಿದ್ದು ಅತ್ಯಾಚಾರದಿಂದಲ್ಲ, ರಸ್ತೆ ಅಫಘಾತದಿಂದ

ಬಿಜೆಪಿ ರಾಷ್ಟ್ರೀಯ ಮಹಿಳಾ ಮೋರ್ಚಾದ ರಾಷ್ಟ್ರೀಯ ಮೇಲ್ವಿಚಾರಕಿ ಪ್ರೀತಿ ಗಾಂಧಿ ಟ್ವೀಟ್ ಮಾಡಿ, “ಸಂತ್ರಸ್ತೆಯ ಭಾಭಿ ಎಂದು ಬಿಂಬಿಸಿಕೊಂಡಿರುವವರನ್ನು ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅಪ್ಪಿಕೊಂಡು ಸಮಾಧಾನಪಡಿಸುತ್ತಿರುವುದು ನಕ್ಸಲ್ ಆಪರೇಟೀವ್‌ನ ಭಾಗ. ಸೆಪ್ಟಂಬರ್ 16 ರಿಂದ 22ರವರೆಗೆ ಸಂತ್ರಸ್ತೆಯ ಮನೆಯಲ್ಲಿಯೇ ಇದ್ದು, ಈಗ ನಿಗೂಢವಾಗಿ ಕಣ್ಮರೆಯಾಗಿದ್ದಾರೆ!! ಈ ಪಿತೂರಿಯ ಮಟ್ಟ ಭಯಾನಕವಾಗಿದೆ. #HthrasCase” ಎಂದು ಬರೆದುಕೊಂಡಿದ್ದಾರೆ. ಇವರು ಟ್ವಿಟ್ಟರ್‌ನಲ್ಲಿ ಸುಮಾರು 4.59 ಲಕ್ಷ ಅನುಯಾಯಿಗಳನ್ನು ಹೊಂದಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: 13 ವರ್ಷದ ಬಾಲಕಿಯನ್ನು ಮುಸ್ಲಿಂ ವ್ಯಕ್ತಿ ಅತ್ಯಾಚಾರ ಮಾಡಿ ಸುಟ್ಟಿದ್ದು ಸುಳ್ಳು!

ಕಳೆದ ಕೆಲವು ದಿನಗಳಿಂದ ಸಂತ್ರಸ್ತೆಯ ಕುಟುಂಬದವರು ಎಂದು ಹೇಳಿಕೊಂಡು ನಕ್ಸಲೈಟ್‌ ಒಬ್ಬರು ಕುಟುಂಬವನ್ನು ಸೇರಿಕೊಂಡಿದ್ದಾರೆ ಎಂದು ಆರೋಪಿಸಲಾಗಿದ್ದು, ಆ ನಕ್ಸಲೈಟ್‌ಗೆ ಸಾಂತ್ವಾನ ಹೇಳಲು ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಹತ್ರಾಸ್‌ಗೆ ಭೇಟಿ ನೀಡಿದ್ದರು ಎಂಬ ವದಂತಿಗಳು ಹರಿದಾಡುತ್ತಿವೆ ಎಂದು ಆಲ್ಟ್‌ ನ್ಯೂಸ್ ವರದಿ ಮಾಡಿದೆ.

ಫೇಸ್‌ಬುಕ್‌ನಲ್ಲಿ, ಸೋಶಿಯಲ್ ತಮಾಶಾ ಎಂಬ ಪುಟವು ಈ ಚಿತ್ರವನ್ನು ಹಂಚಿಕೊಂಡಿದ್ದು, “ನಕಲಿ ಅತ್ತಿಗೆಯೊಂದಿಗೆ ನಕಲಿ ಗಾಂಧಿ” ಎಂದು ಬರೆದಿದೆ. ಫೇಸ್‌ಬುಕ್‌ನ ಈ ಪುಟವು ಈ ಹಿಂದೆಯೂ ಅನೇಕ ಬಾರಿ ಸುಳ್ಳು ಮಾಹಿತಿಯನ್ನು ಹರಡಿದೆ.

