Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಹತ್ರಾಸ್‌ ಭೇಟಿಯ ಫೋಟೋದಲ್ಲಿ ಪ್ರಿಯಾಂಕಾ ಗಾಂಧಿ ಅಪ್ಪಿಕೊಂಡಿದ್ದ ಮಹಿಳೆ ಯಾರು?

ಫ್ಯಾಕ್ಟ್‌ಚೆಕ್: ಹತ್ರಾಸ್‌ ಭೇಟಿಯ ಫೋಟೋದಲ್ಲಿ ಪ್ರಿಯಾಂಕಾ ಗಾಂಧಿ ಅಪ್ಪಿಕೊಂಡಿದ್ದ ಮಹಿಳೆ ಯಾರು?

ಸಂತ್ರಸ್ತೆಯ ಭಾಭಿ ಎಂದು ಬಿಂಬಿಸಿಕೊಂಡಿರುವವರನ್ನು ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅಪ್ಪಿಕೊಂಡು ಸಮಾಧಾನಪಡಿಸುತ್ತಿರುವುದು ನಕ್ಸಲ್ ಆಪರೇಟೀವ್‌ನ ಭಾಗ ಎಂದು ಬಿಜೆಪಿಯ ಪ್ರೀತಿ ಗಾಂಧಿ ಆರೋಪಿಸಿದ್ದರು.

- Advertisement -
- Advertisement -

ದೇಶದಲ್ಲಿ ಸಂಚಲನ ಮೂಡಿಸಿದ ಹತ್ರಾಸ್ ಪ್ರಕರಣದ ಸಂತ್ರಸ್ತ ಕುಟುಂಬಕ್ಕೆ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಭೇಟಿ ನಿಡಿ ಸಾಂತ್ವಾನ ಹೇಳಿದ್ದರು. ಅಲ್ಲಿ ತೆಗೆದಿದ್ದ ಸಾಂತ್ವಾನ ಹೇಳುತ್ತಿರುವ ಚಿತ್ರವನ್ನು ಹಲವರು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡು, ಈ ಚಿತ್ರದಲ್ಲಿ ಪ್ರಿಯಾಂಕಾ ಗಾಂಧಿ ಅಪ್ಪಿಕೊಂಡಿದ್ದ ಮಹಿಳೆ ಸಂತ್ರಸ್ತೆಯ ಕುಟುಂಬದವರಲ್ಲ, ಬದಲಿಗೆ ಅಕೆ ಒಬ್ಬ ನಕ್ಸಲೈಟ್ ಎಂದು ಪ್ರತಿಪಾದಿಸಿದ್ದಾರೆ.

ಆಂಧ್ರಪ್ರದೇಶದ ಬಿಜೆಪಿಯ ಮಾಜಿ ಸಂಸದರಾದ ಗೀತಾ ಕೊತ್ತಪಲ್ಲಿ ಎಂಬುವವರು ಈ ಚಿತ್ರವನ್ನು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದು, “ಈ ಮಹಿಳೆ ಯಾರು? ಈಕೆ ಸಂತ್ರಸ್ತೆಯ ತಾಯಿಯಲ್ಲ, ಸಂತ್ರಸ್ತೆಯ ಮನೆಗೆ ಹೇಗೆ ಬಂದರು? ಪ್ರಿಯಾಂಕಾ ಅವರನ್ನು ಅಪ್ಪಿಕೊಳ್ಳಲು ಹೇಗೆ ಅವಕಾಶ ನೀಡಿದರು? ಇದೇ ಮಹಿಳೆಯನ್ನು ಬರ್ಖಾ ದತ್ (ವಾಷಿಂಗ್‌ಟನ್ ಪೋಸ್ಟ್‌ನ ಪತ್ರಕರ್ತರು) ಕೂಡಾ ಸಂದರ್ಶಿಸಿದ್ದಾರೆ… ಇದು ಯೋಜಿತ ಪಿತೂರಿಯಂತೆ ಕಾಣುತ್ತದೆ. ನಿಮ್ಮ ಅಭಿಪ್ರಾಯವೇನು? #FakeNaxalBhabhi” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌‌: ಪಂಜಾಬ್‌‌ನ ಈ ಮಹಿಳಾ ಅಧಿಕಾರಿ ಮೃತಪಟ್ಟಿದ್ದು ಅತ್ಯಾಚಾರದಿಂದಲ್ಲ, ರಸ್ತೆ ಅಫಘಾತದಿಂದ

