Homeಫ್ಯಾಕ್ಟ್‌ಚೆಕ್FACT CHECK | ಕುತುಬ್ ಮಿನಾರ್ ನಿರ್ಮಿಸಿದ್ದು ಮೊಘಲರಲ್ಲವೇ ? ಇತಿಹಾಸ ತಿರುಚಲಾಗಿದೆಯಾ?

FACT CHECK | ಕುತುಬ್ ಮಿನಾರ್ ನಿರ್ಮಿಸಿದ್ದು ಮೊಘಲರಲ್ಲವೇ ? ಇತಿಹಾಸ ತಿರುಚಲಾಗಿದೆಯಾ?

- Advertisement -
- Advertisement -

“ಕುತುಬ್ ಮಿನಾರ್ ನಿರ್ಮಿಸಿದ್ದು ಮೊಘಲರು ಅಂತಾ ಇತಿಹಾಸದಲ್ಲಿ ಬರೆಯಲಾಗಿತ್ತು!! ಆದ್ರೆ ಅಲ್ಲಿ ಇರುವ ಕಬ್ಬಿಣದ ಕಂಬದ ಮೇಲೆ ಯಾರ ಹೆಸರಿದೆ ಎಂದೂ ಸ್ವಲ್ಪ ಜೂಮ್ ಮಾಡಿ ನೋಡಿದರೆ ನೈಜ ಸತ್ಯ ಸಂಗತಿ ತಿಳಿಯಲಿದೆ. ಇದು 1500 ವರ್ಷಗಳ ಹಿಂದಿನ ವರಾಹಮಿಹಿರನ ಕಾಲದ ವಿಷ್ಣು ಸ್ಥಂಭ.. ನಮ್ಮ ದೇಶದ ಇತಿಹಾಸವನ್ನು ಬರೆದ ಇತಿಹಾಸ ತಜ್ಞರ ಕಣ್ಣುಗಳಿಗೆ ಇದು ಕಾಣಲಿಲ್ಲ ಕಣ್ಣು ಕುರುಡಾಗುವಷ್ಟು ಮೊಘಲರು ಎಂಜಲು ತಿನ್ನಿಸಿರಬೇಕು ಡೋಂಗಿ ಇತಿಹಾಸ ತಜ್ಞರಿಗೆ ಯಾರೋ ಸ್ಥಾಪಿಸಿದ ಪರಂಪರೆಯನ್ನು ತಮ್ಮದು ಎಂದೂ ಇಲ್ಲಿವರೆಗೆ ಹೇಳಿಕೊಂಡ ನಕಲಿಗಳಿಗೆ ನಾಚಿಕೆಯಾಗಬೇಕು” ಎಂಬ ಸಂದೇಶವೊಂದು ವಾಟ್ಸಾಪ್‌ನಲ್ಲಿ ಹಂಚಿಕೊಳ್ಳಲಾಗುತ್ತಿದೆ.

ಜೊತೆಗೆ, ಕುತುಬ್ ಮಿನಾರ್ ಪ್ರದೇಶದಲ್ಲಿ ಇರುವ ಕಬ್ಬಿಣದ ಸ್ತಂಭದಲ್ಲಿ ಹಿಂದೂ ಹೆಸರುಗಳಿವೆ ಇದರಿಂದ ಸತ್ಯ ತಿಳಿಯುತ್ತದೆ ಎಂದು ಪ್ರತಿಪಾದಿಸಿದ ಕಂಬವೊಂದರ ಫೋಟೋ ಕೂಡ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಹಾಗಿದ್ದರೆ, ವೈರಲ್ ಪೋಸ್ಟ್‌ನಲ್ಲಿ ಮಾಡಿರುವ ಪ್ರತಿಪಾದನೆ ನಿಜವೇ? ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ವೈರಲ್ ಫೋಟೋವನ್ನು  ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಹಾಕಿ ಸರ್ಚ್ ಮಾಡಿದಾಗ, ಹಲವು ವೆಬ್‌ಸೈಟ್‌ಗಳಲ್ಲಿ ಆ ಫೋಟೋ ಅಪ್ಲೋಡ್ ಆಗಿರುವುದು ಕಂಡು ಬಂದಿದೆ.

ಈ ಪೈಕಿ ಫ್ಲಿಕ್ಕರ್‌ ವೆಬ್‌ಸೈಟ್‌ನಲ್ಲಿ ಅಕ್ಟೋಬರ್ 19, 2009ರಂದು ಡೇವಿಡ್ ರಾಸ್‌ ಎಂಬವರು ಅಪ್ಲೋಡ್ ಮಾಡಿರುವ ಫೋಟೋವನ್ನು ಪರಿಶೀಲಿಸಿದಾಗ ಐರನ್‌ ಪಿಲ್ಲರ್ ಭರತ್‌ಪುರ ಫೋರ್ಟ್, ಭರತ್‌ಪುರ ಇಂಡಿಯಾ ಎಂದು ಬರೆದಿರುವುದು ಕಂಡು ಬಂದಿದೆ. ಆ ಫೋಟೋ ಮತ್ತು ವಾಟ್ಸಾಪ್‌ನಲ್ಲಿ ಹರಿದಾಡುತ್ತಿರುವ ಫೋಟೋವನ್ನು ಹೋಲಿಕೆ ಮಾಡಿ ನೋಡಿದಾಗ ಅವೆರಡು ಒಂದೇ ಫೋಟೋ ಎಂದು ಗೊತ್ತಾಗಿದೆ.

