Homeಮುಖಪುಟಫ್ಯಾಕ್ಟ್‌ಚೆಕ್: PUBG ನಿಷೇಧ ಭಾರತದ ಆರ್ಥಿಕತೆಯನ್ನು ಹಾಳು ಮಾಡುತ್ತದೆ ಎಂದಿದ್ದರೆ ಅಮರ್ಥ್ಯ ಸೇನ್?

ಫ್ಯಾಕ್ಟ್‌ಚೆಕ್: PUBG ನಿಷೇಧ ಭಾರತದ ಆರ್ಥಿಕತೆಯನ್ನು ಹಾಳು ಮಾಡುತ್ತದೆ ಎಂದಿದ್ದರೆ ಅಮರ್ಥ್ಯ ಸೇನ್?

ಅಮರ್ಥ್ಯ ಸೇನ್ ಅವರ ಮಗಳು, ಅಂಟಾರಾ ದೇವ್ ಸೇನ್, "ನನ್ನ ತಂದೆ ಇಂತಹ ಯಾವುದೇ ಹೇಳಿಕೆ ನೀಡಿಲ್ಲ. ಇದು ಸಂಪೂರ್ಣ ಸುಳ್ಳು ಸೃಷ್ಟಿಯಾಗಿದೆ" ಎಂದು ತಿಳಿಸಿದ್ದಾರೆ.

- Advertisement -
- Advertisement -

PUBG ನಿಷೇಧವು ಭಾರತದ ಆರ್ಥಿಕತೆಯನ್ನು ಇನ್ನಷ್ಟು ಹಾಳು ಮಾಡುತ್ತದೆ ಎಂದು ಅರ್ಥಶಾಸ್ತ್ರಜ್ಞ ಮತ್ತು ನೊಬೆಲ್ ಪ್ರಶಸ್ತಿ ವಿಜೇತ ಅಮರ್ಥ್ಯ ಸೇನ್ ಹೇಳಿದ್ದಾರೆ ಎಂದು ಹಲವು ಸಾಮಾಜಿಕ ಮಾಧ್ಯಮ ಬಳಕೆದಾರರು ಕೆಲ ಪೋಸ್ಟ್‌ಗಳನ್ನು ಹಂಚಿಕೊಂಡಿದ್ದಾರೆ.

ಭಾರತದ ಮಾಹಿತಿ ಮತ್ತು ತಂತ್ರಜ್ಞಾನ ಸಚಿವಾಲಯವು PUBG ಸೇರಿದಂತೆ 118 ಚೀನೀ ಮೊಬೈಲ್ ಆ್ಯಪ್‌ಗಳನ್ನು ನಿಷೇಧಿಸಿದ ಹಿನ್ನೆಲೆಯಲ್ಲಿ ಈ ಸಂದೇಶವು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

“ನೊಬೆಲ್ ವಿಜೇತ ಅರ್ಥಶಾಸ್ತ್ರಜ್ಞ ಅಮರ್ಥ್ಯ ಸೇನ್: #PUBG ಅನ್ನು ನಿಷೇಧಿಸುವುದರಿಂದ ಭಾರತೀಯ ಆರ್ಥಿಕತೆಯು ಹೆಚ್ಚು ಹಾಳಾಗುತ್ತದೆ” ಎಂಬ ಹೇಳಿಕೆಯಿರುವ ಪೋಸ್ಟ್‌ಗಳನ್ನು ಹಂಚಿಕೊಳ್ಳಲಾಗುತ್ತಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಗಾಲ್ವಾನ್‌ ಕಣಿವೆಯಲ್ಲಿ ಸಾವಿಗೀಡಾದ ಚೀನಾ ಸೈನಿಕರ ಸಮಾಧಿಯೆಂದು ಹಳೆಯ ಚಿತ್ರಗಳನ್ನು ಪ್ರಸಾರ ಮಾಡಿದ ಮಾಧ್ಯಮಗಳು

ತ್ರಿಪುರದ ಮಾಜಿ ಗವರ್ನರ್ ತಥಾಗತ ರಾಯ್ ಅವರು ಹೀಗೆ ಹೇಳಿದವರಿಗೆ ಚಪ್ಪಲಿಯಿಂದ ಹೊಡೆಯಬೇಕು ಎಂಬರ್ಥದ ಫೋಟೊ ಇರುವ ಪೋಸ್ಟ್ ಅನ್ನು ಷೇರ್ ಮಾಡಿದ್ದಾರೆ.

ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರು ಟ್ವಿಟರ್ ಮತ್ತು ಫೇಸ್‌ಬುಕ್‌ನಲ್ಲಿ ಇದೇ ಪೋಸ್ಟನ್ನು ಹಂಚಿಕೊಂಡಿದ್ದಾರೆ.