ಇದನ್ನೂ ಓದಿ: ನರೇಂದ್ರ ಮೋದಿ ಗುಜರಾತ್‌ನಲ್ಲಿ ಕ್ರೂಸ್ ಹಡಗು ಸೇವೆಯನ್ನು ಪ್ರಾರಂಭಿಸಿದ್ದಾರೆಯೇ? ಇಲ್ಲಿದೆ ವಿವರ

ಹೀಗೆ ಸಾಮಾಜಿಕ ಮಾಧ್ಯಮಗಳು ಸೇರಿದಂತೆ, ಪರ್ಫಾರ್ಮ್ ಇಂಡಿಯಾ, ವಿಕೆ ನ್ಯೂಸ್, ಬೆಸ್ಟ್ ಹಿಂದಿ ನ್ಯೂಸ್ ಮತ್ತು ಹರಿಯಾಣ ಅಬ್ಟಾಕ್ ಸೇರಿದಂತೆ ಕೆಲವು ವೆಬ್‌ಸೈಟ್‌ಗಳೂ ಸಹ ಪ್ರಿಯಾಂಕಾ ಅಪ್ಪಿಕೊಂಡಿದ್ದ ಮಹಿಳೆ ಸಂತ್ರಸ್ತೆಯ ಸಂಬಂಧಿಯಲ್ಲ ಎಂಬ ಪ್ರತಿಪಾದನೆಯೊಂದಿಗೆ ವರದಿಗಳನ್ನು ಮಾಡಿವೆ.

ಫ್ಯಾಕ್ಟ್-ಚೆಕ್:

ಅಕ್ಟೋಬರ್ 3 ರಂದು ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ರಾಹುಲ್ ಗಾಂಧಿ ಸಂತ್ರಸ್ತೆಯ ಕುಟುಂಬವನ್ನು ಭೇಟಿಯಾದರು. ಹಲವಾರು ಮಾಧ್ಯಮ ಸಂಸ್ಥೆಗಳು ಈ ಸಭೆಯ ಚಿತ್ರಗಳನ್ನು ಮತ್ತು ವಿಡಿಯೋ ತುಣುಕನ್ನು ಅಪ್‌ಲೋಡ್ ಮಾಡಿವೆ. ಅದೇ ದಿನ ನಡೆದ ಇಂಡಿಯಾ ಟುಡೆ ವರದಿಯ ಪ್ರಕಾರ ಪ್ರಿಯಾಂಕಾ ಗಾಂಧಿ ಹತ್ರಾಸ್ ಸಂತ್ರಸ್ತೆಯ ತಾಯಿಯನ್ನು ತಬ್ಬಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಕಂಗನಾಗೆ ಬೆಂಬಲ ನೀಡಲು ಮುಂಬೈಗೆ ಆಗಮಿಸಿತೆ ಕರ್ಣಿಸೇನಾ!: ಸತ್ಯಾಸತ್ಯತೆ ಏನು..?

ಸುದ್ದಿ ಸಂಸ್ಥೆ ಎಎನ್‌ಐ ಮತ್ತು ಪತ್ರಕರ್ತೆ ಮರಿಯಾ ಶಕಿಲ್ ಅವರು ಅಕ್ಟೋಬರ್ 3 ರಂದು, ಪ್ರಿಯಾಂಕಾ ಗಾಂಧಿ ಇಬ್ಬರು ಮಹಿಳೆಯರನ್ನು ಅಪ್ಪಿಕೊಂಡಿದ್ದ ವೀಡಿಯೊವನ್ನು ಟ್ವೀಟ್ ಮಾಡಿದ್ದಾರೆ. ಇದರಲ್ಲಿ ಸಂತ್ರಸ್ತೆಯ ತಾಯಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ತಬ್ಬಿಕೊಳ್ಳುತ್ತಿರುವುದನ್ನು ಕಾಣಬಹುದು.

