Homeಮುಖಪುಟಫ್ಯಾಕ್ಟ್‌ಚೆಕ್: PUBG ನಿಷೇಧ ಭಾರತದ ಆರ್ಥಿಕತೆಯನ್ನು ಹಾಳು ಮಾಡುತ್ತದೆ ಎಂದಿದ್ದರೆ ಅಮರ್ಥ್ಯ ಸೇನ್?

ಫ್ಯಾಕ್ಟ್‌ಚೆಕ್: PUBG ನಿಷೇಧ ಭಾರತದ ಆರ್ಥಿಕತೆಯನ್ನು ಹಾಳು ಮಾಡುತ್ತದೆ ಎಂದಿದ್ದರೆ ಅಮರ್ಥ್ಯ ಸೇನ್?

ಅಮರ್ಥ್ಯ ಸೇನ್ ಅವರ ಮಗಳು, ಅಂಟಾರಾ ದೇವ್ ಸೇನ್, "ನನ್ನ ತಂದೆ ಇಂತಹ ಯಾವುದೇ ಹೇಳಿಕೆ ನೀಡಿಲ್ಲ. ಇದು ಸಂಪೂರ್ಣ ಸುಳ್ಳು ಸೃಷ್ಟಿಯಾಗಿದೆ" ಎಂದು ತಿಳಿಸಿದ್ದಾರೆ.

- Advertisement -
- Advertisement -

PUBG ನಿಷೇಧವು ಭಾರತದ ಆರ್ಥಿಕತೆಯನ್ನು ಇನ್ನಷ್ಟು ಹಾಳು ಮಾಡುತ್ತದೆ ಎಂದು ಅರ್ಥಶಾಸ್ತ್ರಜ್ಞ ಮತ್ತು ನೊಬೆಲ್ ಪ್ರಶಸ್ತಿ ವಿಜೇತ ಅಮರ್ಥ್ಯ ಸೇನ್ ಹೇಳಿದ್ದಾರೆ ಎಂದು ಹಲವು ಸಾಮಾಜಿಕ ಮಾಧ್ಯಮ ಬಳಕೆದಾರರು ಕೆಲ ಪೋಸ್ಟ್‌ಗಳನ್ನು ಹಂಚಿಕೊಂಡಿದ್ದಾರೆ.

ಭಾರತದ ಮಾಹಿತಿ ಮತ್ತು ತಂತ್ರಜ್ಞಾನ ಸಚಿವಾಲಯವು PUBG ಸೇರಿದಂತೆ 118 ಚೀನೀ ಮೊಬೈಲ್ ಆ್ಯಪ್‌ಗಳನ್ನು ನಿಷೇಧಿಸಿದ ಹಿನ್ನೆಲೆಯಲ್ಲಿ ಈ ಸಂದೇಶವು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

“ನೊಬೆಲ್ ವಿಜೇತ ಅರ್ಥಶಾಸ್ತ್ರಜ್ಞ ಅಮರ್ಥ್ಯ ಸೇನ್: #PUBG ಅನ್ನು ನಿಷೇಧಿಸುವುದರಿಂದ ಭಾರತೀಯ ಆರ್ಥಿಕತೆಯು ಹೆಚ್ಚು ಹಾಳಾಗುತ್ತದೆ” ಎಂಬ ಹೇಳಿಕೆಯಿರುವ ಪೋಸ್ಟ್‌ಗಳನ್ನು ಹಂಚಿಕೊಳ್ಳಲಾಗುತ್ತಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಗಾಲ್ವಾನ್‌ ಕಣಿವೆಯಲ್ಲಿ ಸಾವಿಗೀಡಾದ ಚೀನಾ ಸೈನಿಕರ ಸಮಾಧಿಯೆಂದು ಹಳೆಯ ಚಿತ್ರಗಳನ್ನು ಪ್ರಸಾರ ಮಾಡಿದ ಮಾಧ್ಯಮಗಳು

ತ್ರಿಪುರದ ಮಾಜಿ ಗವರ್ನರ್ ತಥಾಗತ ರಾಯ್ ಅವರು ಹೀಗೆ ಹೇಳಿದವರಿಗೆ ಚಪ್ಪಲಿಯಿಂದ ಹೊಡೆಯಬೇಕು ಎಂಬರ್ಥದ ಫೋಟೊ ಇರುವ ಪೋಸ್ಟ್ ಅನ್ನು ಷೇರ್ ಮಾಡಿದ್ದಾರೆ.

ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರು ಟ್ವಿಟರ್ ಮತ್ತು ಫೇಸ್‌ಬುಕ್‌ನಲ್ಲಿ ಇದೇ ಪೋಸ್ಟನ್ನು ಹಂಚಿಕೊಂಡಿದ್ದಾರೆ.

