Homeಮುಖಪುಟಫ್ಯಾಕ್ಟ್‌ಚೆಕ್: PUBG ನಿಷೇಧ ಭಾರತದ ಆರ್ಥಿಕತೆಯನ್ನು ಹಾಳು ಮಾಡುತ್ತದೆ ಎಂದಿದ್ದರೆ ಅಮರ್ಥ್ಯ ಸೇನ್?

ಫ್ಯಾಕ್ಟ್‌ಚೆಕ್: PUBG ನಿಷೇಧ ಭಾರತದ ಆರ್ಥಿಕತೆಯನ್ನು ಹಾಳು ಮಾಡುತ್ತದೆ ಎಂದಿದ್ದರೆ ಅಮರ್ಥ್ಯ ಸೇನ್?

ಅಮರ್ಥ್ಯ ಸೇನ್ ಅವರ ಮಗಳು, ಅಂಟಾರಾ ದೇವ್ ಸೇನ್, "ನನ್ನ ತಂದೆ ಇಂತಹ ಯಾವುದೇ ಹೇಳಿಕೆ ನೀಡಿಲ್ಲ. ಇದು ಸಂಪೂರ್ಣ ಸುಳ್ಳು ಸೃಷ್ಟಿಯಾಗಿದೆ" ಎಂದು ತಿಳಿಸಿದ್ದಾರೆ.

- Advertisement -
- Advertisement -

PUBG ನಿಷೇಧವು ಭಾರತದ ಆರ್ಥಿಕತೆಯನ್ನು ಇನ್ನಷ್ಟು ಹಾಳು ಮಾಡುತ್ತದೆ ಎಂದು ಅರ್ಥಶಾಸ್ತ್ರಜ್ಞ ಮತ್ತು ನೊಬೆಲ್ ಪ್ರಶಸ್ತಿ ವಿಜೇತ ಅಮರ್ಥ್ಯ ಸೇನ್ ಹೇಳಿದ್ದಾರೆ ಎಂದು ಹಲವು ಸಾಮಾಜಿಕ ಮಾಧ್ಯಮ ಬಳಕೆದಾರರು ಕೆಲ ಪೋಸ್ಟ್‌ಗಳನ್ನು ಹಂಚಿಕೊಂಡಿದ್ದಾರೆ.

ಭಾರತದ ಮಾಹಿತಿ ಮತ್ತು ತಂತ್ರಜ್ಞಾನ ಸಚಿವಾಲಯವು PUBG ಸೇರಿದಂತೆ 118 ಚೀನೀ ಮೊಬೈಲ್ ಆ್ಯಪ್‌ಗಳನ್ನು ನಿಷೇಧಿಸಿದ ಹಿನ್ನೆಲೆಯಲ್ಲಿ ಈ ಸಂದೇಶವು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

“ನೊಬೆಲ್ ವಿಜೇತ ಅರ್ಥಶಾಸ್ತ್ರಜ್ಞ ಅಮರ್ಥ್ಯ ಸೇನ್: #PUBG ಅನ್ನು ನಿಷೇಧಿಸುವುದರಿಂದ ಭಾರತೀಯ ಆರ್ಥಿಕತೆಯು ಹೆಚ್ಚು ಹಾಳಾಗುತ್ತದೆ” ಎಂಬ ಹೇಳಿಕೆಯಿರುವ ಪೋಸ್ಟ್‌ಗಳನ್ನು ಹಂಚಿಕೊಳ್ಳಲಾಗುತ್ತಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಗಾಲ್ವಾನ್‌ ಕಣಿವೆಯಲ್ಲಿ ಸಾವಿಗೀಡಾದ ಚೀನಾ ಸೈನಿಕರ ಸಮಾಧಿಯೆಂದು ಹಳೆಯ ಚಿತ್ರಗಳನ್ನು ಪ್ರಸಾರ ಮಾಡಿದ ಮಾಧ್ಯಮಗಳು

ತ್ರಿಪುರದ ಮಾಜಿ ಗವರ್ನರ್ ತಥಾಗತ ರಾಯ್ ಅವರು ಹೀಗೆ ಹೇಳಿದವರಿಗೆ ಚಪ್ಪಲಿಯಿಂದ ಹೊಡೆಯಬೇಕು ಎಂಬರ್ಥದ ಫೋಟೊ ಇರುವ ಪೋಸ್ಟ್ ಅನ್ನು ಷೇರ್ ಮಾಡಿದ್ದಾರೆ.

ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರು ಟ್ವಿಟರ್ ಮತ್ತು ಫೇಸ್‌ಬುಕ್‌ನಲ್ಲಿ ಇದೇ ಪೋಸ್ಟನ್ನು ಹಂಚಿಕೊಂಡಿದ್ದಾರೆ.