ಪ್ರಿಯಾಂಕಾ ಗಾಂಧಿ ವಾದ್ರಾ ನಿಜಕ್ಕೂ ಸಂತ್ರಸ್ತೆಯ ತಾಯಿಯನ್ನು ತಬ್ಬಿಕೊಳ್ಳುತ್ತಿದ್ದಾರೆ ಎಂಬುದನ್ನು ಸಂತ್ರಸ್ತೆಯ ತಾಯಿ ಧರಿಸಿರುವ ಸೀರೆಯ ಗುರುತಿನಿಂದ ಪತ್ತೆಮಾಡಬಹುದಾಗಿದೆ. ಚಿತ್ರದಲ್ಲಿ ಮಹಿಳೆಯ ಮುಖವನ್ನು ತೋರಿಸದ ಕಾರಣ, ಇತರ ಮಾಧ್ಯಮ ಸಂಸ್ಥೆಗಳು ಮತ್ತು ಅವರೊಂದಿಗೆ ಮಾತನಾಡಿದ ಪತ್ರಕರ್ತರು ಪಡೆದ ದೃಶ್ಯಗಳನ್ನು ಬಳಸಿದೆ.

ಅಕ್ಟೋಬರ್ 3 ರಂದು, ಬರ್ಖಾ ದತ್ ಸಂತ್ರಸ್ತೆಯ ತಾಯಿಯೊಂದಿಗಿರುವ ಚಿತ್ರವನ್ನು ಟ್ವೀಟ್ ಮಾಡಿದ್ದಾರೆ. ಇಲ್ಲಿ, ಪ್ರಿಯಾಂಕಾರನ್ನು ತಬ್ಬಿಕೊಳ್ಳುವಾಗ ಆಕೆ ಧರಿಸಿದ್ದ ಅದೇ ಸೀರೆಯಲ್ಲಿಯೇ ಕಾಣಿಸಿಕೊಂಡಿದ್ದಾರೆ. ಇಂಡಿಯಾ ಟುಡೆ ಸಹ ಅದೇ ದಿನ ಸಂತ್ರಸ್ತೆಯ ತಾಯಿ ಮತ್ತು ಸಹೋದರನೊಂದಿಗೆ ಮಾತನಾಡಿದೆ. ಈ ವೀಡಿಯೊದಲ್ಲೂ ಸಂತ್ರಸ್ತೆಯ ತಾಯಿ ಅದೇ ಸೀರೆ ಧರಿಸಿರುವುದು ಕಂಡುಬರುತ್ತದೆ.

ಇದನ್ನೂ ಓದಿ: ಕೇರಳದ ಹಿಂದೂ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ? ಇಲ್ಲಿದೆ ಫ್ಯಾಕ್ಟ್‌ಚೆಕ್‌ ವಿವರ

ಇದಲ್ಲದೆ, ಸಂತ್ರಸ್ತೆಯ ತಾಯಿಯನ್ನು ಸೆಪ್ಟೆಂಬರ್ 30 ರಂದು ಟೈಮ್ಸ್ ನೌ ಮಾಧ್ಯಮದವರು ಸಂದರ್ಶಿಸಿದರು. ಅಲ್ಲಿ ಅವರನ್ನು ಮತ್ತೆ ಅದೇ ಸೀರೆಯಲ್ಲಿ ಕಾಣಬಹುದು.

ಆದ್ದರಿಂದ, ವೈರಲ್ ಆಗುತ್ತಿರುವ ಫೋಟೋದಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ ತಬ್ಬಿಕೊಳ್ಳುತ್ತಿರುವುದು ಸಂತ್ರಸ್ತೆಯ ತಾಯಿ ಎಂದು ಖಚಿತವಾಗಿ ಹೇಳಬಹುದು.

ಹತ್ರಾಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕಷ್ಟು ಸುಳ್ಳು ಸುದ್ದಿಗಳು ಹರಿದಾಡುತ್ತಿದ್ದು, ಅವುಗಳ ಸಾಲಿಗೆ ಈಗ ಮತ್ತೊಂದು ಸೇರ್ಪಡೆಯೇ ಈ ನಕ್ಸಲ್ ಸುದ್ದಿ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಮುಸ್ಲಿಂ ಮದುವೆಯಲ್ಲಿ ಪಾಲ್ಗೊಂಡಿದ್ದಕ್ಕೆ ಕೇರಳದ RSS ಕಾರ್ಯಕರ್ತನ ಮೇಲೆ ಹಲ್ಲೆ ಮಾಡಲಾಯಿತೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...