ರಚ್ನಾ ಶ್ರೀವಾಸ್ತವ್ ಎಂಬುವವರು ಹಂಚಿಕೊಂಡಿರುವ ಈ ಪೋಸ್ಟ್ ಸುಳ್ಳು ಹರಡುತ್ತದೆ ಎಂಬ ಕಾರಣಕ್ಕೆ ಅದನ್ನು ಫೇಸ್‌ಬುಕ್ ನಿರ್ಬಂಧಿಸಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಜಿಡಿಪಿ ಪಾತಾಳದಲ್ಲಿದ್ದರೂ ಸುಳ್ಳು ಹೇಳುತ್ತಿರುವ ಕರ್ನಾಟಕ ಬಿಜೆಪಿ..

ಫ್ಯಾಕ್ಟ್ ಚೆಕ್:

“Amartya Sen PUBG” ಎಂಬ ಕೀವರ್ಡ್ ಹುಡುಕಾಡವು ನಮ್ಮನ್ನು ಭಾರತ್ ನ್ಯೂಸ್ ಎಂಬ ಬ್ಲಾಗ್‌ಗೆ ಕರೆದೊಯ್ಯಿತು. ಅಲ್ಲಿ ಇದರ ಕುರಿತ ಲೇಖನವೊಂದು ಸೆಪ್ಟಂಬರ್ 4 ರಂದು ಪ್ರಕಟವಾಗಿದೆ ಎಂದು ದಿ ಕ್ವಿಂಟ್ ವರದಿ ಮಾಡಿದೆ.

“PUBGಯನ್ನು ನಿಷೇಧಗೊಳಿಸುವ ಮೂಲಕ ಮೋದಿ ದೇಶದ ಆರ್ಥಿಕತೆಯನ್ನು ಮತ್ತಷ್ಟು ಹಿಂದಕ್ಕೆ ತಳ್ಳಿದ್ದಾರೆ: ಅಮರ್ತ್ಯ ಸೇನ್” ಎಂಬ ಶೀರ್ಷಿಕೆಯಡಿಯಲ್ಲಿ ಈ ಲೇಖನವು ಪ್ರಕಟವಾಗಿದೆ. ಅಮರ್ತ್ಯ ಸೇನ್ ಅಂತಹ ಹೇಳಿಕೆ ನೀಡಿದ್ದಾರೆ ಎಂದು ಬ್ಲಾಗ್‌ಪೋಸ್ಟ್ ಹೇಳಿಕೊಂಡಿದೆ. ಭಾರತದಲ್ಲಿ ಚೀನಾದ ಆ್ಯಪ್‌ಗಳನ್ನು ನಿಷೇಧಿಸಿರುವುದನ್ನು ಅಮರ್ಥ್ಯ ಸೇನ್ ಹೇಗೆ ಖಂಡಿಸಿದ್ದಾರೆ ಎಂಬುದರ ಕುರಿತು ಲೇಖನವು ಹೇಳುತ್ತದೆ. ಆದರೆ ಈ ಲೇಖನವನ್ನು ಅಲ್ಲಿಂದ ತೆಗೆದುಹಾಕಲಾಗಿದೆ ಎಂಬುದು ಗಮನಾರ್ಹ

ಈ ಮೇಲೆ ಬಳಸಲಾದ ಕೀವರ್ಡ್‌ಗಳನ್ನು ಬಳಸಿ, ಮತ್ತಷ್ಟು ಹುಡುಕಾಟ ನಡೆಸಿದಾಗ, ಅವರು ಇಂತಹ ಹೇಳಿಕೆ ನೀಡಿರುವ ಯಾವುದೇ ಅಧಿಕೃತ ಮಾಹಿತಿ ದೊರೆತಿಲ್ಲ.

ಇದಲ್ಲದೆ, ಅಮರ್ಥ್ಯ ಸೇನ್ ಅವರ ಮಗಳು, ಅಂಟಾರಾ ದೇವ್ ಸೇನ್, “ನನ್ನ ತಂದೆ ಇಂತಹ ಯಾವುದೇ ಹೇಳಿಕೆ ನೀಡಿಲ್ಲ. ಇದು ಸಂಪೂರ್ಣ ಸುಳ್ಳು ಸೃಷ್ಟಿಯಾಗಿದೆ” ಎಂದು ತಿಳಿಸಿದ್ದಾರೆ.

ಹಾಗಾಗಿ, “ಭಾರತೀಯ ಆರ್ಥಿಕತೆಯ ಮೇಲೆ PUBG ನಿಷೇಧದ ಪರಿಣಾಮ ಭೀರುತ್ತದೆ” ಎಂಬ ಯಾವುದೇ ಹೇಳಿಕೆಯನ್ನು ಅಮರ್ಥ್ಯ ಸೇನ್ ನೀಡಿಲ್ಲ. ಇದು ಸಂಪೂರ್ಣ ಸುಳ್ಳು ಎಂದು ತಿಳಿದುಬಂದಿದೆ. ಆದರೆ ಇದನ್ನು ಪರಿಶೀಲಿಸದೆ ಹಲವರು ಹಂಚಿಕೊಂಡು ಗೊಂದಲ ಸೃಷ್ಟಿಸಿದ್ದಾರೆ.


ಇದನ್ನೂ ಓದಿ: ಕೇರಳದ ಹಿಂದೂ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ? ಇಲ್ಲಿದೆ ಫ್ಯಾಕ್ಟ್‌ಚೆಕ್‌ ವಿವರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...