ಬಿಜೆಪಿ ರಾಷ್ಟ್ರೀಯ ಮಹಿಳಾ ಮೋರ್ಚಾದ ರಾಷ್ಟ್ರೀಯ ಮೇಲ್ವಿಚಾರಕಿ ಪ್ರೀತಿ ಗಾಂಧಿ ಟ್ವೀಟ್ ಮಾಡಿ, “ಸಂತ್ರಸ್ತೆಯ ಭಾಭಿ ಎಂದು ಬಿಂಬಿಸಿಕೊಂಡಿರುವವರನ್ನು ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅಪ್ಪಿಕೊಂಡು ಸಮಾಧಾನಪಡಿಸುತ್ತಿರುವುದು ನಕ್ಸಲ್ ಆಪರೇಟೀವ್‌ನ ಭಾಗ. ಸೆಪ್ಟಂಬರ್ 16 ರಿಂದ 22ರವರೆಗೆ ಸಂತ್ರಸ್ತೆಯ ಮನೆಯಲ್ಲಿಯೇ ಇದ್ದು, ಈಗ ನಿಗೂಢವಾಗಿ ಕಣ್ಮರೆಯಾಗಿದ್ದಾರೆ!! ಈ ಪಿತೂರಿಯ ಮಟ್ಟ ಭಯಾನಕವಾಗಿದೆ. #HthrasCase” ಎಂದು ಬರೆದುಕೊಂಡಿದ್ದಾರೆ. ಇವರು ಟ್ವಿಟ್ಟರ್‌ನಲ್ಲಿ ಸುಮಾರು 4.59 ಲಕ್ಷ ಅನುಯಾಯಿಗಳನ್ನು ಹೊಂದಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: 13 ವರ್ಷದ ಬಾಲಕಿಯನ್ನು ಮುಸ್ಲಿಂ ವ್ಯಕ್ತಿ ಅತ್ಯಾಚಾರ ಮಾಡಿ ಸುಟ್ಟಿದ್ದು ಸುಳ್ಳು!

ಕಳೆದ ಕೆಲವು ದಿನಗಳಿಂದ ಸಂತ್ರಸ್ತೆಯ ಕುಟುಂಬದವರು ಎಂದು ಹೇಳಿಕೊಂಡು ನಕ್ಸಲೈಟ್‌ ಒಬ್ಬರು ಕುಟುಂಬವನ್ನು ಸೇರಿಕೊಂಡಿದ್ದಾರೆ ಎಂದು ಆರೋಪಿಸಲಾಗಿದ್ದು, ಆ ನಕ್ಸಲೈಟ್‌ಗೆ ಸಾಂತ್ವಾನ ಹೇಳಲು ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಹತ್ರಾಸ್‌ಗೆ ಭೇಟಿ ನೀಡಿದ್ದರು ಎಂಬ ವದಂತಿಗಳು ಹರಿದಾಡುತ್ತಿವೆ ಎಂದು ಆಲ್ಟ್‌ ನ್ಯೂಸ್ ವರದಿ ಮಾಡಿದೆ.

ಫೇಸ್‌ಬುಕ್‌ನಲ್ಲಿ, ಸೋಶಿಯಲ್ ತಮಾಶಾ ಎಂಬ ಪುಟವು ಈ ಚಿತ್ರವನ್ನು ಹಂಚಿಕೊಂಡಿದ್ದು, “ನಕಲಿ ಅತ್ತಿಗೆಯೊಂದಿಗೆ ನಕಲಿ ಗಾಂಧಿ” ಎಂದು ಬರೆದಿದೆ. ಫೇಸ್‌ಬುಕ್‌ನ ಈ ಪುಟವು ಈ ಹಿಂದೆಯೂ ಅನೇಕ ಬಾರಿ ಸುಳ್ಳು ಮಾಹಿತಿಯನ್ನು ಹರಡಿದೆ.

