Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಹತ್ರಾಸ್‌ ಭೇಟಿಯ ಫೋಟೋದಲ್ಲಿ ಪ್ರಿಯಾಂಕಾ ಗಾಂಧಿ ಅಪ್ಪಿಕೊಂಡಿದ್ದ ಮಹಿಳೆ ಯಾರು?

ಫ್ಯಾಕ್ಟ್‌ಚೆಕ್: ಹತ್ರಾಸ್‌ ಭೇಟಿಯ ಫೋಟೋದಲ್ಲಿ ಪ್ರಿಯಾಂಕಾ ಗಾಂಧಿ ಅಪ್ಪಿಕೊಂಡಿದ್ದ ಮಹಿಳೆ ಯಾರು?

ಸಂತ್ರಸ್ತೆಯ ಭಾಭಿ ಎಂದು ಬಿಂಬಿಸಿಕೊಂಡಿರುವವರನ್ನು ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅಪ್ಪಿಕೊಂಡು ಸಮಾಧಾನಪಡಿಸುತ್ತಿರುವುದು ನಕ್ಸಲ್ ಆಪರೇಟೀವ್‌ನ ಭಾಗ ಎಂದು ಬಿಜೆಪಿಯ ಪ್ರೀತಿ ಗಾಂಧಿ ಆರೋಪಿಸಿದ್ದರು.

- Advertisement -
- Advertisement -

ದೇಶದಲ್ಲಿ ಸಂಚಲನ ಮೂಡಿಸಿದ ಹತ್ರಾಸ್ ಪ್ರಕರಣದ ಸಂತ್ರಸ್ತ ಕುಟುಂಬಕ್ಕೆ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಭೇಟಿ ನಿಡಿ ಸಾಂತ್ವಾನ ಹೇಳಿದ್ದರು. ಅಲ್ಲಿ ತೆಗೆದಿದ್ದ ಸಾಂತ್ವಾನ ಹೇಳುತ್ತಿರುವ ಚಿತ್ರವನ್ನು ಹಲವರು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡು, ಈ ಚಿತ್ರದಲ್ಲಿ ಪ್ರಿಯಾಂಕಾ ಗಾಂಧಿ ಅಪ್ಪಿಕೊಂಡಿದ್ದ ಮಹಿಳೆ ಸಂತ್ರಸ್ತೆಯ ಕುಟುಂಬದವರಲ್ಲ, ಬದಲಿಗೆ ಅಕೆ ಒಬ್ಬ ನಕ್ಸಲೈಟ್ ಎಂದು ಪ್ರತಿಪಾದಿಸಿದ್ದಾರೆ.

ಆಂಧ್ರಪ್ರದೇಶದ ಬಿಜೆಪಿಯ ಮಾಜಿ ಸಂಸದರಾದ ಗೀತಾ ಕೊತ್ತಪಲ್ಲಿ ಎಂಬುವವರು ಈ ಚಿತ್ರವನ್ನು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದು, “ಈ ಮಹಿಳೆ ಯಾರು? ಈಕೆ ಸಂತ್ರಸ್ತೆಯ ತಾಯಿಯಲ್ಲ, ಸಂತ್ರಸ್ತೆಯ ಮನೆಗೆ ಹೇಗೆ ಬಂದರು? ಪ್ರಿಯಾಂಕಾ ಅವರನ್ನು ಅಪ್ಪಿಕೊಳ್ಳಲು ಹೇಗೆ ಅವಕಾಶ ನೀಡಿದರು? ಇದೇ ಮಹಿಳೆಯನ್ನು ಬರ್ಖಾ ದತ್ (ವಾಷಿಂಗ್‌ಟನ್ ಪೋಸ್ಟ್‌ನ ಪತ್ರಕರ್ತರು) ಕೂಡಾ ಸಂದರ್ಶಿಸಿದ್ದಾರೆ… ಇದು ಯೋಜಿತ ಪಿತೂರಿಯಂತೆ ಕಾಣುತ್ತದೆ. ನಿಮ್ಮ ಅಭಿಪ್ರಾಯವೇನು? #FakeNaxalBhabhi” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌‌: ಪಂಜಾಬ್‌‌ನ ಈ ಮಹಿಳಾ ಅಧಿಕಾರಿ ಮೃತಪಟ್ಟಿದ್ದು ಅತ್ಯಾಚಾರದಿಂದಲ್ಲ, ರಸ್ತೆ ಅಫಘಾತದಿಂದ

