Homeಫ್ಯಾಕ್ಟ್‌ಚೆಕ್FACT CHECK | ಕುತುಬ್ ಮಿನಾರ್ ನಿರ್ಮಿಸಿದ್ದು ಮೊಘಲರಲ್ಲವೇ ? ಇತಿಹಾಸ ತಿರುಚಲಾಗಿದೆಯಾ?

FACT CHECK | ಕುತುಬ್ ಮಿನಾರ್ ನಿರ್ಮಿಸಿದ್ದು ಮೊಘಲರಲ್ಲವೇ ? ಇತಿಹಾಸ ತಿರುಚಲಾಗಿದೆಯಾ?

- Advertisement -
- Advertisement -

“ಕುತುಬ್ ಮಿನಾರ್ ನಿರ್ಮಿಸಿದ್ದು ಮೊಘಲರು ಅಂತಾ ಇತಿಹಾಸದಲ್ಲಿ ಬರೆಯಲಾಗಿತ್ತು!! ಆದ್ರೆ ಅಲ್ಲಿ ಇರುವ ಕಬ್ಬಿಣದ ಕಂಬದ ಮೇಲೆ ಯಾರ ಹೆಸರಿದೆ ಎಂದೂ ಸ್ವಲ್ಪ ಜೂಮ್ ಮಾಡಿ ನೋಡಿದರೆ ನೈಜ ಸತ್ಯ ಸಂಗತಿ ತಿಳಿಯಲಿದೆ. ಇದು 1500 ವರ್ಷಗಳ ಹಿಂದಿನ ವರಾಹಮಿಹಿರನ ಕಾಲದ ವಿಷ್ಣು ಸ್ಥಂಭ.. ನಮ್ಮ ದೇಶದ ಇತಿಹಾಸವನ್ನು ಬರೆದ ಇತಿಹಾಸ ತಜ್ಞರ ಕಣ್ಣುಗಳಿಗೆ ಇದು ಕಾಣಲಿಲ್ಲ ಕಣ್ಣು ಕುರುಡಾಗುವಷ್ಟು ಮೊಘಲರು ಎಂಜಲು ತಿನ್ನಿಸಿರಬೇಕು ಡೋಂಗಿ ಇತಿಹಾಸ ತಜ್ಞರಿಗೆ ಯಾರೋ ಸ್ಥಾಪಿಸಿದ ಪರಂಪರೆಯನ್ನು ತಮ್ಮದು ಎಂದೂ ಇಲ್ಲಿವರೆಗೆ ಹೇಳಿಕೊಂಡ ನಕಲಿಗಳಿಗೆ ನಾಚಿಕೆಯಾಗಬೇಕು” ಎಂಬ ಸಂದೇಶವೊಂದು ವಾಟ್ಸಾಪ್‌ನಲ್ಲಿ ಹಂಚಿಕೊಳ್ಳಲಾಗುತ್ತಿದೆ.

ಜೊತೆಗೆ, ಕುತುಬ್ ಮಿನಾರ್ ಪ್ರದೇಶದಲ್ಲಿ ಇರುವ ಕಬ್ಬಿಣದ ಸ್ತಂಭದಲ್ಲಿ ಹಿಂದೂ ಹೆಸರುಗಳಿವೆ ಇದರಿಂದ ಸತ್ಯ ತಿಳಿಯುತ್ತದೆ ಎಂದು ಪ್ರತಿಪಾದಿಸಿದ ಕಂಬವೊಂದರ ಫೋಟೋ ಕೂಡ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಹಾಗಿದ್ದರೆ, ವೈರಲ್ ಪೋಸ್ಟ್‌ನಲ್ಲಿ ಮಾಡಿರುವ ಪ್ರತಿಪಾದನೆ ನಿಜವೇ? ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ವೈರಲ್ ಫೋಟೋವನ್ನು  ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಹಾಕಿ ಸರ್ಚ್ ಮಾಡಿದಾಗ, ಹಲವು ವೆಬ್‌ಸೈಟ್‌ಗಳಲ್ಲಿ ಆ ಫೋಟೋ ಅಪ್ಲೋಡ್ ಆಗಿರುವುದು ಕಂಡು ಬಂದಿದೆ.

ಈ ಪೈಕಿ ಫ್ಲಿಕ್ಕರ್‌ ವೆಬ್‌ಸೈಟ್‌ನಲ್ಲಿ ಅಕ್ಟೋಬರ್ 19, 2009ರಂದು ಡೇವಿಡ್ ರಾಸ್‌ ಎಂಬವರು ಅಪ್ಲೋಡ್ ಮಾಡಿರುವ ಫೋಟೋವನ್ನು ಪರಿಶೀಲಿಸಿದಾಗ ಐರನ್‌ ಪಿಲ್ಲರ್ ಭರತ್‌ಪುರ ಫೋರ್ಟ್, ಭರತ್‌ಪುರ ಇಂಡಿಯಾ ಎಂದು ಬರೆದಿರುವುದು ಕಂಡು ಬಂದಿದೆ. ಆ ಫೋಟೋ ಮತ್ತು ವಾಟ್ಸಾಪ್‌ನಲ್ಲಿ ಹರಿದಾಡುತ್ತಿರುವ ಫೋಟೋವನ್ನು ಹೋಲಿಕೆ ಮಾಡಿ ನೋಡಿದಾಗ ಅವೆರಡು ಒಂದೇ ಫೋಟೋ ಎಂದು ಗೊತ್ತಾಗಿದೆ.