ಇದನ್ನೂ ಓದಿ: ನರೇಂದ್ರ ಮೋದಿ ಗುಜರಾತ್‌ನಲ್ಲಿ ಕ್ರೂಸ್ ಹಡಗು ಸೇವೆಯನ್ನು ಪ್ರಾರಂಭಿಸಿದ್ದಾರೆಯೇ? ಇಲ್ಲಿದೆ ವಿವರ

ಹೀಗೆ ಸಾಮಾಜಿಕ ಮಾಧ್ಯಮಗಳು ಸೇರಿದಂತೆ, ಪರ್ಫಾರ್ಮ್ ಇಂಡಿಯಾ, ವಿಕೆ ನ್ಯೂಸ್, ಬೆಸ್ಟ್ ಹಿಂದಿ ನ್ಯೂಸ್ ಮತ್ತು ಹರಿಯಾಣ ಅಬ್ಟಾಕ್ ಸೇರಿದಂತೆ ಕೆಲವು ವೆಬ್‌ಸೈಟ್‌ಗಳೂ ಸಹ ಪ್ರಿಯಾಂಕಾ ಅಪ್ಪಿಕೊಂಡಿದ್ದ ಮಹಿಳೆ ಸಂತ್ರಸ್ತೆಯ ಸಂಬಂಧಿಯಲ್ಲ ಎಂಬ ಪ್ರತಿಪಾದನೆಯೊಂದಿಗೆ ವರದಿಗಳನ್ನು ಮಾಡಿವೆ.

ಫ್ಯಾಕ್ಟ್-ಚೆಕ್:

ಅಕ್ಟೋಬರ್ 3 ರಂದು ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ರಾಹುಲ್ ಗಾಂಧಿ ಸಂತ್ರಸ್ತೆಯ ಕುಟುಂಬವನ್ನು ಭೇಟಿಯಾದರು. ಹಲವಾರು ಮಾಧ್ಯಮ ಸಂಸ್ಥೆಗಳು ಈ ಸಭೆಯ ಚಿತ್ರಗಳನ್ನು ಮತ್ತು ವಿಡಿಯೋ ತುಣುಕನ್ನು ಅಪ್‌ಲೋಡ್ ಮಾಡಿವೆ. ಅದೇ ದಿನ ನಡೆದ ಇಂಡಿಯಾ ಟುಡೆ ವರದಿಯ ಪ್ರಕಾರ ಪ್ರಿಯಾಂಕಾ ಗಾಂಧಿ ಹತ್ರಾಸ್ ಸಂತ್ರಸ್ತೆಯ ತಾಯಿಯನ್ನು ತಬ್ಬಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಕಂಗನಾಗೆ ಬೆಂಬಲ ನೀಡಲು ಮುಂಬೈಗೆ ಆಗಮಿಸಿತೆ ಕರ್ಣಿಸೇನಾ!: ಸತ್ಯಾಸತ್ಯತೆ ಏನು..?

ಸುದ್ದಿ ಸಂಸ್ಥೆ ಎಎನ್‌ಐ ಮತ್ತು ಪತ್ರಕರ್ತೆ ಮರಿಯಾ ಶಕಿಲ್ ಅವರು ಅಕ್ಟೋಬರ್ 3 ರಂದು, ಪ್ರಿಯಾಂಕಾ ಗಾಂಧಿ ಇಬ್ಬರು ಮಹಿಳೆಯರನ್ನು ಅಪ್ಪಿಕೊಂಡಿದ್ದ ವೀಡಿಯೊವನ್ನು ಟ್ವೀಟ್ ಮಾಡಿದ್ದಾರೆ. ಇದರಲ್ಲಿ ಸಂತ್ರಸ್ತೆಯ ತಾಯಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ತಬ್ಬಿಕೊಳ್ಳುತ್ತಿರುವುದನ್ನು ಕಾಣಬಹುದು.