ಬಿಜೆಪಿ ರಾಷ್ಟ್ರೀಯ ಮಹಿಳಾ ಮೋರ್ಚಾದ ರಾಷ್ಟ್ರೀಯ ಮೇಲ್ವಿಚಾರಕಿ ಪ್ರೀತಿ ಗಾಂಧಿ ಟ್ವೀಟ್ ಮಾಡಿ, “ಸಂತ್ರಸ್ತೆಯ ಭಾಭಿ ಎಂದು ಬಿಂಬಿಸಿಕೊಂಡಿರುವವರನ್ನು ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅಪ್ಪಿಕೊಂಡು ಸಮಾಧಾನಪಡಿಸುತ್ತಿರುವುದು ನಕ್ಸಲ್ ಆಪರೇಟೀವ್‌ನ ಭಾಗ. ಸೆಪ್ಟಂಬರ್ 16 ರಿಂದ 22ರವರೆಗೆ ಸಂತ್ರಸ್ತೆಯ ಮನೆಯಲ್ಲಿಯೇ ಇದ್ದು, ಈಗ ನಿಗೂಢವಾಗಿ ಕಣ್ಮರೆಯಾಗಿದ್ದಾರೆ!! ಈ ಪಿತೂರಿಯ ಮಟ್ಟ ಭಯಾನಕವಾಗಿದೆ. #HthrasCase” ಎಂದು ಬರೆದುಕೊಂಡಿದ್ದಾರೆ. ಇವರು ಟ್ವಿಟ್ಟರ್‌ನಲ್ಲಿ ಸುಮಾರು 4.59 ಲಕ್ಷ ಅನುಯಾಯಿಗಳನ್ನು ಹೊಂದಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: 13 ವರ್ಷದ ಬಾಲಕಿಯನ್ನು ಮುಸ್ಲಿಂ ವ್ಯಕ್ತಿ ಅತ್ಯಾಚಾರ ಮಾಡಿ ಸುಟ್ಟಿದ್ದು ಸುಳ್ಳು!

ಕಳೆದ ಕೆಲವು ದಿನಗಳಿಂದ ಸಂತ್ರಸ್ತೆಯ ಕುಟುಂಬದವರು ಎಂದು ಹೇಳಿಕೊಂಡು ನಕ್ಸಲೈಟ್‌ ಒಬ್ಬರು ಕುಟುಂಬವನ್ನು ಸೇರಿಕೊಂಡಿದ್ದಾರೆ ಎಂದು ಆರೋಪಿಸಲಾಗಿದ್ದು, ಆ ನಕ್ಸಲೈಟ್‌ಗೆ ಸಾಂತ್ವಾನ ಹೇಳಲು ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಹತ್ರಾಸ್‌ಗೆ ಭೇಟಿ ನೀಡಿದ್ದರು ಎಂಬ ವದಂತಿಗಳು ಹರಿದಾಡುತ್ತಿವೆ ಎಂದು ಆಲ್ಟ್‌ ನ್ಯೂಸ್ ವರದಿ ಮಾಡಿದೆ.

ಫೇಸ್‌ಬುಕ್‌ನಲ್ಲಿ, ಸೋಶಿಯಲ್ ತಮಾಶಾ ಎಂಬ ಪುಟವು ಈ ಚಿತ್ರವನ್ನು ಹಂಚಿಕೊಂಡಿದ್ದು, “ನಕಲಿ ಅತ್ತಿಗೆಯೊಂದಿಗೆ ನಕಲಿ ಗಾಂಧಿ” ಎಂದು ಬರೆದಿದೆ. ಫೇಸ್‌ಬುಕ್‌ನ ಈ ಪುಟವು ಈ ಹಿಂದೆಯೂ ಅನೇಕ ಬಾರಿ ಸುಳ್ಳು ಮಾಹಿತಿಯನ್ನು ಹರಡಿದೆ.

