Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ನೈಜೀರಿಯಾದಲ್ಲಿ ನಟ ಸುಶಾಂತ್‌ಗೆ ನ್ಯಾಯ ಕೋರಿ ನಡೆಯಿತೆ ಪ್ರತಿಭಟನೆ?

ಫ್ಯಾಕ್ಟ್‌ಚೆಕ್: ನೈಜೀರಿಯಾದಲ್ಲಿ ನಟ ಸುಶಾಂತ್‌ಗೆ ನ್ಯಾಯ ಕೋರಿ ನಡೆಯಿತೆ ಪ್ರತಿಭಟನೆ?

ಈ ಚಿತ್ರ ಅಕ್ಟೋಬರ್ 13ರ ಸಿಎನ್ಎನ್ ವರದಿಯಲ್ಲಿ ಪತ್ತೆಯಾಗಿದೆ. ಇದು ನೈಜೀರಿಯಾದಲ್ಲಿ ಪೊಲೀಸ್ ದೌರ್ಜನ್ಯದ ವಿರುದ್ಧ ನಡೆದ ಪ್ರತಿಭಟನೆಯ ಚಿತ್ರ.

- Advertisement -
- Advertisement -

ದಿವಂಗತ ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿಗೆ ನ್ಯಾಯ ನೀಡಿ ಎಂದು ನೈಜೀರಿಯಾದಲ್ಲಿ ಪ್ರತಿಭಟನೆ ನಡೆದಿದೆ. ರ್‍ಯಾಲಿಯಲ್ಲಿ ‘ಜಸ್ಟೀಸ್ ಫಾರ್ ಸುಶಾಂತ್’  ಎನ್ನುವ ಫಲಕಗಳನ್ನು ಹಿಡಿದು ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಒಂದು ಚಿತ್ರವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ.

ಈ ಚಿತ್ರವು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಚಿತ್ರವನ್ನು ಫೋಟೋಶಾಪ್ ಮಾಡಲಾಗಿದ್ದು, ಇದು ನೈಜೀರಿಯಾದಲ್ಲಿ ಪೊಲೀಸ್ ದೌರ್ಜನ್ಯದ ವಿರುದ್ಧ ನಡೆದ ಪ್ರತಿಭಟನೆಯ ಚಿತ್ರ ಎಂಬುದು ತಿಳಿದುಬಂದಿದೆ.

An archived version of the post can be accessed <a href="https://archive.is/heGbs">here</a>.

ಚಿತ್ರದಲ್ಲಿ ಮೂವರು ಪ್ರತಿಭಟನಾಕಾರರು ಕುರ್ಚಿಗಳ ಮೇಲೆ ಕುಳಿತು, ಸುಶಾಂತ್ ಸಿಂಗ್ ರಜಪೂತ್ ಅವರ ಫೋಟೋಗಳನ್ನು ಹಿಡಿದುಕೊಂಡು ಜೊತೆಗೆ ಸುಶಾಂತ್‌ಗೆ ನ್ಯಾಯ ಬೇಕು ಎಂದು ಪ್ರತಿಭಟಿಸುತ್ತಿದ್ದಾರೆ. ಚಿತ್ರದ ಜೊತೆಗೆ  “ಎಸ್‌ಎಸ್‌ಆರ್‌ಗೆ ನ್ಯಾಯಕ್ಕಾಗಿ ಜಗತ್ತು ಒತ್ತಾಯಿಸುತ್ತಿದೆ. ನಮಗೆ ನ್ಯಾಯ ಬೇಕು, ಜಗತ್ತು ಸುಶಾಂತ್ ಸಿಂಗ್ ರಜಪೂತ್‌ಗೆ ನ್ಯಾಯವನ್ನು ಬಯಸುತ್ತದೆ. ಧನ್ಯವಾದಗಳು, ನೈಜೀರಿಯಾ” ಎಂದು ಶೀರ್ಷಿಕೆ ನೀಡಲಾಗಿದೆ.

An archived version of the tweet can be accessed <a href="https://archive.is/oqAVM">here</a>.

ಇದನ್ನೂ ಓದಿ: ಸುಳ್ಳು ಸುದ್ದಿ ಪ್ರಸಾರ: ರಿಪಬ್ಲಿಕ್ ಟಿವಿಯಿಂದ 200 ಕೋಟಿ ಮಾನನಷ್ಟ ಪರಿಹಾರ ಕೇಳಿದ ಸುಶಾಂತ್ ಗೆಳೆಯ!

An archived version of the tweet can be accessed <a href="https://archive.is/koqGD">here</a>.

ಈ ಚಿತ್ರಗಳನ್ನು ರಿವರ್ಸ್ ಇಮೇಜ್ ಹುಡುಕಾಡಿದಾಗ, ಚಿತ್ರವು ಅಕ್ಟೋಬರ್ 13ರ ಸಿಎನ್ಎನ್ ವರದಿಯಲ್ಲಿ ಪತ್ತೆಯಾಗಿದೆ.