ಪ್ರಿಯಾಂಕಾ ಗಾಂಧಿ ವಾದ್ರಾ ನಿಜಕ್ಕೂ ಸಂತ್ರಸ್ತೆಯ ತಾಯಿಯನ್ನು ತಬ್ಬಿಕೊಳ್ಳುತ್ತಿದ್ದಾರೆ ಎಂಬುದನ್ನು ಸಂತ್ರಸ್ತೆಯ ತಾಯಿ ಧರಿಸಿರುವ ಸೀರೆಯ ಗುರುತಿನಿಂದ ಪತ್ತೆಮಾಡಬಹುದಾಗಿದೆ. ಚಿತ್ರದಲ್ಲಿ ಮಹಿಳೆಯ ಮುಖವನ್ನು ತೋರಿಸದ ಕಾರಣ, ಇತರ ಮಾಧ್ಯಮ ಸಂಸ್ಥೆಗಳು ಮತ್ತು ಅವರೊಂದಿಗೆ ಮಾತನಾಡಿದ ಪತ್ರಕರ್ತರು ಪಡೆದ ದೃಶ್ಯಗಳನ್ನು ಬಳಸಿದೆ.

ಅಕ್ಟೋಬರ್ 3 ರಂದು, ಬರ್ಖಾ ದತ್ ಸಂತ್ರಸ್ತೆಯ ತಾಯಿಯೊಂದಿಗಿರುವ ಚಿತ್ರವನ್ನು ಟ್ವೀಟ್ ಮಾಡಿದ್ದಾರೆ. ಇಲ್ಲಿ, ಪ್ರಿಯಾಂಕಾರನ್ನು ತಬ್ಬಿಕೊಳ್ಳುವಾಗ ಆಕೆ ಧರಿಸಿದ್ದ ಅದೇ ಸೀರೆಯಲ್ಲಿಯೇ ಕಾಣಿಸಿಕೊಂಡಿದ್ದಾರೆ. ಇಂಡಿಯಾ ಟುಡೆ ಸಹ ಅದೇ ದಿನ ಸಂತ್ರಸ್ತೆಯ ತಾಯಿ ಮತ್ತು ಸಹೋದರನೊಂದಿಗೆ ಮಾತನಾಡಿದೆ. ಈ ವೀಡಿಯೊದಲ್ಲೂ ಸಂತ್ರಸ್ತೆಯ ತಾಯಿ ಅದೇ ಸೀರೆ ಧರಿಸಿರುವುದು ಕಂಡುಬರುತ್ತದೆ.

ಇದನ್ನೂ ಓದಿ: ಕೇರಳದ ಹಿಂದೂ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ? ಇಲ್ಲಿದೆ ಫ್ಯಾಕ್ಟ್‌ಚೆಕ್‌ ವಿವರ

ಇದಲ್ಲದೆ, ಸಂತ್ರಸ್ತೆಯ ತಾಯಿಯನ್ನು ಸೆಪ್ಟೆಂಬರ್ 30 ರಂದು ಟೈಮ್ಸ್ ನೌ ಮಾಧ್ಯಮದವರು ಸಂದರ್ಶಿಸಿದರು. ಅಲ್ಲಿ ಅವರನ್ನು ಮತ್ತೆ ಅದೇ ಸೀರೆಯಲ್ಲಿ ಕಾಣಬಹುದು.

ಆದ್ದರಿಂದ, ವೈರಲ್ ಆಗುತ್ತಿರುವ ಫೋಟೋದಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ ತಬ್ಬಿಕೊಳ್ಳುತ್ತಿರುವುದು ಸಂತ್ರಸ್ತೆಯ ತಾಯಿ ಎಂದು ಖಚಿತವಾಗಿ ಹೇಳಬಹುದು.

ಹತ್ರಾಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕಷ್ಟು ಸುಳ್ಳು ಸುದ್ದಿಗಳು ಹರಿದಾಡುತ್ತಿದ್ದು, ಅವುಗಳ ಸಾಲಿಗೆ ಈಗ ಮತ್ತೊಂದು ಸೇರ್ಪಡೆಯೇ ಈ ನಕ್ಸಲ್ ಸುದ್ದಿ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಮುಸ್ಲಿಂ ಮದುವೆಯಲ್ಲಿ ಪಾಲ್ಗೊಂಡಿದ್ದಕ್ಕೆ ಕೇರಳದ RSS ಕಾರ್ಯಕರ್ತನ ಮೇಲೆ ಹಲ್ಲೆ ಮಾಡಲಾಯಿತೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...