ಹಿಸ್ಟರಿ ಎನ್ಸೈಕ್ಲೋಪೀಡಿಯಾ ಎಂಬ ಎಕ್ಸ್‌ ಖಾತೆಯಲ್ಲೂ ನವೆಂಬರ್ 3, 2021ರಂದು ಹಾಕಿರುವ ಪೋಸ್ಟ್‌ನಲ್ಲಿ ವೈರಲ್ ಫೋಟೋ ಅಪ್ಲೋಡ್ ಮಾಡಿರುವುದು ಕಂಡು ಬಂದಿದೆ. ಅದರಲ್ಲಿ “ರಾಜಸ್ಥಾನದ ಭರತ್‌ಪುರ ಕೋಟೆಯಲ್ಲಿ (ಕಬ್ಬಿಣದ ಕೋಟೆ) ಕಬ್ಬಿಣದ ಕಂಬವನ್ನು ಭರತ್‌ಪುರದ ಜಾಟ್ ಆಡಳಿತಗಾರರು ನಿರ್ಮಿಸಿದ್ದಾರೆ. ಮಹಾರಾಜ ಸೂರಜ್ ಮಾಲ್ (1707-1763) ರ ಅಡಿಯಲ್ಲಿ ಜಾಟ್ ಸಾಮ್ರಾಜ್ಯವು ತನ್ನ ಉತ್ತುಂಗವನ್ನು ತಲುಪಿತ್ತು. ಅವರು ಸಾಮ್ರಾಜ್ಯದಾದ್ಯಂತ ಹಲವಾರು ಕೋಟೆಗಳು ಮತ್ತು ಅರಮನೆಗಳನ್ನು ನಿರ್ಮಿಸಿದರು. ಈ ಪೈಕಿ ಲೋಹಗಢ್ ಕೋಟೆಯು ಪ್ರಬಲವಾಗಿದೆ” ಎಂದು ಬರೆಯಲಾಗಿದೆ.

ಡಿಸೆಂಬರ್ 25, 2021ರಂದು  ದೈನಿಕ್‌ ಭಾಸ್ಕರ್  ಮಾಡಿರುವ ಫೇಸ್‌ಬುಕ್‌ ಪೋಸ್ಟ್‌ನಲ್ಲಿ ವೈರಲ್ ಫೋಟೋದಲ್ಲಿರುವ ಲೋಹಸ್ತಂಭದಲ್ಲಿ ಬರೆದಿರುವ ರಾಜರ ಹೆಸರುಗಳ ಬಗ್ಗೆಯೂ ವಿವರಗಳನ್ನು ನೀಡಲಾಗಿದೆ.

ಭರತ್‌ಪುರದ ಲೋಹಸ್ತಂಭದ ಬಗ್ಗೆ ನವೆಂಬರ್ 26, 2018ರಂದು  ನೇಹಾ ವಿಡಿಯೋ ಫಿಲ್ಮ್ ಪ್ರೊಡಕ್ಷನ್ ಯೂಟ್ಯೂಬ್‌ ಚಾನೆಲ್‌ನಲ್ಲಿ ವಿಡಿಯೋ ಅಪ್ಲೋಡ್ ಮಾಡಲಾಗಿದೆ.  ಅದರಲ್ಲಿ “ಜವಾಹರ್ ಬುರ್ಜ್ ಭರತ್‌ಪುರವನ್ನು ಮಹಾರಾಜ ಸೂರಜ್ ಮಾಲ್ ನಿರ್ಮಿಸಿದನು. ಆದರೆ, ಅದರ ಮೇಲಿನ ರಚನೆಗಳನ್ನು ಮಹಾರಾಜ ಜವಾಹರ್ ಸಿಂಗ್ ಅವರು ದೆಹಲಿಯ ವಿಜಯದ ಸ್ಮಾರಕದಲ್ಲಿ ರಚಿಸಿದರು” ಎಂದು ವಿವರಿಸಲಾಗಿದೆ.

ಒಟ್ಟಾರೆಯಾಗಿ ಹೇಳುವುದಾದರೆ, ಕುತುಬ್ ಮಿನಾರ್ ನಿರ್ಮಿಸಿದ್ದು ಮೊಘಲರಲ್ಲ ಎಂದು ರಾಜಸ್ಥಾನದ ಕಬ್ಬಿಣದ ಕಂಬದ ಫೋಟೊವನ್ನು ತಪ್ಪಾಗಿ ಹಂಚಿಕೊಳ್ಳಲಾಗುತ್ತಿದೆ. ವಾಸ್ತವವಾಗಿ ವೈರಲ್ ಫೋಟೊದಲ್ಲಿರುವ ಸ್ತಂಭವು ಕುತುಬ್ ಮಿನಾರ್ ಅಲ್ಲ, ಅದು ರಾಜಸ್ಥಾನದ ಭರತ್‌ಪುರದ ಜವಾಹರ್ ಭುರ್ಜ್ ಎಂಬ ಲೋಹಸ್ತಂಭದ್ದಾಗಿದೆ. ಹಾಗಾಗಿ, ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ಇದನ್ನೂ ಓದಿ : ಪಾವಗಡದಲ್ಲಿ ಸಿಂಹ ಎಂದು ಸುಳ್ಳು ವಿಡಿಯೊ ಪ್ರಸಾರ ಮಾಡಿದ ‘ಝೀ ಕನ್ನಡ ನ್ಯೂಸ್’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...