No, This Isn’t a Protest in Nigeria Demanding ‘Justice for SSR’

ಈ ವರದಿಯಲ್ಲಿ, “ವಿಶೇಷ ದರೋಡೆ ವಿರೋಧಿ ದಳ (SARS) ಎಂದು ಕರೆಯಲ್ಪಡುವ ಪೊಲೀಸ್ ಘಟಕದಿಂದ ಅಪಹರಣ, ಕಿರುಕುಳ ಮತ್ತು ಸುಲಿಗೆ ಆರೋಪದ ಬಗ್ಗೆ ದೇಶದ ಯುವಜನರು ಆನ್‌ಲೈನ್‌ನಲ್ಲಿ ಆಕ್ರೋಶ ವ್ಯಕ್ತಪಡಿಸಿದ ನಂತರ, ನೈಜೀರಿಯಾದಲ್ಲಿ ಪ್ರತಿಭಟನೆಗಳು ಭುಗಿಲೆದ್ದವು.” ಎಂದು ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: ಸುಶಾಂತ್ ಪ್ರಕರಣದಲ್ಲಿ ಮುಂಬೈ ಪೊಲೀಸರನ್ನು ಹಣಿಯಲು 80 ಸಾವಿರ ಫೇಕ್ ಅಕೌಂಟ್‌ಗಳ ಸೃಷ್ಠಿ : BJP ಕೈವಾಡದ ಆರೋಪ

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಚಿತ್ರ ಮತ್ತು ಮೂಲ ಚಿತ್ರದ ಹೋಲಿಕೆ ಇಲ್ಲಿದೆ.

No, This Isn’t a Protest in Nigeria Demanding ‘Justice for SSR’

ನೈಜೀರಿಯಾದಲ್ಲಿ ನಡೆದ ರ್‍ಯಾಲಿಯಲ್ಲಿನ ಪ್ರತಿಭಟನಾಕಾರರ ಫೋಟೋಶಾಪ್ ಚಿತ್ರವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಈ ಮೂಲಕ ಸುಶಾಂತ್ ಸಿಂಗ್ ರಜಪೂತ್‌ಗೆ ನ್ಯಾಯ ಕೋರಿ ಪ್ರತಿಭಟನೆಗಳು ವಿಶ್ವದಾದ್ಯಂತ ಆಯೋಜಿಸಲಾಗುತ್ತಿದೆ ಎಂದು ಜನರನ್ನು ಪ್ರಚೋದಿಸಲಾಗುತ್ತಿದೆ.

ಈ ವರ್ಷದ ಜೂನ್‌ನಲ್ಲಿ ಸುಶಾಂತ್ ಸಿಂಗ್ ರಜಪೂತ್ ಅವರ ಅಸಹಜ ಸಾವು ಸಾಮಾಜಿಕ ಮಾಧ್ಯಮ ಸೇರಿದಂತೆ ಮುಖ್ಯವಾಹಿನಿಯ ಮಾಧ್ಯಮಗಳಲ್ಲಿ ಕೂಡಾ ಹಲವಾರು ನಕಲಿ ಸುದ್ದಿ ಮತ್ತು ಪಿತೂರಿಗಳನ್ನು ಹರಡಲಾಗುತ್ತಿದೆ.

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ನಿಧನದ ನಂತರ ಟ್ವಿಟ್ಟರ್‌ನಲ್ಲಿ ರಿಪಬ್ಲಿಕ್ ಚಾನೆಲ್ ನಡೆಸುತ್ತಿರುವ ‘#ಅರೆಸ್ಟ್ ರಿಯಾ’ ಎಂಬ ಹ್ಯಾಶ್‌ಟ್ಯಾಗ್ ಅಭಿಯಾನವನ್ನು ಬಾಂಬೆ ಹೈಕೋರ್ಟ್ ರಿಪಬ್ಲಿಕ್ ಟಿವಿ ಪರ ವಕೀಲರನ್ನು ತರಾಟೆಗೆ ತೆಗೆದುಕೊಂಡಿತ್ತು.

ಸುಶಾಂತ್ ಸಿಂಗ್ ಪ್ರಕರಣದಲ್ಲಿ ಸುಳ್ಳು ಸುದ್ದಿ ಹರಡುತ್ತಿದ್ದ ದೆಹಲಿ ಮೂಲದ ವ್ಯಕ್ತಿಯನ್ನು ಮುಂಬೈ ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಟನಿಗೆ ಸಂಬಂಧಿಸಿದ ನಕಲಿ ಟ್ವೀಟ್‌ಗಳನ್ನು ಪ್ರಸಾರ ಮಾಡಿದ್ದಕ್ಕಾಗಿ ನ್ಯೂಸ್ ಬ್ರಾಡ್‌ಕಾಸ್ಟಿಂಗ್ ಸ್ಟ್ಯಾಂಡರ್ಡ್ಸ್ ಅಥಾರಿಟಿಯು ನ್ಯೂಸ್ ಚಾನೆಲ್ ಆಜ್‌ತಕ್ ಸುದ್ದಿ ವಾಹಿನಿಗೆ 1 ಲಕ್ಷ ರೂಪಾಯಿಗಳ ದಂಡ ವಿಧಿಸಿತ್ತು.


ಇದನ್ನೂ ಓದಿ: ಸುಶಾಂತ್ ಪ್ರಕರಣ: ರಿಪಬ್ಲಿಕ್ ಟಿವಿಯನ್ನು ತರಾಟೆಗೆ ತೆಗೆದುಕೊಂಡ ಬಾಂಬೆ ಹೈಕೋರ್ಟ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...