ರಚ್ನಾ ಶ್ರೀವಾಸ್ತವ್ ಎಂಬುವವರು ಹಂಚಿಕೊಂಡಿರುವ ಈ ಪೋಸ್ಟ್ ಸುಳ್ಳು ಹರಡುತ್ತದೆ ಎಂಬ ಕಾರಣಕ್ಕೆ ಅದನ್ನು ಫೇಸ್‌ಬುಕ್ ನಿರ್ಬಂಧಿಸಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಜಿಡಿಪಿ ಪಾತಾಳದಲ್ಲಿದ್ದರೂ ಸುಳ್ಳು ಹೇಳುತ್ತಿರುವ ಕರ್ನಾಟಕ ಬಿಜೆಪಿ..

ಫ್ಯಾಕ್ಟ್ ಚೆಕ್:

“Amartya Sen PUBG” ಎಂಬ ಕೀವರ್ಡ್ ಹುಡುಕಾಡವು ನಮ್ಮನ್ನು ಭಾರತ್ ನ್ಯೂಸ್ ಎಂಬ ಬ್ಲಾಗ್‌ಗೆ ಕರೆದೊಯ್ಯಿತು. ಅಲ್ಲಿ ಇದರ ಕುರಿತ ಲೇಖನವೊಂದು ಸೆಪ್ಟಂಬರ್ 4 ರಂದು ಪ್ರಕಟವಾಗಿದೆ ಎಂದು ದಿ ಕ್ವಿಂಟ್ ವರದಿ ಮಾಡಿದೆ.

“PUBGಯನ್ನು ನಿಷೇಧಗೊಳಿಸುವ ಮೂಲಕ ಮೋದಿ ದೇಶದ ಆರ್ಥಿಕತೆಯನ್ನು ಮತ್ತಷ್ಟು ಹಿಂದಕ್ಕೆ ತಳ್ಳಿದ್ದಾರೆ: ಅಮರ್ತ್ಯ ಸೇನ್” ಎಂಬ ಶೀರ್ಷಿಕೆಯಡಿಯಲ್ಲಿ ಈ ಲೇಖನವು ಪ್ರಕಟವಾಗಿದೆ. ಅಮರ್ತ್ಯ ಸೇನ್ ಅಂತಹ ಹೇಳಿಕೆ ನೀಡಿದ್ದಾರೆ ಎಂದು ಬ್ಲಾಗ್‌ಪೋಸ್ಟ್ ಹೇಳಿಕೊಂಡಿದೆ. ಭಾರತದಲ್ಲಿ ಚೀನಾದ ಆ್ಯಪ್‌ಗಳನ್ನು ನಿಷೇಧಿಸಿರುವುದನ್ನು ಅಮರ್ಥ್ಯ ಸೇನ್ ಹೇಗೆ ಖಂಡಿಸಿದ್ದಾರೆ ಎಂಬುದರ ಕುರಿತು ಲೇಖನವು ಹೇಳುತ್ತದೆ. ಆದರೆ ಈ ಲೇಖನವನ್ನು ಅಲ್ಲಿಂದ ತೆಗೆದುಹಾಕಲಾಗಿದೆ ಎಂಬುದು ಗಮನಾರ್ಹ

ಈ ಮೇಲೆ ಬಳಸಲಾದ ಕೀವರ್ಡ್‌ಗಳನ್ನು ಬಳಸಿ, ಮತ್ತಷ್ಟು ಹುಡುಕಾಟ ನಡೆಸಿದಾಗ, ಅವರು ಇಂತಹ ಹೇಳಿಕೆ ನೀಡಿರುವ ಯಾವುದೇ ಅಧಿಕೃತ ಮಾಹಿತಿ ದೊರೆತಿಲ್ಲ.

ಇದಲ್ಲದೆ, ಅಮರ್ಥ್ಯ ಸೇನ್ ಅವರ ಮಗಳು, ಅಂಟಾರಾ ದೇವ್ ಸೇನ್, “ನನ್ನ ತಂದೆ ಇಂತಹ ಯಾವುದೇ ಹೇಳಿಕೆ ನೀಡಿಲ್ಲ. ಇದು ಸಂಪೂರ್ಣ ಸುಳ್ಳು ಸೃಷ್ಟಿಯಾಗಿದೆ” ಎಂದು ತಿಳಿಸಿದ್ದಾರೆ.

ಹಾಗಾಗಿ, “ಭಾರತೀಯ ಆರ್ಥಿಕತೆಯ ಮೇಲೆ PUBG ನಿಷೇಧದ ಪರಿಣಾಮ ಭೀರುತ್ತದೆ” ಎಂಬ ಯಾವುದೇ ಹೇಳಿಕೆಯನ್ನು ಅಮರ್ಥ್ಯ ಸೇನ್ ನೀಡಿಲ್ಲ. ಇದು ಸಂಪೂರ್ಣ ಸುಳ್ಳು ಎಂದು ತಿಳಿದುಬಂದಿದೆ. ಆದರೆ ಇದನ್ನು ಪರಿಶೀಲಿಸದೆ ಹಲವರು ಹಂಚಿಕೊಂಡು ಗೊಂದಲ ಸೃಷ್ಟಿಸಿದ್ದಾರೆ.


ಇದನ್ನೂ ಓದಿ: ಕೇರಳದ ಹಿಂದೂ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ? ಇಲ್ಲಿದೆ ಫ್ಯಾಕ್ಟ್‌ಚೆಕ್‌ ವಿವರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....