ರಚ್ನಾ ಶ್ರೀವಾಸ್ತವ್ ಎಂಬುವವರು ಹಂಚಿಕೊಂಡಿರುವ ಈ ಪೋಸ್ಟ್ ಸುಳ್ಳು ಹರಡುತ್ತದೆ ಎಂಬ ಕಾರಣಕ್ಕೆ ಅದನ್ನು ಫೇಸ್‌ಬುಕ್ ನಿರ್ಬಂಧಿಸಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಜಿಡಿಪಿ ಪಾತಾಳದಲ್ಲಿದ್ದರೂ ಸುಳ್ಳು ಹೇಳುತ್ತಿರುವ ಕರ್ನಾಟಕ ಬಿಜೆಪಿ..

ಫ್ಯಾಕ್ಟ್ ಚೆಕ್:

“Amartya Sen PUBG” ಎಂಬ ಕೀವರ್ಡ್ ಹುಡುಕಾಡವು ನಮ್ಮನ್ನು ಭಾರತ್ ನ್ಯೂಸ್ ಎಂಬ ಬ್ಲಾಗ್‌ಗೆ ಕರೆದೊಯ್ಯಿತು. ಅಲ್ಲಿ ಇದರ ಕುರಿತ ಲೇಖನವೊಂದು ಸೆಪ್ಟಂಬರ್ 4 ರಂದು ಪ್ರಕಟವಾಗಿದೆ ಎಂದು ದಿ ಕ್ವಿಂಟ್ ವರದಿ ಮಾಡಿದೆ.

“PUBGಯನ್ನು ನಿಷೇಧಗೊಳಿಸುವ ಮೂಲಕ ಮೋದಿ ದೇಶದ ಆರ್ಥಿಕತೆಯನ್ನು ಮತ್ತಷ್ಟು ಹಿಂದಕ್ಕೆ ತಳ್ಳಿದ್ದಾರೆ: ಅಮರ್ತ್ಯ ಸೇನ್” ಎಂಬ ಶೀರ್ಷಿಕೆಯಡಿಯಲ್ಲಿ ಈ ಲೇಖನವು ಪ್ರಕಟವಾಗಿದೆ. ಅಮರ್ತ್ಯ ಸೇನ್ ಅಂತಹ ಹೇಳಿಕೆ ನೀಡಿದ್ದಾರೆ ಎಂದು ಬ್ಲಾಗ್‌ಪೋಸ್ಟ್ ಹೇಳಿಕೊಂಡಿದೆ. ಭಾರತದಲ್ಲಿ ಚೀನಾದ ಆ್ಯಪ್‌ಗಳನ್ನು ನಿಷೇಧಿಸಿರುವುದನ್ನು ಅಮರ್ಥ್ಯ ಸೇನ್ ಹೇಗೆ ಖಂಡಿಸಿದ್ದಾರೆ ಎಂಬುದರ ಕುರಿತು ಲೇಖನವು ಹೇಳುತ್ತದೆ. ಆದರೆ ಈ ಲೇಖನವನ್ನು ಅಲ್ಲಿಂದ ತೆಗೆದುಹಾಕಲಾಗಿದೆ ಎಂಬುದು ಗಮನಾರ್ಹ

ಈ ಮೇಲೆ ಬಳಸಲಾದ ಕೀವರ್ಡ್‌ಗಳನ್ನು ಬಳಸಿ, ಮತ್ತಷ್ಟು ಹುಡುಕಾಟ ನಡೆಸಿದಾಗ, ಅವರು ಇಂತಹ ಹೇಳಿಕೆ ನೀಡಿರುವ ಯಾವುದೇ ಅಧಿಕೃತ ಮಾಹಿತಿ ದೊರೆತಿಲ್ಲ.

ಇದಲ್ಲದೆ, ಅಮರ್ಥ್ಯ ಸೇನ್ ಅವರ ಮಗಳು, ಅಂಟಾರಾ ದೇವ್ ಸೇನ್, “ನನ್ನ ತಂದೆ ಇಂತಹ ಯಾವುದೇ ಹೇಳಿಕೆ ನೀಡಿಲ್ಲ. ಇದು ಸಂಪೂರ್ಣ ಸುಳ್ಳು ಸೃಷ್ಟಿಯಾಗಿದೆ” ಎಂದು ತಿಳಿಸಿದ್ದಾರೆ.

ಹಾಗಾಗಿ, “ಭಾರತೀಯ ಆರ್ಥಿಕತೆಯ ಮೇಲೆ PUBG ನಿಷೇಧದ ಪರಿಣಾಮ ಭೀರುತ್ತದೆ” ಎಂಬ ಯಾವುದೇ ಹೇಳಿಕೆಯನ್ನು ಅಮರ್ಥ್ಯ ಸೇನ್ ನೀಡಿಲ್ಲ. ಇದು ಸಂಪೂರ್ಣ ಸುಳ್ಳು ಎಂದು ತಿಳಿದುಬಂದಿದೆ. ಆದರೆ ಇದನ್ನು ಪರಿಶೀಲಿಸದೆ ಹಲವರು ಹಂಚಿಕೊಂಡು ಗೊಂದಲ ಸೃಷ್ಟಿಸಿದ್ದಾರೆ.


ಇದನ್ನೂ ಓದಿ: ಕೇರಳದ ಹಿಂದೂ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ? ಇಲ್ಲಿದೆ ಫ್ಯಾಕ್ಟ್‌ಚೆಕ್‌ ವಿವರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...