Homeಫ್ಯಾಕ್ಟ್‌ಚೆಕ್FACT CHECK | ಕುತುಬ್ ಮಿನಾರ್ ನಿರ್ಮಿಸಿದ್ದು ಮೊಘಲರಲ್ಲವೇ ? ಇತಿಹಾಸ ತಿರುಚಲಾಗಿದೆಯಾ?

FACT CHECK | ಕುತುಬ್ ಮಿನಾರ್ ನಿರ್ಮಿಸಿದ್ದು ಮೊಘಲರಲ್ಲವೇ ? ಇತಿಹಾಸ ತಿರುಚಲಾಗಿದೆಯಾ?

- Advertisement -
- Advertisement -

“ಕುತುಬ್ ಮಿನಾರ್ ನಿರ್ಮಿಸಿದ್ದು ಮೊಘಲರು ಅಂತಾ ಇತಿಹಾಸದಲ್ಲಿ ಬರೆಯಲಾಗಿತ್ತು!! ಆದ್ರೆ ಅಲ್ಲಿ ಇರುವ ಕಬ್ಬಿಣದ ಕಂಬದ ಮೇಲೆ ಯಾರ ಹೆಸರಿದೆ ಎಂದೂ ಸ್ವಲ್ಪ ಜೂಮ್ ಮಾಡಿ ನೋಡಿದರೆ ನೈಜ ಸತ್ಯ ಸಂಗತಿ ತಿಳಿಯಲಿದೆ. ಇದು 1500 ವರ್ಷಗಳ ಹಿಂದಿನ ವರಾಹಮಿಹಿರನ ಕಾಲದ ವಿಷ್ಣು ಸ್ಥಂಭ.. ನಮ್ಮ ದೇಶದ ಇತಿಹಾಸವನ್ನು ಬರೆದ ಇತಿಹಾಸ ತಜ್ಞರ ಕಣ್ಣುಗಳಿಗೆ ಇದು ಕಾಣಲಿಲ್ಲ ಕಣ್ಣು ಕುರುಡಾಗುವಷ್ಟು ಮೊಘಲರು ಎಂಜಲು ತಿನ್ನಿಸಿರಬೇಕು ಡೋಂಗಿ ಇತಿಹಾಸ ತಜ್ಞರಿಗೆ ಯಾರೋ ಸ್ಥಾಪಿಸಿದ ಪರಂಪರೆಯನ್ನು ತಮ್ಮದು ಎಂದೂ ಇಲ್ಲಿವರೆಗೆ ಹೇಳಿಕೊಂಡ ನಕಲಿಗಳಿಗೆ ನಾಚಿಕೆಯಾಗಬೇಕು” ಎಂಬ ಸಂದೇಶವೊಂದು ವಾಟ್ಸಾಪ್‌ನಲ್ಲಿ ಹಂಚಿಕೊಳ್ಳಲಾಗುತ್ತಿದೆ.

ಜೊತೆಗೆ, ಕುತುಬ್ ಮಿನಾರ್ ಪ್ರದೇಶದಲ್ಲಿ ಇರುವ ಕಬ್ಬಿಣದ ಸ್ತಂಭದಲ್ಲಿ ಹಿಂದೂ ಹೆಸರುಗಳಿವೆ ಇದರಿಂದ ಸತ್ಯ ತಿಳಿಯುತ್ತದೆ ಎಂದು ಪ್ರತಿಪಾದಿಸಿದ ಕಂಬವೊಂದರ ಫೋಟೋ ಕೂಡ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಹಾಗಿದ್ದರೆ, ವೈರಲ್ ಪೋಸ್ಟ್‌ನಲ್ಲಿ ಮಾಡಿರುವ ಪ್ರತಿಪಾದನೆ ನಿಜವೇ? ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ವೈರಲ್ ಫೋಟೋವನ್ನು  ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಹಾಕಿ ಸರ್ಚ್ ಮಾಡಿದಾಗ, ಹಲವು ವೆಬ್‌ಸೈಟ್‌ಗಳಲ್ಲಿ ಆ ಫೋಟೋ ಅಪ್ಲೋಡ್ ಆಗಿರುವುದು ಕಂಡು ಬಂದಿದೆ.

ಈ ಪೈಕಿ ಫ್ಲಿಕ್ಕರ್‌ ವೆಬ್‌ಸೈಟ್‌ನಲ್ಲಿ ಅಕ್ಟೋಬರ್ 19, 2009ರಂದು ಡೇವಿಡ್ ರಾಸ್‌ ಎಂಬವರು ಅಪ್ಲೋಡ್ ಮಾಡಿರುವ ಫೋಟೋವನ್ನು ಪರಿಶೀಲಿಸಿದಾಗ ಐರನ್‌ ಪಿಲ್ಲರ್ ಭರತ್‌ಪುರ ಫೋರ್ಟ್, ಭರತ್‌ಪುರ ಇಂಡಿಯಾ ಎಂದು ಬರೆದಿರುವುದು ಕಂಡು ಬಂದಿದೆ. ಆ ಫೋಟೋ ಮತ್ತು ವಾಟ್ಸಾಪ್‌ನಲ್ಲಿ ಹರಿದಾಡುತ್ತಿರುವ ಫೋಟೋವನ್ನು ಹೋಲಿಕೆ ಮಾಡಿ ನೋಡಿದಾಗ ಅವೆರಡು ಒಂದೇ ಫೋಟೋ ಎಂದು ಗೊತ್ತಾಗಿದೆ.