ಇದನ್ನೂ ಓದಿ: ನರೇಂದ್ರ ಮೋದಿ ಗುಜರಾತ್‌ನಲ್ಲಿ ಕ್ರೂಸ್ ಹಡಗು ಸೇವೆಯನ್ನು ಪ್ರಾರಂಭಿಸಿದ್ದಾರೆಯೇ? ಇಲ್ಲಿದೆ ವಿವರ

ಹೀಗೆ ಸಾಮಾಜಿಕ ಮಾಧ್ಯಮಗಳು ಸೇರಿದಂತೆ, ಪರ್ಫಾರ್ಮ್ ಇಂಡಿಯಾ, ವಿಕೆ ನ್ಯೂಸ್, ಬೆಸ್ಟ್ ಹಿಂದಿ ನ್ಯೂಸ್ ಮತ್ತು ಹರಿಯಾಣ ಅಬ್ಟಾಕ್ ಸೇರಿದಂತೆ ಕೆಲವು ವೆಬ್‌ಸೈಟ್‌ಗಳೂ ಸಹ ಪ್ರಿಯಾಂಕಾ ಅಪ್ಪಿಕೊಂಡಿದ್ದ ಮಹಿಳೆ ಸಂತ್ರಸ್ತೆಯ ಸಂಬಂಧಿಯಲ್ಲ ಎಂಬ ಪ್ರತಿಪಾದನೆಯೊಂದಿಗೆ ವರದಿಗಳನ್ನು ಮಾಡಿವೆ.

ಫ್ಯಾಕ್ಟ್-ಚೆಕ್:

ಅಕ್ಟೋಬರ್ 3 ರಂದು ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ರಾಹುಲ್ ಗಾಂಧಿ ಸಂತ್ರಸ್ತೆಯ ಕುಟುಂಬವನ್ನು ಭೇಟಿಯಾದರು. ಹಲವಾರು ಮಾಧ್ಯಮ ಸಂಸ್ಥೆಗಳು ಈ ಸಭೆಯ ಚಿತ್ರಗಳನ್ನು ಮತ್ತು ವಿಡಿಯೋ ತುಣುಕನ್ನು ಅಪ್‌ಲೋಡ್ ಮಾಡಿವೆ. ಅದೇ ದಿನ ನಡೆದ ಇಂಡಿಯಾ ಟುಡೆ ವರದಿಯ ಪ್ರಕಾರ ಪ್ರಿಯಾಂಕಾ ಗಾಂಧಿ ಹತ್ರಾಸ್ ಸಂತ್ರಸ್ತೆಯ ತಾಯಿಯನ್ನು ತಬ್ಬಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಕಂಗನಾಗೆ ಬೆಂಬಲ ನೀಡಲು ಮುಂಬೈಗೆ ಆಗಮಿಸಿತೆ ಕರ್ಣಿಸೇನಾ!: ಸತ್ಯಾಸತ್ಯತೆ ಏನು..?

ಸುದ್ದಿ ಸಂಸ್ಥೆ ಎಎನ್‌ಐ ಮತ್ತು ಪತ್ರಕರ್ತೆ ಮರಿಯಾ ಶಕಿಲ್ ಅವರು ಅಕ್ಟೋಬರ್ 3 ರಂದು, ಪ್ರಿಯಾಂಕಾ ಗಾಂಧಿ ಇಬ್ಬರು ಮಹಿಳೆಯರನ್ನು ಅಪ್ಪಿಕೊಂಡಿದ್ದ ವೀಡಿಯೊವನ್ನು ಟ್ವೀಟ್ ಮಾಡಿದ್ದಾರೆ. ಇದರಲ್ಲಿ ಸಂತ್ರಸ್ತೆಯ ತಾಯಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ತಬ್ಬಿಕೊಳ್ಳುತ್ತಿರುವುದನ್ನು ಕಾಣಬಹುದು.