ಹಿಸ್ಟರಿ ಎನ್ಸೈಕ್ಲೋಪೀಡಿಯಾ ಎಂಬ ಎಕ್ಸ್‌ ಖಾತೆಯಲ್ಲೂ ನವೆಂಬರ್ 3, 2021ರಂದು ಹಾಕಿರುವ ಪೋಸ್ಟ್‌ನಲ್ಲಿ ವೈರಲ್ ಫೋಟೋ ಅಪ್ಲೋಡ್ ಮಾಡಿರುವುದು ಕಂಡು ಬಂದಿದೆ. ಅದರಲ್ಲಿ “ರಾಜಸ್ಥಾನದ ಭರತ್‌ಪುರ ಕೋಟೆಯಲ್ಲಿ (ಕಬ್ಬಿಣದ ಕೋಟೆ) ಕಬ್ಬಿಣದ ಕಂಬವನ್ನು ಭರತ್‌ಪುರದ ಜಾಟ್ ಆಡಳಿತಗಾರರು ನಿರ್ಮಿಸಿದ್ದಾರೆ. ಮಹಾರಾಜ ಸೂರಜ್ ಮಾಲ್ (1707-1763) ರ ಅಡಿಯಲ್ಲಿ ಜಾಟ್ ಸಾಮ್ರಾಜ್ಯವು ತನ್ನ ಉತ್ತುಂಗವನ್ನು ತಲುಪಿತ್ತು. ಅವರು ಸಾಮ್ರಾಜ್ಯದಾದ್ಯಂತ ಹಲವಾರು ಕೋಟೆಗಳು ಮತ್ತು ಅರಮನೆಗಳನ್ನು ನಿರ್ಮಿಸಿದರು. ಈ ಪೈಕಿ ಲೋಹಗಢ್ ಕೋಟೆಯು ಪ್ರಬಲವಾಗಿದೆ” ಎಂದು ಬರೆಯಲಾಗಿದೆ.

ಡಿಸೆಂಬರ್ 25, 2021ರಂದು  ದೈನಿಕ್‌ ಭಾಸ್ಕರ್  ಮಾಡಿರುವ ಫೇಸ್‌ಬುಕ್‌ ಪೋಸ್ಟ್‌ನಲ್ಲಿ ವೈರಲ್ ಫೋಟೋದಲ್ಲಿರುವ ಲೋಹಸ್ತಂಭದಲ್ಲಿ ಬರೆದಿರುವ ರಾಜರ ಹೆಸರುಗಳ ಬಗ್ಗೆಯೂ ವಿವರಗಳನ್ನು ನೀಡಲಾಗಿದೆ.

ಭರತ್‌ಪುರದ ಲೋಹಸ್ತಂಭದ ಬಗ್ಗೆ ನವೆಂಬರ್ 26, 2018ರಂದು  ನೇಹಾ ವಿಡಿಯೋ ಫಿಲ್ಮ್ ಪ್ರೊಡಕ್ಷನ್ ಯೂಟ್ಯೂಬ್‌ ಚಾನೆಲ್‌ನಲ್ಲಿ ವಿಡಿಯೋ ಅಪ್ಲೋಡ್ ಮಾಡಲಾಗಿದೆ.  ಅದರಲ್ಲಿ “ಜವಾಹರ್ ಬುರ್ಜ್ ಭರತ್‌ಪುರವನ್ನು ಮಹಾರಾಜ ಸೂರಜ್ ಮಾಲ್ ನಿರ್ಮಿಸಿದನು. ಆದರೆ, ಅದರ ಮೇಲಿನ ರಚನೆಗಳನ್ನು ಮಹಾರಾಜ ಜವಾಹರ್ ಸಿಂಗ್ ಅವರು ದೆಹಲಿಯ ವಿಜಯದ ಸ್ಮಾರಕದಲ್ಲಿ ರಚಿಸಿದರು” ಎಂದು ವಿವರಿಸಲಾಗಿದೆ.

ಒಟ್ಟಾರೆಯಾಗಿ ಹೇಳುವುದಾದರೆ, ಕುತುಬ್ ಮಿನಾರ್ ನಿರ್ಮಿಸಿದ್ದು ಮೊಘಲರಲ್ಲ ಎಂದು ರಾಜಸ್ಥಾನದ ಕಬ್ಬಿಣದ ಕಂಬದ ಫೋಟೊವನ್ನು ತಪ್ಪಾಗಿ ಹಂಚಿಕೊಳ್ಳಲಾಗುತ್ತಿದೆ. ವಾಸ್ತವವಾಗಿ ವೈರಲ್ ಫೋಟೊದಲ್ಲಿರುವ ಸ್ತಂಭವು ಕುತುಬ್ ಮಿನಾರ್ ಅಲ್ಲ, ಅದು ರಾಜಸ್ಥಾನದ ಭರತ್‌ಪುರದ ಜವಾಹರ್ ಭುರ್ಜ್ ಎಂಬ ಲೋಹಸ್ತಂಭದ್ದಾಗಿದೆ. ಹಾಗಾಗಿ, ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ಇದನ್ನೂ ಓದಿ : ಪಾವಗಡದಲ್ಲಿ ಸಿಂಹ ಎಂದು ಸುಳ್ಳು ವಿಡಿಯೊ ಪ್ರಸಾರ ಮಾಡಿದ ‘ಝೀ ಕನ್ನಡ ನ್ಯೂಸ್’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...