ಹಿಸ್ಟರಿ ಎನ್ಸೈಕ್ಲೋಪೀಡಿಯಾ ಎಂಬ ಎಕ್ಸ್‌ ಖಾತೆಯಲ್ಲೂ ನವೆಂಬರ್ 3, 2021ರಂದು ಹಾಕಿರುವ ಪೋಸ್ಟ್‌ನಲ್ಲಿ ವೈರಲ್ ಫೋಟೋ ಅಪ್ಲೋಡ್ ಮಾಡಿರುವುದು ಕಂಡು ಬಂದಿದೆ. ಅದರಲ್ಲಿ “ರಾಜಸ್ಥಾನದ ಭರತ್‌ಪುರ ಕೋಟೆಯಲ್ಲಿ (ಕಬ್ಬಿಣದ ಕೋಟೆ) ಕಬ್ಬಿಣದ ಕಂಬವನ್ನು ಭರತ್‌ಪುರದ ಜಾಟ್ ಆಡಳಿತಗಾರರು ನಿರ್ಮಿಸಿದ್ದಾರೆ. ಮಹಾರಾಜ ಸೂರಜ್ ಮಾಲ್ (1707-1763) ರ ಅಡಿಯಲ್ಲಿ ಜಾಟ್ ಸಾಮ್ರಾಜ್ಯವು ತನ್ನ ಉತ್ತುಂಗವನ್ನು ತಲುಪಿತ್ತು. ಅವರು ಸಾಮ್ರಾಜ್ಯದಾದ್ಯಂತ ಹಲವಾರು ಕೋಟೆಗಳು ಮತ್ತು ಅರಮನೆಗಳನ್ನು ನಿರ್ಮಿಸಿದರು. ಈ ಪೈಕಿ ಲೋಹಗಢ್ ಕೋಟೆಯು ಪ್ರಬಲವಾಗಿದೆ” ಎಂದು ಬರೆಯಲಾಗಿದೆ.

ಡಿಸೆಂಬರ್ 25, 2021ರಂದು  ದೈನಿಕ್‌ ಭಾಸ್ಕರ್  ಮಾಡಿರುವ ಫೇಸ್‌ಬುಕ್‌ ಪೋಸ್ಟ್‌ನಲ್ಲಿ ವೈರಲ್ ಫೋಟೋದಲ್ಲಿರುವ ಲೋಹಸ್ತಂಭದಲ್ಲಿ ಬರೆದಿರುವ ರಾಜರ ಹೆಸರುಗಳ ಬಗ್ಗೆಯೂ ವಿವರಗಳನ್ನು ನೀಡಲಾಗಿದೆ.

ಭರತ್‌ಪುರದ ಲೋಹಸ್ತಂಭದ ಬಗ್ಗೆ ನವೆಂಬರ್ 26, 2018ರಂದು  ನೇಹಾ ವಿಡಿಯೋ ಫಿಲ್ಮ್ ಪ್ರೊಡಕ್ಷನ್ ಯೂಟ್ಯೂಬ್‌ ಚಾನೆಲ್‌ನಲ್ಲಿ ವಿಡಿಯೋ ಅಪ್ಲೋಡ್ ಮಾಡಲಾಗಿದೆ.  ಅದರಲ್ಲಿ “ಜವಾಹರ್ ಬುರ್ಜ್ ಭರತ್‌ಪುರವನ್ನು ಮಹಾರಾಜ ಸೂರಜ್ ಮಾಲ್ ನಿರ್ಮಿಸಿದನು. ಆದರೆ, ಅದರ ಮೇಲಿನ ರಚನೆಗಳನ್ನು ಮಹಾರಾಜ ಜವಾಹರ್ ಸಿಂಗ್ ಅವರು ದೆಹಲಿಯ ವಿಜಯದ ಸ್ಮಾರಕದಲ್ಲಿ ರಚಿಸಿದರು” ಎಂದು ವಿವರಿಸಲಾಗಿದೆ.

ಒಟ್ಟಾರೆಯಾಗಿ ಹೇಳುವುದಾದರೆ, ಕುತುಬ್ ಮಿನಾರ್ ನಿರ್ಮಿಸಿದ್ದು ಮೊಘಲರಲ್ಲ ಎಂದು ರಾಜಸ್ಥಾನದ ಕಬ್ಬಿಣದ ಕಂಬದ ಫೋಟೊವನ್ನು ತಪ್ಪಾಗಿ ಹಂಚಿಕೊಳ್ಳಲಾಗುತ್ತಿದೆ. ವಾಸ್ತವವಾಗಿ ವೈರಲ್ ಫೋಟೊದಲ್ಲಿರುವ ಸ್ತಂಭವು ಕುತುಬ್ ಮಿನಾರ್ ಅಲ್ಲ, ಅದು ರಾಜಸ್ಥಾನದ ಭರತ್‌ಪುರದ ಜವಾಹರ್ ಭುರ್ಜ್ ಎಂಬ ಲೋಹಸ್ತಂಭದ್ದಾಗಿದೆ. ಹಾಗಾಗಿ, ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ಇದನ್ನೂ ಓದಿ : ಪಾವಗಡದಲ್ಲಿ ಸಿಂಹ ಎಂದು ಸುಳ್ಳು ವಿಡಿಯೊ ಪ್ರಸಾರ ಮಾಡಿದ ‘ಝೀ ಕನ್ನಡ ನ್ಯೂಸ್’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...