ಪ್ರಿಯಾಂಕಾ ಗಾಂಧಿ ವಾದ್ರಾ ನಿಜಕ್ಕೂ ಸಂತ್ರಸ್ತೆಯ ತಾಯಿಯನ್ನು ತಬ್ಬಿಕೊಳ್ಳುತ್ತಿದ್ದಾರೆ ಎಂಬುದನ್ನು ಸಂತ್ರಸ್ತೆಯ ತಾಯಿ ಧರಿಸಿರುವ ಸೀರೆಯ ಗುರುತಿನಿಂದ ಪತ್ತೆಮಾಡಬಹುದಾಗಿದೆ. ಚಿತ್ರದಲ್ಲಿ ಮಹಿಳೆಯ ಮುಖವನ್ನು ತೋರಿಸದ ಕಾರಣ, ಇತರ ಮಾಧ್ಯಮ ಸಂಸ್ಥೆಗಳು ಮತ್ತು ಅವರೊಂದಿಗೆ ಮಾತನಾಡಿದ ಪತ್ರಕರ್ತರು ಪಡೆದ ದೃಶ್ಯಗಳನ್ನು ಬಳಸಿದೆ.

ಅಕ್ಟೋಬರ್ 3 ರಂದು, ಬರ್ಖಾ ದತ್ ಸಂತ್ರಸ್ತೆಯ ತಾಯಿಯೊಂದಿಗಿರುವ ಚಿತ್ರವನ್ನು ಟ್ವೀಟ್ ಮಾಡಿದ್ದಾರೆ. ಇಲ್ಲಿ, ಪ್ರಿಯಾಂಕಾರನ್ನು ತಬ್ಬಿಕೊಳ್ಳುವಾಗ ಆಕೆ ಧರಿಸಿದ್ದ ಅದೇ ಸೀರೆಯಲ್ಲಿಯೇ ಕಾಣಿಸಿಕೊಂಡಿದ್ದಾರೆ. ಇಂಡಿಯಾ ಟುಡೆ ಸಹ ಅದೇ ದಿನ ಸಂತ್ರಸ್ತೆಯ ತಾಯಿ ಮತ್ತು ಸಹೋದರನೊಂದಿಗೆ ಮಾತನಾಡಿದೆ. ಈ ವೀಡಿಯೊದಲ್ಲೂ ಸಂತ್ರಸ್ತೆಯ ತಾಯಿ ಅದೇ ಸೀರೆ ಧರಿಸಿರುವುದು ಕಂಡುಬರುತ್ತದೆ.

ಇದನ್ನೂ ಓದಿ: ಕೇರಳದ ಹಿಂದೂ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ? ಇಲ್ಲಿದೆ ಫ್ಯಾಕ್ಟ್‌ಚೆಕ್‌ ವಿವರ

ಇದಲ್ಲದೆ, ಸಂತ್ರಸ್ತೆಯ ತಾಯಿಯನ್ನು ಸೆಪ್ಟೆಂಬರ್ 30 ರಂದು ಟೈಮ್ಸ್ ನೌ ಮಾಧ್ಯಮದವರು ಸಂದರ್ಶಿಸಿದರು. ಅಲ್ಲಿ ಅವರನ್ನು ಮತ್ತೆ ಅದೇ ಸೀರೆಯಲ್ಲಿ ಕಾಣಬಹುದು.

ಆದ್ದರಿಂದ, ವೈರಲ್ ಆಗುತ್ತಿರುವ ಫೋಟೋದಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ ತಬ್ಬಿಕೊಳ್ಳುತ್ತಿರುವುದು ಸಂತ್ರಸ್ತೆಯ ತಾಯಿ ಎಂದು ಖಚಿತವಾಗಿ ಹೇಳಬಹುದು.

ಹತ್ರಾಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕಷ್ಟು ಸುಳ್ಳು ಸುದ್ದಿಗಳು ಹರಿದಾಡುತ್ತಿದ್ದು, ಅವುಗಳ ಸಾಲಿಗೆ ಈಗ ಮತ್ತೊಂದು ಸೇರ್ಪಡೆಯೇ ಈ ನಕ್ಸಲ್ ಸುದ್ದಿ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಮುಸ್ಲಿಂ ಮದುವೆಯಲ್ಲಿ ಪಾಲ್ಗೊಂಡಿದ್ದಕ್ಕೆ ಕೇರಳದ RSS ಕಾರ್ಯಕರ್ತನ ಮೇಲೆ ಹಲ್ಲೆ ಮಾಡಲಾಯಿತೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...